Breaking News

ಎಸ್​​ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್​ಗಳು.

ಬೆಂಗಳೂರು: ಪಿಎಸ್​ಐ ನೇಮಕಾತಿಗೆ ಅಂಟಿಕೊಂಡಿರುವುದು ಅಲ್ಲೊಂದು, ಇಲ್ಲೊಂದು ಅಕ್ರಮದ ಕಪುಪಚುಕ್ಕೆಯಲ್ಲ. ಬದಲಿಗೆ ಭ್ರಷ್ಟಾಚಾರದ ಕೂಪದಲ್ಲಿ ಉನ್ನತ ಹಂತದ ಅಧಿಕಾರಿಗಳಿಂದ ಕೆಳಸ್ತರದ ಸಿಬ್ಬಂದಿವರೆಗೆ ಎಲ್ಲರೂ ಮಿಂದೆದ್ದಿದ್ದಾರೆ. ಮೇಲಿದ್ದವರ ಅಣತಿ ಮೇರೆಗೆ ಹುದ್ದೆಗಳ ಮಾರಾಟ ನಡೆದಿದೆ ಎಂಬುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ.   ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಸಬ್ ಇನ್​ಸ್ಪೆಕ್ಟರ್ ಅಕ್ರಮ ನೇಮಕಾತಿ ಹಗರಣದಲ್ಲಿ 50 ಕೋಟಿ ರೂ.ಗಳಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಾಮಮಾರ್ಗದಲ್ಲಿ ಸಬ್ ಇನ್​ಸ್ಪೆಕ್ಟರ್ …

Read More »

ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಯನ್ನು …

Read More »

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ತಳಿ ಪ್ರಕರಣ ಪತ್ತೆ

ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿಯಾಗಿರುವ ಓಮಿಕ್ರಾನ್ ಬಿಎ.4 ಉಪತಳಿ 4 ರೋಗಿಗಳಲ್ಲಿ ಪತ್ತೆಯಾಗಿದೆ. ಇನ್ನೊಂದು ಓಮಿಕ್ರಾನ್‌ನ ಹೊಸ ಉಪತಳಿ ಬಿಎ.5 3 ರೋಗಿಗಳಲ್ಲಿ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಹೆಚ್ಚು ಅಪಾಯಕಾರಿ ಅಲ್ಲದಿರುವುದರಿಂದ ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ …

Read More »

ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ .

ಬೆಳಗಾವಿ: ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದು ಬೆಳಗಾವಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಬಸವಣ್ಣನವರ ಅನುಭವ ಮಂಟಪ ಕುರಿತು ಮಾತನಾಡಿದ ಅವರು, ವಿಶ್ವದ ಮೊದಲ ಸಂಸತ್ತು ಬಸವಣ್ಣನವರ ಅನುಭವ ಮಂಟಪ. ಬಸವಣ್ಣನವರ ಮೂಲ ಅನುಭವ ಮಂಟಪ ಪೀರಭಾಷಾ ಬಂಗ್ಲೆಯಾಗಿದೆ. ನಾವೆಲ್ಲ ಇದನ್ನು ನೋಡಿ ಸುಮ್ಮನ್ನೆ ಕುಳಿತುಕೊಂಡರೆ ಹೇಗೆ? ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸರ್ಕಾರ ಅನುಭವ ಮಂಟಪದ ಪೂರ್ತಿ ಜವಾಬ್ದಾರಿ ತೆಗೆದುಕೊಂಡು ಅಭಿವೃದ್ಧಿ ಮಾಡಬೇಕು …

Read More »

ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಆಗಿ ಈರೇಶ್ ಅಂಚಟಗೇರಿ ಆಯ್ಕೆ

ಹುಬ್ಬಳ್ಳಿ: ಇಂದು ನಡೆದಂತ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದೆ. ನೂತನ ಮೇಯರ್ ಆಗಿ ಬಿಜೆಪಿಯ ಈರೇಶ್ ಅಂಚಟಗೇರಿ ಆಯ್ಕೆಯಾಗಿದ್ದಾರೆ.   ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆಯಲ್ಲಿ ಇಂದು 50 ಮತಗಳ ಅಂತರದಿಂದ ಈರೇಶ್ ಅಂಚಟಗೇರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್ ಅಧಿಕಾರದ ಗದ್ದುಗೆ ಏರಿದಂತೆ ಆಗಿದೆ.   ಅಂದಹಾಗೇ ಇಂದು ಹುಬ್ಬಳ್ಳಿ-ಧಾರವಾಡ ಮೇಯರ್ ಆಗಿ …

Read More »

ಪತಿಯಿಂದಲೇ ಪತ್ನಿ ಹತ್ಯೆ- ಪೊಲೀಸರಿಗೆ ಶರಣಾದ ಆರೋಪಿ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಲದಕುಪ್ಪೆ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ನಡೆದಿದೆ. ಮಹದೇವಪ್ಪ (55) ಬಂಧಿತ ಆರೋಪಿ ಹಾಗೂ ಮಹದೇವಮ್ಮ (45) ಮೃತ ಮಹಿಳೆ. ದಂಪತಿ ಕಿಲಗೆರೆ ಹಾಗೂ ಮಾದಲವಾಡಿ ಗ್ರಾಮದ ನಡುವೆ ಇರುವ ಬೇಲದಕುಪ್ಪೆಯ ಜಮೀನೊಂದರಲ್ಲಿ ವಾಸವಾಗಿದ್ದರು. ಇವರ ನಡುವೆ ಇಂದು ಮುಂಜಾನೆ ಏಕಾಏಕಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಮನೆಯಲ್ಲಿದ್ದ ಪತ್ನಿ ಮಹದೇವಮ್ಮರನ್ನು ಪತಿ ಮಹದೇವಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ …

