Breaking News

ನಾಳೆ ಚಂದ್ರನ ಮೇಲೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌

ನವದೆಹಲಿ: ಮಾ.4ರಂದು ಚಂದ್ರನ ಮೇಲ್ಮೈ ಗೆ 3 ಟನ್‌ ತೂಕದ ರಾಕೆಟ್‌ ಒಂದು ಅಪ್ಪಳಿಸಲಿದೆ. ರಾಕೆಟೊಂದರ 2ನೇ ಹಂತದ ಭಾಗ ಬೀಳುತ್ತಿರಬಹುದು, ಇದರ ಪರಿಣಾಮ ಚಂದ್ರನಲ್ಲಿಯ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್‌ ಗ್ರೇ ಅಭಿಪ್ರಾಯಪಟ್ಟಿದ್ದಾರೆ.   ಒಂದು ಅಂದಾಜಿನ ಪ್ರಕಾರ, ಚೀನಾ 10 ವರ್ಷದ ಹಿಂದೆ ಬಾಹ್ಯಾಕಾಶಕ್ಕೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು. ಆದ್ದರಿಂದ ಇದು ಬೀಳುತ್ತಿದೆ ಎನ್ನಲಾಗಿದೆ. ಆದರೆ ಖಚಿತ ಕಾರಣ ಯಾರಿಗೂ ಗೊತ್ತಿಲ್ಲ. ಇದು ಅಪ್ಪಳಿಸಿದ ನಂತರ ಇಸ್ರೋದ …

Read More »

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಎರಡು ಕೋಟಿ ರೂ. ನೆರವು

ಶಿವಮೊಗ್ಗದಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ.   ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ …

Read More »

ಉಕ್ರೇನ್‌ ಅಧ್ಯಕ್ಷರನ್ನು ಕೊಲ್ಲಲು ಬಂದಿದ್ದವರ ಹತ್ಯೆ

ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಅವರನ್ನು ಕೊಲ್ಲಲು ಆಗಮಿಸಿದ್ದ ಚೆಚೆನ್ಯಾ ಮೂಲದ ಹಂತಕರ ಗುಂಪೊಂದನ್ನು ಸಂಪೂರ್ಣವಾಗಿ ನಾಶ ಮಾಡಿರುವುದಾಗಿ ಉಕ್ರೇನ್‌ನ ರಾಷ್ಟ್ರೀಯ ಭದ್ರತೆ ಹಾಗೂ ರಕ್ಷಣ ಕೌನ್ಸಿಲ್‌ನ ಮುಖ್ಯಸ್ಥರಾದ ಒಲೆಕ್ಸಿಯ್‌ ಡ್ಯನಿಲೊವ್‌ ತಿಳಿಸಿದ್ದಾರೆ. ಉಕ್ರೇನ್‌ನ ರಾಷ್ಟ್ರೀಯ ಟೆಲಿವಿಶನ್‌ ವಾಹಿನಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ರಷ್ಯಾ ಗುಪ್ತಚರ ಇಲಾಖೆಯಲ್ಲಿರುವ, ಯುದ್ಧ ಮಾಡುವ ಮನಸ್ಸಿಲ್ಲದ ಅಧಿಕಾರಿಗಳು ಉಕ್ರೇನ್‌ನ ಅಧಿಕಾರಿಗಳಿಗೆ ಚೆಚೆನ್ಯಾದಿಂದ ಬಂದಿದ್ದ ಈ ಹಂತಕರ ಗುಂಪಿನ ಬಗ್ಗೆ ಮಾಹಿತಿ …

Read More »

ನಾಳೆ ಮಧ್ಯಾಹ್ನ 12.30 ಕ್ಕೆ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಅವರು ತಮ್ಮ ಮೊದಲ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ.ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ …

Read More »

ನೀಟ್ ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನ: H.D.K.

ನೀಟ್ ವ್ಯವಸ್ಥೆಯಿಂದ ಬಡ, ಮಧ್ಯಮ ವರ್ಗ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಹಾವೇರಿ ಮೂಲದ ನವೀನ್ ಉಕ್ರೇನ್‍ನಲ್ಲಿ ಸಾವನ್ನಪ್ಪಿರುವ ಕುರಿತು ಸರಣಿ ಟ್ವೀಟ್ ಮೂಲಕ ನೀಟ್ ವಿರುದ್ಧ ಸಿಡಿದೆದ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ ವಿದ್ಯಾರ್ಥಿಗಳು ಮತ್ತು ಪೆÇೀಷಕರ ಪಾಲಿಗೆ …

Read More »

ಉತ್ತರಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢರ ಮಹಾರಥೋತ್ಸವವು ಬುಧವಾರ ಸಂಜೆ ಲಕ್ಷಾಂತರ ಭಕ್ತರ ಶ್ರದ್ಧಾ ಭಕ್ತಿ, ಸಡಗರ, ಸಂಭ್ರಮದಿಂದ ನಡೆಯಿತು

