ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ಗೆ 6.40ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. …
Read More »ಸಿಕ್ಸ್, ಫೋರ್ ಸಿಡಿಸಿ ಮ್ಯಾಚ್ ಫಿನಿಶ್ ಮಾಡಿದ ಕಾರ್ತಿಕ್
ಮುಂಬೈ: ಬೆಂಗಳೂರು ಮತ್ತು ಕೋಲ್ಕತ್ತಾ ನಡುವಿನ ಕೊನೆಯ ಓವರ್ ವರೆಗೂ ರೋಚಕವಾಗಿ ಕೂಡಿದ ಪಂದ್ಯದಲ್ಲಿ ಬ್ಯಾಟ್ಸ್ಮ್ಯಾನ್ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಮಾಡುವ ಮೂಲಕ ಆರ್ಸಿಬಿಗೆ 3 ವಿಕೆಟ್ಗಳ ಗೆಲುವು ತಂದುಕೊಟ್ಟರು. ಆರ್ಸಿಬಿಗೆ ಗೆಲ್ಲಲು ಕೊನೆಯ 6 ಎಸೆತಗಳಲ್ಲಿ 7 ರನ್ಗಳ ಅವಶ್ಯಕತೆ ಇತ್ತು. ರಸೆಲ್ ಎಸೆದ ಮೊದಲ ಎಸೆತವನ್ನೆ ದಿನೇಶ್ ಕಾರ್ತಿಕ್ ಸಿಕ್ಸರ್ಗಟ್ಟಿದರೆ, ಎರಡನೇ ಎಸೆತವನ್ನು ಬೌಂಡರಿಗಟ್ಟಿ ಆರ್ಸಿಬಿ ತಂಡವನ್ನು ಗೆಲ್ಲಿಸಿದರು. ಅಲ್ಪ ಮೊತ್ತದ ಗುರಿ ಪಡೆದ ಆರ್ಸಿಬಿ ಕೂಡ …
Read More »ಬಿಜೆಪಿ ಶಾಸಕ ರೇಣುಕಾಚಾರ್ಯಗೆ ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಬೆದರಿಕೆ ,
ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, …
Read More »ಏ.1 ರಂದು ನಡೆದಾಡೋ ದೇವರ ಜನ್ಮ ದಿನಾಚರಣೆ-
ತುಮಕೂರು: ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ. ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ. ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾರೂ ಇತ್ತ …
Read More »ತರ ಹೆಸರಿಗೇ ಉಳುವ ಭೂಮಿ : ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು, ಮಾ.31- ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಭಾಣಿ ಭೂಮಿಗಳಿವೆ, ಉತ್ತರ ಕನ್ನಡ ಜಿಲ್ಲಾಯಲ್ಲಿ ಬೆಟ್ಟ, ಹಾಡಿಗಳಿವೆ, ಮೈಸೂರು ಭಾಗದಲ್ಲಿ ಕಾನು ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು …
Read More »ಮೂರು ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ: ಯತ್ನಾಳ್
ಬೆಂಗಳೂರು: ಮೂರು ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ. ಒಂದು ಗಣಿಗಾರಿಕೆ, ಎರಡನೇಯದ್ದು ರಿಯಲ್ ಎಸ್ಟೇಟ್, ಮೂರನೇಯದ್ದು ಜಾತಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವ್ಯಾಖ್ಯಾನಿಸಿದರು. ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ರಾಜ್ಯದ ರಾಜಕೀಯ ವ್ಯವಸ್ಥೆ ಹಾಳಾಗಿರುವುದು ಗಣಿಗಾರಿಕೆಯಿಂದ. ಗಣಿ ಉದ್ಯಮಿಗಳು ಒಮ್ಮಿಂದೊಮ್ಮೆಲೆ ಎದ್ದು ಬಂದರು. ಸಾಮೂಹಿಕ ವಿವಾಹ ಕಾರ್ಯಕ್ರಮಗಳು, ಬಡ ವಿದ್ಯಾರ್ಥಿಗಳಿಗೆ ಪಾಸ್ ಹಂಚುವ ಕಾರ್ಯಕ್ರಮ ತರಲಾಯಿತು. ಇದರಿಂದಲೂ ರಾಜ್ಯದ ವ್ಯವಸ್ಥೆ ಹಾಳಾಯಿತು …
Read More »2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ
ಬೆಂಗಳೂರು : 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಇಲಾಖೆಯಲ್ಲಿ ದಕ್ಷತೆ, ಕಾರ್ಯಕ್ಷಮತೆ ಆಧಾರದಲ್ಲಿ 135 ವಿವಿಧ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಪದಕ ಪ್ರಕಟಿಸಿದೆ.ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು …
Read More »ಒಂದು ಅಂಕ ವ್ಯತ್ಯಾಸ ಇದ್ದರೂ ಅಂಕಪಟ್ಟಿ ಬದಲು?
ಬೆಂಗಳೂರು: ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ನು ಮುಂದೆ ಒಂದು ಅಂಕದ ವ್ಯತ್ಯಾಸ ಇದ್ದರೂ ಅಂಕ ಪಟ್ಟಿ ಬದಲಿಸಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಹಾಲಿ ನಿಯಮದ ಪ್ರಕಾರ ಮರು ಮೌಲ್ಯಮಾಪನದ ವೇಳೆ ಆರು ಅಂಕಗಳಿಗಿಂತ ಹೆಚ್ಚು ಅಂಕಗಳ ವ್ಯತ್ಯಾಸ ಇದ್ದರೆ ಮಾತ್ರ …
Read More »ವೈದ್ಯರಿಂದ ಗರ್ಭಕೋಶ ತೆಗೆಯುವ ದಂಧೆ: ಕೆ.ಜಿ.ನಾಗಲಕ್ಷ್ಮಿ ಬಾಯಿ ಆರೋಪ
ಬೆಂಗಳೂರು: ‘ಹೊಟ್ಟೆನೋವು ಎಂದು ಆಸ್ಪತ್ರೆಗಳಿಗೆ ಬರುವ ಹೆಣ್ಣುಮಕ್ಕಳಿಗೆ ಗರ್ಭಕೋಶ ಸಮಸ್ಯೆ ಇದೆ ಎಂದು ಹೆದರಿಸಿ, ಗರ್ಭಕೋಶ ತೆಗೆಸುವ ದಂಧೆ ವೈದ್ಯರಿಂದಲೇ ನಡೆಯುತ್ತಿದೆ’ ಎಂದು ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಕೆ.ಜಿ.ನಾಗಲಕ್ಷ್ಮಿಬಾಯಿ ಮಂಗಳವಾರ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ‘ಹಣದ ಆಸೆಗಾಗಿ ವೈದ್ಯರೇ ಈ ಕೃತ್ಯ ಎಸಗಿದ್ದಾರೆ. ಕಲಬುರಗಿ, ಹಾವೇರಿ, ಬೀದರ್, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿಗೆ ಗರ್ಭಕೋಶ ತೆಗೆಯಲಾಗಿದೆ’ ಎಂದು ದೂರಿದರು. …
Read More »ಟಿಪ್ಪು’ ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟೀಕೆ
ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಎಂದು ರಾಜ್ಯ ಬಿಜೆಪಿ ಘಟಕವು ಟೀಕಿಸಿದೆ. ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ ರಾಜಸತ್ತೆಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?’ ಎಂದು ಪ್ರಶ್ನಿಸಿದೆ. ‘ಟಿಪ್ಪು ಸುಲ್ತಾನ್ ಈ ದೇಶದ …
Read More »