Breaking News

ಪ್ರತಿಯೊಬ್ಬ ಭಾರತೀಯರೂ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ: ಅಮೀರ್ ಖಾನ್

ಮಾರ್ಚ್ 11 ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ ಗಳಿಗೆ ಲಗ್ಗೆ ಇಡುತ್ತಿದ್ದಾರೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಿತ್ರವನ್ನು ಶ್ಲಾಘಿಸಿದ್ದು, ಸಿನಿಮಾ ನೋಡಲು ಪ್ರೇಕ್ಷಕರಿಗೆ ಸಲಹೆ ನೀಡಿದ್ದಾರೆ. ಈಗ ನಟ ಅಮೀರ್ ಖಾನ್ ಕೂಡ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸುವಂತೆ ತಿಳಿಸಿದ್ದಾರೆ. ಮಾಧ್ಯಮ ಸಂವಾದದ ವೇಳೆ ಅಮೀರ್, ಪ್ರತಿಯೊಬ್ಬ ಭಾರತೀಯನೂ ಕಾಶ್ಮೀರ ಫೈಲ್ಸ್ ನೋಡಲೇಬೇಕು ಎಂದು …

Read More »

ಭಾರತೀಯ ಸೇನೆ ಸೇರಲು ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ 10 ಕಿ.ಮೀ ಓಡುವ ಹುಡುಗ!

ಬೆವೆತು ಮೈಯೆಲ್ಲಾ ಒದ್ದೆಯಾಗಿದ್ದರೂ, ಒಂದಿನಿತೂ ವಿಶ್ರಮಿಸದೆ ಮಧ್ಯರಾತ್ರಿ ನೋಯ್ಡಾದ ರಸ್ತೆಯೊಂದರಲ್ಲಿ ಓಡುತ್ತಿದ್ದ ಯುವಕನೊಬ್ಬನ ವಿಡಿಯೋ ಸಿಕ್ಕಾಪಟ್ಟೆ ವೈರಲ್ (Vedio Viral) ಆಗಿದೆ. ಚಿತ್ರ ನಿರ್ಮಾಪಕ ಮತ್ತು ಬರಹಗಾರ ವಿನೋದ್ ಕಾಪ್ರಿ (Vinod Kapri) ಅವರು ಆತನಿಗೆ ಮನೆವರೆಗೆ ಡ್ರಾಪ್ ಕೊಡುವೆ ಎಂದು ಹೇಳಿದರೂ, ಅವರ ಮಾತನ್ನು ತಲೆಗೆ ತೆಗೆದುಕೊಳ್ಳದೆ ಮತ್ತು ಕ್ಷಣ ಮಾತ್ರವೂ ನಿಲ್ಲದೇ ಓಡುತ್ತಿರುವ ಆ ಯುವಕನ ವಿಡಿಯೋ, ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ (Social Media) ಸೋಜಿಗ ಹುಟ್ಟಿಸಿದೆ. …

Read More »

‘ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಇನ್ಯಾರಿಗೂ ಜವಾಬ್ದಾರಿ ಇಲ್ಲ’ : ಸಿದ್ದು

ಬೆಂಗಳೂರು: ವಿಧಾನಸಭೆಯಲ್ಲಿ (Assembly) ಬಜೆಟ್​ ಮೇಲಿನ ಚರ್ಚೆ ನಡೆಯುತ್ತಿದೆ. ಇವತ್ತು ಹಲವು ಸಚಿವರು ಗೈರಾಗಿದ್ದಕ್ಕೆ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಕೆಂಡಾಮಂಡಲರಾದ್ರು. ಬಿಜೆಪಿಯಲ್ಲಿ ಯಡಿಯೂರಪ್ಪ (Yediyurappa) ಬಿಟ್ರೆ ಇನ್ಯಾರಿಗೂ ಜವಾಬ್ದಾರಿ (Responsibility) ಅನ್ನೋದೇ ಇಲ್ಲ ಅಂತ ಕಿಡಿ ಕಾರಿದ್ದಾರೆ. ಸದನದಲ್ಲಿ ಚರ್ಚೆ ಮಾಡುವಾಗ ಸಚಿವರು (Ministers) ಹಾಜರಾಗಿರಬೇಕು. ಸಚಿವರೇ ಇಲ್ಲದಿದ್ರೆ ಹೇಗೆ? ಆ ಇಲಾಖೆ ಸಚಿವರಿಲ್ಲದಾಗ ಬೇರೆ ಸಚಿವರು ಚರ್ಚೆ ವಿಷಯವನ್ನು ಬರೆದುಕೊಳ್ಳಬೇಕು ಇಲ್ಲವಾದ್ರೆ ನಮ್ಮ ಪ್ರಶ್ನೆಗಳಿಗೆ ಅವ್ರು ಉತ್ತರಿಸೋದಾದ್ರು ಹೇಗೆ …

