ಒಂದು ಮಾಸ್ ಕಮರ್ಷಿಯಲ್ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತವಾಗಿರಲಿಲ್ಲ. ಈಗ ಪ್ರೇಮ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ನಿರ್ದೇಶಕ ಪ್ರೇಮ್ (Director Prem) ಅವರು ಸ್ಯಾಂಡಲ್ವುಡ್ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಅವರ ನಿರ್ದೇಶನದ ‘ಜೋಗಿ’ ಚಿತ್ರವನ್ನು ಸಿನಿಪ್ರಿಯರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅವರ ಅಭಿಮಾನಿ ಬಳಗ ದೊಡ್ಡದು. ಇನ್ನು, ಧ್ರುವ ಸರ್ಜಾ (Dhruva …
Read More »ಬಿಜೆಪಿ ಅಭ್ಯರ್ಥಿ ಘೋಷಿಸಿಲ್ಲ: ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ.ಜೋಶಿ
ಹುಬ್ಬಳ್ಳಿ: ‘ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ. ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸೋಮವಾರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು …
Read More »ವಿಧಾನಸಭಾ ಚುನಾವಣೆಗೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ
ಭಟ್ಕಳ: ರಾಜಕೀಯ ಕ್ಷೇತ್ರ ಸಂಪೂರ್ಣ ಹಾಳಾಗಿದ್ದು ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದೆ, ರಾಜ್ಯಾಂಗದಲ್ಲಿ ಸಮಗ್ರ ಬದಲಾವಣೆ ತರಲು ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದ್ದಾರೆ. ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಇಂದು ಶಾಸಕನಾಗುವವನ್ಜು ತಾನೆಷ್ಟು …
Read More »ಗೋವಾ ಗಡಿ ದಾಟಲು ಕರ್ನಾಟಕ ಪ್ರವಾಸಿಗರಿಗೆ 10 ಸಾವಿರ ರೂ. ದಂಡ
ಪಣಜಿ: ಗೋವಾಗೆ ಟ್ಯಾಕ್ಸಿಯಲ್ಲಿ ಹೋಗುವ ಕರ್ನಾಟಕದ ಪ್ರವಾಸಿಗರು ಗಡಿ ದಾಟುವುದಕ್ಕೆ ವಿಶೇಷ ಪರವಾನಗಿ ಪಡೆಯಲು ಪ್ರತಿ ವಾಹನಕ್ಕೆ 10,262 ರೂ. ದಂಡ ಪಾವತಿಸಬೇಕಾಗಿದೆ. ಗೋವಾ ಸರ್ಕಾರದ ಈ ನಡೆ ಕರ್ನಾಟಕದ ಪ್ರವಾಸಿಗರು ಗೋವಾಗೆ ತೆರಳದೆ ರಾಜ್ಯಕ್ಕೆ ವಾಪಸಾಗುತ್ತಿದ್ದಾರೆ. ಗೋವಾದ ಮೊಲ್ಲೆಮ್ ಚೆಕ್ಪೋಸ್ಟ್ನಲ್ಲಿ ಗುರುವಾರದಿಂದ ಶನಿವಾರ ರಾತ್ರಿಯವರೆಗೆ 40 ಟ್ಯಾಕ್ಸಿಗಳನ್ನು ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ವೇದಿಕೆಯ ಉಪಾಧ್ಯಕ್ಷ ಎಂ ರವಿ ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಶೇಷ ಪರವಾನಗಿ ಪಡೆಯಲು ರೂ. 100 ಅಥವಾ …
Read More »ಸಂತ್ರಸ್ತರಿಗೆ ಕೆಎಸ್ಆರ್ಟಿಸಿ ಸಂಸ್ಥೆ ಪರಿಹಾರ ನೀಡಿ, ಸೀಜ್ ಆಗಿದ್ದ ಬಸ್ ಮರಳಿ ವಶಕ್ಕೆ ಪಡೆದುಕೊಂಡಿದೆ.
ಸಾಂಗ್ಲಿ (ಮಹಾರಾಷ್ಟ್ರ): 2015ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಬಸ್ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿ, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಬಸ್ ಹಸ್ತಾಂತರ ಮಾಡಲಾಗಿತ್ತು. ಆದ್ರೆ ಸಂತ್ರಸ್ತರಿಗೆ ಇಂದು ಕೆಎಸ್ಆರ್ಟಿಸಿ ಪರಿಹಾರ ನೀಡಿ ಮರಳಿ ಬಸ್ ಪಡೆದುಕೊಂಡಿದೆ. ಪ್ರಕರಣದ ವಿವರ: 2015ರಲ್ಲಿ ಮೀರಜ್ನಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಭಾನುದಾಸ್ ಬೋಸಲೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ತಮಗೆ ಪರಿಹಾರ ನೀಡುವಂತೆ ಬೋಸಲೆ ಕುಟುಂಬ ಸಾಂಗ್ಲಿ ನ್ಯಾಯಾಲಯದಲ್ಲಿ ದಾವೆ …
Read More »ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಲಭ.
