Breaking News

ಸಂಪುಟ ಪುನಾರಚನೆಗೆ ಒತ್ತಡ: ಫೆ. 7ಕ್ಕೆ ಮುಖ್ಯಮಂತ್ರಿ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿಗೆ ಭೇಟಿ ನೀಡುವುದಾಗಿ ಪ್ರಕಟಿಸಿದ ಬೆನ್ನಲ್ಲೇ, ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸಚಿವಕಾಂಕ್ಷಿ ಶಾಸಕರೂ ದೆಹಲಿಗೆ ಹೋಗಲು ತಯಾರಿ ನಡೆಸಿದ್ದಾರೆ.   ಸಚಿವ ಸಂಪುಟ ಪುನಾರಚನೆ ಮಾಡಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಒತ್ತಡವೂ ಬಿಜೆಪಿಯಲ್ಲಿ ಪ್ರಬಲವಾಗಿ ಕೇಳಿ ಬಂದಿದೆ. ಸುದ್ದಿಗಾರರ ಜತೆ ಬುಧವಾರ ಬೆಳಿಗ್ಗೆ ಮಾತನಾಡಿದ ಬೊಮ್ಮಾಯಿ, ಗುರುವಾರವೇ ದೆಹಲಿಗೆ ತೀರ್ಮಾನಿಸಿರುವುದಾಗಿ ಹೇಳಿದ್ದರು. ಆದರೆ, ಮಧ್ಯಾಹ್ನ ಮಾತನಾಡಿದ ಅವರು, ‘ಗುರುವಾರ ಭೇಟಿ …

Read More »

ಅಪಹರಣಕ್ಕೊಳಗಾದ 3 ಗಂಟೆಯಲ್ಲೇ ಇಂಜಿನಿಯರ್ ಪ್ರಕರಣ ಸುಖಾಂತ್ಯ: ಯಲಹಂಕ ‘ಇನ್ಸ್ ಪೆಕ್ಟರ್ ಹರಿಯಬ್ಬೆ ಸತ್ಯನಾರಾಯಣ್’ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಮಾಡಿ ಕೊಟ್ಟಂತ ಕೆಲಸದ ಹಣ ಕೊಟ್ಟಿಲ್ಲ ಅಂತ ಇಂಜಿನಿಯರ್ ( Engineer ) ಒಬ್ಬರನ್ನು ಅಪಹರಿಸಿದ್ದಂತ ಆರೋಪಿಗಳನ್ನು 3 ಗಂಟೆಯಲ್ಲಿ ಪತ್ತೆ ಹಚ್ಚಿ, ಸುಖಾಂತ್ಯಗೊಳಿಸಲಾಗಿದೆ. ತ್ವರಿತವಾಗಿ ಆರೋಪಿಗಳನ್ನು ಬಂಧಿಸಿ, ಇಂಜಿನಿಯರ್ ಪತ್ತೆಹಚ್ಚಿದಂತ ಯಲಹಂಕ ಠಾಣೆ ಇನ್ಸ್ ಪೆಕ್ಟರ್ ಹರಿಯಬ್ಬೆ ಸತ್ಯನಾರಾಯಣ ( Yalahanka Police Station Inspection Hariyabbe Sathyanarayan ) ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.   ಒಡಿಶಾ ಮೂಲಕ ಸಿವಿಲ್ ಇಂಜಿನಿಯರ್ ಮಾನಸ್ ಜೊತೆಗೆ ನಂದ ಹಾಗೂ …

Read More »

ಯುವಕರ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಹೆಜ್ಜೆ; ಗ್ರಾಮೀಣ ಮಟ್ಟದಲ್ಲೇ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನ

ಬೆಂಗಳೂರು: ಯುವ ಸಮುದಾಯದ ಅಭ್ಯುದಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದಲೇ ಯಶಸ್ವಿಗೊಳಿಸಲು ಸರ್ಕಾರ ಮುಂದಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾಯರ್åಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಮೂಲಕ ಅನುಷ್ಠಾನ ಮಾಡಲು ಯೋಜನೆ ರೂಪಿಸಿದೆ. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಮಿತಿಯನ್ನು 2019ರಲ್ಲಿ ರಚಿಸಲಾಗಿದೆ. ಆದರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ, ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, …

Read More »

