ಬೆಳಗಾವಿ: ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಸಾಯಿ ಮಂದಿರ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ತಾಲೂಕಿನ ಆನಗೋಳ ನಗರದ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರವನ್ನು …
Read More »ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ. 9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ …
Read More »ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಮೌನಾನುಷ್ಠಾನ ಮಂಗಲ ಸಮಾರಂಭ
ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಮ. ನಿ. ಪ್ರ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳ ಮೌನಾನುಷ್ಠಾನ ಮಂಗಲ ಸಮಾರಂಭದಲ್ಲಿ ಭಾಗಿಯಾಗಿ ಎಲ್ಲ ಶ್ರೀಗಳ ಆಶೀರ್ವಾದ ಪಡೆದು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು ಶ್ರೀ ದುರದುಂಡೇಶ್ವರಮಠ ಮುರಗೋಡ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿಯ ರುದ್ರಾಕ್ಷಿಮಠದ ಶ್ರೀ ಮ.ನಿ.ಪ್ರ.ಸ್ವ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಹುಕ್ಕೇರಿ …
Read More »ರಜೆ ಬೇಕಂದ್ರೆ ಲಾಡ್ಜ್ಗೆ ಬಂದು ಬಟ್ಟೆ ಬಿಚ್ಚಬೇಕಂತೆ. ಕೊಪ್ಪಳದ ಸರ್ಕಾರಿ ಕಚೇರಿ ಮಹಿಳಾ ಸಿಬ್ಬಂದಿಯ ಕಣ್ಣೀರ ಕಥೆ
ಕೊಪ್ಪಳ: ರಜೆ ಬೇಕೆಂದರೆ ಲಾಡ್ಜ್ಗೆ ಬಂದು ಬಟ್ಟೆ ಬಿಚ್ಚಬೇಕಂತೆ ಮಹಿಳಾ ನೌಕರರು! ಕೊಪ್ಪಳ ಎಸ್ಸಿ ಕಚೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಮಹಿಳಾ ನೌಕರರಿಗೆ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂಬ ಗಂಭೀರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಸರ್ಕಾರಿ ಕಚೇರಿಯಲ್ಲೇ ಆಡಳಿತಾಧಿಕಾರಿ ಕಾಮದಾಟ ಆಡುತ್ತಿದ್ದು, ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಹಿತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ನ್ಯಾಯ ಸಿಗುತ್ತಿಲ್ಲ …
Read More »ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ,ಹುಡುಗಿಯರೊಂದಿಗೆ 11 ಯುವಕರನ್ನು ನಿಲ್ಲಿಸಿ, ಅರೆಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್
ಕೊಲ್ಹಾಪುರ(ಮಹಾರಾಷ್ಟ್ರ): ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನೆಲ್ಲ ಬೆದರಿಸಿ, ಕೊಠಡಿವೊಂದರಲ್ಲಿ ಕೂಡಿ ಹಾಕಲಾಗಿದ್ದು, ಹುಡುಗಿಯರೊಂದಿಗೆ ಅರೆಬೆತ್ತಲೆ ವಿಡಿಯೋ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಗೋವಾಕ್ಕೆ ತೆರಳಿದ್ದ ಯುವಕರನ್ನ ಬೊಂಡಗೇಶ್ವರ ದೇವಸ್ಥಾನದ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ನಮ್ಮ ಹೋಟೆಲ್ನಲ್ಲಿ ಒಳ್ಳೆಯ ಊಟ …
Read More »ರಾಜ್ಯದ ಉದ್ಯಮಿಗಳಿಗೆ ಐಟಿ ಶಾಕ್! 600 ಅಧಿಕಾರಿಗಳ, 50ಕ್ಕೂ ಹೆಚ್ಚು ಕಡೆ ದಾಳಿ!
ಬೆಂಗಳೂರು : ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಐಟಿ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ರಾಜಧಾನಿ ಬೆಂಗಳೂರಿನಲ್ಲೆ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ಮಾಡಲಾಗಿದೆ. ಆದಾಯ ಮುಚ್ಚಿಟ್ಟು ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಉದ್ಯಮಿಗಳ ಮನೆ ಹಾಗೂ ಆಫೀಸ್ ಗಳ ಮೇಲೆ 600ಕ್ಕೂ …
Read More »ರಾಜ್ಯಸಭೆ ಚುನಾವಣೆ; ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್ ನಿಯೋಗ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ನಿಂದ ಮನ್ಸೂರ್ ಅಲಿ ಖಾನ್ ಕಣಕ್ಕಿಳಿದರೆ ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ನ ಮನ್ಸೂರ್ ಖಾನ್ ಸ್ಪರ್ಧೆಯಿಂದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹಿನ್ನಡೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ನಮ್ಮ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರೆ, ಇದಕ್ಕೂ ಮುನ್ನ ಕುಪೇಂದ್ರ …
Read More »ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು
ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಭೀಮಪ್ಪಾ ಲಾಳಿ ಅಭಿಪ್ರಾಯ ಪಟ್ಟರು. ಅವರು ಇಂದು ಹುಕ್ಕೇರಿ ತಾಲೂಕಾ ಪಂಚಾಯತ ಕಾರ್ಯಾಲಯದ ವ್ಯವಸ್ಥಾಪಕ ರಫೀಕ ಅಹ್ಮದ ಚಟ್ನಿ ಅವರ ಸೇವಾ ನಿವೃತ್ತಿ ಹೊಂದಿದ ಕಾರಣ ಬಿಳ್ಕೋಡುವ ಸಮಾರಂಭದ ಅದ್ಯಕ್ಷತೆ ವಹಿಸಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ತಾಲೂಕಾ ಪಂಚಾಯತ …
Read More »ವಿಧಾನ ಪರಿಷತ್ ಸದಸ್ಯರಾಗಿ ಜಿಲ್ಲೆಗೆ ಆಗಮಿಸಿದ ಲಕ್ಷ್ಮಣ ಸವದಿ ರವರಿಗೆ ಸನ್ಮಾನಿ
ನೂತನ ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಭಾರಿಗೆ ಕಲಬುರಗಿ ಜಿಲ್ಲೆಗೆ ಆಗಮಿಸಿದ ರಾಜ್ಯದ ನಿಕಟ ಪೂರ್ವ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಲಕ್ಷ್ಮಣ ಸವದಿ ಸಾಹುಕಾರ ರವರಿಗೆ ಜೇವರ್ಗಿ ಯಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು . ಈ ಸಂಧರ್ಭದಲ್ಲಿ ಹಿರಿಯರಾದ ರಮೇಶ ಕುಲಕರ್ಣಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ ,ಪುರಸಭೆ ಸದಸ್ಯರಾದ ಸಂಗನಗೌಡ ಪಾಟೀಲ್ ,ಗುರು ಮಾಲಿಪಾಟೀಲ …
Read More »ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಹೌದು… ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ ಇದು …
Read More »
Laxmi News 24×7