ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ. ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ …
Read More »ಗ್ರಾಮಕ್ಕೆ ಬಸ್ ಬಿಡಿ: ಸಿಎಂ ಕಾರು ತಡೆದು ಮನವಿ ಪತ್ರ ಕೊಟ್ಟ ವಿದ್ಯಾರ್ಥಿನಿಯರು
ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಹೋಗುತ್ತಿದ್ದ ಕಾರ್ ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿನಿಯರು ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೊಮ್ಮಾಯಿ ಅವರು ಶನಿವಾರ(ಇಂದು) ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರು ಗ್ರಾಮದ ಮಲಿಯಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವಿಯ ದರ್ಶನ ಪಡೆದ ನಂತರ ಗ್ರಾಮದಲ್ಲಿ …
Read More »ಪಾವಗಡ ಬಸ್ ಅಪಘಾತ: ಬೆಡ್ ನೀಡದೇ ಮಗನನ್ನು ಕೊಂದ್ರು.. ಒಬ್ಬನೇ ಮಗನ ಕಳೆದುಕೊಂಡ ಪೋಷಕರ ಆಕ್ರಂದನ
ಬೆಂಗಳೂರು: ಇತ್ತೀಚೆಗೆ ತುಮಕೂರು ಜಿಲ್ಲೆಯ ಪಾವಗಡಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮಹೇಂದ್ರ(19) ಇಂದು ಕೊನೆಯುಸಿರೆಳೆದಿದ್ದಾನೆ. ಇತ್ತ ಒಬ್ಬನೇ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಬೆಡ್ ನೀಡದೇ ನಮ್ಮ ಮಗನನ್ನು ಸಾಯಿಸಿಬಿಟ್ಟರು ಎಂದು ಮೃತ ಯುವಕನ ತಂದೆ ಆಕ್ರೋಶ ವ್ಯಕ್ತಪಡಿಸಿದರು. ವಿಕ್ಟೋರಿಯಾ ಆಸ್ಪತ್ರೆ ಶವಾಗಾರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಯುವಕನ ತಂದೆ ಶ್ರೀನಿವಾಸ್, ಅಪಘಾತ ಸಂಭವಿಸಿದ ದಿನ ನಿಮ್ಹಾನ್ಸ್ನಲ್ಲಿ ಬೆಡ್ ಕೊಟ್ಟಿದ್ದರೆ ನನ್ನ …
Read More »IPL 2022: ಚೆನ್ನೈ-ಕೋಲ್ಕತ್ತಾ ಹಣಾಹಣಿ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೆಕೆಆರ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಆವೃತ್ತಿಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್ ಅಪ್ ತಂಡ ಕೋಲ್ಕತ್ತಾ ನೈಟ್ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಮುಂಬೈನ ವಾಖೆಂಡೆ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ. ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಶ್ರೇಯಸ್ ಅಯ್ಯರ್ ಕೋಲ್ಕತ್ತಾ ನೈಟ್ ರೈಡರ್ಸ್ ಮುನ್ನಡೆಸುತ್ತಿದ್ದು, ಆಲ್ರೌಂಡರ್ ರವೀಂದ್ರ ಜಡೇಜಾ …
Read More »ವಾರ್ಷಿಕ ಪರೀಕ್ಷೆ’ಯಲ್ಲೂ ‘ಪುನೀತ್ ರಾಜ್ ಕುಮಾರ್’ ಕುರಿತ ಪಾಠ, ಪ್ರಶ್ನೆ: ಅಪ್ಪು ಬಗ್ಗೆ ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಗಿತ್ತು ಗೊತ್ತಾ.? |
ಬೆಂಗಳೂರು: ಈಗಾಗಲೇ ಪುನೀತ್ ರಾಜ್ ಕುಮಾರ್ ( Actor Puneet Rajkumar ) ಹೆಸರನ್ನು ಅವರ ನಿಧನಾನಂತ್ರ ಅಮರವಾಗಿಸುವ ನಿಟ್ಟಿನಲ್ಲಿ, ವೃತ್ತ, ರಸ್ತೆಗಳಿಗೆ ಅವರ ಹೆಸರಿನ್ನು ಇಡಲಾಗಿದೆ. ಇದಲ್ಲದೇ ಉಪಗ್ರಹಕ್ಕೂ ಅವರ ಹೆಸರಿನ್ನು ಇಡಲಾಗಿತ್ತು. ಈ ಬಳಿಕ, ಈಗ 4ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿಯೂ ( Annual Exam ) ಅಪ್ಪು ಬಗ್ಗೆ ಪ್ರಶ್ನೆಯನ್ನು ಕೇಳಲಾಗಿದೆ. ಹೌದು.. ಬೆಂಗಳೂರಿನ ವಿಜಯನಗರ ಬಳಿಯ ಆರ್ ಪಿ ಸಿ ಲೇಔಟ್ ನಲ್ಲಿರುವಂತ ದಿ …
Read More »ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ
