ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, …
Read More »ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು
ದೇಶದಲ್ಲಿ ಯುವ ಹಾಗೂ ಸಮರ್ಥ ಸೇನಾ ಶಕ್ತಿಯನ್ನು ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಸೇನಾ ಮುಖ್ಯಸ್ಥರು ಮಾಡಿದ ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು ಮುಂದಾಗುತ್ತಿರುವುದು ವಿಷಾದನೀಯ ಎಂದು ರಾಜ್ಯ ಬಿಜೆಪಿ ವಕ್ತಾರ ಎಂಬಿ ಜಿರಲಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಎಂಬಿ ಜಿರಲಿ, ವಿಶ್ವದ ಅತ್ಯಂತ ಶಕ್ತಿಶಾಲಿ ಸೇನಾ ಹೊಸ ವ್ಯವಸ್ಥೆಯನ್ನು ದೇಶದ ರಕ್ಷಣಾ ಮಂತ್ರಿಗಳಾದ ರಾಜನಾಥ್ಸಿಂಗ್ …
Read More »ಅಗ್ನಿಪಥ್ ಯೋಜನೆ ಜಾರಿಗೆ ವಿರೋಧಿಸಿ ಗೋಕಾಕ್ನಲ್ಲಿಯುವಕರ ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರದ ಸೇನಾ ನೇಮಕಾತಿಯ ಹೊಸ ನಿಯಮ ಅಗ್ನಿಪಥ್ ಯೋಜನೆ ಜಾರಿಗೆ ವಿರೋಧಿಸಿ ದೇಶಾಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಗೋಕಾಕ್ನಲ್ಲಿಯೂ ಕೂಡ ನೂರಾರು ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. ಹೌದು ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಅಗ್ನಿಪಥ್ ಯೋಜನೆ ಯುವ ಸಮೂಹದ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿ ಗೋಕಾಕ್ನ ಬಸವೇಶ್ವರ ವೃತ್ತದಲ್ಲಿ ದೇಶಪ್ರೇಮಿ ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ …
Read More »ವರ್ಷಾಂತ್ಯಕ್ಕೆ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ: ಹೈಕೋರ್ಟ್ಗೆ ಸರ್ಕಾರ
ಬೆಂಗಳೂರು: ಈ ವರ್ಷದ ಡಿಸೆಂಬರ್ ವೇಳೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಸಂಬಂಧ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರ್ಕಾರ …
Read More »ರಾಯಚೂರು: ನೀರಿನಲ್ಲಿ ಮಿತಿಮೀರಿದ ರಾಡಿಯಿಂದ ವಾಂತಿಭೇದಿ?
ರಾಯಚೂರು: ನಗರದಲ್ಲಿ ಪೂರೈಕೆಯಾಗುವ ಕುಡಿಯುವ ನೀರಿನಲ್ಲಿ ‘ರಾಡಿ’ ಮತ್ತು ಆಮ್ಲದ ಪ್ರಮಾಣ (ಪಿಎಚ್) ಮಿತಿಮೀರಿದ ಪ್ರಮಾಣದಲ್ಲಿ ಇರುವುದು ಪತ್ತೆಯಾಗಿದೆ. ಕಲಷಿತ ನೀರು ಕುಡಿದು ಜನರು ವಾಂತಿ-ಭೇದಿಯಿಂದ ಬಳಲುತ್ತಿರುವುದು ಮತ್ತು ಕೆಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೀರಿನ ಪರೀಕ್ಷೆ ಮಾಡಿಸಿದೆ. ರಾಂಪುರ ಜಲ ಶುದ್ಧೀಕರಣ ಘಟಕದಿಂದ ಶುದ್ಧೀಕರಿಸಿದ ನೀರನ್ನು ಕಳೆದ ಮೇ 30ರಂದು ಪರೀಕ್ಷಿಸಿದಾಗ ರಾಡಿ ಪ್ರಮಾಣ 14 ಮತ್ತು ಪಿಎಚ್ ಪ್ರಮಾಣ 8.8ರಷ್ಟು ಪತ್ತೆ …
Read More »ಮಳೆ ನೀರು ತೆರವು: ದರ್ಶನಕ್ಕೆ ಅವಕಾಶ
(ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದೊಳಕ್ಕೆ ನುಗ್ಗಿದ್ದ ಮಳೆ ನೀರನ್ನು ಹೊರಹಾಕಿ ಶುಚಿಗೊಳಿಸಲಾಗಿದ್ದು ಶುಕ್ರವಾರ ಭಕ್ತರು ಎಂದಿನಂತೆ ದೇವಿಯ ದರ್ಶನ ಪಡೆದರು. ಗುರುವಾರ ಸಂಜೆ ಸುರಿದ ಧಾರಾ ಕಾರ ಮಳೆಯಿಂದಾಗಿ ಸುತ್ತಲಿನ ಗುಡ್ಡದ ಪ್ರದೇಶದಿಂದ ಅಪಾರ ಪ್ರಮಾಣದ ನೀರು ಹರಿದುಬಂದಿತ್ತು. ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ನೀರು ದೇವಸ್ಥಾನದ ಪ್ರಾಂಗಣಕ್ಕೆ ನುಗ್ಗಿತ್ತು. ಇದರಿಂದ ಭಕ್ತರು ಪರದಾಡಿದ್ದರು. ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಚರಂಡಿ ಸ್ವಚ್ಛಗೊಳಿಸಿ, ನೀರು ಹರಿದು ಹೋಗಲು ಅನುವು ಮಾಡಿದರು. ನಸುಕಿನಿಂದಲೇ …
