Breaking News

‘ಹಾಡಿದ್ದೇ ಹಾಡೋ ಕಿಸಬಾಯಿದಾಸ ಅಂತಾರಲ್ಲ ಹಾಗೆ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ.

ಧಾರವಾಡ: ಹಾಡಿದ್ದೇ ಹಾಡೋ ಕಿಸಬಾಯಿದಾಸ ಅಂತಾರಲ್ಲ ಹಾಗೆ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ. ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೆ ಬೇರೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿಚಾರ ಚರ್ಚಿಸಲು ಕೊನೆಗೆ ಎರಡು ದಿನ ಕೊಟ್ಟರು. ಮುಂದಿನ ಅಧಿವೇಶನದಲ್ಲಿ ಮೊದಲೇ ನಾಲ್ಕು ದಿನ ಕೊಡಬೇಕು. ಈ ಕುರಿತ ಚರ್ಚೆಗೆ ಮೊದಲೇ ಸಮಯ ಕೊಡುವಂತೆ ಸಭಾಪತಿ ಬಳಿ ಕೇಳಿದ್ದೇನೆ …

Read More »

ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 31 ಮಂದಿ ವಿರುದ್ಧ ಎಫ್​ಐಆರ್​ ದಾಖಲು

ರಾಮನಗರ : ಕಾಂಗ್ರೆಸ್​​ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 31 ಮಂದಿ‌ ವಿರುದ್ದ ಎಫ್‌ಐಆರ್ ದಾಖಲು ಮಾಡಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್​​ ಠಾಣೆಯಲ್ಲಿ‌ ಎಫ್‌ಐಆರ್ ದಾಖಲಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಮೇಕೆದಾಟುನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಮೇಕೆದಾಟು ಪಾದಯಾತ್ರೆಯಲ್ಲಿ ಶಿವರಾಜ್​ಕುಮಾರ್ ಭಾಗಿಯಾಗುತ್ತಾರೆ: ಉಮಾಶ್ರೀ,

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಸ್ಯಾಂಡಲ್​ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಭಾಗಿಯಾಗುತ್ತಾರೆ. ನಿನ್ನೆಯೂ ಅರ್ಧ ದಾರಿಗೆ ಬಂದು ವಾಪಸ್ ಹೋಗಿದ್ದಾರೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಎಲ್ಲರೂ ಇದಕ್ಕೆ ಕೈ ಜೋಡಿಸಬೇಕು. ಬಿಜೆಪಿಯವರೇ ಇದರಲ್ಲಿ ರಾಜಕೀಯ ಮಾಡದೇ ಯೋಜನೆ ಜಾರಿ ಮಾಡಲಿ. ಈ ಪಾದಯಾತ್ರೆ ಯಶಸ್ವಿಯಾಗಿ ಸಾಗಲಿದೆ. ಕನ್ನಡ ಚಿತ್ರರಂಗ ಕೂಡ ಕೈ ಜೋಡಿಸಲಿದೆ ಎಂದು ಟಿವಿ9ಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿಕೆ …

Read More »

ಸೈನಿಕ ಶಾಲೆ ಪ್ರವೇಶಕ್ಕೆ ಭಾನುವಾರ (ಜ.9) ನಡೆದ ಪರೀಕ್ಷೆಯಲ್ಲಿ ಗೋಲ್​ಮಾಲ್

ಬೆಳಗಾವಿ: ಸೈನಿಕ ಶಾಲೆ ಪ್ರವೇಶಕ್ಕೆ ಭಾನುವಾರ (ಜ.9) ನಡೆದ ಪರೀಕ್ಷೆಯಲ್ಲಿ ಗೋಲ್​ಮಾಲ್ ನಡೆದಿದೆ ಎಂದು ಹಲವು ಪೋಷಕರು ದೂರಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ಪರೀಕ್ಷಾ ಕೇಂದ್ರ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಯಲ್ಲಿ ಪ್ರವೇಶ ಪರೀಕ್ಷೆ …

Read More »

