Breaking News

ತಮ್ಮದೇ ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಆಕ್ರೋಶ,ನಾವು ನಾಯಿಗಳಾಗುವುದು ಉತ್ತಮ: ಸುರೇಶ್ ಕುಮಾರ್,

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಚಾರ ವಿಧಾನಸಭೆಯಲ್ಲಿ ಪ್ರಸ್ತಾಪವಾಯ್ತು. ಈ ವೇಳೆ ಮಾತನಾಡಿದ ಶಾಸಕ ಸುರೇಶ್ ಕುಮಾರ್, ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೋಡಿದರೆ ನಾವು ನಾಯಿಗಳಾಗುವುದು ಉತ್ತಮ ಎನ್ನಿಸುತ್ತದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಆಕ್ರೋಶ ಹೊರಹಾಕಿದರು. ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಆಡಳಿತ ಪಕ್ಷದ ಸದಸ್ಯರೇ ಸರ್ಕಾರವನ್ನು ತಿವಿದು ಕ್ರಮ ವಹಿಸುವಂತೆ ಆಗ್ರಹಿಸಿದ್ರು. ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರಿನ ಬೀದಿನಾಯಿಗಳ ಸಮಸ್ಯೆ ಬಗ್ಗೆ ಬಸವನಗುಡಿ ಶಾಸಕ …

Read More »

ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ

ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …

Read More »

ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆ ಮಾಡದವರು ದೇಶ ವಿರೋಧಿಗಳು:ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ನ ಮುಖಂಡರು ವಿಕೃತ ಮನಸ್ಸಿನವರು. ಸಭಾಧ್ಯಕ್ಷರ ಆಹ್ವಾನಕ್ಕೆ, ಸೌಜನ್ಯಕ್ಕಾದರೂ ದಿ ಕಾಶ್ಮೀರ್ ಫೈಲ್ಸ್ ಚಿತ್ರವೀಕ್ಷಣೆಗೆ ಬರಬೇಕಿತ್ತು. ಚಿತ್ರ ವೀಕ್ಷಣೆ ಮಾಡದವರು ದೇಶ ವಿರೋಧಿಗಳು ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿರುವವರು ವೋಟ್ ಬ್ಯಾಂಕ್, ಅಲ್ಲಿ ಆಡಳಿತ ಮಾಡಿದವರು ವೋಟ್ ಬ್ಯಾಂಕಿಗೋಸ್ಕರ, ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತ ಇದ್ದಾರೆ. ಯಾರು ಹಿಂದುತ್ವ ರಾಷ್ಟ್ರೀಯ ಮನೋಭಾವ, ದೇಶ ಪ್ರೀತಿ ಮಾಡುವವರು ಈ ಚಿತ್ರ ನೋಡಬಹುದು ಎಂದರು.

Read More »

ಪರೀಕ್ಷೆ ಇಲ್ಲದೇ ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ 100 ಜನರಿಗೆ ಮೋಸ: ಇಬ್ಬರು ಅರೆಸ್ಟ್​

ಹೈದರಾಬಾದ್​ (ತೆಲಂಗಾಣ): ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಂದ 10 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಹೈದರಾಬಾದ್​ನ ರಾಚಕೊಂಡ ಪೊಲೀಸ್​ ಆಯುಕ್ತಾಲಯದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೆನಗೊಂಡ ಮೂಲದ ಪೊನ್ನಾಲ ಭಾಸ್ಕರ್​ ಮತ್ತು ಸಿಕಂದರಾಬಾದ್​ನ ವ್ಯಾಪಾರಿ ರಿತೇಶ್​ ಬಂಧಿತ ಆರೋಪಿಗಳು. ಇದರಲ್ಲಿ ಪ್ರಮುಖ ಆರೋಪಿಯಾದ ಭಾಸ್ಕರ್​​ ಸುಮಾರು 100 ಜನ ಉದ್ಯೋಗಾಕಾಂಕ್ಷಿಗಳಿಂದ ಅಂದಾಜು 10 ಕೋಟಿ ರೂ. ಪಡೆದು ಮೋಸ ಮಾಡಿದ್ದಾನೆ. ಪ್ರತಿಯೊಬ್ಬ ಅಭ್ಯಥಿಯಿಂದಲೂ ತಲಾ …

Read More »

