ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ. ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಆನ್ಲೈನ್ ನಲ್ಲಿ ಹಲವು ಸೇವೆಗಳು ಲಭ್ಯವಿವೆ. ವಿಳಾಸ, ಹೆಸರು ತಿದ್ದುಪಡಿಗೂ ಅವಕಾಶ ನೀಡಲಾಗಿದೆ. https://sarathi.parivahan.gov.in/sarathiservice ವೆಬ್ಸೈಟ್ ನಲ್ಲಿ ಸೇವೆ ಲಭ್ಯವಿದೆ. ಡಿಎಲ್ ನವೀಕರಣ, ಚಾಲನಾ ಪರವಾನಿಗೆ ನವೀಕರಣ, ವಿಳಾಸ, ಹೆಸರು ತಿದ್ದುಪಡಿಗೆ ಅವಕಾಶ …
Read More »ಪ್ರಿಯಾಂಕಾ ಗಾಂಧಿಯನ್ನು ‘ಅಕ್ಕ’ ಎನ್ನುತ್ತಿದ್ದ ನಿದಾ ಖಾನ್ ಬಿಜೆಪಿಗೆ!
ಲಖನೌ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಅದರಲ್ಲಿಯೂ ಸದ್ಯ ಎಲ್ಲರ ಗಮನ ಸೆಳೆದಿರುವುದು ಉತ್ತರ ಪ್ರದೇಶ. ಇಲ್ಲಿಯ ರಾಜಕೀಯ ವಲಯದಲ್ಲಿ ಇದೀಗ ಭಾರಿ ಕುತೂಹಲದ ಬೆಳವಣಿಗೆ ನಡೆದಿದ್ದು, ತ್ರಿವಳಿ ತಲಾಖ್ ಸಂತ್ರಸ್ತೆ ನಿದಾ ಖಾನ್ ಬಿಜೆಪಿ ಸೇರಿದ್ದಾರೆ. ಇತ್ತಿಹಾದ್-ಎ-ಮಿತಾತ್ ಮಂಡಳಿಯ ಮುಖ್ಯಸ್ಥ ಮೌಲಾನಾ ತೌಖೀರ್ ರಾಜಾ ಖಾನ್ ಅವರ ಸೊಸೆಯಾಗಿರುವ ನಿದಾ ಬಿಜೆಪಿಯನ್ನು ಸೇರುವ ಮೂಲಕ ಕಾಂಗ್ರೆಸ್ಗೂ ಶಾಕ್ ಕೊಟ್ಟಿದ್ದಾರೆ. ಸಮಾಜ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ …
Read More »ಗಡಿಯಲ್ಲಿ ಚೆಕ್ಪೋಸ್ಟ್ ಸಿಬ್ಬಂದಿ ಆರ್ಟಿಪಿಸಿಆರ್ ವರದಿ ಕೇಳುತ್ತಾರೆ, ವರದಿ ಇಲ್ಲದಿದ್ದರೆ ಲಂಚ ನೀಡಬೇಕಾಗುತ್ತದೆ.?
