Breaking News

ಕಾಲ್ತುಳಿತ ಪ್ರಕರಣದಲ್ಲಿ ನಿಖಿಲ್ ಸೋಸಲೆ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ವಾದ, ವಿಚಾರಣೆ ಮುಂದೂಡಿಕೆ

ಬೆಂಗಳೂರು: ರಾಯಲ್ಸ್ ಚಾಲೆಂಜರ್ಸ್ ವಿಜಯೋತ್ಸವದಲ್ಲಿ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿರುವ ಘಟನೆ ಸಂಬಂಧ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಆರ್​ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ (ಬುಧವಾರ) ಮುಂದೂಡಿದೆ. ನಿಕಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆ …

Read More »

ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್​ ಚಾಲಕರೇ ಹುಷಾರ್

ದಾವಣಗೆರೆ: ನಗರದಲ್ಲಿ ಶಾಲಾ ಮಕ್ಕಳನ್ನು ಸಾಮರ್ಥ್ಯಕ್ಕಿಂತ ಅಧಿಕ ಸಂಖ್ಯೆಯಲ್ಲಿ ಆಟೋ, ವ್ಯಾನ್​​ಗಳಲ್ಲಿ ಶಾಲೆ ಕರೆದೊಯ್ಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.‌ ಇದು ಅಪಾಯಕಾರಿ ಆಗಿದೆ. ಇದನ್ನು ಮನಗಂಡ ದಾವಣಗೆರೆ ಸಂಚಾರಿ ಪೊಲೀಸರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಖುದ್ದು ಎಸ್​ಪಿ ಉಮಾಪ್ರಶಾಂತ್ ಅವರೇ ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆಗಿಳಿದಿದ್ದಾರೆ. ದಾವಣಗೆರೆ ನಗರಾದ್ಯಂತ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಠಾಣೆಗಳ ಪೊಲೀಸರು, ನಿಯಮ ಉಲ್ಲಂಘಿಸುವವರ ಬಲೆಗೆ ಕಾದು ಕೂತಿದ್ದಾರೆ. ಶಾಲೆಯಿಂದ ಮನೆಗೆ, ಮನೆಯಿಂದ ‌ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ …

Read More »

ಹಾವೇರಿ ಗೋಲಿಬಾರ್​ನಲ್ಲಿ ಮೃತರಾದವರು

ಹಾವೇರಿ: ಹಾವೇರಿ ಗೋಲಿಬಾರ್​ ನಡೆದು ಇಂದಿಗೆ 17 ವರ್ಷ. 2008ರ ಜೂನ್​ 10 ರಂದು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ನಿಯಂತ್ರಣಕ್ಕೆ ಸಿಗದಿದ್ದಾಗ ಪೊಲೀಸರು ಗೋಲಿಬಾರ್ ನಡೆಸಿದ್ದರು. ಗೋಲಿಬಾರ್​ಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಎನ್ನುವವರು ಸಾವನ್ನಪ್ಪಿದ್ದರು. ಘಟನೆಯಲ್ಲಿ 10ಕ್ಕೂ ಅಧಿಕ ಜನ ಗುಂಡೇಟಿನಿಂದ ಗಾಯಗೊಂಡಿದ್ದರು. ಈ ಘಟನೆ ನಡೆದು ಇಂದಿಗೆ 17 ವರ್ಷ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಇಂದು …

Read More »

ಆರ್​ಟಿಒ ಕಚೇರಿಯ 16 ಲಕ್ಷ ಹಣದೊಂದಿಗೆ ಎಸ್​​​ಡಿಎ ಸಿಬ್ಬಂದಿ ನಾಪತ್ತೆ

ಬಳ್ಳಾರಿ: ಬಳ್ಳಾರಿಯ ಆರ್‌ಟಿಒ ಕಚೇರಿಯಲ್ಲಿ ಟ್ರೇಜರಿ ಸೆಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ರವಿ ತಾವರಖೇಡ 16 ಲಕ್ಷ ರೂ.ಗಳ ಹಣದೊಂದಿಗೆ ನಾಪತ್ತೆಯಾಗಿರುವ ಆರೋಪ ಕೇಳಿಬಂದಿದೆ. ಆರ್‌ಟಿಒ ಕಚೇರಿಯ ಅಧೀಕ್ಷಕ ವೀರೇಶ್ ಅವರು ನೀಡಿದ ದೂರಿನ ಮೇರೆಗೆ ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 316(2), 318 (4) ಪ್ರಕಾರ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರ ವಿವಿಧ ಸೇವೆಗಳಿಂದ ಸಂಗ್ರಹಿಸಲಾದ ಹಣವನ್ನು ಆಯಾ ದಿನವೇ …

Read More »

