Breaking News

ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ: ಗೋವಿಂದ ಕಾರಜೋಳ

ಬಾಗಲಕೋಟೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕಾಂಗ್ರೆಸ್​ ನಾಯಕರು ವಿಶೇಷ ಫ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ್​ಗೆ ಹೋಗಿದ್ದರು. ಬಾಡಿಗೆ ಕೊಟ್ಟು ವಾಪಸ್ ಬಂದಿದ್ದಾರೆ. ಕಾಂಗ್ರೆಸ್​ ಪರಿಸ್ಥಿತಿ ಇನ್ನೂ ಹೀನಾಯವಾಗುತ್ತದೆ. ಇಲ್ಲವಾದಲ್ಲಿ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ ಎಂದು‌ ಟಾಂಗ್ ನೀಡಿದರು. ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಐದು …

Read More »

ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

ಚಂಡೀಗಢ: ಸಿಖ್ಖರ ನಾಡಿನಲ್ಲಿ ಇದೇ ಮೊದಲ ಬಾರಿ ಆಮ್ ಆದ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಇಂದು ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಾಟ್ಕರ್ ಕಲಾನ್‍ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಪ್ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ರಾಜಧಾನಿಯ ಹೊರಗೆ ಪ್ರಮಾಣ ವಚನ ನಡೀತಿರೋದು ವಿಶೇಷವಾಗಿದ್ದು, ಸಿಎಂ ಜೊತೆ 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ಲಕ್ಷ …

Read More »

ಮೂವರ ಸಾವಿಗೆ ಕಾರಣವಾಯ್ತು ಕಾಡುಹಂದಿ..!

ಚಿತ್ರದುರ್ಗ: ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ ದಾವಣಗೆರೆ, ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರವಿಚಂದ್ರ, ವಿಜಯ್ ಕುಮಾರ್ ಇಬ್ಬರ …

Read More »

15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚಿ: ಹೈಕೋರ್ಟ್

ಬೆಂಗಳೂರು: ರಸ್ತೆ ಗುಂಡಿ ವಿಚಾರದಲ್ಲಿ ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಮುಂದಿನ 15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಡೆಡ್‍ಲೈನ್ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಎಂಎಸ್ ಪಾಳ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ಅಶ್ವಿನ್ ಪ್ರಕರಣವನ್ನು ಪ್ರಸ್ತಾಪಿಸಿತು. ರಸ್ತೆಗುಂಡಿಯಿಂದ ಆಗುವ ಪ್ರತಿಯೊಂದು ಸಾವು ನಮ್ಮಲ್ಲಿ ಅಪರಾಧಿ ಪ್ರಜ್ಞೆ ಮೂಡಿಸುತ್ತಿದೆ ಎಂದು ಬೇಸರ ಹೊರಹಾಕಿತು …

Read More »

ಬೆಳ್ಳಂ ಬೆಳಗ್ಗೆ `ACB’ ಶಾಕ್ : ಬೆಂಗಳೂರು ಸೇರಿ ರಾಜ್ಯದ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳು ಸೇರಿದ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 18 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಏಕಕಾಲದಲ್ಲೇ …

Read More »

ಹೋಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ‌ʼಬಂಪರ್ʼ ಸುದ್ದಿ.!

ಹೋಳಿ ಹಬ್ಬಕ್ಕೂ ಮೊದಲೇ ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ, 7ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಘೋಷಣೆ ಮಾಡಬಹುದು. ಇಂದು ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಇದನ್ನು ಪ್ರಕಟಿಸುವ ನಿರೀಕ್ಷೆಯಿದೆ.   ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಡಿಯರ್ನೆಸ್‌ ರಿಲೀಫ್‌ …

Read More »

