Breaking News

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ: ಪ್ರಮೋದ್ ಮುತಾಲಿಕ್

ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ …

Read More »

ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ

ಹುಬ್ಬಳ್ಳಿಯ ಸಿದ್ಧಾರ್ಥ ಕಾಲೋನಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ನಗರದ ಅಂಬೇಡ್ಕರ್ ಸರ್ಕಲ್ ನಿಂದ ಆರಂಭಗೊಂಡ ಪ್ರತಿಭಟನೆಯ ರ್ಯಾಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರೆಗೆ ನಡೆಸಲಾಯಿತು. ಬಳಿಕ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಕೂಡಲೇ ಸ್ಮಾರಕ ಭವನ‌ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

Read More »

ಪೋಡಿ, ಭೂಪರಿವರ್ತನೆ, 11ಇ ಸ್ಕೆಚ್, ಹದ್ದುಬಸ್ತ್ ಮತ್ತಿತರ ನಕ್ಷೆ ಆನ್ ಲೈನ್ ನಲ್ಲಿ ಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಜೂ.3 11E, ಫೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರ ನಕ್ಷೆಗಳ ಮುದ್ರಣ ಮತ್ತು ನಾಗರಿಕರ ಅರ್ಜಿಗಳ ಸ್ಥಿತಿಯ ಮಾಹಿತಿಯನ್ನು ನಾಗರಿಕರು ಆನ್ ಲೈನ್( ONLINE )ನಲ್ಲಿ rdservices.karnataka.gov.in ಮುಖಾಂತರ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮೇಲ್ಕಂಡ ಸೇವೆಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ, ನಾಗರಿಕರು ಅರ್ಜಿಗಳಿಗೆ ಹಣವನ್ನು ಪಾವತಿಸುತ್ತಾರೆ. ಆದ್ದರಿಂದ, ಅವರ ನಕ್ಷೆಯನ್ನು ಅನುಮೋದಿಸಿದ ತಕ್ಷಣ, ಕೆಳಗೆ ನೀಡಲಾದ ವೆಬ್‌ಸೈಟ್ ಲಿಂಕ್‌ನಲ್ಲಿ ಅದನ್ನು ಮುದ್ರಿಸಲು …

Read More »

ಬೆಳಗಾವಿ ನಗರದಲ್ಲಿ ದಿಂಡಿ ಪಾದಯಾತ್ರೆಗೆ ಭವ್ಯ ಸ್ವಾಗತ:

ಬೇಲೂರ್ ಪಾಯೆ ಧಾರವಾಡದದಿಂದ  ನಿನ್ನೆ ಬೆಳಗಾವಿ ನಗರದಕ್ಕೆ ತಲುಪಿತು. ಈ ವೇಳೆ ದಿಂಡಿ ಕಾರ್ಯಕ್ರಮಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು. ನಿನ್ನೆ ಬುಧವಾರ ದಿನಾಂ 1ರಂದು ಬೆಳಗಾವಿಯಲ್ಲಿ ದಿಂಡಿ ಆಗಮಿಸಿತು. ಈ ವೇಳೆ ನ್ಯಯವಾದಿಗಳಾದ ಸದಾಶಿವ ಹಿರೇಮಠರವರ ಕುಟುಂಬದವರು ತಮ್ಮ ನಿವಾಸದಲ್ಲಿ ದಿಂಡಿಯನ್ನು ಸ್ವಾಗತ ಮಾಡಿಕೊಂಡರು. ಈ ವೇಳೆ ಭಜನೆ, ಕೀರ್ತನೆ, ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ವೇಳೆ ಭಕ್ತರಿಗೆ ಮಹಾಪ್ರಸಾದವನ್ನು ವಿತರಣೆ ಮಾಡಲಾಯಿತು. ಈ ವೇಳೆ ಕೀರ್ತನಕಾರರಾದ ದೇವಪ್ಪಾ …

Read More »

