ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ ತೋರಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ …
Read More »ಮೊಬೈಲ್ ಕಳೆದು ಹೋದರೆ, ಕಳ್ಳತನವಾದ್ರೆ ಚಿಂತೆ ಬೇಡ.. ಈ ‘APP’ ಹುಡುಕಿಕೊಡಲಿದೆ
ವಾರಾಣಸಿ(ಉತ್ತರ ಪ್ರದೇಶ): ಮೊಬೈಲ್ ಕಳೆದು ಹೋದರೆ ಅಥವಾ ಕಳ್ಳತನವಾದರೆ ಸಿಮ್ ಬ್ಲಾಕ್ ಮಾಡಿಸಿ, ಸುಮ್ಮನಾಗಿ ಬಿಡುತ್ತೇವೆ. ಆದರೆ, ವಾರಣಾಸಿಯ ಇಬ್ಬರು ಯುವಕರು ಕಂಡು ಹಿಡಿದಿರುವ ಆಯಪ್ನಿಂದ ನಾವು ಕಳೆದುಕೊಂಡಿರುವ ಫೋನ್ ವಾಪಸ್ ಪಡೆದುಕೊಳ್ಳಬಹುದಾಗಿದೆ. ಅದಕ್ಕೋಸ್ಕರ ಕಳೆದ ಒಂದು ವರ್ಷದಿಂದ ಅವರು ಶ್ರಮಪಟ್ಟಿದ್ದಾರೆ. ಮೊಬೈಲ್ ಕಳೆದು ಹೋದ್ರೆ, ಕಳ್ಳತನವಾದ್ರೆ ಚಿಂತೆ ಬೇಡ… ಈ ‘APP’ ಹುಡುಕಿಕೊಡಲಿದೆ ನಿಮ್ಮ ಫೋನ್!ಕಾಶಿಯ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕಳೆದ ಹೋದ ಮೊಬೈಲ್ ಫೋನ್ ಪತ್ತೆ ಹಚ್ಚುವ ಆಯಪ್ …
Read More »CM ಕನಸು ಕಾಣ್ತಿರೋ ಡಿ.ಕೆ.ಶಿವಕುಮಾರ್ ಮತ್ತೆ ಸಂಕಷ್ಟ.. ED ಚಾರ್ಜ್ಶೀಟ್ನಲ್ಲಿ ಏನಿದೆ?
ಕೆಪಿಸಿಸಿ ಸಾರಥಿಗೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಪ್ರಕರಣ ಮರುಜೀವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆ ತಯಾರಿಯಲ್ಲಿರೋ ಡಿಕೆ ಶಿವಕುಮಾರ್ಗೆ ಚಾರ್ಜ್ಶೀಟ್ ಶಾಕ್ ಎದುರಾಗಿದೆ. ಡಿ.ಕೆ.ಶಿವಕುಮಾರ್ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಾ, ಪಕ್ಷ ಸಂಘಟನೆ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕು ಅಂತಾ ಪಣ ತೊಟ್ಟಿದ್ದಾರೆ. ಸರ್ಕಾರ ರಚನೆ ಕಸರತ್ತಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವ್ರಂತೆ ಓಡಾಡ್ತಿದ್ದಾರೆ. ಆದ್ರೆ ಡಿಕೆ ಶಿವಕುಮಾರ್ ಅವರ ಈ …
Read More »ಗ್ರಾಮ ಒನ್ ಕೇಂದ್ರದಲ್ಲಿ ಬಸ್ ಪಾಸ್ ಪಡೆಯಲು ಅವಕಾಶ
ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಅದರಂತೆ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್ಪಾಸ್ ಅಪೇಕ್ಷಿಸುವ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ವಿದ್ಯಾರ್ಥಿಗೆ ಬಸ್ ಪಾಸ್ಗೆ ಅಗತ್ಯ ದಾಖಲೆ, ಶೈಕ್ಷಣಿಕ ಸಂಸ್ಥೆ ಕೆಎಸ್ಆರ್ಸಿ ಬಸ್ ಪಾಸ್ನಿಂದ ಘೋಷಣೆ ಪ್ರಮಾಣಪತ್ರ, ಆಧಾರ್ ಕಾರ್ಡ್, ಶುಲ್ಕ ಪಾವತಿಸಿದ …
Read More »ಶಿಕ್ಷಕರ ನೇಮಕಾತಿ ಪರೀಕ್ಷೆ; ಇನ್ನೆರಡು ದಿನದಲ್ಲಿ ಕೀ ಉತ್ತರ ಬಿಡುಗಡೆ
ಬೆಂಗಳೂರು, ಮೇ 26: ಶಿಕ್ಷಕ ನೇಮಕಾತಿಯ ಸಿಇಟಿ ಪರೀಕ್ಷೆಗಳು ಮುಗಿದಿದೆ. ಶಿಕ್ಷಣ ಇಲಾಖೆ ಇರಡು ಮೂರು ದಿನಗಳಲ್ಲಿ ಕೀ ಉತ್ತರವನ್ನು ಬಿಡುಗಡೆ ಮಾಡಲಿದೆ. 15,000 ಶಿಕ್ಷಕರು ಅಧಿಕೃತವಾಗಿ ಕೀ ಉತ್ತರಗಳು ಪ್ರಕಟವಾದ ನಂತರ ತಮ್ಮ ಓಎಂಆರ್ ಕಾಪಿಗಳನ್ನು ಪರಿಶೀಲಿಸಿಕೊಂಡು ತಾವೂ ಸರ್ಕಾರಿ ಶಿಕ್ಷಕರಾಗಬಹುದೇ ಎಂಬುದನ್ನು ತಾಳೆಹಾಕಬಹುದು. ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಮತ್ತು ಮೇ22 ನಡೆದಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಕರ್ನಾಟಕ ಶಿಕ್ಷಕರ …
