Breaking News

River Rafting: ಕಾಳಿ ನದಿಯಲ್ಲಿ ಬೋಟ್​ ಮುಳುಗಡೆ, ಮಕ್ಕಳು ಸೇರಿ 12 ಪ್ರವಾಸಿಗರು ಗ್ರೇಟ್​ ಎಸ್ಕೇಪ್​-

ಕಾರವಾರ: ನಿಗದಿ ಪ್ರಮಾಣಕ್ಕಿಂತ ಹೆಚ್ಚಿನ ಜನರನ್ನು ರಿವರ್ ರ್ಯಾಪ್ಟಿಂಗ್ (River Rafting) ಬೋಟ್​ನಲ್ಲಿ ಕುಳ್ಳಿರಿಸಿ ರ್ಯಾಪ್ಟಿಂಗ್ ಮಾಡಿದ ಪರಿಣಾಮ ನದಿಯಲ್ಲಿ ಬೋಟ್ ಮುಳುಗುವ ಹಂತ ತಲುಪಿ ಮಕ್ಕಳು ಸೇರಿದಂತೆ 12 ಜನ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿಯ ಕಾಳಿ ನದಿಯಲ್ಲಿ ನಡೆದಿದೆ. ರಬ್ಬರ್ ಬೋಟ್​ನಲ್ಲಿ ಆರು ಜನಕ್ಕಿಂತ ಹೆಚ್ಚು ಜನರನ್ನು ಹಾಕಿ ರಿವರ್ ರ್ಯಾಪ್ಟಿಂಗ್ ಮಾಡುವಂತಿಲ್ಲ. ಆದರೆ ಖಾಸಗಿ ಆಯೋಜಕರು ಅನುಮತಿ …

Read More »

ಈಶ್ವರಪ್ಪ ರಾಜೀನಾಮೆ’ಗೂ ಮುನ್ನವೇ ’29 ಪಿಡಿಓ’ಗಳ ವರ್ಗಾವಣೆ

ಬೆಂಗಳೂರು,ಏ.15- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ 29 ಪಿಡಿಒ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.   ಉಡುಪಿಯ ಶಾಂಭವಿ ಹೋಟೆಲ್‍ನಲ್ಲಿ ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈಶ್ವರಪ್ಪ ದಿಢೀರನೇ 29 ಪಿಡಿಒ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ …

Read More »

ರಾಜೀನಾಮೆ‌ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರಿಟ್ಟ ಬಿಜೆಪಿ ಕಾರ್ಯಕರ್ತೆಯರು!

ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲು ಕೆ.ಎಸ್​.ಈಶ್ವರಪ್ಪ ಬರುತ್ತಿದ್ದಂತೆ ಅವರನ್ನು ಸುತ್ತುವರಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ರಾಜೀನಾಮೆ‌ ನೀಡದಂತೆ ಈಶ್ವರಪ್ಪ ಎದುರು ಕಣ್ಣೀರು ಹಾಕಿದರು.   ಆ ವೇಳೆ ಮಹಿಳಾ ಕಾರ್ಯಕರ್ತರನ್ನು ಸಂತೈಸಲು ಮುಂದಾದ ಈಶ್ವರಪ್ಪ, ನೀವು ಹೀಗೆ ಅಳುತ್ತಿದ್ದರೆ ನಾನು ಇಲ್ಲಿಂದ ಹೋಗುವುದೇ ಇಲ್ಲ. ಸಂತೋಷದಿಂದ ಕಳಿಸಿಕೊಡಿ ಎಂದು ಮನವಿ ಮಾಡಿದರು. …

Read More »

ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು.: ರೇಣುಕಾಚಾರ್ಯ

ಬೆಂಗಳೂರು,ಏ.15-ಮಾನ್ಯ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು. ಬೆನ್ನಿಗೆ ಚೂರಿ ಇರಿಯುವ ಮೊದಲು ಯಾವುದಕ್ಕೂ ಹುಷಾರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರದ ಹಪಾಹಪಿಗೆ ಬಿದ್ದಿರುವ ಬಂಡೆ ಈಗ ಎಲ್ಲೋ ಕುಳಿತು ಇನ್ನೆಲ್ಲೋ ಬಾಂಬ್ ಸಿಡಿಸುವ ಕಲೆಯನ್ನು ರಕ್ತಗತ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದು …

Read More »

‘ಈಶ್ವರಪ್ಪ ಒಬ್ಬ ಸುಳ್ಳಿನ ಫ್ಯಾಕ್ಟರಿ ಚೇರ್ಮನ್’ ಇದ್ದಂತೆ,: ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಹಾಗೂ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಿರತರಾಗಿರುವ ಕಾಂಗ್ರೆಸ್ ನಾಯಕರು, ಇಂದು ಬೆಳಗ್ಗೆ ದೈನಂದಿನ ಚಟುವಟಿಕೆ ಆರಂಭಿಸಿದರು. ಈ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಡಿಕೆಶಿ, ವಿಧಾನಸೌಧದ ಗೋಡೆಗೆ ಹೊಡೆದರೆ ಕಾಸು ಕಾಸು ಕಾಸು ಎನ್ನುತ್ತದೆ ಎಂದು ವ್ಯಂಗ್ಯವಾಡಿದರು. ಸಂತೋಷ ಪಾಟೀಲ್ ಸಹೋದರ ಏನ್ ಬೇಡಿಕೆ ಇಟ್ಟಿದ್ದಾರೆ ಮೊದಲು ಆ …