ಬೊಮ್ಮಾಯಿ ಅವರ ಚೊಚ್ಚಲ ಮಗು ಚೆನ್ನಾಗಿದೆ, ಆರೋಗ್ಯವಾಗಿದೆ.. ಹೆಚ್‌ ವಿಶ್ವನಾಥ್‌

ಬೆಂಗಳೂರು : ಬಜೆಟ್ ಬಗೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಅವರು, ಬೊಮ್ಮಾಯಿಯವರ ಚೊಚ್ಚಲ ಮಗು ಚೆನ್ನಾಗಿದೆ, ಆರೋಗ್ಯವಾಗಿದೆ ಎಂದು ಹೇಳಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದು ಎಲ್ಲರನ್ನೂ ಸ್ಪರ್ಶ ಮಾಡಿದ ಬಜೆಟ್ ಆಗಿದೆ. ನಮ್ಮ ಬಳಿ ಇದ್ದಾಗ ನಗುತ್ತದೆ, ಪ್ರತಿಪಕ್ಷಗಳ ಬಳಿ ಬಂದಾಗ ಕಿಟಾರನೇ ಕಿರುಚುತ್ತದೆ. ಎಷ್ಟಾದರೂ ಬಜೆಟ್ ಉತ್ತಮವಾಗಿದೆ. ರಾಜ್ಯದಲ್ಲಿ ಒಟ್ಟು 33 ಇಲಾಖೆ ಇದೆ. ಇದರಲ್ಲಿ ಹಣಕಾಸು, ಡಿಪಿಆರ್ ಹಾಗೂ ಕಾನೂನು ಪ್ರಮುಖವಾದದು. …

Read More »

ವಿಧಾನ ಪರಿಷತ್ ಸದಸ್ಯರ ಅನುದಾನ ಕಡಿತ: ಸರ್ಕಾರದ ವಿರುದ್ಧ ಶ್ರೀಕಂಠೇಗೌಡ ಆಕ್ರೋಶ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಿಗೆ ನೀಡಿದ್ದ ಅನುದಾನವನ್ನು ಸರ್ಕಾರ ಕಿತ್ತುಕೊಂಡಿದೆ. ಅದಕ್ಕೆ ಉತ್ತರಬೇಕು ಎಂದು ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಒತ್ತಾಯಿಸಿದರು. ವಿಧಾನ ಪರಿಷತ್​​ನಲ್ಲಿ ಮಾತನಾಡಿದ ಅವರು, ಇದು ವಿಧಾನ ಪರಿಷತ್ ಹಕ್ಕುಚ್ಯುತಿಯಾಗಿದೆ. ನಮಗೆ ಕೊಡುವ ಅನುದಾನ ಕಡಿತವಾಗಿದೆ. ಹೀಗಾದರೆ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ?. ಆದಷ್ಟು ಬೇಗ ನಮಗೆ ಆಗಿರುವ ಅನ್ಯಾಯಕ್ಕೆ ಉತ್ತರ ಸಿಗಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ಸದಸ್ಯ ಭೋಜೇಗೌಡ ಮಾತನಾಡಿ, ನಮಗೆ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ ಎನ್ನುತ್ತಾರೆ. ಕೊಟ್ಟಿದ್ದ …

Read More »

ಹೈಕೋರ್ಟ್ ತೀರ್ಪಿಗೆ ತಲೆ ಬಾಗಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಹಿಜಾಬ್ ಪ್ರಕರಣ ಸಂಬಂಧದ ಹೈಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಗಮನಿಸಿಲ್ಲ. ಸದ್ಯ ನಾನು ಕೋರ್ಟ್ ಆದೇಶದ ಬಗ್ಗೆ ಕಾಮೆಂಟ್ ಮಾಡಲು ಹೋಗಲ್ಲ. ಹೈಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.ತೀರ್ಪಿನಿಂದ ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ ಆಗಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, …

Read More »

ಬೆಳ್ತಂಗಡಿ: ಚಿರತೆ ಓಡಾಟದ ಚಿತ್ರ ಸೆರೆ – ಸ್ಥಳೀಯರಲ್ಲಿ ಆತಂಕ

ಬೆಳ್ತಂಗಡಿ: ಹುಲಿ ಗಣತಿ ಯೋಜನೆ ನಿಮಿತ್ತ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ. ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. 5ದಿನಗಳಿಗೊಮ್ಮೆ ಈ ಯೋಜನೆಯ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು, ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ.

Read More »

ದಿಢೀರ್ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ಕೊಟ್ಟು ಕುತೂಹಲ ಕೆರಳಿಸಿದ ವಿಜಯೇಂದ್ರ

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿವೆ. ಈ ನಡುವೆಯೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಹುಬ್ಬಳ್ಳಿಯ ಕೇಶವಾಪುರದ ಮಧುರಾ ಎಸ್ಟೇಟ್‍ನಲ್ಲಿರೋ ಶೆಟ್ಟರ್ ನಿವಾಸಕ್ಕೆ ರವಿವಾರ ಸಂಜೆ ವಿಜಯೇಂದ್ರ ಭೇಟಿ ನೀಡಿ, ರಾಜ್ಯ ರಾಜಕೀಯದ ಮುಂದಿನ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ಗಂಟೆಗೂ ಹೆಚ್ಚು ಕಾಲ ಈ …

Read More »

ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ: ಮಾಳವಿಕಾ

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು  ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ. ಐತಿಹಾಸಿಕ …

Read More »