Breaking News

ದೇವರ ವಿಗ್ರಹ ವಿರೂಪಗೊಳಿಸಿದ ಪ್ರಕರಣ; ಕೊನೆಗೂ ನಾಲ್ವರು ಅರೆಸ್ಟ್

ಹಾಸನ: ಐತಿಹಾಸಿಕ ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿಯ ದೇವರ ವಿಗ್ರಹಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿರುವ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ವಿರೂಪಗೊಳಿಸಿರುವ ಪ್ರಕರಣ ಮೇ 31 ರಂದು ಬೆಳಕಿಗೆ ಬಂದಿತ್ತು. ಬೆಟ್ಟದ ಈಜುಕೊಳ ಹಿಂಭಾಗ, ಶ್ರೀನಿವಾಸ ಕಲ್ಯಾಣ ಮ್ಯೂಸಿಯಂ ನಿರ್ಮಾಣಕ್ಕೆಂದು ಹಲವು ವಿಗ್ರಹಗಳನ್ನು ಕೆತ್ತನೆ ಮಾಡಿ ಇಡಲಾಗಿತ್ತು. ಈ ವಿಗ್ರಹಗಳನ್ನ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು. ಮೂವರು ಅಪ್ರಾಪ್ತರು ಸೇರಿ ಒಟ್ಟು ನಾಲ್ವರನ್ನು …

Read More »

ರೈತರಿಗೆ ಬಿತ್ತನೆ ಬೀಜ ಗೊಬ್ಬರ ಪೂರೈಸುವಂತೆ ಡಿಸಿಗೆ ಮನವಿ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ರೈತರಿಗೆ ರಾಸಾಯನಿಕ ಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗುತ್ತಿದ್ದು ಸರಕಾರ ಈ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳುತ್ತಿ ಎಂದು ಆಕ್ರೋಶಗೊಂಡ ನೇಗಿಲಯೋಗಿ ರೈತ ಸಂಘಟನೆಯ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದೆ ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಆದರೆ ಇಲ್ಲಿಯವರೆಗೂ ರೈತರಿಗೆ ಬಿತ್ತನೆ ಮಾಡಲು ಸಮರ್ಪಕ ಬೀಜ ಹಾಗೂ ಗೊಬ್ಬರಗಳನ್ನು …

Read More »

ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದ ನರೇಗಾ ಕೂಲಿ ಕಾರ್ಮಿಕರು

ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ಪಂಚಾಯತಿ ಕಛೇರಿಗೆ ನರೇಗಾ ಕೂಲಿ ಕಾರ್ಮಿಕರಿಂದ ಗ್ರಾಮ ಪಂಚಾಯಿತಿ ಮುಂದೆ ಬುಟ್ಟಿ ಮತ್ತು ಪಿಕಾಸಿ ಹಿಡಿದುಕೊಂಡು ಪಂಚಾಯ್ತಿ ಎದುರುಗಡೆ ಧರಣಿ ಮಾಡಿದರು. ಕಳೆದ 2ವರ್ಷಗಳ ಹಿಂದೆ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಿರುವ ಕೂಲಿ ಕಾರ್ಮಿಕ ರಾದ ನಿಲ್ಲುವ ಬಾಳಪ್ಪ ಪಾಟೀಲ ಇವರಿಗೆ ಇನ್ನೂವರೆಗೆ ಸಂಬಳ ಬಂದಿಲ್ಲ ಇದನ್ನು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂತೋಷ್ ಅವರಿಗೆ ಕಳೆದ 2 …

Read More »

ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​

ಹುಬ್ಬಳ್ಳಿ: ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​ ಬಂದಂತಹ ಘಟನೆ ನಗರದಲ್ಲಿ ನಡೆದಿದೆ. ಗ್ರಾಹಕ ಎಚ್ಚೆತ್ತಕೊಂಡಿದ್ದು, ಭಾರೀ ಅಪಾಯ ತಪ್ಪಿದೆ. ಮಲ್ಲಿಕಾರ್ಜುನ ಎಂಬುವವರು ಜೊಮ್ಯಾಟೊ ಆಯಪ್ ಮೂಲಕ ವಿದ್ಯಾನಗರದ ಪಂಜುರ್ಲಿ ಹೋಟೆಲ್​ನಿಂದ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು. ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೇಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್​ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ. ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೆಡ್ …

Read More »

ಗರ್ಭಗೀತೆ: ತಾಯಿಯ ಗರ್ಭದಲ್ಲಿರುವಾಗಲೇ ಮಗುವನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳಿಸುವುದು ಹೇಗೆ?

