ಉಕ್ರೇನ್ನಿಂದ ರಾಜ್ಯಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಯುವ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಉಕ್ರೇನ್ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಅವರು, ವಿದ್ಯಾರ್ಥಿಗಳಿಂದ ಸಲಹೆ, ಅಭಿಪ್ರಾಯಗಳನ್ನು ಪಡೆದರು. ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದೆ. ಸಿಎಂ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಮುಂದುವರಿಕೆಗೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು. …
Read More »ಮೇಕೆದಾಟು ಯೋಜನೆಗೆ ತಕ್ಷಣ ಪರಿಸರ ಅನುಮತಿ ನೀಡಬೇಕು: ಸಿದ್ದರಾಮಯ್ಯ
ಬೆಂಗಳೂರು: ‘ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣ ಪರಿಸರ ಅನುಮತಿ ನೀಡಬೇಕು. ರಾಜ್ಯದ ಪಾಲಿನ ನೀರು, ವ್ಯರ್ಥವಾಗಿ ತಮಿಳುನಾಡಿಗೆ ಹೋಗುತ್ತಿದೆ. ಅದನ್ನು ಬಳಸಿಕೊಳ್ಳಲು ಅವಕಾಶ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ರಾಜ್ಯ ಸರ್ಕಾರ ಹಣ ಮೀಸಲಿಟ್ಟಿರುವುದಕ್ಕೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಈ ಯೋಜನೆಯ ವಿಷಯದಲ್ಲಿ ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದವೇ …
Read More »ಹೊಸಪೇಟೆ: ಆರಂಭದಲ್ಲಿ ನಿರಾಕರಣೆ, ನಂತರ ಹಿಜಾಬ್ ಕಳಚಿ ಪರೀಕ್ಷೆಗೆ ಹಾಜರು
ಹೊಸಪೇಟೆ (ವಿಜಯನಗರ): ಪ್ರಾಚಾರ್ಯರ ಮನವೊಲಿಕೆ ನಂತರ ಎಂಟು ವಿದ್ಯಾರ್ಥಿನಿಯರು ಹಿಜಾಬ್ ಕಳಚಿ ನಗರದ ವಿಜಯನಗರ ಕಾಲೇಜಿನಲ್ಲಿ ಸೋಮವಾರ ಪದವಿ ಪರೀಕ್ಷೆಗೆ ಹಾಜರಾದರು. ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಿಯರು ಮುಂದಾಗಿದ್ದರು. ಆದರೆ, ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಅವರನ್ನು ತಡೆದು, ‘ನ್ಯಾಯಾಲಯದ ಆದೇಶ ಪಾಲಿಸಬೇಕು’ ಎಂದು ಹೇಳಿದರು. ಮಂಗಳೂರಿನಲ್ಲಿ ಅವಕಾಶ ನಿರಾಕರಣೆ: ನಗರದ ವಾಮಂಜೂರಿನ ಸಂತ ರೇಮಂಡ್ಸ್ ಕಾಲೇಜಿನಲ್ಲಿ ಸೋಮವಾರ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ. ಹೈಕೋರ್ಟ್ ತೀರ್ಪಿನ …
Read More »ಸಗಟು ಡೀಸೆಲ್ ದರ ಏರಿಕೆ: ಸಾರಿಗೆ ಸಂಸ್ಥೆಗಳಿಗೆ ₹2.17 ಕೋಟಿ ಹೊರೆ
ಬೆಂಗಳೂರು: ಸಗಟು ಲೆಕ್ಕದಲ್ಲಿ ಡೀಸೆಲ್ ಖರೀದಿ ದರ ಏರಿಕೆಯಾಗಿರುವುದು ಮೊದಲೇ ಸಂಕಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಇದರಿಂದಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ದಿನಕ್ಕೆ ₹2.17 ಕೋಟಿ ಹೆಚ್ಚುವರಿ ಹೊರೆ ಆಗಲಿದೆ. ಪ್ರತಿನಿತ್ಯ ಕೆಎಸ್ಆರ್ಟಿಸಿಗೆ 5.30 ಲಕ್ಷ ಲೀಟರ್, ಬಿಎಂಟಿಸಿಗೆ 2.06 ಲಕ್ಷ ಲೀಟರ್, ಎನ್ಡಬ್ಲ್ಯುಕೆಆರ್ಟಿಸಿಗೆ 2.82 ಲಕ್ಷ ಲೀಟರ್ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 2.50 ಲಕ್ಷ ಲೀಟರ್ ಡೀಸೆಲ್ ಬೇಕಾಗುತ್ತದೆ. …
