Breaking News

40,000 ಸಿಬ್ಬಂದಿ ನೇಮಿಸಿಕೊಳ್ಳಲಿದೆ T.C.S.

ನವದೆಹಲಿ: ಪ್ರಸಿದ್ಧ ಐಟಿ ಸಂಸ್ಥೆಯಾಗಿರುವ ಟಾಟಾ ಕನ್ಸಲ್‌ಟೆನ್ಸಿ ಸರ್ವೀಸ್‌(ಟಿಸಿಎಸ್‌) ಸಂಸ್ಥೆಯು ಈ ಆರ್ಥಿಕ ವರ್ಷದಲ್ಲಿ ಒಟ್ಟು 40,000 ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಯೋಜನೆ ಹಾಕಿಕೊಂಡಿದೆ. ಈ ಬಗ್ಗೆ ಸಂಸ್ಥೆಯು ಮಾಹಿತಿ ಕೊಟ್ಟಿದ್ದು, ಸದ್ಯ 2020, 2021 ಮತ್ತು 2022ನೇ ಬ್ಯಾಚಿನ ಎಂ.ಎಸ್‌ಸಿ ಮತ್ತು ಎಂ.ಎ ಪದವೀಧರರನ್ನು ನೇಮಕ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದೆ. ಅವರಿಗೆ ಲಿಖೀತ ಪರೀಕ್ಷೆ ಮತ್ತು ಸಂದರ್ಶನ ಇರಲಿದ್ದು, ಅದಕ್ಕಾಗಿ ಏ.20ರವರೆಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕೊಡಲಾಗಿದೆ.

Read More »

BBMP ಕಚೇರಿಯಲ್ಲಿ AC ಸ್ಪೋಟ : ಕೆಲ ದಾಖಲೆಗಳು ʼಸುಟ್ಟು ಭಸ್ಮʼ

ಬೆಂಗಳೂರು : ನಗರದ ಬ್ಯಾಟರಾಯನಪುರದ ಬಿಬಿಎಂಪಿ ಕಚೇರಿಯಲ್ಲಿ ಎಸಿ ಸ್ಪೋಟಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಬಿಬಿಎಂಪಿ ಮುಖ್ಯ ಇಂಜಿನಿಯರ್‌ ರಂಗನಾಥ್‌ ಕಚೇರಿಯಲ್ಲಿ ಎಸಿ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಇದು 3ನೇ ಮಹಡಿಯಲ್ಲಿದೆ. ಇನ್ನು ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಅಮೃತಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿ …

Read More »

ಕೆಜಿಎಫ್​-2 ಮಾಡಿದ ನಿಮ್ಗೆ ನಾಚಿಕೆಯಾಗ್ಬೇಕು, ಟಾಪ್ ಕ್ಲಾಸ್ ಲದ್ದಿ ಚಿತ್ರ, 3 ಗಂಟೆಯ ಟಾರ್ಚರ್​ ಎಂದ ವಿಮರ್ಶಕ

ಬೆಂಗಳೂರು​: ಕಳೆದ ಮೂರು ವರ್ಷಗಳಿಂದ ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದ ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಬಹುನಿರೀಕ್ಷಿತ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಏಪ್ರಿಲ್​ 14ರಂದು ದೇಶಾದ್ಯಂತ ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಇದರ ನಡುವೆ ಸ್ವಯಂ ಘೋಷಿತ ಸಿನಿಮಾ ವಿಮರ್ಶಕ ಎಂದು ಕರೆಸಿಕೊಳ್ಳುವ ಕಮಲ್​ ಆರ್​ ಖಾನ್​ ಅಲಿಯಾಸ್​ ಕೆಆರ್​ಕೆ ಕೆಜಿಎಫ್​ ಚಾಪ್ಟರ್​ 2 ಚಿತ್ರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ನೆಗಿಟಿವ್ ವಿಮರ್ಶೆ ನೀಡಿರುವುದು ಯಶ್​ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. …

Read More »

ಗುಜರಾತ್‌ನಲ್ಲಿನ 108 ಅಡಿ ಎತ್ತರದ ʻಹನುಮಾನ್ ಪ್ರತಿಮೆʼಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ

ಗುಜರಾತ್‌: ಇಂದು ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.   ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ …

Read More »

ಬಾಕ್ಸಾಫೀಸ್​ನಲ್ಲಿ ತೂಫಾನ್- ಎರಡೇ ದಿನದಲ್ಲಿ ₹ 240 ಕೋಟಿ ಬಾಚಿದ ‘ಕೆಜಿಎಫ್ ಚಾಪ್ಟರ್ 2’;

KGF Chapter 2 Box Office Collection Day 2 | Yash: ಚಿತ್ರತಂಡ ಭಾರತದಲ್ಲಿ ಯಶ್ ನಟನೆಯ ಚಿತ್ರವು ಎರಡು ದಿನಗಳಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದನ್ನು ಬಹಿರಂಗಗೊಳಿಸಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ಸೇರಿಸಿ ‘ಕೆಜಿಎಫ್ 2’ ಚಿತ್ರವು 240 ಕೋಟಿ ರೂ ಬಾಚಿಕೊಂಡಿದೆ. ವಿಶ್ವಾದ್ಯಂತ ಯಶ್ ನಟನೆಯ ಚಿತ್ರ ಗಳಿಸಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ.   ಯಶ್ (Yash) ಅಭಿನಯದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) …

Read More »

ಒಂದೇ ಸಮನೇ ಕಣ್ಣೀರು ಸುರಿಸಿದ ಹನುಮಂತ;