Garbhageete: ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ.ತಮಗೆ ಹುಟ್ಟುವ ಮಗುವು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂಬುದು ಎಲ್ಲಾ ಪೋಷಕರ ಆಸೆ. ಹಾಗೆಯೇ ಗರ್ಭಧಾರಣೆಗೂ ಮುನ್ನ ಹಾಗೂ ಗರ್ಭಧರಿಸುವ ಸಮಯದಲ್ಲಿ ದಂಪತಿಯ ಮಾನಸಿಕ ಸ್ಥಿತಿಯೂ ಮುಖ್ಯ ಪಾತ್ರವನ್ನು ವಹಿಸುತ್ತದೆ. ತಾಯಿ ದೈಹಿಕ ಹಾಗೂ ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತಾಳೋ ಮಗುವು ಅಷ್ಟೇ ಆರೋಗ್ಯದಿಂದ ಬೆಳೆಯುತ್ತದೆ. ಗರ್ಭಧಾರಣೆ ಸಂದರ್ಭದಲ್ಲಿ …

Read More »

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ. ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ …

Read More »

ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ ಗ್ರಾಮೀಣ ಪದೇಶದ ವಾಘವಾಡೆ ಗ್ರಾಮದ ಶ್ರೀ ರವಳನಾಥ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಳ್ಳುವ ಮೂಲಕ ಸಹೋದರ ವಿಧಾನ ಪರಿಷತ್ ಸದಸ್ಯ Channaraj Hattiholi ಜೊತೆ ಸೇರಿ ಚಾಲನೆಯನ್ನು ನೀಡಲಾಯಿತು. ಈ ಜೀರ್ಣೋದ್ಧಾರದ ಕಾಮಗಾರಿಗಳ ಮೂಲಕ ದೇವಸ್ಥಾನಕ್ಕೆ ಹೊಸ ಹೊಳಪು ಬರಲಿದ್ದು, ಇದರಿಂದಾಗಿ ಗ್ರಾಮದ ಮನೆ ಮನಗಳಿಗೆ ಆಧ್ಯಾತ್ಮಿಕವಾಗಿ ಶಾಂತಿ, ನೆಮ್ಮದಿ ದೊರಯಲಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಿಥಿಲಾವಸ್ಥೆಯಲ್ಲಿರುವ ಎಲ್ಲ ದೇವಸ್ಥಾನ ಮಾಹಿತಿಯನ್ನು ಕಲೆಹಾಕಿ ದೇವಸ್ಥಾನಗಳ ನಿರ್ಮಾಣ …

Read More »

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ?

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿದೆ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ …

Read More »

ಅಭಿಮಾನಿಗಳಿಂದ ಇದೇಕೆ ಅತಿರೇಕ? ಅಪ್ಪು ಪುತ್ಥಳಿ ಅನಾವರಣದಂದು ಕುರ್ಚಿಗಳು ಪೀಸ್‌ ಪೀಸ್‌!

ವಿಜಯನಗರ: ಹಲವಾರು ರೀತಿಯ ಸಮಾಜಸೇವೆ ಮಾಡಿ ಜನರ ಪಾಲಿಗೆ ದೇವರು ಎನಿಸಿಕೊಂಡಿರುವ ನಟ ಪುನೀತ್ ರಾಜ್‌ಕುಮಾರ್‌ ಅವರ ಅಭಿಮಾನಿಗಳು ಕೋಟ್ಯಂತರ ಮಂದಿ. ಇದೇ ಕಾರಣಕ್ಕೆ ತಮ್ಮ ಪ್ರೀತಿಯ ಅಪ್ಪು ಸದಾ ತಮ್ಮ ಕಣ್ಮುಂದೆ ಇರಬೇಕು ಎಂದು ಬಯಸಿರುವ ಹೊಸಪೇಟೆಯ ಅಭಿಮಾನಿಗಳು ಪುನೀತ್‌ ಅವರ ಏಳೂವರೆ ಅಡಿ ಎತ್ತರದ ಪುತ್ಥಳಿಯನ್ನು ಭಾನುವಾರ (ಜೂನ್‌ 5) ಅನಾವರಣಗೊಳಿಸಿದ್ದಾರೆ.   ಪುನೀತ್ ವೃತ್ತದಲ್ಲಿ ಸಚಿವ ಆನಂದ ಸಿಂಗ್ ಹಾಗೂ ಅವರ ಮಗ ಸಿದ್ದಾರ್ಥ್ ಸಿಂಗ್ ಸಹಕಾರದೊಂದಿಗೆ …

Read More »

ಕೋವಿಡ್ -19 ಆರ್ಭಟ : ಲಾಕ್‌ಡೌನ್‌ ಜಾರಿ ಸಾಧ್ಯತೆ

ಕೋವಿಡ್‌ ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ ( Maharashtra ) ಅತಿ ಹೆಚ್ಚು 889 ಮಂದಿ ಕೋವಿಡ್‌ ಸೋಂಕಿಗೆ (Covid-19 cases ) ತುತ್ತಾಗಿದ್ದಾರೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ದಿನೇ ದಿನೇ ಕೋವಿಡ್‌ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದು, ಲಾಕ್‌ಡೌನ್‌ ಜಾರಿ ಮಾಡುವ ಸಾಧ್ಯತೆಯಿದೆ. ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ 104 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಥಾಣೆ ಮತ್ತು ಪುಣೆ ನಗರಗಳು …

Read More »