Read More »ಆಗಸ್ಟ್ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ: ಸಚಿವ ಸುಧಾಕರ್
ಬೆಂಗಳೂರು: ‘ಐಐಟಿ ಕಾನ್ಪುರ ತಂಡದ ಅಧ್ಯಯನ ಪ್ರಕಾರ ಆಗಸ್ಟ್ನಲ್ಲಿ ಕೋವಿಡ್ ನಾಲ್ಕನೇ ಅಲೆ ಬರುವ ಸಾಧ್ಯತೆ ಇದೆ. ಆದರೆ, ದೇಶದಲ್ಲಿ ಲಸಿಕಾ ಅಭಿಯಾನ ವ್ಯಾಪಕವಾಗಿ ಕೈಗೊಂಡಿರುವುದರಿಂದ ಆತಂಕ ಪಡುವ ಅಗತ್ಯ ಇಲ್ಲ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಶಶಿಲ್ ಜಿ. ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಹೊಸ ತಳಿ ಬಿಎ2 ಫಿಲಿಪ್ಪೀನ್ಸ್ನಲ್ಲಿ ಕಾಣಿಸಿಕೊಂಡಿದ್ದು, 40 ದೇಶಗಳಲ್ಲಿ ಹಬ್ಬಿದೆ. ಹೀಗಾಗಿ, ಎಚ್ಚರಿಕೆ …
Read More »ಪುನೀತ್ ಅಭಿಮಾನ: ಕ್ರೇನಿಗೆ ಬೆನ್ನಿನ ಮೂಲಕ ಕಬ್ಬಿಣದ ಕೊಂಡಿ ಕಟ್ಟಿಕೊಂಡು ನೇತಾಡುತ್ತಿದ್ದ ಭಕ್ತ
ಭದ್ರಾವತಿ: ಕೂಡ್ಲಿಗೆರೆ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಶುಕ್ರವಾರ ವೈಭವದಿಂದ ನಡೆಯಿತು. ಭಕ್ತರು ದೇಹದಂಡನೆಯೊಂದಿಗೆ ಭಕ್ತಿಯ ಪರಾಕಾಷ್ಠೆ ಮೆರೆದರು. 350ಕ್ಕೂ ಹೆಚ್ಚು ಮಾಲಾಧಾರಿ ಭಕ್ತರು ತಮ್ಮ ಹರಕೆಗೆ ತಕ್ಕಂತೆ ದೇಹದಂಡನೆ ಮಾಡಿಕೊಂಡು ಸ್ವಾಮಿಯ ದರ್ಶನ ಪಡೆದರು. ಭಕ್ತರು ಆಟಗೇರಿ ಕ್ಯಾಂಪ್ ಬಳಿಯ ಚಾನಲ್ ಬಳಿಯಲ್ಲಿ ದೇಹದಂಡನೆ ಮಾಡಿಕೊಂಡು ಅಲ್ಲಿಂದ ಕೊಂಬು, ಕಹಳೆ, ವಾದ್ಯ, ಡೊಳ್ಳು, ನಗಾರಿ ಮೊದಲಾದ ವಾದ್ಯಮೇಳದೊಂದಿಗೆ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಬಂದರು. ಕೆನ್ನೆಯ ಎರಡೂ ಬದಿಗಳಲ್ಲಿ ತ್ರಿಶೂಲ, ನಾಲಿಗೆಗೆ ತ್ರಿಶೂಲ, ಕಲ್ಲಿನ …
Read More »ಹುಬ್ಬಳ್ಳಿ-ಧಾರವಾಡ: ದ್ವೇಷದ ಅಮಲಿಗೆ 188 ಮಂದಿ ಹತ್ಯೆ
ಹುಬ್ಬಳ್ಳಿ: ಬಡ್ಡಿಗೆ ಪಡೆದ ಹಣ ಮರಳಿ ನೀಡದ, ಕೌಟುಂಬಿಕ ಕಲಹ, ಪ್ರೀತಿ ನಿರಾಕರಣೆ, ಮದ್ಯದ ನಶೆ, ಅನೈತಿಕ ಸಂಬಂಧ… ಹೀಗೆ ಹುಬ್ಬಳ್ಳಿ ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 188 ಮಂದಿ ಹತ್ಯೆಯಾಗಿದ್ದಾರೆ. ಹು-ಧಾ ಪೊಲೀಸ್ ಕಮಿಷನರೇಟ್ನಲ್ಲಿ 88 ಮಂದಿ, ಧಾರವಾಡ ಜಿಲ್ಲೆಯ ವಿವಿಧೆಡೆ 100 ಮಂದಿ ಹತರಾಗಿದ್ದಾರೆ. ಬಹುತೇಕ ಕೊಲೆಗಳಿಗೆ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಕಾರಣವಾಗಿದ್ದರೆ, ಕೆಲವು ಕೊಲೆಗಳು ವರದಕ್ಷಿಣೆ, ಕೌಟುಂಬಿಕ …
Read More »ದಾವಣೆಗೆರೆಯ ಎಸ್ ಎಸ್ ಆಸ್ಪತ್ರೆಗೆ ವಿದ್ಯಾರ್ಥಿ ನವೀನ್ ದೇಹದಾನ.. ಕರುಳ ಕುಡಿಗೆ ಕೊನೆಯ ಮುತ್ತಿಟ್ಟ ಅಮ್ಮ..
