ನವದೆಹಲಿ : ಒಂದು ಲೋಕಸಭೆ ಹಾಗೂ ನಾಲ್ಕು ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಚುನಾವಣೆ ಏಪ್ರಿಲ್ 12 ರಂದು ನಡೆಯಲಿದೆ. ಚುನಾವಣಾ ಆಯೋಗವು ಇತ್ತೀಚೆಗೆ ಪಶ್ಚಿಮ ಬಂಗಾಳ, ಛತ್ತೀಸ್ಗಢ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿತ್ತು. ಇದೀಗ ಬಿಜೆಪಿಯು ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಹಾರಾಷ್ಟ್ರದ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ …
Read More »ಗೋವಾ ಸಮಸ್ಯೆ ಇತ್ಯರ್ಥ, ಪ್ರಮೋದ್ ಸಾವಂತ್ ಮುಂದಿನ ಸಿಎಂ : ಬಿಜೆಪಿ ಶಾಸಕ ಸುಭಾಷ್ ಫಲ್ ದೇಸಾಯಿ
ಪಣಜಿ : ಪ್ರಮೋದ್ ಸಾವಂತ್ ಗೋವಾ ಮುಖ್ಯಮಂತ್ರಿಯಾಗುತ್ತಾರೆ ಎಂಬ ವದಂತಿಗಳ ನಡುವೆ ಬಿಜೆಪಿ ಶಾಸಕ ಸುಭಾಷ್ ಫಲ್ ದೇಸಾಯಿ ಅವರು ಶನಿವಾರ ಈ ವಿವಾದವನ್ನು ಇತ್ಯರ್ಥಗೊಳಿಸಿದ್ದು, ಸಾವಂತ್ ಅವರು ಮತ್ತೆ ಉನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎಂದು ಹೇಳಿದ್ದಾರೆ. ‘ಪ್ರಮೋದ್ ಸಾವಂತ್ ಅವರು ರಾಜ್ಯದಲ್ಲಿ ಸರ್ಕಾರವನ್ನು ಮುನ್ನಡೆಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದರಿಂದ ಮುಂದಿನ ಗೋವಾ ಮುಖ್ಯಮಂತ್ರಿ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ’ ಎಂದು ದೇಸಾಯಿ ಅವರನ್ನು …
Read More »ತುಮಕೂರಿನಲ್ಲಿ ಖಾಸಗಿ ಬಸ್ ಪಲ್ಟಿ : ಮೃತಪಟ್ಟ 8 ಜನರಲ್ಲಿ ನಾಲ್ವರು ವಿದ್ಯಾರ್ಥಿಗಳು!
ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ವೈ.ಎ.ಹೊಸಕೋಟೆ ಮೂಲದ …
Read More »ತಂದೆಯ ಆಸ್ತಿಯ ಮೇಲೆ ಮಗಳ ಹಕ್ಕಿನ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು
ನವದೆಹಲಿ: ತನ್ನ ತಂದೆಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಲು ಇಷ್ಟಪಡದ ಯಾವುದೇ ಮಗಳಿಗೆ ತನ್ನ ತಂದೆಯ ಆಸ್ತಿಯ ಮೇಲೆ ಯಾವುದೇ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್(Supreme Court) ಹೇಳಿದೆ. ಮಗಳು ತನ್ನ ತಂದೆಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಲು ಬಯಸದಿದ್ದರೆ, ಆಕೆಯ ಶಿಕ್ಷಣ ಮತ್ತು ಮದುವೆಯ ವೆಚ್ಚಕ್ಕಾಗಿ ತಂದೆಯಿಂದ ಹಣವನ್ನು ಕೇಳುವಂತಿಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಮತ್ತು ನ್ಯಾಯಮೂರ್ತಿ ಎಂಎಂ ಸುಂದರೇಶ್ ಅವರ ವಿಭಾಗೀಯ ಪೀಠ ಹೇಳಿದೆ. ವಿಚ್ಛೇದನ ಪ್ರಕರಣದ ವಿಚಾರಣೆ …
Read More »ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ
ರಾಯಚೂರು: ಪ್ರೀತಿ ಕುರುಡು ಅಂತಾರೆ ನಿಜ. ಆದರೆ, ಪ್ರೀತಿಯ ಮಾಯೆಯಲ್ಲಿ ಬಿದ್ದು ಏನನ್ನು ಯೋಚಿಸದೇ ಕಣ್ಣಿದ್ದು ಕುರುಡರಾದರೆ ಏನಾಗಬಹುದು ಎಂಬುದಕ್ಕೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ. ಪ್ರೀತಿಸಿ ಮದುವೆಯಾದ ಗಂಡನಿಗಾಗಿ ಪ್ರೌಢಶಾಲಾ ಶಿಕ್ಷಕಿಯೊಬ್ಬಳು ಇದೀಗ ಧರಣಿ ಕುಳಿತಿದ್ದಾಳೆ. ಗಂಡನಿಲ್ಲದೇ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಗಂಡನಿಗಾಗಿ ಗಂಡನ ಮನೆಯ ಮುಂದೆಯೇ ಶಿಕ್ಷಕಿ ಪ್ರತಿಭಟನೆಗೆ ಕುಳಿತಿದ್ದಾಳೆ. ಶಿಕ್ಷಕಿಯ ಹೆಸರು ಶಾಂತಾಬಾಯಿ. ಇವರು ಪ್ರತಾಪ್ …