ಆಸ್ತಿ ಬರೆಸಿಕೊಂಡು ಮನೆಯಿಂದ ಹೊರ ಹಾಕಿದ್ದ ಮಕ್ಕಳು, ಸೊಸೆಯಂದಿರಿಗೆ ತಕ್ಕ ಪಾಠ ಕಲಿಸಿದ ತಾಯಿ

ಹಾವೇರಿ: ಇಡೀ ಜೀವನ ಮಕ್ಕಳಿಗಾಗಿ (Children) ದುಡಿಯುವ, ಆಸ್ತಿ (Property) ಮಾಡುವ ಹೆತ್ತವರನ್ನು (Parent) ಇಳಿವಯಸ್ಸಿನಲ್ಲಿ ಮಕ್ಕಳು ಸರಿಯಾಗಿ ನೋಡಿಕೊಳ್ಳೋದಿಲ್ಲ ಎಂಬ ಸಮಸ್ಯೆ ಹೊಸದೇನು ಅಲ್ಲ. ಹೆತ್ತವರ ಆಸ್ತಿಯನ್ನೆಲ್ಲಾ ಪಡೆದ ಮಕ್ಕಳು ತಂದೆ-ತಾಯಿಯನ್ನು ಅವರದ್ದೇ ಮನೆಯಿಂದ ಹೊರ ಹಾಕಿರುವ ಘಟನೆಗಳು ನಮ್ಮ ಮಧ್ಯೆ ಸಾಕಷ್ಟಿವೆ. ಅಂತ ಕರುಣೆ ಇಲ್ಲ ಮಕ್ಕಳಿಗೆ ಬಿಸಿ ಮುಟ್ಟಿಸುವಂತ ಸುದ್ದಿ ಇದು. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡು ತಾಯಿಯನ್ನ ಮಕ್ಕಳು ಹೊರಹಾಕಿದ ಘಟನೆ ಹಾವೇರಿ ಜಿಲ್ಲೆಯ …

Read More »

ಹುಡುಗಿಯರ ಮಾರಾಟ ಗ್ಯಾಂಗ್ ಅರೆಸ್ಟ್: ವಯಸ್ಸಾದ ಪುರುಷರಿಗೆ ಬಾಲಕಿಯರ ಸೇಲ್

ಮಕ್ಕಳ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್‌ನ 3 ಮಹಿಳೆಯರು ಮತ್ತು 3 ಪುರುಷರನ್ನು ಜನವರಿ 9 ರಂದು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರನ್ನು ಮಾರಾಟ ಮಾಡಿ ವೃದ್ಧರನ್ನು ಮದುವೆಯಾಗಲು ಹಣಕ್ಕಾಗಿ ಆಮಿಷ ಒಡ್ಡಿದ್ದರು. ಇನ್ನೂ 5 ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಗೌತಮಬುದ್ಧ ನಗರ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ವಿಭಾಗದ ಡಿಸಿಪಿ ವೃಂದಾ ಶುಕ್ಲಾ ತಿಳಿಸಿದ್ದಾರೆ.   ಗೌತಮ್ ಬುದ್ಧ ನಗರ ಪೊಲೀಸರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅವರನ್ನು ವಯಸ್ಸಾದ ಪುರುಷರೊಂದಿಗೆ ಮದುವೆಗೆ …

Read More »

ಅಂಗವಿಕಲನಂತೆ ವೇಷ ಧರಿಸಿ ಭಿಕ್ಷಾಟನೆ,

ಬೆಂಗಳೂರು: ನಗರದಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ವೈರಲ್ (Viral video) ಆಗುತ್ತಿದೆ. ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಹಾಕಿ ಕೈಯಿಲ್ಲದಂತೆ ಹಾಗೂ ಮತ್ತೊಂದು ಕೈಯಲ್ಲಿ ಊರುಗೋಲು ಹಿಡಿದು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಸಾರ್ವಜನಿಕರೊಬ್ಬರ ಕೈಗೆ ಸಿಕ್ಕಿಬಿದ್ದಿರುವ ವಿಡಿಯೋ ಈಗ ವೈರಲ್ ಆಗಿದೆ.   ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿ (South End Circle) ನಕಲಿ ಅಂಗವಿಕಲರೊಬ್ಬರು ವಾಹನ ಸವಾರರ ಬಳಿ ಭಿಕ್ಷೆ …

Read More »

