Breaking News

ವ್ಯಾಪಾರ ಮುಗಿಸಿ ಗೋಣಿ ಚೀಲದಲ್ಲಿ ಒಯ್ಯುತ್ತಿದ್ದ 4.97 ಕೋಟಿ ರೂ. ದರೋಡೆ

ಬೆಳಗಾವಿ: ಬಂಗಾರದ ಅಂಗಡಿಯಲ್ಲಿ ವ್ಯಾಪಾರ ಮಾಡಿದ್ದ 4.97 ಕೋಟಿ ರೂ. ಹಣವನ್ನು ಬಾಕ್ಸ್ ಮತ್ತು ಗೋಣಿ ಚೀಲದಲ್ಲಿ ತುಂಬಿ ಬೋಲೇರೋ ವಾಹನದಲ್ಲಿ ಹಾಕಿಕೊಂಡು ಹೊರಟಾಗ ದರೋಡೆಕೋರರ ತಂಡವೊಂದು ವಾಹನ ಅಡ್ಡಗಟ್ಟಿ ಪಿಸ್ತೂಲು ತೋರಿಸಿ ಹಲ್ಲೆ ಮಾಡಿ ಎಲ್ಲ ನಗದು ಹಣ ದೋಚಿ ಪರಾರಿಯಾದ ಘಟನೆ ಬೈಲಹೊಂಗಲ ತಾಲೂಕಿನ ಗದ್ದಿಕೊರವಿನಕೊಪ್ಪ ಗ್ರಾಮ ಬಳಿ ನಡೆದಿದೆ.   ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸಾಂಗೋಲಾ ತಾಲೂಕಿನ ವಾಡೇಗಾಂವ ಗ್ರಾಮದ ಸಚೀನ ಬಾನುದಾಸ ಐಹೊಳೆ ಹಾಗೂ ಜತ್ತ …

Read More »

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಚಾಮರಾಜನಗರ: ಅವರ ವಯಸ್ಸಿನ್ನೂ 34 ವರ್ಷ. ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡಿಕೊಂಡೇ ಪಿಎಸ್​ಐ ಆಗುವ ಗುರಿ ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡಿತ್ತಿದ್ದರು. ಇವರ ಸಾಧನೆಗೆ ಸಾಥ್ ಕೊಡುವ ಮಡದಿ ಹಾಗೂ ಒಂದು ತಿಂಗಳ ಹಿಂದಷ್ಟೇ ಹುಟ್ಟಿದ ಗಂಡು ಮಗುವಿನೊಂದಿಗೆ ಸುಖಿ ಜೀವನ ನಡೆಸುತ್ತಿದ್ದರು. ಎಲ್ಲವೂ ಅಂದುಕೊಂಡಂತೆ ಆಗುತ್ತಿದೆ ಎಂದುಕೊಂಡವನ ಬಾಳನಲ್ಲಿ ವಿಧಿ ಬೇರೆಯೇ ಆಟವಾಡಿದೆ. ಕೆಲಸ ನಿರ್ವಹಿಸುತ್ತಲೇ ಬಾರದ ಲೋಕಕ್ಕೆ ಹೋಗಿಬಿಟ್ಟಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣೆ ಕಾನ್​ಸ್ಟೇಬಲ್ ಪ್ರಸಾದ್(34) ಸೋಮವಾರ …

Read More »

