Breaking News

ಐಪಿಎಲ್​ನಲ್ಲಿ ಕಠಿಣ ನಿಯಮ ಜಾರಿ ಮಾಡಲು ಮುಂದಾದ ಬಿಸಿಸಿಐ

IPL 2022: ಗುಜರಾತ್ ಟೈಟನ್ಸ್ ತಂಡದ ಆರಂಭಿಕನಾಗಿದ್ದ ಜೇಸನ್ ರಾಯ್ ಹಾಗೂ ಕೆಕೆಆರ್ ತಂಡಕ್ಕೆ ಆರಂಭಿಕನಾಗಿ ಅಲೆಕ್ಸ್ ಹೇಲ್ಸ್ ಆಯ್ಕೆಯಾಗಿದ್ದರು.ಐಪಿಎಲ್ ಸೀಸನ್ 15 (IPL 2022) ಶುರುವಾಗಿದೆ. ಈಗಾಗಲೇ ಬಹುತೇಕ ತಂಡಗಳ ಮೊದಲ ಪಂದ್ಯ ಮುಗಿದಿದೆ. ಇದಾಗ್ಯೂ ಅನೇಕ ವಿದೇಶಿ ಆಟಗಾರರು ಇನ್ನೂ ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಂಡಿಲ್ಲ. ರಾಷ್ಟ್ರೀಯ ತಂಡಗಳಲ್ಲಿರುವ ಆಟಗಾರರು ಇನ್ನಷ್ಟೇ ಐಪಿಎಲ್​ಗೆ ಆಗಮಿಸಬೇಕಿದೆ. ಆದರೆ ಈ ಆಟಗಾರರು ಬಂದೇ ಬರಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಹೀಗಾಗಿಯೇ …

Read More »

50 ವರ್ಷಗಳ ಗಡಿ ವಿವಾದ ಬಗೆಹರಿಸಲು ಅಸ್ಸಾಂ, ಮೇಘಾಲಯ ಮುಖ್ಯಮಂತ್ರಿಗಳಿಂದ ಐತಿಹಾಸಿಕ ಒಪ್ಪಂದಕ್ಕೆ ಸಹಿ

5 ದಶಕಗಳ ಕಾಲದ ಗಡಿ ವಿವಾದವನ್ನು ಅಂತ್ಯಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿರುವುದು ಈಶಾನ್ಯ ಭಾಗಕ್ಕೆ ಐತಿಹಾಸಿಕ ದಿನವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.ನವದೆಹಲಿ: ಅಸ್ಸಾಂ (Assam) ಮತ್ತು ಮೇಘಾಲಯ (Meghalaya) ರಾಜ್ಯಗಳ ನಡುವೆ 50 ವರ್ಷಗಳಿಂದ ಬಾಕಿ ಇದ್ದ ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲು ಇಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮತ್ತು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇಂದು ಮಧ್ಯಾಹ್ನ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು …

Read More »

ಶಿವಕುಮಾರ ಸ್ವಾಮೀಜಿ ಜಯಂತೋತ್ಸವಕ್ಕೆ ತುಮಕೂರಿಗೆ ರಾಹುಲ್‌ ಗಾಂಧಿ: ಹಿರಿಯ ನಾಯಕರೊಂದಿಗೆ ಸಭೆ

ತುಮಕೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮುಗ್ಗರಿಸಿರುವ ಕಾಂಗ್ರೆಸ್‌ ಇದೀಗ ಪಕ್ಷವನ್ನ ಸಂಘಟಿಸಲು ತೊಡೆ ತಟ್ಟಿ ನಿಂತಿದೆ. ಈ ನಿಟ್ಟಿನಲ್ಲಿ ಮಾರ್ಚ್‌ 31ರಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್‌31 ನಡೆದಾಡುವ ದೇವರು, ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತೋತ್ಸವ ಹಿನ್ನೆಲೆಯಲ್ಲಿ ತುಮಕೂರಿಗೆ ಭೇಟಿ ನೀಡಲಿದ್ದಾರೆ. ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗೇಶ್ವರನಿಗೂ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಯೇ ಪ್ರಸಾದ ಸ್ವೀಕರಿಸಿ ಆನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಮಧ್ಯಾಹ್ನ 2 …