ಕರೊನಾ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ವರ್ಷ ಪರೀಕ್ಷೆ ನಡೆಸುತ್ತಿದ್ದರೂ ಉತ್ತೀರ್ಣರಾಗುವುದು ಅಷ್ಟೇನು ಕಷ್ಟವಲ್ಲ. ಏಕೆಂದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುಲಭ ಮಾದರಿಯಲ್ಲಿ ಪೂರ್ವಶಿಕ್ಷಣ ಇಲಾಖೆ ಪ್ರಶ್ನೆಗಳನ್ನು ರೂಪಿಸುತ್ತಿದೆ. ಕೋವಿಡ್ನಿಂದಾಗಿ ಈ ಬಾರಿ ಕಡಿಮೆ ಶೈಕ್ಷಣಿಕ ದಿನಗಳು ಲಭ್ಯವಾದ ಹಿನ್ನೆಲೆಯಲ್ಲಿ ಹಾಗೂ ಕಳೆದ ವರ್ಷ ಪಿಯು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಲಭ ವಿಧಾನದಲ್ಲಿ ಪಾಸ್ ಆಗುವ …
Read More »ರಾಜ್ಯ ಸರ್ಕಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ಹದಿನೇಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಅಧಿಕಾರಿಗಳು ಹಾಗು ನೀಡಿರುವ ಹುದ್ದೆಯ ವಿವರ ಹೀಗಿದೆ.. ಜಿ.ಕಲ್ಪನಾ- ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ- ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ – ಐಎಂಎ ವಿಶೇಷ ಅಧಿಕಾರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ ಮುನೀಶ್ ಮೌದ್ಗಿಲ್ – ಭೂ ಮಾಪನ ಹಾಗೂ …
Read More »ಕದ್ದವಾಚು ಕೈಗೆ ಕಟ್ಟಿ ನಿರ್ಲಜ್ಜವಾಗಿ ಮೆರೆದ ಸುಳ್ಳುಶೂರನಿಗೆ ಜೆಡಿಎಸ್ ಜ್ವರ; HDK
ಬೆಂಗಳೂರು: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು ಏಕವಚನದಲ್ಲಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಹುಬ್ಲೋ ವಾಚ್ ಪ್ರಸಂಗ ಮತ್ತೆ ಪ್ರಸ್ತಾಪಿಸಿದ್ದಾರೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ …
Read More »ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋ ರೂ.ಗಳ ಟೆಂಡರ್ಗಳಿಗೆ, ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ : ಆಲಂ ಪಾಷಾ ಆರೋಪ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲರದ್ದು ವ್ಯವಸ್ಥಿತ ಕೊಲೆ. ಒಂದು ಲಕ್ಷ ಕೋಟಿ ರೂ. ಟೆಂಡರ್ ಗಳಲ್ಲಿ ಅವ್ಯವಹಾರ ನಡೆದಿದೆ. ಉಡುಪಿಯಲ್ಲಿ ಏ.12ರಂದು ಸಂಭವಿಸಿದ ಗುತ್ತಿಗೆದಾರ ಸಂತೋಷ್ ಅವರ ನಿಗೂಢ ಸಾವು ಭ್ರಷ್ಟಾಚಾರಿ ವ್ಯವಸ್ಥೆ ಮಾಡಿಸಿದ ವ್ಯವಸ್ಥಿತ ಕೊಲೆಯಾಗಿದೆ ಎಂದು ಉದ್ಯಮಿ ಆಲಂ ಪಾಷಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಸಾವಿಗೆ ಮೂಲ ಕಾರಣವಾದ ಭ್ರಷ್ಟಾಚಾರದ ಬಗ್ಗೆ ಒಂದಕ್ಷರವನ್ನೂ ಹೇಳದೆ ಉಡುಪಿಯ ಪೊಲೀಸರು 2022ರ ಏಪ್ರಿಲ್ 13ರಂದು ಎಫ್ಐಆರ್ ದಾಖಲಿಸಿದ್ದಾರೆ. …
Read More »ಬಿಜೆಪಿಯೊಂದಿಗೆ ಕುಮಾರಸ್ವಾಮಿಯ ಮ್ಯಾಚ್ ಫಿಕ್ಸಿಂಗ್: ಸತೀಶ್ ಜಾರಕಿಹೊಳಿ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ. ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …
Read More »
Laxmi News 24×7