ಬೆಂಗಳೂರು: ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ. ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ. ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮತಿ ನೀಡಿದೆ. ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ …
Read More »ಲಕ್ಷಾಂತರ ಜನರ ಮನಗೆದ್ದ ಕಡಲೆಕಾಯಿ ವ್ಯಾಪಾರಿಯ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿದ್ದೇಗೆ?
ಪ್ರತಿಭೆಗಳು ಯಾವ ಸಂದರ್ಭದಲ್ಲಿಯೂ ಅನಾವರಣಗೊಳ್ಳಬಹುದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳು ಹೆಚ್ಚು, ಹೆಚ್ಚು ಪ್ರಚಲಿತವಾಗುತ್ತಿರುವ ನಡುವೆಯೇ ನಮಗೆ ರಾನು ಮಂಡಲ್, ಕೇರಳದ ಕೂಲಿ ಕಾರ್ಮಿಕ ಮಮ್ಮಿಕ್ಕಾನ್ ಹೀಗೆ ಹಲವಾರು ಮಂದಿ ಜನಪ್ರಿಯರಾಗಿದ್ದರು, ಇತ್ತೀಚೆಗೆ ಅದಕ್ಕೊಂದು ಹೊಸ ಸೇರ್ಪಡೆ ಕಚ್ಚಾ ಬಾದಾಮ್ ಹಾಡು.! ಕಚ್ಛಾ ಬಾದಾಮ್ (ನೆಲಗಡಲೆ) ಹಾಡು ಹೇಗೆ ಏಕಾಏಕಿ ಲಕ್ಷಾಂತರ ಜನರ ಗಮನ ಸೆಳೆಯಿತು. ಈ ಹಾಡು ಇಷ್ಟೊಂದು ಕುತೂಹಲ ಹುಟ್ಟುಹಾಕಲು ಕಾರಣವೇನು? ಎಂಬ ಸಂಕ್ತಿಪ್ತ ನೋಟ ಇಲ್ಲಿದೆ. ನಿಮ್ಮ ಊಹೆಯಂತೆ …
Read More »ಕೋರ್ಟ್ ತೀರ್ಪು ಬರುವರೆಗೂ ಕಾಯುತ್ತೇವೆ: ಉಡುಪಿಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು
ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಆಗಮಿಸಿದ್ದಾರೆ. ‘ಕೋರ್ಟ್ ಆದೇಶದ ಪ್ರಕಾರ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಇರಲಿಲ್ಲ. ಇದನ್ನು ವಿದ್ಯಾರ್ಥಿನಿಗಳಿಗೆ ಮನವರಿಕೆ ಮಾಡಿದ್ದೇವೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುತ್ತೇವೆಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಒಟ್ಟು 2326 ವಿದ್ಯಾರ್ಥಿನಿಯರಿದ್ದು 196 ಮಂದಿ ಮುಸ್ಲಿಂರಿದ್ದಾರೆ. ಸದ್ಯ 40 ಮಂದಿ ಮಾತ್ರ …
Read More »ಪೊಲೀಸ್ ಬಿಗಿ ಬಂದೋಬಸ್ತಿಯ ನಡುವೆ ಕಾಲೇಜು ಪ್ರಾರಂಭ: ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ
ರಬಕವಿ-ಬನಹಟ್ಟಿ : ಹಿಜಾಬ್ ಹಾಗೂ ಕೇಸರಿ ಶಾಲು ಪ್ರಕರಣದ ಹಿನ್ನಲೆಯಲ್ಲಿ ಬನಹಟ್ಟಿಯಲ್ಲಿ ಕಳೆದ ಒಂದು ವಾರದಿಂದ ಬಂದ್ ಆಗಿದ್ದು, ಕಾಲೇಜು ಇಂದು ಬುಧವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಗಿದ್ದು, ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಯಿತು. ತಾಲೂಕಿನಲ್ಲಿ ನಡೆದ ಅಹಿತಕರ ಘಟನೆ ಮತ್ತೇ ಸಂಭವಿಸಬಾರದು ಎಂದು ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು ಸೂಕ್ಷ್ಮ ಶಾಲಾ, ಕಾಲೇಜು ಪ್ರದೇಶಗಳಲ್ಲಿ ಅಗತ್ಯ ಬಂದುಬಸ್ತಿಯನ್ನು ನಿಯೋಜನೆ …
Read More »ನಾಯಿಯ ನಿಷ್ಠೆ ಇಬ್ರಾಹಿಂಗೆ ಇದೆಯಾ?ಭ್ರಷ್ಟಾಚಾರ ಬೆತ್ತಲುಗೊಳಿಸುತ್ತೇನೆ : ಉಗ್ರಪ್ಪ ಕಿಡಿ
ಬೆಂಗಳೂರು : ನಾಯಿಗೆ ಇರುವ ನಿಷ್ಠೆ ಇಬ್ರಾಹಿಂಗೆ ಇದೆಯಾ ? ಇವರ ಭ್ರಷ್ಟಾಚಾರವನ್ನ ಬೆತ್ತಲುಗೊಳಿಸುತ್ತೇನೆ, ಎಲ್ಲೇ ಬೇಕಾದರೂ ಆಹ್ವಾನ ನೀಡಲಿ ಬಹಿರಂಗ ಚರ್ಚೆಗೆ ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ,ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ಅವರು ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮೇಲೆ ಬುಧವಾರ ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ವಾಲ್ಮೀಕಿ ವಂಶದಲ್ಲಿ ಹುಟ್ಟಿದವನು. ನಾನು ಎಂದೂ ಸಂಸ್ಕಾರ ಹೀನಾನಾಗಿ ಮಾತನ್ನಾಡಿಲ್ಲಇಬ್ರಾಹಿಂ ಹಳೆಯ ಸ್ನೇಹಿತರು, ನನ್ನನ್ನ ಕಕ್ಷಿದಾರನೆಂದು ಒಪ್ಪಿಕೊಂಡಿದ್ದಾರೆ. …