ಕೊಪ್ಪಳ: ಅಪಾಯಕಾರಿ ಹಾದಿಯಲ್ಲಿ ಬೆಟ್ಟ ಏರುವ ಭಕ್ತರು

ಕೊಪ್ಪಳ: ಹನುಮಮಾಲೆ ಮೂಲಕ ನಾಡಿನಾದ್ಯಂತ ಜನಪ್ರಿಯಗೊಂಡಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಪರ್ವತದ ಅಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ಸುರಕ್ಷತೆಯ ಸಮಸ್ಯೆ ಎದುರಾಗಿದೆ. ಅಂಜನಾದ್ರಿ ಏರಲು 524 ಮೆಟ್ಟಿಲುಗಳು ಇದ್ದು, ಹೋಗಿ, ಬರಲು ಒಂದೇ ಮಾರ್ಗ ಇರುವುದರಿಂದ ಅಪಾಯ ಸಂಭವಿಸುವ, ಕಾಲ್ತುಳಿತ ಉಂಟಾಗುವ ಭಯವಿದೆ. ಪ್ರತಿ ಶನಿವಾರ ಹನುಮಪ್ಪ ವಾರವಾಗಿರುವುದರಿಂದ 10 ಸಾವಿರಕ್ಕೂ ಅಧಿಕ ಭಕ್ತರು ದರ್ಶನಕ್ಕೆ ಬರುತ್ತಾರೆ. ಅಲ್ಲದೆ ಹುಣ್ಣಿಮೆ, ಅಮವಾಸ್ಯೆಯಂದು ಈ …

Read More »

ಚೀಟಿ‌ ಹೆಸರಿನಲ್ಲಿ ಲಕ್ಷಾಂತರ ರೂ. ಮೋಸ ಮಾಡಿರುವ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಾಗಿದೆ.

ಶಿವಮೊಗ್ಗ: ಚೀಟಿ‌ ಹೆಸರಿನಲ್ಲಿ ಬಿಸಿ ಊಟ ತಯಾರಕರಿಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.‌ ಸಾಗರ ತಾಲೂಕಿನ ಜೋಗದ ಶಾಲೆಯಲ್ಲಿ ಬಿಸಿ ಊಟ ತಯಾರು ಮಾಡುವ ಶಿವಮ್ಮ ಹಾಗೂ ಶೋಭಾ ಮೋಸ ಹೋದವರು. ಜೋಗದ ದೇವಿಕಾ ಹಾಗೂ ಅವರ ಮಗ ಚಂದನ್ ಚೀಟಿ ಹೆಸರಿನಲ್ಲಿ ಕೋಟ್ಯಂತರ ರೂ. ವಂಚಿಸಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಜೋಗದ ಟಿ.ಎಂ.ಶೆಡ್ ನಲ್ಲಿ ವಾಸವಾಗಿರುವ ದೇವಿಕಾ ಹಾಗೂ ಅವರ ಮಗ ಚಂದನ್, …

Read More »

ಗುಜರಾತ್‌ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಾಯಲ್ಲಿ ಕನ್ನಡ- ಕಕ್ಷಿದಾರ ಕಕ್ಕಾಬಿಕ್ಕಿ

ಅಹಮದಾಬಾದ್: ಹೈಕೋರ್ಟ್‌ ಸೇರಿದಂತೆ ಎಲ್ಲಾ ನ್ಯಾಯಾಲಯಗಳಲ್ಲಿಯೂ ಆಯಾ ರಾಜ್ಯಗಳ ಭಾಷೆಗಳನ್ನೇ ಕಡ್ಡಾಯ ಮಾಡಬೇಕು ಎಂದು ಕೆಲ ದಶಕಗಳಿಂದ ಹೋರಾಟ ನಡೆಯುತ್ತಲೇ ಇದೆ. ಅಧೀನ ಕೋರ್ಟ್‌ಗಳಲ್ಲಿ ಈ ನಿಯಮ ಪಾಲನೆ ಮಾಡುತ್ತಿದ್ದಾರೆಯಾದರೂ ಹೈಕೋರ್ಟ್‌ಗಳಲ್ಲಿ ಇದು ಕಷ್ಟ. ಇದಕ್ಕೆ ಕಾರಣ, ಬೇರೆ ಬೇರೆ ರಾಜ್ಯಗಳಿಂದ ಸ್ಥಳೀಯ ನ್ಯಾಯಮೂರ್ತಿಗಳು ನೇಮಕಗೊಳ್ಳುವ ಕಾರಣದಿಂದಾಗಿ ಹೈಕೋರ್ಟ್‌, ಸುಪ್ರೀಂಕೋರ್ಟ್‌ಗಳಲ್ಲಿ ಅಧಿಕೃತ ಭಾಷೆಯನ್ನಾಗಿ ಇಂಗ್ಲಿಷ್‌ ಬಳಕೆ ಮಾಡಲಾಗುತ್ತಿದೆ. ಅಪರೂಪ ಪ್ರಕರಣಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳು ಅದೇ ರಾಜ್ಯದವರಾಗಿದ್ದು, ಅಲ್ಲಿಯ ಭಾಷೆ ಬರುತ್ತಿದ್ದರೆ ಸ್ಥಳೀಯ …

Read More »