ಬೆಳಗಾವಿ: ‘ಮಾದಕ ವಸ್ತುಗಳ ವ್ಯಸನ ಬಹುದೊಡ್ಡ ಸಮಸ್ಯೆಯಾಗಿ ದೇಶವನ್ನು ಕಾಡುತ್ತಿದೆ. ನಮ್ಮ ಯುವಶಕ್ತಿಯನ್ನು ಕಸಿಯುತ್ತಿರುವ ಈ ವ್ಯಸನ ಶಾಲೆಗಳನ್ನೂ ಆಕ್ರಮಿಸಿಕೊಂಡಿರುವುದು ಕಳವಳಕಾರಿ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಳಗಾವಿ ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ಸಂಘ, ದಿಶಾಭೋದ್ ಫೌಂಡೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸ್ವಾಸ್ಥ್ಯ …
Read More »ಜಾತಿ ಮುಕ್ತ ಭಾರತ ಕಟ್ಟಬೇಕಿದೆ: ಸತೀಶ
ಬೆಳಗಾವಿ: ‘ಇಂದು ನಾವೆಲ್ಲರೂ ಸೇರಿ ಜಾತಿ ಮುಕ್ತ ಭಾರತ ಕಟ್ಟಬೇಕಿದೆ. ಬಿ.ಆರ್.ಅಂಬೇಡ್ಕರ್, ಬಸವಣ್ಣ ಅವರಂಥ ಮಹನೀಯರ ವಿಚಾರಧಾರೆಗಳು, ನೈತಿಕ ತತ್ವಗಳು ಪ್ರತಿ ಮನೆ ತಲುಪಬೇಕಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ಇಲ್ಲಿನ ಬಿ.ಎಸ್.ಜೀರಗೆ ಸಭಾಂಗಣದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠ ಹಾಗೂ ಸಮಾಜಕಾರ್ಯ ವಿಭಾಗ, ಸಮಾಜಕಲ್ಯಾಣ ಇಲಾಖೆಯ ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ವಿವೇಚನೆ, ವೈಚಾರಿಕತೆ …
Read More »ಇತಿಹಾಸ ನೆನಪಿಸಿದ ಜಾನಪದ ಕಲಾಮೇಳ
ಬೈಲಹೊಂಗಲ: ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ 2026ರ ಜಾನಪದ ಕಲಾವಾಹಿನಿಗೆ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಗ್ರಾಮದ ಮಲ್ಲಮ್ಮ ವೃತ್ತದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಶಾಸಕ ಮಹಾಂತೇಶ ಕೌಜಲಗಿ ಬೆಳವಡಿ ಸಂಸ್ಥಾನ ಧ್ವಜಾರೋಹಣ ನೆರವೇರಿಸಿದರು. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ …
Read More »ನಟ ದರ್ಶನ್ ಕೇಸ್: ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕನ್ನಡ ಒಕ್ಕೂಟ
ನಟ ದರ್ಶನ್ ಮತ್ತೊಮ್ಮೆ ಪರಪ್ಪನ ಅಗ್ರಹಾರದ ಪಾಲಾಗಿ 187 ದಿನಗಳಾಗಿವೆ. ಕೊರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಪೊಲೀಸರ ತನಿಖೆಯ ಮೇಲೆಯೇ ಹಲವರು ಅನುಮಾನಗಳು ಮೂಡುತ್ತಿವೆ. ಮೊದಲೇ ಷಡ್ಯಂತ್ರ ಮತ್ತು ಪಿತೂರಿ ನಡೆದಿದೆ ಎನ್ನುವ ವಾದ ನಡೆಯುತ್ತಿತ್ತು. ಪಾರದರ್ಶಕವಾದ ತನಿಖೆಯನ್ನು ಪೊಲೀಸರು ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು,ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆಯನ್ನು ಕೂಡ ಮಾಡುತ್ತಿದ್ದರು. ಇದೀಗ ಬಹಿರಂಗವಾಗಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದೆ. ಸ್ಥಳ ಮಹಜರು ವೇಳೆ …
Read More »ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಯಶವಂತರಾಯಗೌಡ ಪಾಟೀಲ
ಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ಕುರಿತು ಶನಿವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಭೀಮಾ ನದಿಯಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನಾದ್ಯಂತ ಅನೇಕ ಕೆರೆಗಳು …
Read More »ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. …
Read More »ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಶೀಘ್ರ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ: ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ವಾ.ಕ.ರ.ಸಾ.ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ನಾಮಕರಣಕ್ಕೆ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಫೆ.28) ಜರುಗಿದ ವಾ.ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ ಶಂಕುಸ್ಥಾಪನೆ, …
Read More »ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಬೆಳಗಾವಿ ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗೆ ಸಂಯೋಜನೆಗೊಂಡಿರುವ ಕಾಲೇಜುಗಳ ಸಂಘ, ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಭೋದ್ ಫೌಂಡೇಶನ್ ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅವರ ಸಹಯೋಗದಲ್ಲಿ ‘ಸ್ವಾಸ್ಥ್ಯ ಭಾರತ – ಶ್ರೇಷ್ಠ ಭಾರತ’ ಎಂಬ ಘೋಷಣೆಯಡಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನ ಮತ್ತು ಜಾಥಾ (ವಾಕಥಾನ್) ಕಾರ್ಯಕ್ರಮವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು …
Read More »ಪರೀಕ್ಷೆಗೆ ಹೆದರಿ ವಸತಿ ಶಾಲೆಯಿಂದ 5 ಜನ SSLC ವಿದ್ಯಾರ್ಥಿಗಳು ಪರಾರಿ
ಹಾವೇರಿ: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ …
Read More »ಕತ್ತು ಕೊಯ್ದು ಯುವಕನ ಕೊ*ಲೆ -ಹೊಲದಲ್ಲಿ ಶವ ಪತ್ತೆ
ಗದಗ: ಜಿಲ್ಲೆಯ ಲಕ್ಷ್ಮೀಶ್ವರ ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹ*ತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಮಹಮ್ಮದ ಫಾರೋಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದ ನಿವಾಸಿ ಆಗಿರುವ ಫಾರೋಕ್ ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದ ಇದೀಗ ಲಕ್ಷ್ಮೀಶ್ವರ ಸಮೀಪದ ಜಮೀನೊಂದರಲ್ಲಿ ಆತನ ಶವ ಪತ್ತೆಯಾಗಿದೆ.ಅಪರಿಚಿತರು ಕತ್ತು ಕೊಯ್ದು ಹ*ತ್ಯೆ ನಡೆಸಿ ಬಳಿಕ …
Read More »
Laxmi News 24×7