ಹುಬ್ಬಳ್ಳಿ: ಹನುಮ ಜಯಂತಿ ದಿನದಂದು ಹನುಮಂತ ಕಣ್ಣೀರು(Crying)ಹಾಕಿರುವಂತಹ ಅಚ್ಚರಿ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯಿರುವ ಬುಡರಸಿಂಗಿ ಗ್ರಾಮದ ಹನುಮಂತ ದೇವಸ್ಥಾನದಲ್ಲಿ ನಡೆದಿದೆ. ಜಯಂತಿ ಹಿನ್ನಲೆಯಲ್ಲಿ ಮೂರ್ತಿಯನ್ನು ಸ್ವಚ್ಚಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಮಂತ ಕಣ್ಣಿನಲ್ಲಿ ಬಿಟ್ಟು ಬಿಡಲಾರದೆ ಹನಿ ಹನಿ ಕಣ್ಣೀರು ಸುರಿಯುತ್ತಿದೆ. ಕಣ್ಣೀನಲ್ಲಿ ನೀರು ನೋಡಿ ಅಚ್ಚರಿಗೊಂಡ ಗ್ರಾಮಸ್ಥರು ಘಟನೆ ನೋಡಲು ಮುಗಿಬಿದ್ದಾರೆ. ಕಲಬುರಗಿ ನಗರದಲ್ಲಿ ಕೇಸರಿ ನಂದನ ಯುವ ಬ್ರಿಗೇಡ್ ವತಿಯಿಂದ ಅದ್ದೂರಿ ಹನುಮ ಜಯಂತಿ …

Read More »

ಗುಟ್ಕಾ ವ್ಯಾಪಾರಿಯ ಮನೆಯ ಬೆಡ್​ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆ: ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

ಲಖನೌ: ಉತ್ತರ ಪ್ರದೇಶದ ಹಮೀರ್​ಪುರ್​ನಲ್ಲಿರುವ ಗುಟ್ಕಾ ವ್ಯಾಪಾರಿ ಮನೆಯ ಮೇಲೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್​ಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬೆಡ್​ ಅಡಿಯಲ್ಲಿ 6 ಕೋಟಿ 31 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.   ಏಪ್ರಿಲ್​ 12ರ ಮಂಗಳವಾರ ಈ ದಾಳಿ ನಡೆದಿದ್ದು, 6.31 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಡ್​ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆಯಾದ ಬಳಿಕ ಅಧಿಕಾರಿಗಳ ನೋಟು …

Read More »

ಈಶ್ವರಪ್ಪ ಪ್ರಕರಣದಲ್ಲಿ ನಮ್ಮ‌ ಪಕ್ಷದ ಕಳ್ಳನ ಪಾತ್ರವಿದೆ : ಯತ್ನಾಳ್

ವಿಜಯಪುರ: ಸಚಿವ ಸ್ಥಾನಕ್ಕೆ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಕುತಂತ್ರ ನಡೆದಿದೆ. ಕಾಂಗ್ರೆಸ್ ಪಕ್ಷದ ಮಹಾನಾಯಕನ ಜತೆಗೆ ನಮ್ಮ ಪಕ್ಷದ ಯುವ ನಾಯಕನೊಬ್ಬ ಸೇರಿ ಕುತಂತ್ರ ಹಣೆದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.   ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಕೀಯವಾಗಿ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಇಂಥ …

Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಲಾಡ್ಜ್ ಮ್ಯಾನೇಜರ್ ಹೇಳಿದ್ದೇನು ?

ಉಡುಪಿ : ರಾಜ್ಯದಲ್ಲಿ ರಾಜಕೀಯ ತಲ್ಲಣಗಳಿಗೆ ಕಾರಣವಾಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಉಡುಪಿ ಶಾಂಭವಿ ಲಾಡ್ಜ್‌ನ ಮ್ಯಾನೇಜರ್ ದಿನೇಶ್ ಇದೇ ಮೊದಲ ಬಾರಿ ‘ಸಾಯುವ ಮೊದಲು ಸಂತೋಷ್ ಚಲನವಲನ’ದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.   ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮ್ಯಾನೇಜರ್ ದಿನೇಶ್, ಸಂತೋಷ್ ಪಾಟೀಲ್, ಇಬ್ಬರು ಸ್ನೇಹಿತರೊಂದಿಗೆ ಎ.11ರ ಸಂಜೆ 5ಕ್ಕೆ ಲಾಡ್ಜ್‌ನಲ್ಲಿ ರೂಮ್ ಬುಕ್ ಮಾಡಿದ್ದರು. ಸಂತೋಷ್ ಪಾಟೀಲ್ ಹೆಸರಲ್ಲಿ ರೂಂ ಬುಕ್ …

Read More »

450 ರೂ.ಗೆ 1 ಲೀಟರ್‌ ಕ್ರಿಮಿನಾಶಕ ಖರೀದಿಸಿದ್ದ ಸಂತೋಷ್

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಲಭಿಸಿದ್ದು, ಆತ್ಮಹತೆಗೂ ಮುನ್ನ ತಾನೇ ಕ್ರಿಮಿನಾಶಕ ಔಷಧ ಖರೀದಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿಯ ಶಾಂಭವಿ ಹೋಟೆಲ್‌ ನಲ್ಲಿ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಮುನ್ನ ಚಿಕ್ಕಮಗಳೂರಿನಲ್ಲಿ 450 ರೂ. ನೀಡಿ 1 ಲೀಟರ್‌ ಕ್ರಿಮಿನಾಶಕ ಖರೀದಿಸಿದ್ದರು ಎಂದು ತನಿಖೆಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ತಿಳಿದು ಬಂದಿದೆ. ತಾನೇ ಖರೀದಿಸಿದ್ದ ಕ್ರಿಮಿನಾಶಕವನ್ನು ಶಾಂಭವಿ ಲಾಡ್ಜ್‌ ನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

Read More »