ಮಂಗಳೂರು:ಚಿಕನ್ ಸೆಂಟರ್ ಸಿಬ್ಬಂದಿಯ ಹಲ್ಲೆ ಪ್ರಕರಣ; ಇಬ್ಬರು ರೌಡಿಶೀಟರ್ ಗಳ ಬಂಧನ

ಮಂಗಳೂರು : ನಗರದ ವೆಲೆನ್ಸಿಯಾದಲ್ಲಿ ಚಿಕನ್ ಅಂಗಡಿಯ ಸಿಬ್ಬಂದಿಗೆ ಹಲ್ಲೆಗೈದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಪ್ರಕರಣ ನಡೆದಿದ್ದು ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರು ರೌಡಿಗಳನ್ನು ಬಂಧಿಸಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಗಳಾದ ಪ್ರೀತಂ ಅಲಿಯಾಸ್ ಪ್ರೀತಮ್ ಪೂಜಾರಿ ಮತ್ತು ಧೀರಜ್ ಕುಮಾರ್ ಅಲಿಯಾಸ್ ಬಂಧಿತರು . ಭಾನುವಾರ ಸಂಜೆ ವೆಲೆನ್ಸಿಯಾದ ಕೋಳಿ ಅಂಗಡಿಯ ಮುಂದೆ ಇವರಿಬ್ಬರು ಸೇರಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು ಈ ವೇಳೆ ಕೋಳಿ ಅಂಗಡಿ ಉಳಿದ …

Read More »

ಹಾವೇರಿ: ಡಿಡಿಪಿಐ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಹಾವೇರಿ: ಡಿಡಿಪಿಐ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ ಡಿಡಿಪಿಐ ಸೇರಿದಂತೆ ಕಚೇರಿ ಸಿಬ್ಬಂದಿ ಬಳಿ 1 ಲಕ್ಷ 69 ಸಾವಿರ ರೂಪಾಯಿ ಅನಧಿಕೃತ ನಗದು ಹಣ ಪತ್ತೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಡಿಡಿಪಿಐ ಜಗದೀಶ್ವರ ಅವರ ಬಳಿ 50,900 ರೂಪಾಯಿ ನಗದು ಹಾಗೂ ಇತರ ಸಿಬ್ಬಂದಿ ಬಳಿ 1,18,100 ರೂಪಾಯಿ ಹಣ …

Read More »

ರಾಡ್‌ನಿಂದ ಹೊಡೆದು ಪತಿ ಕೊಲೆ

ಬೆಂಗಳೂರು: ಬ್ಯಾಡರಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಫೈನಾನ್ಸಿಯರ್ ಉಮೇಶ್ (52) ಕೊಲೆ ನಡೆದಿದ್ದು, ಈ ಸಂಬಂಧ ಪತ್ನಿ ವರಲಕ್ಷ್ಮಿ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ‘ಅಂದ್ರಹಳ್ಳಿಯ ಸಾಯಿಬಾಬಾ ನಗರದ ನಿವಾಸಿ ಉಮೇಶ್, ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಫೈನಾನ್ಸಿಯರ್ ಆಗಿದ್ದರು. ಸೋಮವಾರ ನಸುಕಿನಲ್ಲಿ ನಡೆದಿರುವ ಅವರ ಕೊಲೆ ಬಗ್ಗೆ ತಮ್ಮ ಜೆ.ಎಂ. ಸತೀಶ್ ದೂರು ನೀಡಿದ್ದಾರೆ. ಆರೋಪಿಯಾದ ಪತ್ನಿ ವರಲಕ್ಷ್ಮಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ದಂಪತಿ ನಡುವೆ ಜಗಳ: ‘ಉಮೇಶ್ …

Read More »

ಕೇಂದ್ರೀಯ ವಿ.ವಿಯಲ್ಲಿ ರಾಮನವಮಿ ಸಂಘರ್ಷ: ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕಲಬುರಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು, ಜೇವರ್ಗಿ ತಾಲ್ಲೂಕು ಶಖಾಪುರ ಗ್ರಾಮದ ವಿಶ್ವನಾಥ ದಿವಾಣ ಮತ್ತು ರಾಜಸ್ಥಾನದ ನರೇಂದ್ರಕುಮಾರ್ ಧರಿಯಾ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.   ‘ವಿಶ್ವವಿದ್ಯಾಲಯದ ಆವರಣದಲ್ಲಿರುವ ಲಕ್ಷ್ಮಿ ಮಂದಿರದಲ್ಲಿ ನಾವು ರಾಮನವಮಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದೆವು. ಈ ಕಾರಣಕ್ಕಾಗಿಯೇ ಎಡಪಂಥೀಯ ವಿಚಾರಧಾರೆಯ ವಿದ್ಯಾರ್ಥಿಗಳು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಗಾಯಗೊಂಡಿರುವ ವಿಶ್ವನಾಥ ಆರೋಪಿಸಿದ್ದಾರೆ. ‘ಗೂಂಡಾಗಿರಿ …