Read More »

ಉಡುಪಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಇಬ್ಬರು ಸಾವು

ಉಡುಪಿ: ಕಾಪು ತಾಲ್ಲೂಕಿನ‌ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ …

Read More »

ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

ಸ್ಯಾಂಡಲ್ವುಡ್, ಟಾಲಿವುಡ್, ಕಿರುತೆರೆಯಲ್ಲಿ ವಿಭಿನ್ನವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಜನಮನ್ನಣೆ ಪಡೆದಿರುವ ನಟಿ ತೇಜಸ್ವಿನಿ ಪ್ರಕಾಶ್, ಖಾಸಗಿ ಕಂಪನಿಯ ಉದ್ಯೋಗಿ ಪಣಿ ವರ್ಮಾ ಜೊತೆಗೆ ನಿನ್ನೆ ಬೆಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಣಿ ಮತ್ತು ತೇಜಸ್ವಿನಿ ಹಲವು ವರ್ಷಗಳಿಂದ ಸ್ನೇಹಿತರು, ಈ ಸ್ನೇಹವೇ ಪ್ರೀತಿಗೆ ತಿರುಗಿ ಇದೀ ಹೊಸ ಜೀವನಕ್ಕೆ ನಾಂದಿ ಹಾಡಿದೆ. ಈ ಜೋಡಿಯ ಮದುವೆ ಸಂಭ್ರಮದಲ್ಲಿ ವಧು, ವರರ ಕುಟುಂಬಸ್ಥರು, ಅನೇಕ ಸಿನಿ ಮತ್ತು ಕಿರುತೆರೆ ಕಲಾವಿದರು …

Read More »

ರೈತ ಬಾಂಧವರಿಗೆ ಗುಡ್‌ ನ್ಯೂಸ್‌ : ವಿಧಾನಸಭೆಯಲ್ಲಿ ʼKIADB ತಿದ್ದುಪಡಿ ವಿಧೇಯಕʼ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕರ್ನಾಟಕ ಕೆಐಎಡಿಬಿ(KIADB) ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡಲಾಗಿದ್ದು, ರೈತರ ಭೂಮಿ‌ ಸ್ವಾಧೀನದ ವೇಳೆ ಸರ್ಕಾರಿ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿಕೊಡುತ್ತದೆ. ಹೌದು, ಈ ಕರ್ನಾಟಕ ಕೆಐಎಡಿಬಿ ತಿದ್ದುಪಡಿ ವಿಧೇಯಕ, ರೈತರ ಭೂಮಿ ಸ್ವಾಧೀನದ ವೇಳೆ ಸರ್ಕಾರಿ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿ ಕೊಡುತ್ತದೆ.   ಈ ನಡುವೆ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನ ಕಡಿಮೆ ಮಾಡುವ …

Read More »

ತುಮಕೂರು ಖಾಸಗಿ ಬಸ್ ದುರಂತದ ಬಳಿಕ ರಾಜ್ಯ ಸರ್ಕಾರ ಅಲರ್ಟ್: 7 ‘KSRTC ಬಸ್’ಗಳು ಸಂಚಾರ ಆರಂಭ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಬಳಿಯಲ್ಲಿ ಖಾಸಗಿ ಬಸ್ ಅಪಘಾತಗೊಂಡು ಭೀಕರ ದುರ್ಘಟನೆ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ದುರಂತದ ಬಳಿಕ 7 ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರವನ್ನು, ಈ ಮಾರ್ಗದಲ್ಲಿ ಆರಂಭಿಸಿದೆ.   ಹೌದು.. ಪಳವಳ್ಳಿ ಕಟ್ಟೆ ಬಳಿಯಲ್ಲಿನ ಖಾಸಗಿ ಬಸ್ ಅಪಘಾತದ ಬಳಿಕ, 24 ಗಂಟೆಯೊಳಗೆ ಕೆ ಎಸ್ ಆರ್ ಟಿ ಸಿ ಚುರುಕುಗೊಂಡಿದ್ದು, ವೈ ಎನ್ ಹೊಸಕೋಟೆ ಟು …