ಕಾಂಗ್ರೆಸ್ ಪಕ್ಷ.ಬಾಬಾಸಾಹೇಬರು ತೀರಿಕೊಂಡಾಗ ಆರು ಅಡಿ‌ ಜಾಗ ಕೊಟ್ಟಿಲ್ಲ

ನನ್ನ ಚುನಾವಣೆ ಸೇರಿದಂತೆ ಇತರೆ ಚುನಾವಣೆಯ ಸಂಧರ್ಭದಲ್ಲಿ ಅರುಣ ಶಹಾಪೂರ ಅವರು ದೂರ ಉಳಿದಿದ್ದರೂ ಎಂದು ವಿಜಯಪುರದ ಸಂಸದ ರಮೇಶ ಜಿಗಜಿನಗಿಯವರು‌ ಸಹಜವಾಗಿಯೇ ಅಸಮಾಧಾನ ಹೊರಹಾಕಿದರು. ಅವರು ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು‌ ಆರ್.ಎಸ್.ಎಸ್ ಹಿನ್ನಲೆ ಉಳ್ಳವರು ಪಕ್ಷಕ್ಕೆ ದುಡಿಯೋದು ಸ್ವಲ್ಪ ಕಡಿಮೆನೆ.ಅರುಣ ಶಹಾಪೂರಯವರು ಸಂಘ ಪರಿವಾರದಿಂದ ಬಂದವರು ಈ ಹಿನ್ನಲೆಯಲ್ಲಿ ಪಕ್ಷದಿಂದ ಅವರು ದೂರ ಉಳಿಯುತ್ತಾರೆ..ಪಕ್ಷದಿಂದ ದೂರ ಉಳಿದಿದ್ದೆ ವಿಷಯವನ್ನು ಹೋರತುಪಡಿಸಿದರೆ ಅವರು ವಿಧಾನಪರಿಷತ ಸದಸ್ಯರಾಗಿ …

Read More »

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ʻಹಾರ್ದಿಕ್ ಪಟೇಲ್ʼ!

ಗಾಂಧಿನಗರ (ಗುಜರಾತ್): ಕಳೆದ ತಿಂಗಳು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಇಂದು ಮುಂಜಾನೆ, ಪಟೇಲ್ ಅವರು ಕೆಲಸ ಮಾಡಲು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು. ‘ಇಂದು ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, …

Read More »

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)   ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.   ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ   ಜಗಳವಾಡಿದ್ದಾನೆ. …

Read More »

ಕಾಶ್ಮೀರ ಪಂಡಿತರ ಡೆಡ್‌ ಲೈನ್‌ ವಾರ್ನಿಂಗ್ ಗೆ ಮಣಿದ ಕೇಂದ್ರ ಸರ್ಕಾರ!

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಪಂಡಿತರ ಹತ್ಯೆಗಳು ವ್ಯಾಪಕವಾಗಿ ವರದಿಯಾಗ್ತಿದ್ದಂತೆ ಬೀದಿಗಿಳಿದಿರುವ ಪಂಡಿತ ಸಮುದಾಯ ವಲಸೆ ಹೋಗೋದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 24 ಗಂಟೆಯ ಒಳಗೆ ಸುರಕ್ಷಿತ ಸ್ಥಳವನ್ನ ಗೊತ್ತುಪಡಿಸಿ ಸೂಕ್ತ ಭದ್ರತೆ ನೀಡದಿದ್ದಲ್ಲಿ ಸಾಮೂಹಿಕವಾಗಿ ವಲಸೆ ಹೋಗುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿರೋ ಕೇಂದ್ರ ಸರ್ಕಾರ ಹಿಂದೂ ಉದ್ಯೋಗಿಗಳನ್ನ ಕಾಶ್ಮೀರದ ಜಿಲ್ಲಾ ಕೇಂದ್ರಗಳಿಗೆ ವರ್ಗಾವಣೆ ಮಾಡಿದೆ. ಇನ್ನು ನಿನ್ನೆಯೂ ಸಹ ಜಮ್ಮು ಮೂಲದ …

Read More »

ನಾನೇ ಲೇಬರ್, ನಾನೇ ಓನರ್! ಅಂತಾರೆ ಆಳಾಗಿ ದುಡಿದು ಅರಸನಾಗಿ ಉಣ್ಣುವ ಬೆಳಗಾವಿಯ ಉದ್ಯಮಿ

ಬೆಳಗಾವಿ: ಕೋವಿಡ್​ ಲಾಕ್‌ಡೌನ್ ಎಫೆಕ್ಟ್​​‌ನಿಂದ (Covid 19 Lockdown) ಸಣ್ಣ, ಮಧ್ಯಮ, ಮತ್ತು ಅತಿ ಸಣ್ಣ ಉದ್ಯಮಗಳು ಆರ್ಥಿಕ ಸಂಕಷ್ಟಕ್ಕೆ (Economic Crisis) ಸಿಲುಕಿದ್ದವು. ಆದರೆ ಬೆಳಗಾವಿ ನಗರದ (Belagavi) ನೇಕಾರಿಕೆ ಕುಟುಂಬವೊಂದು ಲಾಕ್‌ಡೌನ್ ಅನ್ನೇ ಸದ್ಭಳಕೆ ಮಾಡಿಕೊಂಡು ಸ್ವಾವಲಂಬನೆಯ ಬದುಕು ಕಟ್ಟಿಕೊಂಡಿದೆ. ಜರಿ ಉದ್ಯಮದಲ್ಲಿ (Jari Business) ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಳಗಾವಿ ನಗರದ ನಿವಾಸಿ ಲೋಹಿತ್ ಮೋರಕರ್ ಎಂಬುವರು ಜರಿ ಉದ್ಯಮದಿಂದ (ಸೀರೆಗೆ ಬೇಕಾಗುವ ಕಚ್ಚಾ ವಸ್ತು …

Read More »

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.   ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ …

Read More »