Read More »

ಗುತ್ತಿಗೆದಾರನ ಸಾವಿನ ಬಗ್ಗೆ ದಾಖಲೆಗಳಿದ್ದರೆ ಇಂದೇ ಬಿಡುಗಡೆ ಮಾಡಲಿ :

ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ್​​ ಆತ್ಮಹತ್ಯೆ ಹಿಂದೆ ಮಹಾನಾಯಕನ ಕೈವಾಡ ಇದ್ದು, ಸೋಮವಾರ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್​​ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯ ಪೂರ್ವಕವಾಗಿ ಸ್ವಾಗತಿಸುವೆ. ದಾಖಲೆ ಬಿಡುಗಡೆಗಾಗಿ ಅವರು ಸೋಮವಾರದವರೆಗೆ ಕಾಯುವುದು ಬೇಡ. ಧಾರಾವಾಹಿಯಲ್ಲಿ ಕುತೂಹಲ ಕ್ರಿಯೇಟ್ ಮಾಡುವ ರೀತಿ ಇಲ್ಲಿ ಮಾಡುವುದು ಬೇಡ. ದಾಖಲೆಗಳಿದ್ದರೆ ಇಂದೇ, …

Read More »

ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಧರಣಿಯನ್ನು ಮುಕ್ತಾಯಗೊಳಿಸಿದ್ದು, ಸರ್ಕಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ 24 ಗಂಟೆಗಳ ಧರಣಿ ಮುಕ್ತಾಯಕ್ಕೂ ಮುನ್ನ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಂದರು. ಮನವಿ ಪತ್ರವನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡುತ್ತೇವೆ. ಸರ್ಕಾರ ನಿಯೋಜಿಸುವ ಯಾವುದೇ ವಿಧದ ಅನೇಕ …

Read More »

ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು

ಶಿವಮೊಗ್ಗ: ‘ನನಗೆ ಇದು ಅಗ್ನಿ ಪರೀಕ್ಷೆ. ಈ ಅಗ್ನಿ ಪರೀಕ್ಷೆಯಲ್ಲಿ ನಾನು ಗೆದ್ದು ಬರುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದರು. ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿ, ನೀವು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದಾಗ ಈಶ್ವರಪ್ಪ ಸಮಾಧಾನಪಡಿಸಿದರು. ನನ್ನ ಬಗ್ಗೆ ತಿಳಿದಿರುವ ಎಲ್ಲರೂ ಸಹ ನನಗೆ ವಿಶ್ವಾಸ ತುಂಬುತ್ತಿದ್ದಾರೆ. ನೀವು ಗೆದ್ದು ಬರುತ್ತೀರಿ ಎನ್ನುತ್ತಿದ್ದಾರೆ. ನಾನು ಹೀಗೆ ನನಗೆ ಅಗ್ನಿಪರೀಕ್ಷೆ ಬರುತ್ತದೆ ಎಂದು ತಿಳಿದುಕೊಂಡಿರಲಿಲ್ಲ. ಆದರೆ, ಜನರೇ …

Read More »

ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ, ಖರ್ಚು ಕಡಿಮೆಯಾಗಿ ಲಾಭ ಹೆಚ್ಚು: ರಮೇಶ ಬಸಪ್ಪ

ಮೂಡಲಗಿ (ಬೆಳಗಾವಿ ಜಿಲ್ಲೆ): ‘ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ. ಪಕ್ಕಾ ಸಾವಯವ ಕೃಷಿ ಮಾಡ್ತಿದ್ದೀವ್ರಿ. ಖರ್ಚು ಕಡಿಮೆಯಾಗಿ ಲಾಭ ಹೆಚ್ಚು ಬರತೈತ್ರೀ’ ಎಂದು ತಾಲ್ಲೂಕಿನ ಕಲ್ಲೋಳಿಯ ಯುವ ರೈತರಾದ ರಮೇಶ ಬಸಪ್ಪ ಖಾನಗೌಡ್ರ ಮತ್ತು ಮಲ್ಲಿಕಾರ್ಜುನ ಖಾನಗೌಡ್ರ ಹೆಮ್ಮೆಯಿಂದ ಬೀಗುತ್ತಾರೆ.   ಅವರು 10 ಎಕರೆ ಭೂಮಿಯಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ, ವಿವಿಧ ತರಕಾರಿಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುತ್ತಿದ್ದಾರೆ. ಹೈನುಗಾರಿಕೆ, ಕೋಳಿ, ಮೀನು, …

Read More »

ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ರಾಜಕೀಯ ಕ್ಷೇತ್ರದಲ್ಲಿ ಮತ್ತೆ ಎಲ್ಲರೂ ತಿರುಗಿ ನೋಡುವಂತಹ ಸುದ್ದಿ ಮಾಡಿದೆ. ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣ ಬಿಜೆಪಿ ಸರಕಾರದ ಇಬ್ಬರು ಪ್ರಭಾವಿ ರಾಜಕಾರಣಿಗಳ ತಲೆದಂಡವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಈ ಎರಡೂ ತಲೆದಂಡದಲ್ಲಿ ಕಾಂಗ್ರೆಸ್‌ನ ಒಗ್ಗಟ್ಟಿನ ಹೋರಾಟಕ್ಕಿಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಂದು ರೀತಿಯ ಶಪಥ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಗಂಭೀರ ಆರೋಪ ಹೊತ್ತ …

Read More »