Breaking News

ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವಂತ ತೀರ್ಮಾನ

ಶಿವಮೊಗ್ಗ : ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ( Kodihalli Chandrashekhar ) ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, …

Read More »

ನೂರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ಬೆಳಗಾವಿಯ ಸುವರ್ಣ ಸೌಧ ಹಪ್ಪಳ ಶಾವಿಗೆ ಒಣಗಿಸಲು…

ನೂರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ಬೆಳಗಾವಿಯ ಸುವರ್ಣ ಸೌಧ ಹಪ್ಪಳ ಶಾವಿಗೆ ಒಣಗಿಸಲು…. ಬೆಳಗಾವಿಯ ಸುವರ್ಣ ಸೌಧ ಹಪ್ಪಳ ಶಾವಿಗೆ ಸಂಡಿಗೆ ಒಣಗಿಸಲು ಸೀಮಿತ ವಾಯ್ತ ಅಂತ ಸೋಶಿಯಲ್ ಮೀಡಿಯಾದಲ್ಲಿ ಪಿಕ್ಚರ್ ಗಳು ವೈರಲ್ ಆಗಿವೆ .   ನೂರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ಸುವರ್ಣ ಸೌಧ ಇದಕ್ಕಾದರು ಉಪಯೋಗಕ್ಕೆ ಬರುತ್ತಿದೆ ಎಂದು ಸೋಶಿಯಲ್ ಮೀಡಿಯಾ ದಲ್ಲೀ ಟ್ರೊಲ್ ಮಾಡುತ್ತಿದ್ದಾರೆ ಬರಿ ಅಧಿವೇಶನಕ್ಕೆ ಸೀಮಿತ ವಾಗಿರುವ ಬೆಳಗಾವಿಯ …

Read More »

ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ವಿರುದ್ಧ 8.5 ಕೋಟಿ ರೂ. ಬೇನಾಮಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ದಾಖಲಿಸಿರುವ ಪ್ರಕರಣದ ವಿಚಾರಣೆ ಆರಂಭವಾಗಿದೆ. ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ. ಶಿವಕುಮಾರ್ ಮತ್ತು ಐವರಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಜನ ಪ್ರತಿನಿಧಿಗಳ …

Read More »

ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅರೆಸ್ಟ್ ಆಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್ ಅವರು ವಾದ ಮಂಡಿಸಿದರು. ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.  ಹಿನ್ನೆಲೆ ಏನು?: ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ …

Read More »

ರಾಜ್ಯದಲ್ಲೂ ಶುರುವಾಯ್ತು ಡೀಸೆಲ್‌ ಅಭಾವ , ಡೀಸೆಲ್ ಸಿಗದೆ ಗ್ರಾಹಕರ ಪರದಾಟ

ಬೇಸಿಗೆಯಲ್ಲಿ ನೀರಿಗೆ ಅಭಾವ ಆಗೋದು ಸಹಜ, ಆದರೀಗ ರಾಜ್ಯದಲ್ಲಿ ಡೀಸೆಲ್ ಅಭಾವ ಶುರುವಾಗಿದೆ. ರಾಜ್ಯದ ಬಹುತೇಕ ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಡೀಸೆಲ್ ಕೊರತೆ ಎದುರಾಗಿದೆ. ಕಳೆದ 1 ವಾರದಿಂದ ಸಮಸ್ಯೆ ಉಂಟಾಗುತ್ತಿದ್ದು,ಬಿಪಿಸಿಎಲ್ ಬಂಕ್‌ನಲ್ಲಿ ಡೀಸೆಲ್ ನೋ ಸ್ಟಾಕ್ ಬೋರ್ಡ್ ಕಾಣುತ್ತಿವೆ. ಬಹುತೇಕ ಬಿಪಿಸಿಎಲ್ ಬಂಕ್‌ಗಳಲ್ಲಿ ಇದೇ ಸಮಸ್ಯೆ ಎದುರಾಗಿದೆ. ಇದ್ರಿಂದ ಅಕ್ಕ ಪಕ್ಕದ ಇಂಡಿಯನ್ ಆಯಿಲ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸೇರಿದಂತೆ ಖಾಸಗಿ ಬಂಕ್‌ಗಳತ್ತ ಗ್ರಾಹಕರು ಮುಖ ಮಾಡಿದ್ದಾರೆ.  ಬಿಪಿಸಿಎಲ್ …

Read More »

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ.