ಉತ್ತರಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢರ ಮಹಾರಥೋತ್ಸವವು ಬುಧವಾರ ಸಂಜೆ ಲಕ್ಷಾಂತರ ಭಕ್ತರ ಶ್ರದ್ಧಾ ಭಕ್ತಿ, ಸಡಗರ, ಸಂಭ್ರಮದಿಂದ ನಡೆಯಿತು. ಲಕ್ಷಕ್ಕೂ ಅಧಿಕ ಭಕ್ತ ಸಮೂಹ ಈ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಧನ್ಯತಾಭಾವ ಅನುಭವಿಸಿದರು. ಸಿದ್ಧಾರೂಢರ ಮಹಾರಥೋತ್ಸಕ್ಕೆ ಉತತ್ತಿ, ಬಾಳೆ, ಬೇಡಿದ ವರ್ ಸಿದ್ದಿಯಾಗಲಿ ಎಂದು ಬೇಡಿಕೊಂಡು ಎಸೆದರು. ಮಹಾರಥೋತ್ಸವದಲ್ಲಿ ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ ಸೇರಿ ರಾಜ್ಯದ ವಿವಿಧೆಡೆಯ ಭಕ್ತರು ಮಾತ್ರವಲ್ಲದೆ, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡುಗಳಿಂದಲೂ ಭಕ್ತಸಾಗರವೇ …

Read More »

ಅಣ್ಣನಿಂದ ತಮ್ಮನ ಭೀಕರ ಕೊಲೆ

ಅಣ್ಣನಿಂದ ತಮ್ಮನ ಕೊಲೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಕುದುರಗುಂಡ ಗ್ರಾಮದಲ್ಲಿ ನಡೆದಿದೆ. ಸಾಹೇಬಗೌಡ ಚನ್ನಬಸಪ್ಪಗೌಡ ಹದಗಲ್ಲ (27)ಮೃತ ದುರ್ದೈವಿಯಾಗಿದ್ದು ಈತನಿಗೆ ಎರಡು ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ನಿಂಗನಗೌಡ ಚನ್ನಬಸಪ್ಪಗೌಡ ಹದಗಲ್ಲ ತಮ್ಮನನ್ನು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ಹೊಡೆದು ಪರಾರಿಯಾದ ಘಟನೆ ಗ್ರಾಮದಲ್ಲಿ ನಡೆದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ‌. ಸ್ಥಳಕ್ಕೆ ಕಲಕೇರಿ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಉಕ್ರೇನ್​​ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು!

ನವದೆಹಲಿ: ಯುದ್ಧಪೀಡಿತ ಉಕ್ರೇನ್​​ನಿಂದ ಇಂದು ಕೂಡ ನೂರಾರು ಜನರು ತಾಯ್ನಾಡಿಗೆ ವಾಪಸ್​​ ಆಗಿದ್ದಾರೆ. ಅನೇಕ ವಿದ್ಯಾರ್ಥಿಗಳನ್ನ ಹೊತ್ತು ವಿಮಾನವೊಂದು ದೆಹಲಿಯ ಏರ್​ಪೋರ್ಟ್​​ಗೆ ಬರುತ್ತಿದ್ದಂತೆ ಮಕ್ಕಳನ್ನ ತಬ್ಬಿಕೊಂಡು ಪೋಷಕರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ. ಕಳೆದ ಏಳು ದಿನಗಳಿಂದ ಉಕ್ರೇನ್​​ನ ವಿವಿಧ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು, ಪರಿಣಾಮ ಸಾವಿರಾರು ಭಾರತೀಯರು ತೊಂದರೆಗೊಳಗಾಗಿದ್ದಾರೆ. ಅವರನ್ನ ಅಲ್ಲಿಂದ ಕರೆತರುವ ಪ್ರಯತ್ನ ನಡೆಸಿರುತ್ತಿರುವ ಕೇಂದ್ರ ಸರ್ಕಾರ ಆಪರೇಷನ್​ ಗಂಗಾ ಯೋಜನೆ ಹಮ್ಮಿಕೊಂಡಿದೆ.

Read More »

ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ

ನೆಲಮಂಗಲ: ವ್ಯವಸಾಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದು ನೆಲಮಂಗಲ ಟೌನ್ ಪೊಲೀಸರ ಅತಿಥಿಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ದೊಡ್ಡತರಹಳ್ಳಿಯ ಸುನಿಲ್ ಅಲಿಯಾಸ್ ಸುನಿ (29) ಬಂಧಿತ ಆರೋಪಿಯಾಗಿದ್ದು, ಈತನಿಂದ ಒಟ್ಟು 11ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಊರಲ್ಲಿ ವ್ಯವಸಾಯ ಮಾಡ್ಕೊಂಡಿದ್ದ ಆರೋಪಿ ಸುನೀಲ್ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ. ಈತ ನೆಲಮಂಗಲ, ಮಾದನಾಯಕನಹಳ್ಳಿ, ಪೀಣ್ಯ, ಹಾಸನ , …

Read More »

ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು. ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್​​ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್​​ ಕರೆತರುವ ಬಗ್ಗೆ …

Read More »