ತೆಲುಗು ಸಿನಿಮಾದಲ್ಲಿ ರಿಷಬ್​ ಶೆಟ್ಟಿ; ಸೆನ್ಸೇಷನ್​ ಸೃಷ್ಟಿಸಿದ ಟ್ರೇಲರ್​

ರಿಷಬ್​ ಶೆಟ್ಟಿ ಟ್ರೇಲರ್​ನ ಕೊನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕಲೀಲ್​ ಹೆಸರಿನ ಪಾತ್ರವನ್ನು ರಿಷಬ್​ ಮಾಡಿದ್ದಾರೆ. ಇಲ್ಲಿ ‘ಕೆಜಿಎಫ್​’ ಚಿತ್ರದ ಉಲ್ಲೇಖವನ್ನೂ ಮಾಡಲಾಗಿದೆ.ರಿಷಬ್​ ಶೆಟ್ಟಿ (Rishab Shetty) ನಟನೆ, ನಿರ್ಮಾಣ, ಹಾಗೂ ನಿರ್ದೇಶನದಲ್ಲಿ ಮಿಂಚಿದ್ದಾರೆ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಸೃಷ್ಟಿ ಆಗುತ್ತಿದೆ. ತೆಲುಗಿನಲ್ಲಿ ಸಿದ್ಧಗೊಂಡಿರುವ ‘ಮಿಷನ್​ ಇಂಪಾಸಿಬಲ್​’ ಚಿತ್ರದಲ್ಲಿ (Mishan Impossible Trailer) ಈಗ ರಿಷಬ್ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು ಸಖತ್​ ಫನ್ನಿ ಆಗಿದೆ. ನಟಿ ತಾಪ್ಸಿ ಪನ್ನು (Taapsee Pannu) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. …

Read More »

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಪ್ರಕರಣ, ಇಂದೇ ಶುರುವಾಗುತ್ತಾ ವಿಚಾರಣೆ?

ನವದೆಹಲಿ, ಮಾ. 16: ಶಾಲೆಗಳಲ್ಲಿ ಹಿಜಾಬ್ (Hijab) ಧರಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಈಗ ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿದೆ. ನಿನ್ನೆ (ಮಾರ್ಚ್ 15ರಂದು) ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪನ್ನು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ಅವರ ಪರ ವಕೀಲರು ಓಪನ್ ಕೋರ್ಟಿನಲ್ಲಿ ಮೆನ್ಷನ್ ಕೂಡ ಮಾಡಲಿದ್ದಾರೆ. ಇದೇ ರೀತಿ ಇಂದು ಇನ್ನೂ …

Read More »

ಪಿಡಿಒ ಕಿರುಕುಳ ಪತ್ನಿ ಆತ್ಮ ಹತ್ಯೆ, ತಂದೆಯ ದೂರಿನ ಮೇಲೆ ಪಿಡಿಒ ಅರೆಸ್ಟ್

ಕೊಳ್ಳೇಗಾಲ: ಹನೂರು ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿಯ ಅಭಿವೃದ್ಧಿಅಧಿಕಾರಿ (ಪಿಡಿಒ) ಆನಂದ ಶ್ಯಾಮ ಕಾಂಬ್ಳೆ ಅವರ ಪತ್ನಿ ವಿದ್ಯಾಶ್ರೀ ಎಂಬುವವರ ಮೃತದೇಹವು ದಂಪತಿ ವಾಸವಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಕಂಡು ಬಂದಿದೆ.   ‘ಆನಂದ ಅವರು ಮಗಳನ್ನು ಕೊಲೆ ಮಾಡಿ ನಂತರ ನೇಣು ಹಾಕಿದ್ದಾರೆ’ ಎಂದು ವಿದ್ಯಾಶ್ರೀ ತಂದೆ ಚಿದಾನಂದ ವಿಠಲ ಕಾಂಬ್ಳೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಪಿಡಿಒ ಆನಂದ ಅವರನ್ನು …

Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಪೆರಾರಿವಾಲನ್ ಬಿಡುಗಡೆ

31 ವರ್ಷಗಳ ಜೈಲು ಶಿಕ್ಷೆಯ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಮಂಗಳವಾರ ಜಾಮೀನಿನ ಮೇಲೆ ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿನಿಂದ ಹೊರಬಂದರು. ಮಾರ್ಚ್ 9 ರಂದು ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರಿಗೆ ಜಾಮೀನು ನೀಡಿತ್ತು.ಜೈಲಿನ ಆವರಣದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪೆರಾರಿವಾಲನ್ ಮತ್ತು ಅವರ ತಾಯಿ ಅರ್ಪುತಮ್ ಅಮ್ಮಾಳ್ ‘ನ್ಯಾಯಕ್ಕಾಗಿ ತಮ್ಮ ಹೋರಾಟದಲ್ಲಿ ತಮ್ಮೊಂದಿಗೆ ನಿಂತ’ ಎಲ್ಲರಿಗೂ ಧನ್ಯವಾದ ಹೇಳಿದರು.   ‘ಪೆರಾರಿವಾಲನ್ ಸೇರಿದಂತೆ …

Read More »