ನಿರಾಣಿ ಚಮಚಾಗಳು, ಸಹೋದರರಿಂದ ಸ್ವಾಮೀಜಿಗೆ ನೋವು: ವಿಜಯಾನಂದ ಕಾಶಪ್ಪನವರ

ಬೆಳಗಾವಿ: ‘ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ನೀಡಿರುವ ದಾನದ ಬಗ್ಗೆ ಸಚಿವ ಮುರುಗೇಶ ನಿರಾಣಿ ಅವರ ಚಮಚಾಗಳು, ಸಹೋದರ ಲಕ್ಷ್ಮಣ ನಿರಾಣಿ ಮೊದಲಾದವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ. ಅದನ್ನು ಸಮಾಜ ತೀವ್ರವಾಗಿ ಖಂಡಿಸುತ್ತದೆ’ ಎಂದು ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ತಿಳಿಸಿದರು.   ಇಲ್ಲಿ ನಡೆದ ಸಮಾಜದ ಕಾರ್ಯಕಾರಿಣಿ ನಂತರ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಂಘಟನೆಯಲ್ಲಿ ಇಲ್ಲದವರು, ಮೀಸಲಾತಿ ಹೋರಾಟದಲ್ಲಿ ಭಾಗವಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ. …

Read More »

ಬಿಎಸ್ ಯಡಿಯೂರಪ್ಪ ಯುಗಾಂತ್ಯ: ವಾಜಪೇಯಿ ನಂತರ ಮೋದಿ ಬಂದ ಹಾಗೆ, ರಾಜ್ಯದಲ್ಲಿ ಪರ್ಯಾಯ ನಾಯಕತ್ವದ ಅಗತ್ಯ

ಬೆಳಗಾವಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದ್ದು, ರಾಜ್ಯದಲ್ಲಿ ಪರ್ಯಾಯ ಅಂದರೆ ಎರಡನೇ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವರ ಮಾತನಾಡಿದ ಅವರು, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅಗತ್ಯ, ಅನಿವಾರ್ಯ ಆಗಿದೆ. ಕ್ರಿಯಾಶೀಲರಾಗಿ ಕೆಲಸ ಮಾಡಲು 2ನೇ ನಾಯಕತ್ವ ಅಗತ್ಯವಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹವಾ ಮುಗಿದಿದೆ. ಇನ್ನೂ 3-4 ಜನರಿದ್ದಾರೆ ಅವರದ್ದೂ ಮುಗಿಯಲು …

Read More »

ಆದಾಯ ಪ್ರಮಾಣಪತ್ರ: ಅತಿಯಾಯಿತು ಮಿತಿ

ಸರ್ಕಾರವು ಬಡವರಿಗೆಂದು ಜಾರಿಗೆ ತಂದಿರುವ ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಆದಾಯದ ಮಿತಿಯನ್ನು₹ 32,000ಕ್ಕೆ ನಿಗದಿಪಡಿಸಲಾಗಿದೆ. ಆದರೆ ಇದು ಇಂದಿನ ದಿನಗಳಲ್ಲಿ ಅವೈಜ್ಞಾನಿಕವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಇಷ್ಟು ಕಡಿಮೆ ಪ್ರಮಾಣದ ಆದಾಯ ಪ್ರಮಾಣಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ವಸತಿ ಯೋಜನೆಯಡಿ ನೀಡಬೇಕಾದ ಆದಾಯದ ಮಿತಿಯನ್ನು ಹೆಚ್ಚಿಸುವ ಮೂಲಕ ಸರ್ಕಾರವು ಬಡವರಿಗಾಗಿರುವ ತೊಂದರೆಯನ್ನು ಸರಿಪಡಿಸಬೇಕಾಗಿದೆ.  

Read More »

ಜೇಮ್ಸ್​ ಸಿನಿಮಾಗೆ ಶಿವಣ್ಣ ವಾಯ್ಸ್​;

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ನಟನೆಯ ಕೊನೇ ಚಿತ್ರ ಜೇಮ್ಸ್​ ಮಾರ್ಚ್​ 17 ಅಪ್ಪು ಬರ್ತಡೆ ಪ್ರಯುಕ್ತ ಬಿಡುಗಡೆಗೆ ಸಿದ್ದವಾಗಿದೆ. ಈ ಸಿನಿಮಾಗೆ ಡಬ್ಬಿಂಗ್​ ಮಾಡುವ ಮುನ್ನವೇ ಪುನೀತ್​ ರಾಜ್​ಕುಮಾರ್​ ನಮ್ಮನ್ನ ಅಗಲಿದ್ರು. ಹಾಗಾಗಿ ಸಿನಿಮಾಗೆ ಡಬ್ಬಿಂಗ್​ ಮಾಡೋದು ಹೇಗೆ ಅನ್ನೋದು ದೊಡ್ಡ ಸಮಸ್ಯೆ ಆಗಿ ಪರಿಣಮಿಸಿತ್ತು. ಆರಂಭದಲ್ಲಿ ಶಿವರಾಜ್​ಕುಮಾರ್​ ಸಿನಿಮಾಗೆ ಡಬ್ ಮಾಡ್ತಾರೆ ಅನ್ನೋ ಸುದ್ದಿಗಳು ಕೇಳಿಬಂದಿತ್ತಾದರೂ ಪುನೀತ್​ ಅವರ ವಾಯ್ಸೇ ಇದ್ರೆ ಉತ್ತಮ ಅಂತಾ ಜೇಮ್ಸ್​ ಚಿತ್ರ ತಂಡ ಸಾಕಷ್ಟು …

Read More »

ಆರ್​ಟಿಸಿ ಎಂಟ್ರಿಯಲ್ಲಿ ತಪ್ಪುಗಳಾದರೆ ಅಧಿಕಾರಿಗಳೇ ಹೊಣೆ!