ಬೆಳಗಾವಿ :ರಾಜ್ಯದಲ್ಲಿ ಕರೊನಾ ಪ್ರಕರಣ ತಗ್ಗುತ್ತಿರುವ ಕಾರಣಕ್ಕೆ ರಾತ್ರಿ ಕರ್ಫ್ಯೂ ಸೇರಿ ಅನೇಕ ನಿರ್ಬಂಧಗಳನ್ನು ಸಡಿಲಿಸಿರುವ ರಾಜ್ಯ ಸರ್ಕಾರ, ಗಡಿ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಜೀವನವನ್ನು ಮಾತ್ರ ನರಕವನ್ನಾಗಿಸಿದೆ. ಯಾವುದೇ ರ್ತಾಕ ಆಧಾರವಿಲ್ಲದೆ ಅವೈಜ್ಞಾನಿಕವಾಗಿ ವಿಧಿಸಿರುವ ನಿರ್ಬಂಧಗಳಿಂದ ಆರ್ಟಿಪಿಸಿಆರ್ ಕಡ್ಡಾಯ ಪ್ರಮಾಣ ಪತ್ರವನ್ನೇ ನೆಪವಾಗಿಸಿಕೊಂಡು ವಾಹನ ಸವಾರರಿಂದ ರಾಜಾರೋಷವಾಗಿ ಹಣ ಸುಲಿಗೆ ಮಾಡಲಾಗುತ್ತಿದೆ. ಚೆಕ್ಪೋಸ್ಟ್ ಸಿಬ್ಬಂದಿಗೆ ಲಂಚ ನೀಡುವುದರಿಂದ ತಪ್ಪಿಸಿಕೊಳ್ಳಲು ಅನೇಕರು ನಕಲಿ ಆರ್ಟಿಪಿಸಿಆರ್ ವರದಿಗಳ ಮೊರೆ ಹೋಗಿದ್ದಾರೆ. …
Read More »ಗಾಂಧಿ ಹತ್ಯೆಯ ಆ ದಿನ
ಆ ಸಂಜೆ ಆರು ಗಂಟೆಗೆ ಆಕಾಶವಾಣಿ ವಾರ್ತೆಯಲ್ಲಿ ಸಾರಲಾಯಿತು. ”ಈಗ ಸ್ವಲ್ಪಹೊತ್ತಿನ ಮುಂಚೆ ಮಹಾತ್ಮಾ ಗಾಂಧಿಯವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಕೊಂದವನು ಒಬ್ಬ ಹಿಂದೂ!” ಈ ಒಂದು ಸಾಲಿನ, ಎರಡು ವಾಕ್ಯದ ಸುದ್ದಿ ಭೀಕರ ಹಾಗೂ ವ್ಯಾಪಕ ಹಿಂಸಾಚಾರಗಳಿಂದ ಈ ದೇಶವನ್ನು ಉಳಿಸಿತು. ಮುಖಂಡರು ನಿಟ್ಟುಸಿರುಬಿಟ್ಟು ಇದ್ದದ್ದರಲ್ಲಿಯೇ ಸಮಾಧಾನಪಟ್ಟರು. ಒಂದು ವೇಳೆ ಗಾಂಧೀಜಿ ಹಂತಕ ಮುಸ್ಲಿಮನಾಗಿದ್ದಿದ್ದರೆ ಈ ದೇಶದಲ್ಲಿ ಘನಘೋರ – ಹಿಂದೆ ಎಂದೆಂದೂ ಕಾಣದಿದ್ದ, ಮುಂದೆ ಎಂದೆಂದೂ ಕಾಣಲಾಗದ …
Read More »ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಕೈಕೊಟ್ಟ ಪೊಲೀಸ್ ಕಾನ್ಸ್ಟೇಬಲ್
ಮೈಸೂರು: ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಯುವತಿಗೆ ಕೈಕೊಟ್ಟಿರುವ ಘಟನೆ ನಡೆದಿದ್ದು, ಮೋಸ ಹೋದ ಯುವತಿ ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. ತಿ.ನರಸೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್ಟೇಬಲ್ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಅನ್ಯಾಯಕ್ಕೆ ಒಳಗಾದ ಯುವತಿ ಬೆಂಗಳೂರಿನ ನಿವಾಸಿಯಾಗಿದ್ದು, 2018ರಲ್ಲಿ ಫೇಸ್ಬುಕ್ ಮೂಲಕ ಇಬ್ಬರ ನಡುವೆ ಸ್ನೇಹ ಶುರುವಾಗಿತ್ತು. ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ …
Read More »ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ
ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಹಸೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಗಳ ಎಫ್ಐಆರ್ ದಾಖಲಿಸಲಾಗಿದೆ. ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು. ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು. ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ …
Read More »ಬಾಪುವನ್ನು ಕೊಂದ ಶಕ್ತಿಗಳು ಇಂದಿಗೂ ಜನರ ಹತ್ಯೆಯಲ್ಲಿ ತೊಡಗಿವೆ: ಪಿಣರಾಯಿ ವಿಜಯನ್
