ಬಾಗಲಕೋಟೆ: ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ. ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವವನ್ನು ಈ ಸಲವೂ ನಡೆಸುವ ಮೂಲಕ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಸಾರಿದ್ದಾರೆ. ತಡೆಯಲು ನಿಂತ ಪೊಲೀಸರು ಕೊನೆಗೂ ಸಾಲು ಸಾಲು ಎತ್ತಿನ ಬಂಡಿಗೆ, ಸಹಸ್ರಾರು ಭಕ್ತರ ದಂಡಿಗೆ ದಂಗಾಗಿ ಪಕ್ಕಕ್ಕೆ ಸರಿದು ದಾರಿ ಬಿಟ್ಟಿದ್ದಾರೆ. ಪೊಲೀಸರ ಸರ್ಪಗಾವಲನ್ನೂ ದಾಟಿ ನುಗ್ಗಿದ ಭಕ್ತರು ಕೊನೆಗೂ ತೇರನ್ನು ಎಳೆದಿದ್ದಾರೆ. ಹೌದು.. ಕರೊನಾತಂಕ, ಕೋವಿಡ್ ನಿರ್ಬಂಧದ ನಡುವೆಯೂ ಬಾಗಲಕೋಟೆ …
Read More »18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ ನಟ ಧನುಷ್
ಚೆನ್ನೈ , 18 ಜನವರಿ : ನಟ ಧನುಷ್ ಅವರು ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ ಧನುಷ್ ಅವರು ಬರೆದುಕೊಂಡಿದ್ದು, ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ …
Read More »ಸಿಗುತ್ತಿಲ್ಲ ಕೋವಿಡ್ ಪರಿಹಾರ!; ಪಾಸಿಟಿವ್ ಬಂದರೂ ಎಸ್ಆರ್ಎಫ್ ಐಡಿ ಸಿಗದೆ ಪರದಾಟ
ಕರೊನಾ ಪಾಸಿಟಿವ್ ಬಂದವರ ಎಸ್ಆರ್ಎಫ್ ಐಡಿ ರಚನೆಯಾಗದ ಪರಿಣಾಮ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಸಿಗದಂತಾಗಿದೆ. ಹಲವು ತಿಂಗಳಿಂದ ಪರಿಹಾರಕ್ಕಾಗಿ ಕುಟುಂಬಗಳು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಬಾಗಿಲು ಬಡಿಯುತ್ತಿದ್ದರೂ ಇತ್ಯರ್ಥ ಕಾಣುತ್ತಿಲ್ಲ. ಮೊದಲ ಮತ್ತು ಎರಡನೇ ಅಲೆ ಮುಗಿದು ಮೂರನೇ ಅಲೆ ಕಾಲಿಟ್ಟಿದ್ದರೂ ತಾಂತ್ರಿಕ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ನಡೆಯಿಂದ ಬೇಸತ್ತಿರುವ ರಾಜ್ಯದ 1550 ಕುಟುಂಬಗಳು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿವೆ. ಎರಡನೇ ಅಲೆ ವೇಳೆ ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್ಗಳು ದೃಢ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಸೋಮವಾರ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಜಿಲ್ಲೆಯಲ್ಲಿ 294 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 82744ಕ್ಕೆ ಏರಿಕೆಯಾಗಿದೆ. ಈವರೆಗೆ 79466 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2329 ಆಕ್ಟಿವ್ ಕೇಸ್ಗಳು ಬಾಕಿಯಿವೆ. ಇನ್ನು ಬೆಳಗಾವಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ವತಿಯಿಂದ 2022 ನೆಯ ವರ್ಷದ ಕ್ಯಾಲೆಂಡರ್ ಬಿಡುಗಡೆ
ಗೋಕಾಕ: ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ವತಿಯಿಂದ ಈ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದಾರೆ. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು ಈ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ,ಗೋಕಾಕ, ಬೆಣ್ ಚಿನ್ ಮರಡಿ, ಮಾಧಾಪೂರ್,ಮಾಲ ದಿನ್ನಿ,ಯರಗಟ್ಟಿ, ಹಾಗೂ ಗೋಕಾಕ ನಗರದ ಸುತ್ತಮುತ್ತಲಿನ ಪಂಚಾಯತಿ ಗಳಲ್ಲಿ ಇಂದು ಕ್ಯಾಲೆಂಡರ್ ವಿತರಣೆ ಮಾಡಲಾಯಿತು. ಕ್ಯಾಲೆಂಡರ್ ನಲ್ಲಿ ಐದು ಜನರ ಸಹೋದರರು ಸೇರಿದಂತೆ ಜಾರಕಿಹೊಳಿ …