ಚಂಡೀಗಢ: ಪಂಜಾಬ್ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಮತ್ತು ಅವರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ತೆಗೆದುಹಾಕಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ. “ಪಂಜಾಬ್ನ ಮಾಜಿ ಶಾಸಕರು, ಅವರು ಎರಡು ಬಾರಿ, ಐದು ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯುತ್ತಾರೆ” ಎಂದು ವೀಡಿಯೊ ಸಂದೇಶದಲ್ಲಿ …
Read More »ಸಾಗರ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡಬೇಡಿ: ವಿಎಚ್ಪಿ ಒತ್ತಾಯ
ಶಿವಮೊಗ್ಗ: ನಗರದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮುಂಗಟ್ಟು ಹಾಕಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಮಹಾ ಗಣಪತಿ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡದಂತೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ. ಏಪ್ರಿಲ್ 5 ರಿಂದ ಏಪ್ರಿಲ್ 19 ರವರೆಗೆ ಗಣಪತಿ ಕೆರೆ ದಡದಲ್ಲಿ ಬೃಹತ್ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಸಾಗರ ತಾಲೂಕಿನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಈ …
Read More »ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಜ್ಯದಲ್ಲಿ ಕೋಮುವಾದ ಬಿತ್ತುವ ಯತ್ನ ಎಂದ ಬೆಂಗಳೂರಿನ ಬೀದಿ ವ್ಯಾಪಾರಿಗಳು
ಬೆಂಗಳೂರು: ಜಾತ್ರೆ ವೇಳೆ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಸ್ಲಿಮರು ಅಂಗಡಿ ಮುಂಗಟ್ಟು ಹಾಕದಂತೆ ನಿಷೇಧಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು, ರಾಜ್ಯದಲ್ಲಿ ಬಲಪಂಥೀಯ ಸಂಘಟನೆಗಳು ಕೋಮುವಾದದ ವಿಷಬೀಜ ಬಿತ್ತಲು ಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಮತ್ತು ಇತರ ಮಿತ್ರ ಸಂಘಟನೆಗಳು ಕರ್ನಾಟಕದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಮೇಲಿನ ಕೋಮು ದಾಳಿಯನ್ನು ಖಂಡಿಸಿವೆ. ‘ವಿಶ್ವ ಹಿಂದೂ ಪರಿಷತ್ತು ದೇವಸ್ಥಾನದ ಆಡಳಿತ ಸಮಿತಿಗಳ …
Read More »2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾದರೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಾಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದು ಹೇಳಿದರು.
Read More »ದಾರಿ ತಪ್ಪಿದ ಮಗ’ನ ನೋಡಿ ಎಸ್ ಆರ್ ಬೊಮ್ಮಾಯಿ ಆತ್ಮ ಅದೆಷ್ಟು ಕೊರಗುತ್ತಿದೆಯೋ; ಬಿಲ್ಡಪ್ ಬೊಮ್ಮಾಯಿ ಇದೇ ಅಲ್ಲವೇ ನಿಮ್ಮ ಸಾಧನೆ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುಪಿ ಮಾಡೆಲ್ ಅನುಸರಿಸಿ ರಾಜ್ಯದಲ್ಲಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಪರ ಚರ್ಚೆಯ ಬದಲು ಧರ್ಮದ ಆಧಾರದ ಅನಗತ್ಯ ಕಲಹಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ದಾರಿ ತಪ್ಪಿದ ಮಗ’ನನ್ನು ನೋಡಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಆತ್ಮ ಅದೆಷ್ಟು ಕೊರಗುತ್ತಿದೆಯೋ. #ಬಿಲ್ಡಪ್ ಬೊಮ್ಮಾಯಿ ಎಂದು ಲೇವಡಿ ಮಾಡಿದೆ.ವೈಯಕ್ತಿಕ ವೈಷಮ್ಯಕ್ಕೆ ಕೊಲೆಯಾದ ಕುಟುಂಬಕ್ಕೆ 25 …
Read More »