Read More »PUC ಫಲಿತಾಂಶ ಪ್ರಕಟ- 61.88% ಮಕ್ಕಳು ಪಾಸ್, ವಿದ್ಯಾರ್ಥಿನಿಯರೇ ಮೇಲುಗೈ
ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ಮಕ್ಕಳು ಪಾಸ್ ಆಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ಮಾತನಾಡಿದ ಅವರು, ಮಕ್ಕಳು ನಿರೀಕ್ಷೆಗಿಂತ ಚೆನ್ನಾಗಿ ಮಾಡಿದ್ದಾರೆ. ಕೋವಿಡ್ ಮಧ್ಯೆ ಉತ್ತಮವಾಗಿ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಕ್ಕಳು ಸ್ಪೋಟೀವ್ ಆಗಿ ಫಲಿತಾಂಶ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, …
Read More »ನಾಗರಹಾವು-ನಾಯಿ ನಡುವಿನ ಕಾದಾಟ
ಗದಗ: ಸಾಮಾನ್ಯವಾಗಿ ಹಾವು ಮುಂಗುಸಿಗೆ ಆಗಿ ಬರಲ್ಲ ಅಂತ ಕೇಳಿದ್ದೇವೆ. ಹಾವು- ಮುಂಗುಸಿ ಕಾಳಗವನ್ನೂ ನೋಡಿದ್ದೇವೆ. ಆದ್ರೆ, ವಿಷಕಾರಿ ಹಾವಿನ ಜೊತೆ ನಾಯಿಯೊಂದು ಕಾದಾಟ ನಡೆಸಿದ ಅಪರೂಪದ ಕಾಳಗ ನೋಡಿ ಇಡೀ ಗ್ರಾಮಸ್ಥರೇ ದಂಗಾಗಿ ಹೋಗಿದ್ದಾರೆ. ಹೌದು, ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ರೈತ ಶೇಖಪ್ಪ ಚಲವಾದಿ ಎಂಬುವರು ಮಧ್ಯಾಹ್ನ ಊಟ ತೆಗೆದುಕೊಂಡು ಜಮೀನಿಗೆ ಬರಬೇಕಾದರೆ ತಮ್ಮ ಸಾಕು ನಾಯಿ ಸಹ ಓಡೋಡಿ ಬರ್ತಿತ್ತು. ಊಟ ತೆಗೆದುಕೊಂಡು …
Read More »ಬಾಡಿಗೆಗೆ ಕಾರು ಪಡೆದು ಬೀಚ್ನಲ್ಲಿ ಹುಚ್ಚಾಟ: ಪೇಚಿಗೆ ಸಿಲುಕಿದ ಚಾಲಕ
ಪಣಜಿ: ಗೋವಾ ಬೀಚ್ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ (ಜೂ.17) ನಡೆದಿದೆ. ದೆಹಲಿ ಮೂಲದ ಲಲಿತ್ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ. ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲಲಿತ್ಕುಮಾರ್ ಚಲಾಯಿಸುತ್ತಿದ್ದ ಕ್ರೇಟಾ ಕಾರು, ಶೇಟಯೆ ವಾಡಾದ ಸಂಗೀತಾ ಗವಂಡಾಳಕರ್ ರವರಿಗೆ ಸೇರಿದೆ ಎಂದು …
Read More »ಮತ್ತಷ್ಟು ಕ್ಷೀಣಿಸಿದ ಸೋನಿಯಾ ಆರೋಗ್ಯ; ಮೂಗಿನಲ್ಲಿ ರಕ್ತಸ್ರಾವ
ನವದೆಹಲಿ; ಕೊವಿಡ್ ಹಿನ್ನೆಲೆಯಲ್ಲಿ ವಾರದ ಹಿಂದೆ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕ ಸೋನಿಯಾಗಾಂಧಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ. ಅವರಿಗೆ ಪಂಗಲ್ ಇನ್ಫೆಕ್ಷನ್ ಹೆಚ್ಚಾಗಿದ್ದು ಚಿಕಿತ್ಸೆ ಮುಂದವರೆಸಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಫಂಗಲ್ ಇನ್ಫೆಕ್ಷನ್ನಿಂದ ಸೋನಿಯಾಗಾಂಧಿಯವರ ಮೂಗಿನಿಂದ ರಕ್ತಸ್ರಾವವಾಗಿದೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗಾಂಧಿಯವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಕೊವಿಡ್ ಬಂದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊವಿಡ್ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದು ತಿಳಿದುಬಂದಿದೆ.
Read More »
Laxmi News 24×7