Read More ». 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.:ಡಿ.ಎಚ್.ಓ ಮುನ್ಯಾಳ
ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ. ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ …
Read More »ಬಿಎಂಟಿಸಿಗೆ ಹೊರೆಯಾದ ಎಲೆಕ್ಟ್ರಿಕ್ ಬಸ್ಗಳು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಅದೃಷ್ಟವೇ ಸರಿ ಇದ್ದಂತಿಲ್ಲ. ಗರಿಷ್ಠ ಪ್ರಮಾಣದ ಪ್ರಯಾಣ ದರ ತಗ್ಗಿಸಿ ವೋಲ್ವೋ ಬಸ್ಗಳನ್ನು ರಸ್ತೆಗಿಳಿಸಲಾಯಿತು. ಆದರೂ ಅವುಲಾಭದ ಹಳಿಗೆ ಬರುತ್ತಿಲ್ಲ. ಡೀಸೆಲ್ ದುಬಾರಿ ಆಗು ತ್ತಿರುವುದರಿಂದಎಲೆಕ್ಟ್ರಿಕ್ ಬಸ್ಗಳನ್ನು ಪರಿಚಯಿಸಿದೆ. ಅವುಗಳೂ ಈಗ ಗಾಯದ ಮೇಲೆ ಬರೆ ಎಳೆಯುತ್ತಿವೆ! ಪ್ರತಿ ಎಲೆಕ್ಟ್ರಿಕ್ ಬಸ್ಗಳು ನಿತ್ಯ ತರುತ್ತಿರುವ ತಲಾ ಆದಾಯ ಸರಾಸರಿ 4,500ರಿಂದ 5,000 ರೂ. ಆದರೆ, ಇದಕ್ಕೆ ಪ್ರತಿಯಾಗಿ ಈಬಸ್ಗಳನ್ನು ಪೂರೈಸಿದ ಕಂಪನಿಗಳಿಗೆ ಬಿಎಂಟಿಸಿ …
Read More »ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವ, ಇಂದು ನಡೆಯುತ್ತಾ?! ಕೆರಳಿದೆ ಭಾರಿ ಕುತೂಹಲ..
ಬಾಗಲಕೋಟೆ: ಈ ದೇವಸ್ಥಾನದಲ್ಲಿನ ರಥೋತ್ಸವ ಇತಿಹಾಸದಲ್ಲಿ ಎಂದೂ ರದ್ದಾದ ಉದಾಹರಣೆಯೇ ಇಲ್ಲ. ಆದರೆ ಇಂದು ರಥೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಭಾರಿ ಕುತೂಹಲ ಕೆರಳಿಸಿದೆ. ಏಕೆಂದರೆ ಭಕ್ತರು ರಥೋತ್ಸವ ನೆರವೇರಿಸಲು ಕಂಕಣ ತೊಟ್ಟಿದ್ದರೆ, ಅತ್ತ ಪೊಲೀಸರು ಉತ್ಸವ ತಡೆಯಲು ರಣೋತ್ಸಾಹದಿಂದ ಕಾಯುತ್ತಿದ್ದಾರೆ. ಹೌದು.. ಇಂಥದ್ದೊಂದು ಸನ್ನಿವೇಶ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಸೃಷ್ಟಿಯಾಗಿದೆ. ಇಲ್ಲಿನ ಐತಿಹಾಸಿಕ ಬನಶಂಕರಿ ದೇವಸ್ಥಾನದ ರಥೋತ್ಸವ ನಡೆಯಬೇಕಿದೆ. ಆದರೆ ರಥೋತ್ಸವ ಜಾಗದ ಎಲ್ಲ ರಸ್ತೆಗಳಲ್ಲೂ …
Read More »ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ: ಆರ್ ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ ( Weekend Curfew ), ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ. ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ( Minister R Ashok ) ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ …
Read More »ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿಸಿದ ಸಚಿವ ಉಮೇಶ್ ಕತ್ತಿ
ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿಸಿದರು . ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.
Read More »