ಶುಕ್ರವಾರ ಕೋರ್ಟ್​ಗೆ ಹಾಜರಾಗ್ತೇನೆ: ಶಾಸಕ ವಿನಯ ಕುಲಕರ್ಣಿ

ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ …

Read More »

ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ

ಚಿಕ್ಕೋಡಿ: ಯುವಕನೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗುರುರಾಜ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ ಮಾಹಿತಿ ನೀಡಿ, “ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ …

Read More »

ಧಾರವಾಡದ ಕ್ಯಾರಕೊಪ್ಪದಲ್ಲಿ ಶಿಕ್ಷಕರ ಮನೆಗೆ ಕನ್ನ…. 70 ಗ್ರಾಂ ಚಿನ್ನಾಭರಣ, ನಗದು ಲೂಟಿ

ಧಾರವಾಡದ ಕ್ಯಾರಕೊಪ್ಪದಲ್ಲಿ ಶಿಕ್ಷಕರ ಮನೆಗೆ ಕನ್ನ…. 70 ಗ್ರಾಂ ಚಿನ್ನಾಭರಣ, ನಗದು ಲೂಟಿ ರಜೆ ಮೇಲೆ ಬೇರೆ ಊರಿಗೆ ತೆರಳಿದ್ದ ಇಬ್ಬರು ಶಿಕ್ಷಕರ ಮನೆಗಳಿಗೆ ಕನ್ನ ಹಾಕಿದ ಚಾಲಾಕಿ ಖದೀಮ ಕಳ್ಳರು, ಮನೆಯಲ್ಲಿದ್ದ ಚಿನ್ನ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಧಾರವಾಡದ ಕ್ಯಾರಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ರಸ್ತೆಯಲ್ಲಿರುವ ಲೋಕನಾಥ್ ಮತ್ತು ಸೋಮನಗೌಡ ಪಾಟೀಲ್ ಎನ್ನುವವರ ಮನೆಯಲ್ಲೇ ಕಳ್ಳತನವಾಗಿದೆ. ಇಬ್ಬರು ವೃತಿಯಲ್ಲಿ ಶಿಕ್ಷಕರಾಗಿದ್ದು, …

Read More »

ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ

ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ: ಹೊಸ ಕನಸು ಬಿಚ್ಚಿಟ್ಟ ಶಾಂತೇಶ ಕಳಸಗೊಂಡ ವಿಜಯಪುರ: ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇನೆ. ಅಲ್ಲದೇ, ಈ ಭಾಗದ ಯುವಕರನ್ನು ಹೊಟೇಲ್ ಉದ್ಯಮದತ್ತ ಸೆಳೆಯಲು ಹೊಟೇಲ್ ಮ್ಯಾನೇಜಮೆಂಟ್ ಕೋರ್ಸ್ ತರಬೇತಿ ನೀಡಲು ಕಾರ್ಯೋನ್ಮುಖರಾಗಿರುವುದಾಗಿ ಉದ್ಯೋಗ ರತ್ನ ಪ್ರಶಸ್ತಿ ಪುರಸ್ಕೃತ ನಗರದ ಶುಭಶ್ರೀ ಗ್ರುಪ್ಸ್ ವ್ಯವಸ್ಥಾಪಕ ನಿರ್ದೇಶಕ ಶಾಂತೇಶ ಕಳಸಗೊಂಡ ಹೇಳಿದರು. ಇಂದು ಮಂಗಳವಾರ ನಗರದಲ್ಲಿ …

Read More »

ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ

ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ‌ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ‌ ಜರುಗಿತು. ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು …

Read More »

ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ

ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ ಕಾಗವಾಡ : ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ವತಿಯಿಂದ ಪ್ರತಿಯೊಬ್ಬರಿಗೆ ಬಸ್ಸ ಸೇವೆ ನೀಡಲು ವಿಶೇಷವಾಗಿ ಶ್ರಮಿಸುತ್ತಿದೆ ಅದರಲ್ಲಿ ಹೊಸದಾಗಿ ಉಗಾರ-ಮಂಗಸುಳಿ, ಈ ಮಾರ್ಗದಲ್ಲಿ ಅನೇಕ ಪ್ರಯಾಣಿಕರ ಬೇಡಿಕೆ ಗಮನದಲ್ಲಿ ತೆಗೆದುಕೊಂಡು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಸೋಮವಾರ ರಂದು ಉಗಾರ-ಮಂಗಸೂಳಿ ಮಾರ್ಗದಲ್ಲಿ ಪ್ರಾರಂಭಿಸಿದ್ದು ಇದರ ಪೂಜೆ ವಿಜಯಪುರ ಜ್ಞಾನಯೋಗ ಆಶ್ರಮದ ಬಸವಲಿಂಗ ಸ್ವಾಮೀಜಿ …

Read More »