Read More »ಗಣಿ ಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆ: ಸುಪ್ರೀಂಕೋರ್ಟ್ ಅನುಮತಿ ಸಿಕ್ಕಿಲ್ಲ
ವಿಧಾನಪರಿಷತ್ತು: ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 24 ಸಾವಿರ ಕೋಟಿ ರೂ. ಮೊತ್ತದ “ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಿಸರ ಯೋಜನೆ’ಯ ಅನುಷ್ಠಾನದ ಅನುಮತಿಗಾಗಿ ಎಂಟು ಬಾರಿ ಸುಪ್ರೀಂಕೋರ್ಟ್ ಕದ ತಟ್ಟಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಕೆ.ಎ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ಆದೇಶದಂತೆ ಗಣಿ ಬಾಧಿತ ಪ್ರದೇಶಗಳ …
Read More »ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ
ವಿಧಾನಸಭೆ : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪಟ್ಟಿ ತಯಾರಿಸಲಾಗುತ್ತಿದ್ದು, ಆದಷ್ಟೂ ಶೀಘ್ರ ಅನುಮತಿ ಕೊಟ್ಟು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಮಹಾಂತೇಶ್ ಕೌಜಲಗಿಯವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ.ಏಣಗಿ-ಹಳೆ …
Read More »ಅಂಗನವಾಡಿ ಗ್ರಾ.ಪಂ.ಗೆ; ಗ್ರಾ.ಪಂ. ಸದಸ್ಯರು-ಅಂಗನವಾಡಿ ಸಿಬಂದಿ ಶೀತಲ ಸಮರ
ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ನಿರ್ವಹಣೆ ಹೆಸರಲ್ಲಿ ಅಂಗನವಾಡಿ ಕೇಂದ್ರಗಳನ್ನು ಪರೋಕ್ಷವಾಗಿ ಗ್ರಾಮ ಪಂಚಾಯತ್ಗಳ “ಹತೋಟಿ’ಗೆ ನೀಡುವ ಸರಕಾರದ ನಿರ್ಧಾರವು ಅಂಗನವಾಡಿ ನೌಕರರು ಮತ್ತು ಪಂಚಾಯತ್ ಸದಸ್ಯರ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ. ಅಂಗನವಾಡಿ ಕೇಂದ್ರಗಳನ್ನು ಯಾವುದೇ ರೂಪದಲ್ಲಿ ಗ್ರಾಮ ಪಂಚಾಯತ್ಗಳಿಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಅಂಗನವಾಡಿ ನೌಕರರು ಹೇಳುತ್ತಿದ್ದರೆ, ಇದರಿಂದ ಯಾವುದೇ ಸಮಸ್ಯೆ ಇಲ್ಲ ಅಂಗನವಾಡಿಗಳ ನಿರ್ವಹಣೆಯನ್ನು ಗ್ರಾ.ಪಂ.ಗಳಿಗೆ ಕೊಟ್ಟರೆ ಅವುಗಳಿಗೆ ಇನ್ನಷ್ಟು ಶಕ್ತಿ – ಸಾಮರ್ಥ್ಯ …
Read More »ಪದವಿ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ: ಖಾದರ್
ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ ಎಂದು ಸಚಿವ ಅಶ್ವಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಕೂಡಾ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು. ಸಿಎಂ ನಿವಾಸದ ಬಳಿ ಮಾತನಾಡಿದ ಅವರು, ಇವತ್ತು ಡಿಗ್ರಿ ಕಾಲೇಜುಗಳಲ್ಲೂ ಹಿಜಾಬ್ ಗೆ ಅವಕಾಶ ಕೊಡಬೇಕು. ಈ ಬಗ್ಗೆ ಅಶ್ವಥ ನಾರಾಯಣ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಕೆಲವು ಕಾಲೇಜುಗಳು, ಕೆಲವು ವಿವಿಗಳಲ್ಲಿ ಗೊಂದಲ ಆಗಲಿದೆ. …
Read More »ಗ್ರಾಮ ಪಂಚಾಯಿತಿಗೆ ನೇಮಕ ಅಧಿಕಾರವಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು : ಗ್ರಾಮ ಪಂಚಾಯಿತಿಯಲ್ಲಿ ನೇಮಕಕ್ಕೆ ಯಾವುದೇ ಗ್ರಾಮ ಪಂಚಾಯಿತಿಗೆ ಅಧಿಕಾರ ನೀಡಿಲ್ಲ. ಜಿಲ್ಲಾ ಪಂಚಾಯಿತ್ ಸಿಇಓಗಳೇ ಈ ಕಾರ್ಯ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೂನ್ಯವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅವರಿಗೆ ನೇಮಕ ಅಧಿಕಾರ ನೀಡಿದರೆ ಒಬ್ಬೊಬ್ಬ ಅಧ್ಯಕ್ಷರು ಬಂದಾಗ ಒಂದೊಂದು ರೀತಿಯ ಸಮಸ್ಯೆ ಆಗುತ್ತದೆ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ …
Read More »