ಇನ್ಮುಂದೆ ತಾಲೂಕು ಕಚೇರಿಗಳ ‘ಭೂಮಿ’ ಕೇಂದ್ರಗಳಲ್ಲಿ ಪಹಣಿ(ಆರ್​ಟಿಸಿ) ಎಂಟ್ರಿಯಲ್ಲಿ ತಪುಪಗಳಾದಲ್ಲಿ ಅದಕ್ಕೆ ಅಧಿಕಾರಿಗಳೇ ಹೊಣೆಯಾಗುತ್ತಾರೆ! ಜ.14ರಂದು ರಾಜ್ಯ ಭೂಮಾಪನ ಇಲಾಖೆ ಮತ್ತು ಭೂಮಿ ಉಸ್ತುವಾರಿ ಕೋಶದಿಂದ ಜಿಲ್ಲಾಧಿಕಾರಿಗಳಿಗೆ ಹೊರಡಿಸಲಾಗಿರುವ ಮಹತ್ವದ ಸುತ್ತೋಲೆಯಲ್ಲಿ ಇಂಥದ್ದೊಂದು ಆದೇಶ ಪ್ರಕಟವಾಗಿದೆ. ಅಧಿಕಾರಿಗಳ ಕಣ್ತಪ್ಪು ಹಾಗೂ ಬೇಜವಾಬ್ದಾರಿಯಿಂದ ಪಹಣಿಯಲ್ಲಿ ಸಾಗುವಳಿದಾರರ ಹೆಸರು ಇನ್ನಿತರ ಅಂಶಗಳ ತಪ್ಪು ದಾಖಲಾತಿ ಅಥವಾ ರದ್ದು ಸಾಮಾನ್ಯ. ಈ ತಪ್ಪನ್ನು ಸರಿಪಡಿಸಲು ಸಾರ್ವಜನಿಕರು ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದರೂ, ಕಾಲಹರಣ ಮಾಡುತ್ತಿರುವ ಪ್ರಕರಣಗಳೇ …

Read More »

ಪಾಕಿಸ್ತಾನ-ಚೀನಾ ಒಟ್ಟಿಗೆ ತಂದಿದ್ದು ಮೋದಿ ಸರ್ಕಾರ: ರಾಹುಲ್ ಗಾಂಧಿ

ನವದೆಹಲಿ, ಫೆಬ್ರವರಿ 3: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್‌ನಲ್ಲಿ ಬಜೆಟ್ ಅಧಿವೇಶನದಲ್ಲಿ ಮಾತನಾಡಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತರುವ ಅಪರಾಧವನ್ನು ಕೇಂದ್ರ ಮಾಡಿದೆ. “ದೊಡ್ಡ ವ್ಯೂಹಾತ್ಮಕ ತಪ್ಪು” ಮಾಡಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಅಧ್ಯಕ್ಷರ ಭಾಷಣದ …

Read More »

ರಮೇಶ ಬಂದಿದ್ರು-ನಾನೂ ಹೋಗಿದ್ದೆ, ಯುಗಾದಿ ಹೊತ್ತಿಗೆ ಬದಲಾವಣೆ ನಿಶ್ಚಿತ: ಯತ್ನಾಳ್‌

ಬೆಳಗಾವಿ ಸದ್ಯ ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಆವಶ್ಯಕತೆ ಇದೆ. ಯುಗಾದಿ ಅನಂತರ ಹೊಸ ವರ್ಷಕ್ಕೆ ಬದಲಾವಣೆ ಆಗುವುದು ನಿಶ್ಚಿತ. ರಾಜ್ಯದಲ್ಲಿ ಒಳ್ಳೆಯ ಬದಲಾವಣೆ ಆಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಯಾಶೀಲ ಇದ್ದವರು ಮಂತ್ರಿ ಆಗುತ್ತಾರೆ. ಕೆಲವರು ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಕೆಲವರನ್ನು ಮಂತ್ರಿ ಸ್ಥಾನದಿಂದ ಮುಕ್ತಗೊಳಿಸಿ ಪಕ್ಷದ ಜವಾಬ್ದಾರಿ ಕೊಡಲಾಗುತ್ತದೆ. ನಾನಂತೂ ಮಂತ್ರಿ ಮಾಡುವಂತೆ ಮನವಿ ಮಾಡಿಲ್ಲ ಎಂದು ಹೇಳಿದರು. …

Read More »