Read More »

ಬಜೆಟ್‍ನಲ್ಲಿ ಮಂಡಿಸಿದ ಎಲ್ಲ ಕಾರ್ಯಕ್ರಮಗಳಿಗೆ ಹಣ ಒದಗಿಸಲು ಬದ್ಧ: ಸದನದಲ್ಲಿ ಸಿಎಂ ಬೊಮ್ಮಾಯಿ ಭರವಸೆ

2021-22ರಲ್ಲಿ 5 ಸಾವಿರ ಕೋಟಿ ಕಡಿಮೆ ಇತ್ತು. 2022-23ರ ಬಜೆಟ್‍ನ ಒಟ್ಟು ಗಾತ್ರ 2 ಲಕ್ಷ 65 ಸಾವಿರದ 720 ಕೋಟಿ. ಇದು ಹಿಂದಿನ ಬಜೆಟ್‍ಗಿಂತ ಶೇ.7.9ರಷ್ಟು ಹೆಚ್ಚಾಗಿದೆ ಎಂದು ವಿಧಾನಸಭೆ ಸದನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಬಜೆಟ್ ಗಾತ್ರ ಕಡಿಮೆ ಮಾಡಬೇಕಾಗುತ್ತದೆ ಎಂದು ನಮ್ಮ ಅಧಿಕಾರಿಗಳು ಹೇಳಿದ್ದರು. ಆದರೆ ಬಜೆಟ್ ಗಾತ್ರ ಕಡಿಮೆ ಮಾಡಿದ್ರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ನಾವು …

Read More »

ಮಗುವಿನಂಥ ಮನಸ್ಸು.. ತೊಟ್ಟಿಲಲ್ಲಿ ಮಲಗಿ ಮಗುವಾದ ‘ದೊಡ್ಮನೆ’ ಶಿವಣ್ಣ..!

ಸರಳ, ಸಜ್ಜನಿಕೆ, ಸ್ನೇಹ ಜೀವಿ, ಮಗು ಥರಾ ಮನಸ್ಸಿನ ಶಿವಣ್ಣ ಮಕ್ಕಳ ಜೊತೆ ಅಕ್ಷರಶಃ ಮಗುವಾಗಿ ಬಿಡ್ತಾರೆ.. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣರಿಗೆ ಸಂಬಂಧಿಸಿದ ವಿಡಿಯೋ ಒಂದು ಭಾರೀ ವೈರಲ್ ಆಗ್ತಿದೆ. ಸಂಬಂಧಿಕರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ತೆಗೆದ ಫೋಟೋ ಹಾಗೂ ವಿಡಿಯೋಗಳು ಇವು ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಶಿವಣ್ಣ, ತೊಟ್ಟಿಲಲ್ಲಿ ಮಲಗಿಕೊಂಡಿದ್ದಾರೆ. ಕಾಲು ಮೇಲೆ ಕಾಲು ಹಾಕಿ ಮಲಗಿ, ಒಂದು ಕೈಯನ್ನ ತಲೆ ದಿಂಬಾಗಿ ಇಟ್ಟುಕೊಂಡು …

Read More »

ಕೈಕೊಟ್ಟ ಹುಡುಗಿ.. ಜೀವ ತೆಗೆದುಕೊಂಡ ಪ್ರಿಯತಮ

ಬೆಂಗಳೂರು: ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡು ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಎಂಬ ಯುವಕ ಈ ರೀತಿ ನೇಣಿಗೆ ಶರಣಾಗಿದ್ದಾನೆ. ಮದುವೆ ಆಗುವಂತೆ ಅರುಣ್ ಯುವತಿಯ ಬೆನ್ನು ಬಿದ್ದಿದ್ದ, ಆದ್ರೆ ಯುವತಿ ವಿವಾಹವಾಗಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದು ಮನೆಯಲ್ಲಿಯೇ ಅರುಣ್ ನೇಣಿಗೆ ಶರಣಾಗಿದ್ದಾನೆ. ಇನ್ನು ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆಯನ್ನ ನಡೆಸಿದ್ದಾರೆ.