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ. ಯಡಿಯೂರಪ್ಪನವರು, ಸಂಘ ಪರಿವಾರ, ಪಕ್ಷದ ಹಿರಿಯರ ಆಶೀರ್ವಾದ ಅವರ ಮೇಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ವಿಜಯೇಂದ್ರಗೆ ಎಂಎಲ್‍ಸಿ ಟಿಕೆಟ್ ತಪ್ಪಿದ ವಿಚಾರಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ನಗರ ಬಿಜೆಪಿ ಕಚೇರಿಯಲ್ಲಿ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದ ಉಪಾಧ್ಯಕ್ಷನಾಗಿ ವಿಜಯೇಂದ್ರ ಸಧ್ಯ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ಇರೋದರಿಂದ ಇಡೀ …

Read More »

ನಿರಾಣಿ ಗ್ರುಪ್ ದೇಶದಲ್ಲಿ ಮೊದಲನೇ ಗ್ರುಪ್ ಎಂಬುದು ನಿಶ್ಚಿತವಾಗಿದೆ. ಈವರೆಗೆ 72 ಸಾವಿರ ಜನರಿಗೆ ನಾವು ಉದ್ಯೋಗ ಕೊಟ್ಟಿದ್ದೇವೆ.

ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರಿಗೆ ನಿರಾಣಿ ಗ್ರುಪ್ ದೇಶದಲ್ಲಿ ಮೊದಲನೇ ಗ್ರುಪ್ ಎಂಬುದು ನಿಶ್ಚಿತವಾಗಿದೆ. ಈವರೆಗೆ 72 ಸಾವಿರ ಜನರಿಗೆ ನಾವು ಉದ್ಯೋಗ ಕೊಟ್ಟಿದ್ದೇವೆ. 20 ವರ್ಷದ ಅವಧಿಯಲ್ಲಿ 72 ಸಾವಿರ ಉದ್ಯೋಗ ಕೊಡುವುದು ಸಣ್ಣ ಮಾತಲ್ಲ. ಕೆಲಸ ಮಾಡಲು ಇನ್ನು ಕಾಲಾವಕಾಶವಿದೆ. ಎಲ್ಲಾ ರಂಗಗಳಲ್ಲಿ ಕೆಲಸ ಮಾಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ …

Read More »

ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು: ರಾಹುಲ್ ಜಾರಕಿಹೊಳಿ

ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. ಈ ಕಾರ್ಯಕ್ರಮದ …

Read More »

ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ.

ಬೆಳಗಾವಿ: ‘ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮಸೀದಿ ವಿಚಾರವಾಗಿ ವಿವಾದ ಸೃಷ್ಟಿಸುತ್ತಿದೆ’ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಘಟಕದ ಅಧ್ಯಕ್ಷ ದಸ್ತಗೀರ್ ಅಗಾ ಆರೋಪಿಸಿದರು.   ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಬಿಜೆಪಿ ವೈಫಲ್ಯ ಕಂಡಿದೆ. ಇದನ್ನು ಮರೆಮಾಚಿ, …

Read More »

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯ

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಕವಿ ಕುವೆಂಪುರವರನ್ನು ನಿಂದಿಸಿ ಅವಮಾನ ಮಾಡಿದ ಕುರಿತಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯನ್ನು ವಜಾಗೊಳಿಸುವಂತೆ ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ರೋಹಿತ್ ಚಕ್ರತೀರ್ಥರ …

Read More »