Read More »

ಜಗನ್‌ ಹೊಸ ಸಂಪುಟ ಅಸ್ತಿತ್ವಕ್ಕೆ : ರೋಜಾಗೆ ಸಚಿವ ಪಟ್ಟ

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿಯವರ ಸಂಪುಟ ಪುನರಾಚನೆಗೊಂಡಿದ್ದು ಒಟ್ಟು 25 ಸಚಿವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಾತಿ, ಸಮುದಾಯಗಳ ಆಧಾರದಲ್ಲಿ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲಾಗಿದ್ದು, 25 ಸ್ಥಾನಗಳಲ್ಲಿ ಸಿಂಹಪಾಲು (10 ಸ್ಥಾನ) ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗಿದೆ.   ಮುಖ್ಯಮಂತ್ರಿ ಜಗನ್‌ ಸೇರಿದಂತೆ 2 ಸ್ಥಾನಗಳು ಅಲ್ಪಸಂಖ್ಯಾಕರಿಗೆ ಮೀಸಲಾಗಿದ್ದರೆ, 5 ಸ್ಥಾನಗಳು ಪರಿಶಿಷ್ಟ ಜಾತಿ, ಒಂದು ಸ್ಥಾನ ಪರಿಶಿಷ್ಟ ಪಂಗಡ, ರೆಡ್ಡಿ, ಕಾಪು ಜನಾಂಗಗಳಿಗೆ ತಲಾ ನಾಲ್ಕು ಸ್ಥಾನ …

Read More »

‘ಮುರುಘಾ ಶರಣರ ಜನ್ಮದಿನ’ ‘ಸಮಾನತಾ ದಿನ’ವಾಗಿ ಆಚರಣೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲಾಗಿ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: …

Read More »

ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಮೂರು ಪಟ್ಟು ಹೆಚ್ಚಳ; ಶಾಲೆ ಬಂದ್

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರ ಅಭಯ ನೀಡಿದೆ. ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಪ್ರತಿ ಶತ ಒಂದಕ್ಕಿಂತ ಅಧಿಕವಾಗಿರುವುದನ್ನು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ದೃಢಪಡಿಸಿದ್ದಾರೆ. …

Read More »

ಜಿಎಸ್‌ಟಿ, ಇಂಧನ ದರ ಏರಿಕೆಯ ಪರಿಣಾಮ: ಕಬ್ಬಿಣ, ಸಿಮೆಂಟ್‌ ಮತ್ತಷ್ಟು ದುಬಾರಿ

ಬೆಂಗಳೂರು: ಕಬ್ಬಿಣ, ಸಿಮೆಂಟ್, ಸ್ಯಾನಿಟರಿ, ಬಣ್ಣ, ಎಲೆಕ್ಟ್ರಿಕಲ್, ಅಲ್ಯುಮಿನಿಯಂ ಸೇರಿ ಎಲ್ಲ ವಸ್ತುಗಳ ಬೆಲೆ ನಿರ್ಮಾಣ ಕ್ಷೇತ್ರವೇ ಬೆರಗಾಗುವಷ್ಟು ಗಗನಮುಖಿಯಾಗಿದೆ. ಇದು ಸ್ವಂತ ಮನೆ ಕಟ್ಟಿಕೊಳ್ಳುವ ಜನರ ಕನಸಿಗೆ ನುಚ್ಚುನೂರು ಮಾಡಿದ್ದರೆ, ಸರ್ಕಾರಿ ಕಾಮಗಾರಿಗಳ ಮೇಲೂ ಪರಿಣಾಮ ಬೀರಿದೆ.   ಜಿಎಸ್‌ಟಿ ಮತ್ತು ಇಂಧನ ದರ ಏರಿಕೆಯಿಂದ ನಿರ್ಮಾಣ ಪರಿಕರಗಳ ಬೆಲೆಯೂ ಏರುಗತಿಯಲ್ಲೇ ಮುಂದುವರಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಳೆದ ನವೆಂಬರ್ ವೇಳೆಗೆ ಶೇ 40ರಿಂದ ಶೇ 50ರಷ್ಟು ಹೆಚ್ಚಳವಾಗಿದ್ದ …

Read More »