ತಿರುವನಂತಪುರ: ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುತ್ತಿವೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ. https://twitter.com/vijayanpinarayi/status/1487634444844355584/photo/1?ref_src=twsrc%5Etfw%7Ctwcamp%5Etweetembed%7Ctwterm%5E1487634444844355584%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada ‘ಗಾಂಧೀಜಿಯವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. …
Read More »ಕಾಡಿನಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣ: ಪತಿ ಅರೆಸ್ಟ್
ಚಿಕ್ಕಮಗಳೂರು : ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬರು ಕಾಡಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಸುಮಾ ಮೃತಪಟ್ಟವರು. ಆಕೆಯ ಪತಿ ಅಭಿಷೇಕ್ ಬಂಧಿತ ಆರೋಪಿ. ವರ್ಷದ ಹಿಂದೆ ಒಂದೇ ಗ್ರಾಮದ ಇಬ್ಬರೂ ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರೂ ಅಪ್ರಾಪ್ತರಾಗಿದ್ದ ಕಾರಣ ಮದುವೆಗೆ ಕಾನೂನು ಮಾನ್ಯತೆ ಇರಲಿಲ್ಲ. ಹೀಗಾಗಿ, ಮಗಳಿಗೆ 18 ವರ್ಷ ತುಂಬಿದ …
Read More »ಉದ್ಯಮಿಯನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ: ಬೆಳಗಾವಿಯಲ್ಲಿ 8 ಮಂದಿ ಆರೋಪಿಗಳು ಅರೆಸ್ಟ್
ಬೆಳಗಾವಿ: ಸಿನಿಮೀಯಾ ರೀತಿಯಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರನ್ನು ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕ್ರಿಪ್ಟೋ ಕರೆನ್ಸಿ ಉದ್ಯಮಿ ರವಿಕಿರಣ್ ಭಟ್ ಎಂಬುವವರನ್ನು ಆರೋಪಿಗಳು ಅಪಹರಿಸಿ, 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಏನಿದು ಘಟನೆ?: ಯಲ್ಲಾಪುರ ಮೂಲದ ಹುಬ್ಬಳ್ಳಿ ನಿವಾಸಿ ರವಿಕಿರಣ್ ಭಟ್ ಜ.13ರಂದು ಬೆಳಗಾವಿಗೆ …
Read More »ಉತ್ತರಕನ್ನಡದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಾರೆ : ಅನಂತಕುಮಾರ್ ಹೆಗ್ಡೆ ಭವಿಷ್ಯ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಇನ್ನು 50 ವರ್ಷ ಕಳೆದ್ರೆ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಾರೆ. ದೇಶದಲ್ಲಿ ಅಪಾಯದ ಪರಿಸ್ಥಿತಿ ಇದೆ. ಸಂಸ್ಕೃತಿಯ ಮೂಲ ಕಳಚುತ್ತಿರುವಾಗ ನಮ್ಮ ಹೆಸರಿಟ್ಟುಕೊಂಡು ಹೋದ್ರೆ ಏನು ಪ್ರಯೋಜನ?. ಜಿಲ್ಲೆಯ ಅಭಿವೃದ್ಧಿ ನಮ್ಮವರಿಂದ ನಮ್ಮವರಿಗೆ ಆಗಬೇಕು ಎಂದು ಸಂಸದ ಅನಂತಕುಮಾರ್ ಹೆಗ್ಡೆ ಹೇಳಿದ್ದಾರೆ. ಹೊನ್ನಾವರದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, 3-4 ವರ್ಷಗಳಲ್ಲಿ ಕರಾವಳಿಯಲ್ಲಿ 4- 5 ಲಕ್ಷ ಫ್ಲೋಟಿಂಗ್ ಪಾಪ್ಯುಲೇಶನ್ ಹೆಚ್ಚಾಗುತ್ತದೆ. ನಮ್ಮವರು ಇದನ್ನು ಬಳಸಿಕೊಳ್ಳದಿದ್ದರೆ ಚುನಾವಣೆಯಲ್ಲಿ ಈ …
Read More »