ಹಾವೇರಿ/ದಾವಣಗೆರೆ: ಶೆಲ್ ದಾಳಿಗೆ ಉಕ್ರೇನ್ ನಲ್ಲಿ ಬಲಿಯಾದ ವೈದ್ಯಕೀಯ ವಿದ್ಯಾರ್ಥಿ ನವೀನ್ಗೆ ಅವರ ಕುಟುಂಬ ಕಣ್ಣೀರಿನ ಅಂತಿಮ ವಿದಾಯ ಹೇಳಿದೆ. ಸಹೋದರ ಹರ್ಷ ಅವರು ತನ್ನ ತಮ್ಮನ ಮೃತದೇಹಕ್ಕೆ ಅಪ್ಪುಗೆ ಮಾಡಿ ಅಧಿಕೃತವಾಗಿ ಆಸ್ಪತ್ರೆಯ ನಿಬಂಧನೆಗಳಿಗೆ ಸಹಿ ಹಾಕುವ ಮೂಲಕ ನವೀನ್ ಮೃತದೇಹವನ್ನು ಆಸ್ಪತ್ರೆಗೆ ಹಸ್ತಾಂತರಿಸಿದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಿಂದ ನವೀನ್ ಮೃತದೇಹ ಹೊತ್ತ ಆ್ಯಂಬುಲೆನ್ಸ್ ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ಆಗಮಿಸಿತು. ಈ ವೇಳೆ ಮೃತದೇಹ ಹಸ್ತಾಂತರ …
Read More »ವಾಹನ ಮಾರಾಟ ಮೇಳದ ಫೋಟೋ ಒಎಲ್ಎಕ್ಸ್ನಲ್ಲಿ ಹಾಕಿ ಗ್ರಾಹಕರ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್
ಬೆಳಗಾವಿ : ಮೇಳದಲ್ಲಿ ಮಾರಾಟಕ್ಕಿಟ್ಟ ವಾಹನಗಳ ಫೋಟೋ ತೆಗೆದು ಅದನ್ನು ಒಎಲ್ಎಕ್ಸ್ನಲ್ಲಿ ಹಾಕಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುವುದು ಎಂದು ನಂಬಿಸಿ ಮೋಸ ಮಾಡುತ್ತಿದ್ದ ಗ್ಯಾಂಗ್ನ ಬೆಳಗಾವಿ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಧಾರವಾಡ ಮೂಲದ ಆರೋಪಿ ಶಿವಾನಂದ ಧೂಪದಾಳ, ಬೆಳಗಾವಿಯ ಅಬ್ದುಲ್ ಮತ್ತು ಜುಬೇರ್ ಬಂಧಿತ ಆರೋಪಿಗಳು. ಮೂವರು ಆರೋಪಿಗಳನ್ನು ವಂಚನೆ ಕೇಸ್ ಅಡಿ ಹಿಂಡಲಗಾ ಜೈಲಿಗೆ ಅಟ್ಟಲಾಗಿದೆ. ವಂಚನೆ ಹೇಗೆ?: ವಾಹನ ಮೇಳದಲ್ಲಿ ಪ್ರದರ್ಶಿಸಲಾಗುವ ಮಿನಿ ಲಾರಿಗಳು, ಟಾಟಾ ಏಸ್ಗಳು, …
Read More »15 ದಿನ,700 ಕಿ.ಮೀ.. ಮರಗಾಲು ಕಟ್ಟಿಕೊಂಡು ಶ್ರೀಶೈಲಕ್ಕೆ ಪಾದಯಾತ್ರೆ ಹೊರಟ ಭಕ್ತ..
ಅಥಣಿ : ದೇವಸ್ಥಾನ, ಪುಣ್ಯ ಕ್ಷೇತ್ರಗಳಿಗೆ ಕೆಲವರು ಪಾದಯಾತ್ರೆ ಮುಖಾಂತರ ಹೋಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ಭಕ್ತ ಮರಗಾಲು ಕಟ್ಟಿಕೊಂಡು ದೂರದ ಆಂಧ್ರಪ್ರದೇಶದ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದವರು ಪಾದಯಾತ್ರೆ ಮುಖಾಂತರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೊರಟಿದ್ದಾರೆ. ಇದರಲ್ಲಿ ಓರ್ವ ಯುವಕ ದಶರಥ್ ನಾಯ್ಕ್ ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಮುಖಾಂತರ ತಮ್ಮ ಭಕ್ತಿ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದಿಂದ ಶ್ರೀಶೈಲ ಮಲ್ಲಿಕಾರ್ಜುನ …
Read More »