Read More »ತೆಂಗಿನ ಗರಿಯಲ್ಲಿ ಕಟರ್ ಮೂಲಕ ಕಟ್ ಮಾಡಿ, ಪುನೀತ್ ರಾಜಕುಮಾರ್ ಚಿತ್ರ ಬಿ
ಬಾಗಲಕೋಟೆ : ಅಪ್ಪು ಹುಟ್ಟು ಹಬ್ಬ ಹಾಗೂ ಜೇಮ್ಸ್ ಚಿತ್ರ ಬಿಡುಗಡೆ ಹಿನ್ನೆಲೆ ಇಡೀ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಅಭಿಮಾನಿಗಳು ತಮ್ಮ ಮನೆಯ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಪೋಚಾಪೂರ ಗ್ರಾಮದ ಭೀಮಣ್ಣ ಉಪ್ಪಾರ ಎಂಬುವರು ತಮ್ಮ ಇಂತಹ ವಿಶಿಷ್ಟ ಕಲೆಯಿಂದ ಗಮನ ಸೆಳೆದಿದ್ದಾರೆ. ತೆಂಗಿನ ಗೆರೆಯ ನೆರಳಿನಲ್ಲಿ ಮತ್ತು ಆಕಾಶದಲ್ಲಿ ಹಿಡಿದಾಗ ಮಾತ್ರ ಭಾವ ಚಿತ್ರ ಕಾಣುವ ರೀತಿಯಲ್ಲಿ ಮಾಡಿದ್ದಾರೆ. ತನ್ನ ಅಧ್ಯಯನ ಸಮಯದಲ್ಲಿ ಇಂತಹ …
Read More »ಉಕ್ರೇನ್ನಲ್ಲಿ ಮೃತಪಟ್ಟ ನವೀನ್ ಪಾರ್ಥಿವ ಶರೀರ 21ರಂದು ತಾಯ್ನಾಡಿಗೆ: ಸಿಎಂ
ಬೆಂಗಳೂರು : ‘ಉಕ್ರೇನ್ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾರ್ಚ್ 1 ರಂದು ಉಕ್ರೇನ್ನ ಹಾರ್ಕಿವ್ನಲ್ಲಿ ಸಂಭವಿಸಿದ ಬಾಂಬ್ದಾಳಿಯಲ್ಲಿ ಹಾವೇರಿ ಜಿಲ್ಲೆಯ ಯುವಕ ನವೀನ್ ಮೃತಪಟ್ಟಿದ್ದರು.
Read More »ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ: ಶೋಭಾ ಕರಂದ್ಲಾಜೆ
ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು. ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು …
Read More »ಅಶೋಕ- ಅಶ್ವತ್ಥನಾರಾಯಣ ಕಿತ್ತಾಟ!ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗ
ಬೆಂಗಳೂರು: ಮಾಗಡಿ ತಾಲ್ಲೂಕಿನ ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಕಂದಾಯ ಸಚಿವ ಆರ್.ಅಶೋಕ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನಡುವೆ ವಿಧಾನಸಭೆ ಮೊಗಸಾಲೆಯಲ್ಲೇ ಗುರುವಾರ ಕಿತ್ತಾಟ ನಡೆದಿದೆ. ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗಗೊಂಡಿದೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥನಾರಾಯಣ, ಮಾಗಡಿ ತಹಶೀಲ್ದಾರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ಮಾಡುವಂತೆ ಕಂದಾಯ ಸಚಿವರಿಗೆ ಪತ್ರ ಬರೆದಿದ್ದರು. ಆದರೆ, ಕಂದಾಯ ಸಚಿವರು ವರ್ಗಾವಣೆ ಆದೇಶ ಹೊರಡಿಸಿರ ಲಿಲ್ಲ. …
Read More »ಪರಿಶಿಷ್ಟ ಜಾತಿ ಯುವತಿ ಕೊಲೆ?; ಲಿಂಗಾಯತ ಯುವಕನ ವಿರುದ್ಧ ಎಫ್ಐಆರ್
ಬೆಂಗಳೂರು: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್ ಅಶೋಕ ಶರ್ಮಾ ಅವರ ಮಗಳು ದಾನೇಶ್ವರಿ (23) ಅನುಮಾನಾಸ್ಪದ ರೀತಿಯಲ್ಲಿ ನಗರದಲ್ಲಿ ಮೃತಪಟ್ಟಿದ್ದಾರೆ. ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾರೆ. ‘ವಿಜಯಪುರ ಬಿಎಲ್ಡಿಇಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ದಾನೇಶ್ವರಿ, ಉದ್ಯೋಗಕ್ಕೆ ಪೂರಕ ಕೋರ್ಸ್ ಅಧ್ಯಯನಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಬಿಟಿಎಂ ಲೇಔಟ್ನ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ …
Read More »