Read More »

ಕೊಂಡೋತ್ಸವದ ವೇಳೆ ಅವಘಡ; ಮಹಿಳೆ ಸಾವು, 45ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಕೊಂಡೋತ್ಸವ ನಡೆಯುತ್ತಿದ್ದ ವೇಳೆ ಅವಘಡ ನಡೆದಿದೆ. ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ. ಪುಟ್ಟಲಿಂಗಮ್ಮ ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು. ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ …

Read More »

ಡೆತ್​ನೋಟ್​ ಬರೆದಿಟ್ಟು ಶಂಕರಪ್ಪ ಆತ್ಮಹತ್ಯೆ! ಮದ್ವೆಯಾದ 5 ತಿಂಗಳಲ್ಲೇ ದುರಂತ, ಪತ್ನಿ ಮೇಘನಾಳ ಗೋಳಾಟ ನೋಡಲಾಗ್ತಿಲ್ಲ.

ಕುಣಿಗಲ್​: ವಯಸ್ಸಿನಲ್ಲಿ ತನಗಿಂತ 20 ವರ್ಷ ದೊಡ್ಡವನ ಜತೆ ಯುವತಿಯೇ ಇಷ್ಟಪಟ್ಟು ಸರಳವಾಗಿ ಮದುವೆ ಆಗಿದ್ದರು. ಈ ಜೋಡಿಯ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿತ್ತು ಕೂಡ. ‘ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ. ಶುಭವಾಗಲಿ’ ಎಂದು ನೂರಾರು ಜನ ಹರಸಿದ್ದರು ಕೂಡ. ಆದರೀಗ ಈ ಜೋಡಿಯ ಬಾಳಲ್ಲಿ ದುರಂತ ಸಂಭವಿಸಿದೆ. ಯುವತಿ ಜತೆ ಸಪ್ತಪದಿ ತುಳಿದಿದ್ದ ರೈತ ಶಂಕರಪ್ಪ ಇಂದು (ಮಂಗಳವಾರ) ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ …

Read More »

ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ಬಯಸಿ ಅರ್ಜಿ ಸಲ್ಲಿಸಿದವರ ಪೈಕಿ ಮನೆ ಮನೆ ಸಮೀಕ್ಷೆ ಪೂರ್ಣಗೊಂಡ 4.25 ಲಕ್ಷ ಅರ್ಜಿದಾರರ ಜೈವಿಕ ದತ್ತಾಂಶ ಸಂಗ್ರಹಿಸಿ, ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಭರವಸೆ ನೀಡಿದರು. ವಿಧಾನಪರಿಷತ್​ನಲ್ಲಿ ಸೋಮವಾರ ಕಾಂಗ್ರೆಸ್​ನ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿ, ಕಳೆದ ಮೂರು ವರ್ಷ (2022ರ ಫೆಬ್ರವರಿ ಅಂತ್ಯ)ಗಳಲ್ಲಿ ಆದ್ಯತಾ ಪಡಿತರ …

Read More »

53.79 ಟನ್ ಕಬ್ಬು ಸಾಗಿಸಿ ದಾಖಲೆ

ಮುಧೋಳ: ಜಮಖಂಡಿ ತಾಲ್ಲೂಕು ನಾವಲಗಿ ಗ್ರಾಮದ ಪ್ರಗತಿಪರ ರೈತ ಬಸಪ್ಪ ಸದಪ್ಪ ಮುಗಳಖೋಡ ತಮ್ಮ ಜಮೀನಿನಲ್ಲಿ ಬೆಳೆದ 53.79 ಟನ್ ಕಬ್ಬನ್ನು ತಮ್ಮ ಟ್ರ್ಯಾಕ್ಟರ್ ನಲ್ಲಿ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಾಗಿಸಿ ದಾಖಲೆ ಮಾಡಿದರು. ನಿರಾಣಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ನಿರ್ದೇಶಕ ಎನ್.ವಿ ಪಡಿಯಾರ ಮತ್ತು ಡಿ.ಬಿ.ನಾಯಕ, ಕೆ. ದ್ವಾರಕೀಶ್, ಅವರು ಪ್ರಗತಿಪರ ರೈತ ಬಸಪ್ಪ ಅವರನ್ನು ಸನ್ಮಾನಿಸಿದರು. ‘53.79 ಟನ್ ಕಬ್ಬು ಸಾಗಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ’ ಎಂದು …

Read More »