Breaking News

ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Read More »

ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.

ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …

Read More »

3ನೇ ಡೋಸ್ ಪಡಿಯಲು ನೀವು ಅರ್ಹರೆ.

ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್‌ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್‌ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …

Read More »

ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.

ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …

Read More »

ಬೆಳಗಾವಿ ಜಿಲ್ಲೆಯಲ್ಲಿ ಜ.17ರಿಂದ ಶಾಲೆ ಆರಂಭ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ. ‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.  

Read More »

ಪೊಲೀಸ್​ ಭದ್ರಕೋಟೆಯಾದ ಇಡೀ ರಾಮನಗರ: ಇಂದು ಭಾರೀ ಹೈಡ್ರಾಮಾಗೆ ಸಾಕ್ಷಿ ಆಗಲಿದೆ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನ‌ಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್​ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್​ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್​ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್​ ಪಡೆಯನ್ನು ಫೀಲ್ಡ್​​ಗಿಳಿಸಿದೆ. ಇಂದು ಐದನೇ ದಿನ‌ಕ್ಕೇ ಕಾಂಗ್ರೆಸ್ ಪಾದಯಾತ್ರೆ …

Read More »

ಮಾಡೆಲ್ ಮಾಡುವ ನೆಪದಲ್ಲಿ ಖಾಸಗಿ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ ಪುಂಗಿದಾಸ, ಚರಿತ್ರೆ ಬಿಚ್ಚಿಟ್ಟ ಪೊಲೀಸ್

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಾಂಗ ಮಾಡ್ತಿರೋ ಪ್ರಪಂಚ್ ಎಂಬಾತ ಮಹಿಳೆಯರ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಫೇಕ್ ಖಾತೆಗಳನ್ನು ತೆಗೆದು ಯುವತಿಯರನ್ನು ಪರಿಚಯ ಮಾಡಿಕೊಳ್ತಿದ್ದ. ಹುಡುಗಿಯರು ಪರಿಚಯವಾಗ್ತಿದ್ದಂತೆ ನಿಮ್ಮನ್ನು ದೊಡ್ಡ ಮಾಡೆಲ್ ಮಾಡ್ತೀನಿ, ಕೈ ತುಂಬಾ ದುಡ್ಡು ಸಿಗೋಹಾಗೆ ಮಾಡ್ತೀನಿ ಅಂತ ಫುಂಗಿ ಬಿಡ್ತಿದ್ದ. ಇವನ ಮಾತು ಕೇಳಿ ಯುವತಿಯರು ಮರುಳಾಗ್ತಿದ್ದಂತೆ ಮಾಡೆಲಿಂಗ್ ಫೋಟೋ ಕಳಿಸುವಂತೆ ಕೇಳುತ್ತಿದ್ದ. 35 ರಿಂದ 40 ಸಾವಿರ ಕೊಡುವ ಭರವಸೆ ನೀಡ್ತಿದ್ದ. ಅಲ್ಲದೇ ಹಲವರಿಗೆ ಹಣ …

Read More »

ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.

Read More »

ಕೆಆರ್​ಎಸ್ ಸುತ್ತ ಕಲ್ಲು ಗಣಿಗಾರಿಕೆ: ಸೂಕ್ತ ನಿರ್ಧಾರ ಕೈಗೊಳ್ಳಲು ಹೈಕೋಟ್ ಸೂಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಬೇಬಿಬೆಟ್ಟ ಹಾಗೂ ಚಿನಕುರಳಿ ಗ್ರಾಮಗಳಲ್ಲಿನ ಕಲ್ಲು ಗಣಿಗಾರಿಕೆ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಗಣಿ ಮಾಲೀಕರ ಮನವಿಯನ್ನು ಮೂರು ವಾರದಲ್ಲಿ ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಕುರಿತು ಶ್ರೀಕೃಷ್ಣ ಸ್ಟೋನ್ ಕ್ರಷಿಂಗ್ ಇಂಡಸ್ಟ್ರೀಸ್ ಸೇರಿದಂತೆ 17 ಗಣಿ ಕಂಪನಿಗಳ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ …

Read More »

ಡಿಕೆ ಶಿವಕುಮಾರ್ ರಾಜಕೀಯ ಗುರುವಿನಿಂದ ಪಾದಯಾತ್ರೆ ಕೈಬಿಡಲು ಸಲಹೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ಗುರು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಜನರ ಜೀವಕ್ಕೆ ಹಾನಿ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಕೈಬಿಡಲು ಕೋರಿದ್ದಾರೆ. ತಮ್ಮ ನೇತೃತ್ವದಲ್ಲಿ ಮೇಕದಾಟು ಸಂಗಮದಿಂದ ಬೆಂಗಳೂರಿನವರೆಗೆ ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣಿಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಅಣಿಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ …

Read More »