Read More »

S.S.L.C.ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ಸಿಂಧನೂರಿನ ವಿದ್ಯಾರ್ಥಿನಿ ಬಸವಲೀಲಾ ಆಧಾರ್ ಕಾರ್ಡ್ ಇಲ್ಲದೆ ಮುಂದಿನ ಶಿಕ್ಷಣಕ್ಕೆ ಸಮಸ್ಯೆ

ರಾಯಚೂರು: ಎಸ್‌ಎಸ್‌ಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ಸಿಂಧನೂರಿನ ವಿದ್ಯಾರ್ಥಿನಿ ಬಸವಲೀಲಾ ಆಧಾರ್ ಕಾರ್ಡ್ ಇಲ್ಲದೆ ಮುಂದಿನ ಶಿಕ್ಷಣಕ್ಕೆ ಸಮಸ್ಯೆ ಎದುರಿಸುತ್ತಿದ್ದಾಳೆ. 2016 ರಿಂದಲೂ ಅರ್ಜಿ ಹಾಕಿ ಅಲೆದಾಡಿ ಸುಸ್ತಾಗಿರುವ ಪ್ರತಿಭಾವಂತ ವಿದ್ಯಾರ್ಥಿನಿ ಬಸವಲೀಲಾ ಇದುವರೆಗೆ 11 ಬಾರಿ ಅರ್ಜಿ ಹಾಕಿದ್ದಾಳೆ. ಆದರೂ ಇಲ್ಲಿಯವೆಗೆ ಆಧಾರ್ ಕಾರ್ಡ್ ಸಿಕ್ಕಿಲ್ಲ. ಬಡತನದ ಕುಟುಂಬದ ವಿದ್ಯಾರ್ಥಿನಿಗೆ ಯಾವುದೇ ಸೌಲಭ್ಯಗಳು ಇಲ್ಲದಿದ್ದರೂ ಸರ್ಕಾರಿ ಶಾಲೆಯಲ್ಲೇ ಓದಿ 625 ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ …

Read More »

ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ: ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ ಪತಿ!

ಮೈಸೂರು: ಫಾಸ್ಟ್ ಹಾಗೂ ಬ್ಯೂಸಿ ಲೈಫ್ ಇಂದಿನ ಯುವ ದಂಪತಿಗಳು ರೆಡಿ ಟು ಈಟ್ ಫುಡ್ ಗಳ ಮೇಲೆ ಅವಲಂಬಿತರಾಗುತ್ತಿರುವುದು ಹೆಚ್ಚಾಗಿದೆ. ಆದರೆ, ಈ ಬೆಳವಣಿಗೆ ಕೆಲವರಲ್ಲಿ ಕಸಿವಿಸಿಯುಂಟು ಮಾಡಿದೆ. ಪತಿಯೊಬ್ಬ ತನ್ನ ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ ಮಾಡಿ ಹಾಕುತ್ತಿದ್ದಾಳೆಂದು ಬೇಸತ್ತ ಪತಿಯೊಬ್ಬ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.   ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ …

Read More »

ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್‌: ಚುನಾವಣ ಆಯೋಗ

ಬೆಂಗಳೂರು: ಅಸ್ತಿತ್ವ ಕಳೆದುಕೊಂಡಿರುವುದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಪರಿಶೀಲನೆಯಿಂದ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 8 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಕ್ಷಗಳ ಪಟ್ಟಿಯಿಂದ ತೆಗದು ಹಾಕಲು ಚುನಾವಣ ಆಯೋಗ ತೀರ್ಮಾನಿಸಿದೆ.   ಇಂಡಿಯನ್‌ ಓಟರ್ ವೆಲ್‌ಫೇರ್‌ ಪಾರ್ಟಿ, ಕರ್ನಾಟಕ ಕ್ರಾಂತಿ ದಳ, ನವನಿರ್ಮಾಣ ನಾಗರಿಕ ಸಮಿತಿ, ರಾಷ್ಟ್ರೀಯ ಜನಾಂದೋಲನ ಪಕ್ಷ, ಸ್ವರ್ಣ ಯುಗ ಪಾರ್ಟಿ, ಟಿಪ್ಪು ಸುಲ್ತಾನ್‌ ನ್ಯಾಷನಲ್‌ ರಿಪಬ್ಲಿಕ್‌ ಪಾರ್ಟಿ, ಯುನೈಟೆಡ್‌ ಇಂಡಿಯನ್‌ ಡೆಮಾಕ್ರಟಿಕ್‌ ಕೌನ್ಸಿಲ್‌, ಅರಸ್‌ ಸಂಯುಕ್ತ …

Read More »