Read More »

ದಾವಣಗೆರೆಯ ಎಸ್​.ಎಸ್​.ಆಸ್ಪತ್ರೆಗೆ ನವೀನ್​ ದೇಹದಾನ.

ಹಾವೇರಿ: ಉಕ್ರೇನ್​​ನ ದಾಳಿಯಲ್ಲಿ ಸಾವನ್ನಪ್ಪಿದ ನವೀನ್​ ಮೃತದೇಹವನ್ನು ತವರಿಗೆ ತರಲಾಗಿದ್ದು, ನವೀನ್​​ ದೇಹದಾನಕ್ಕೆ ಪ್ರಕ್ರಿಯೆ ಸ್ಟಾರ್ಟ್​ ಆಗಿದೆ. ನವೀನ ದೇಹದಾನ ಮಾಡುವ ಮೂಲಕ ಆತನ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಧಿಕಾರಿಗಳು ದೇಹದಾನ ವಿಧೇಯಕ ಪತ್ರ ತಂದಿದ್ದು, ಪ್ರಕ್ರಿಯೆ ಆರಂಭಿಸಿದ್ದಾರೆ. ನವೀನ್​ ದೇಹವನ್ನು ದಾವಣಗೆರೆಯ ಎಸ್​.ಎಸ್​.ಆಸ್ಪತ್ರೆಗೆ ನೀಡಲಾಗುತ್ತದೆ. ಇಂದು ಸಂಜೆ ಮೃತದೇಹ ಆಸ್ಪತ್ರೆಗೆ ಹಸ್ತಾಂತರವಾಗಲಿದೆ. ನವೀನ್​​​ ಉಕ್ರೇನ್​​​​ನಲ್ಲಿ ಮೆಡಿಕಲ್​ ವ್ಯಾಸಂಗ ಮಾಡುತ್ತಿದ್ದ. ವೈದ್ಯಲೋಕಕ್ಕೆ ನಾನು ಏನಾದ್ರು ಮಾಡಬೇಕು ಎನ್ನುತ್ತಿದ್ದ ,ಡಾಕ್ಟರ್​​ ಆಗಿ …

Read More »

ಆಸ್ಪತ್ರೆ ಸೇರಿದ್ದ ಗೆಳೆಯನ ನೋಡಲು ಹೋದ ಮೂವರು ಪ್ರಾಣಸ್ನೇಹಿತರು ಮನೆ ಸೇರಿದ್ದು ಶವವಾಗಿ!

ರೋಣ (ಗದಗ): ಅಮ್ಮಾ… ಗೆಳೆಯನಿಗೆ ಆಯಕ್ಸಿಡೆಂಟ್‌ ಆಗಿ ಆಸ್ಪತ್ರೆ ಸೇರಿದ್ದಾನೆ. ನೋಡಿಕೊಂಡು ಬರುತ್ತೇವೆ ಎಂದು ಮನೆಯಲ್ಲಿ ಹೇಳಿಹೋಗಿದ್ದ ಮೂವರು ಪ್ರಾಣಸ್ನೇಹಿತರು ಶವವಾಗಿ ಹೋಗಿರುವ ದಾರುಣ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.   ಕಳೆದ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಯುವಕರ ಪರಿಚಯ ಸಿಕ್ಕಿದ್ದು, ಇವರೆಲ್ಲರೂ ಆಪ್ತ ಸ್ನೇಹಿತರಾಗಿದ್ದಾರೆ. ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಅಲಿ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದರೆ, ಅಪ್ಸಾನಾ ಮುಲ್ಲಾ …

Read More »

ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

ದಾವಣಗೆರೆ: ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್​ಗೂ, ಇಲ್ಲಿಗೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ದಾವಣಗೆರೆಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ‌ ಕಡಿಮೆ …

Read More »