Breaking News

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೌದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ, ಬಿಜೆಪಿ ಸದಸ್ಯರಾದ ಲಕ್ಷಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ, ಕಾಂಗ್ರೆಸ್‍ನ ಸದಸ್ಯರಾದ ನಾಗರಾಜ್, ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಹಂಗಾಮಿ ಸಭಾಪತಿ ರಘುನಾಥ್‍ರಾವ್ ಮಲ್ಕಾಪುರೆ, ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ, ಸಚಿವರಾದ …

Read More »

ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ

ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.   ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …

Read More »

ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ

ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ

ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು.   *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.   ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಪ್ರಕಾಶ ಹುಕ್ಕೇರಿ A.C.P. ಗೆ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್

ಗೆದ್ದ ಹುಮ್ಮಸ್ಸಿನಲ್ಲಿ ಪೆÇಲೀಸರಿಗೆ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅವಾಜ್ ಹಾಕಿರುವ ಘಟನೆ ನಡೆದಿದೆ. ಕಾನೂನು ಪಾಲಿಸಲು ಮುಂದಾದ ಎಸಿಪಿಗೆ ಏ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್ ಹಾಕುವ ಮೂಲಕ ಪ್ರಕಾಶ ಹುಕ್ಕೇರಿ ಉದ್ಧಟತನ ಮೆರೆದಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿಗೆ ಅವಾಜ್ ಹಾಕಿದ್ದಾರೆ. ಪ್ರಮಾಣ ಪತ್ರ ಸ್ವೀಕಾರ ಮಾಡಲು ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, …

Read More »

ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ. ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಮೃತ ವ್ಯಕ್ತಿ. ಕಿರಣ್ ಕೊಪ್ಪದ ಕರ್ತವ್ಯ ನಿರತ ವೇಳೆ ಕುತ್ತಿಗೆಗೆ ಗುಂಡಿ ಹಾರಿಸಿಕೊಂಡಿದ್ದಾನೆ. ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಅವರು ಇತ್ತೀಚಿಗೆ ಅದ್ಯಾಕೋ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ. ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು …

Read More »

ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರ ದರ್ಪ

ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …

Read More »