Breaking News

ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ವಿರುದ್ಧ 8.5 ಕೋಟಿ ರೂ. ಬೇನಾಮಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ದಾಖಲಿಸಿರುವ ಪ್ರಕರಣದ ವಿಚಾರಣೆ ಆರಂಭವಾಗಿದೆ. ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ. ಶಿವಕುಮಾರ್ ಮತ್ತು ಐವರಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಜನ ಪ್ರತಿನಿಧಿಗಳ …

Read More »

ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅರೆಸ್ಟ್ ಆಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್ ಅವರು ವಾದ ಮಂಡಿಸಿದರು. ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.  ಹಿನ್ನೆಲೆ ಏನು?: ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ …

Read More »

ರಾಜ್ಯದಲ್ಲೂ ಶುರುವಾಯ್ತು ಡೀಸೆಲ್‌ ಅಭಾವ , ಡೀಸೆಲ್ ಸಿಗದೆ ಗ್ರಾಹಕರ ಪರದಾಟ

ಬೇಸಿಗೆಯಲ್ಲಿ ನೀರಿಗೆ ಅಭಾವ ಆಗೋದು ಸಹಜ, ಆದರೀಗ ರಾಜ್ಯದಲ್ಲಿ ಡೀಸೆಲ್ ಅಭಾವ ಶುರುವಾಗಿದೆ. ರಾಜ್ಯದ ಬಹುತೇಕ ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಡೀಸೆಲ್ ಕೊರತೆ ಎದುರಾಗಿದೆ. ಕಳೆದ 1 ವಾರದಿಂದ ಸಮಸ್ಯೆ ಉಂಟಾಗುತ್ತಿದ್ದು,ಬಿಪಿಸಿಎಲ್ ಬಂಕ್‌ನಲ್ಲಿ ಡೀಸೆಲ್ ನೋ ಸ್ಟಾಕ್ ಬೋರ್ಡ್ ಕಾಣುತ್ತಿವೆ. ಬಹುತೇಕ ಬಿಪಿಸಿಎಲ್ ಬಂಕ್‌ಗಳಲ್ಲಿ ಇದೇ ಸಮಸ್ಯೆ ಎದುರಾಗಿದೆ. ಇದ್ರಿಂದ ಅಕ್ಕ ಪಕ್ಕದ ಇಂಡಿಯನ್ ಆಯಿಲ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸೇರಿದಂತೆ ಖಾಸಗಿ ಬಂಕ್‌ಗಳತ್ತ ಗ್ರಾಹಕರು ಮುಖ ಮಾಡಿದ್ದಾರೆ.  ಬಿಪಿಸಿಎಲ್ …

Read More »

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ.

ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ. ಯಡಿಯೂರಪ್ಪನವರು, ಸಂಘ ಪರಿವಾರ, ಪಕ್ಷದ ಹಿರಿಯರ ಆಶೀರ್ವಾದ ಅವರ ಮೇಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ವಿಜಯೇಂದ್ರಗೆ ಎಂಎಲ್‍ಸಿ ಟಿಕೆಟ್ ತಪ್ಪಿದ ವಿಚಾರಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ನಗರ ಬಿಜೆಪಿ ಕಚೇರಿಯಲ್ಲಿ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದ ಉಪಾಧ್ಯಕ್ಷನಾಗಿ ವಿಜಯೇಂದ್ರ ಸಧ್ಯ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ಇರೋದರಿಂದ ಇಡೀ …

Read More »

ನಿರಾಣಿ ಗ್ರುಪ್ ದೇಶದಲ್ಲಿ ಮೊದಲನೇ ಗ್ರುಪ್ ಎಂಬುದು ನಿಶ್ಚಿತವಾಗಿದೆ. ಈವರೆಗೆ 72 ಸಾವಿರ ಜನರಿಗೆ ನಾವು ಉದ್ಯೋಗ ಕೊಟ್ಟಿದ್ದೇವೆ.

ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರಿಗೆ ನಿರಾಣಿ ಗ್ರುಪ್ ದೇಶದಲ್ಲಿ ಮೊದಲನೇ ಗ್ರುಪ್ ಎಂಬುದು ನಿಶ್ಚಿತವಾಗಿದೆ. ಈವರೆಗೆ 72 ಸಾವಿರ ಜನರಿಗೆ ನಾವು ಉದ್ಯೋಗ ಕೊಟ್ಟಿದ್ದೇವೆ. 20 ವರ್ಷದ ಅವಧಿಯಲ್ಲಿ 72 ಸಾವಿರ ಉದ್ಯೋಗ ಕೊಡುವುದು ಸಣ್ಣ ಮಾತಲ್ಲ. ಕೆಲಸ ಮಾಡಲು ಇನ್ನು ಕಾಲಾವಕಾಶವಿದೆ. ಎಲ್ಲಾ ರಂಗಗಳಲ್ಲಿ ಕೆಲಸ ಮಾಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ …

Read More »

ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು: ರಾಹುಲ್ ಜಾರಕಿಹೊಳಿ

ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. ಈ ಕಾರ್ಯಕ್ರಮದ …

Read More »

ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ.

ಬೆಳಗಾವಿ: ‘ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮಸೀದಿ ವಿಚಾರವಾಗಿ ವಿವಾದ ಸೃಷ್ಟಿಸುತ್ತಿದೆ’ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಘಟಕದ ಅಧ್ಯಕ್ಷ ದಸ್ತಗೀರ್ ಅಗಾ ಆರೋಪಿಸಿದರು.   ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಬಿಜೆಪಿ ವೈಫಲ್ಯ ಕಂಡಿದೆ. ಇದನ್ನು ಮರೆಮಾಚಿ, …

Read More »

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯ

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಕವಿ ಕುವೆಂಪುರವರನ್ನು ನಿಂದಿಸಿ ಅವಮಾನ ಮಾಡಿದ ಕುರಿತಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯನ್ನು ವಜಾಗೊಳಿಸುವಂತೆ ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ರೋಹಿತ್ ಚಕ್ರತೀರ್ಥರ …

Read More »

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇ

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇರಿದ್ದು, ಬಿಜೆಪಿ ಸರ್ಕಾರ ಬೆಲೆಏರಿಕೆ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲು ಮಂದಿರ ಮಸೀದಿ ವಿವಾದಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ, ಬಾಪಟ್ ಗಲ್ಲಿಯಲ್ಲಿರುವ ಶಾಹಿ ಮಸೀದಿ ಬ್ರಾಹ್ಮಣರು ಮುಸ್ಲಿಮರು ಸೇರಿ ಕಟ್ಟಿದ್ದಾರೆ. ಬಿಜೆಪಿ ಸರ್ಕಾರ …

Read More »

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ

ಬೆಂಗಳೂರು: 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ್ ಗೋಯಲ್​ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್​ಎನ್ ಪ್ರಸಾದ್​ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.   ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ರಾಮ್ …

Read More »