Read More »ಪೋಷಕರಿಗೆ ಕಿರುಕುಳ ನೀಡುವ ಮಕ್ಕಳನ್ನು ಮನೆಯಿಂದ ಹೊರಹಾಕಿ ಎಂದ ಕೋರ್ಟ್
ಡೆಹ್ರಾಡೂನ್: ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ನ್ಯಾಯಾಲಯ ಹೇಳಿದೆ. ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್ಡಿಎಂ ನ್ಯಾಯಾಲಯ ಸೂಚಿಸಿದೆ. ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ …
Read More »ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು : ಸುಪ್ರೀಂಕೋರ್ಟ್
ನವದೆಹಲಿ: ವೇಶ್ಯಾವಾಟಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು ಆರು ನಿರ್ದೇಶನಗಳನ್ನು ನೀಡಿದೆ. ಪೀಠವು, “ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆ ಆಧಾರದ ಮೇಲೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವುದು ಅಥವಾ …
Read More »T20 ಸರಣಿಯಲ್ಲಿ ಟೀಂ ಇಂಡಿಯಾದಿಂದ ಹೊರಬಿದ್ದ ಧವನ್ಗೆ ಅಪ್ಪನಿಂದಲೇ ಥಳಿತ!
ಮುಂಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡವು ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಗಿದೆ. ಆದರೆ ತಮ್ಮ ಬ್ಯಾಟಿಂಗ್ ವೈಖರಿಯಿಂದ ಅತ್ಯುತ್ತಮ ಪ್ರದರ್ಶನ ನೀಡಿದ ಶಿಖರ್ಧವನ್ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬೆನ್ನಲ್ಲೇ ಮನೆಗೆ ಹಿಂದಿರುಗುತ್ತಿದ್ದಂತೆ ಶಿಖರ್ಧವನ್ ಅವರ ತಂದೆ ಮನಬಂದಂತೆ ಥಳಿಸಿದ್ದಾರೆ. ಮನೆಗೆ ಬರುತ್ತಿದ್ದಂತೆ ಜಾಡಿಸಿ ಒದ್ದು, ಕೆಳಗೆ ಬೀಳಿಸಿದ್ದಾರೆ. ಕುಟುಂಬದವರು ತಡೆಯಲು ಬಂದರೂ ಸುಮ್ಮನಾಗದೇ ಧವನ್ಗೆ ಮನಬಂದಂತೆ ಥಳಿಸಿದ್ದಾರೆ. …
Read More »ತೆರಿಗೆ ಕಡಿಮೆ ಮಾಡದಿದ್ದರೆ ಗಣಿಗಳಲ್ಲೇ ಅದಿರು ಉಳಿಯಲಿದೆ ಎಂಬುದು ಗಣಿ ಉದ್ಯಮಿಗಳ ಆತಂಕ.
ಬಳ್ಳಾರಿ: ಅದಿರು ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿರುವುದರ ಹಿಂದೆಯೇ ಕೇಂದ್ರ ಸರ್ಕಾರ ಅದಿರು ರಫ್ತು ಮೇಲಿನ ತೆರಿಗೆ ಏರಿಸಿರುವುದರಿಂದ ರಾಜ್ಯದ ಗಣಿಗಳಲ್ಲಿ ದಶಕದಿಂದ ಬಿದ್ದಿರುವ ಸುಮಾರು ಒಂದು ಕೋಟಿ ಟನ್ ಅದಿರು ರಫ್ತು ಪ್ರಕ್ರಿಯೆ ಪುನರಾರಂಭಕ್ಕೆ ಹಿನ್ನಡೆಯಾಗಿದೆ. ಇದರಿಂದ ಗಣಿ ಉದ್ಯಮಿಗಳು ಮತ್ತೆ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ಅದಿರು ರಫ್ತಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದ ಮರು ದಿನವೇ ಕಾಕತಾಳೀಯ ಎಂಬಂತೆ ಕೇಂದ್ರ ಸರ್ಕಾರ ಅದಿರು ರಫ್ತು ಮೇಲಿನ …
Read More »ನಕಲಿ ದಾಖಲೆ ಸೃಷ್ಟಿ; ಹದಿನೇಳು ಮಂದಿ ವಿರುದ್ಧ ಪ್ರಕರಣ
ಹೊಸಪೇಟೆ (ವಿಜಯನಗರ): ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ ಸರ್ಕಾರಕ್ಕೆ ವಂಚಿಸಿರುವ ದೂರಿನ ಮೇರೆಗೆ ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಒಂದೇ ದಿನ ನಾಲ್ಕು ಪ್ರತ್ಯೇಕ ಘಟನೆಗಳಡಿ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಪ್ರಕರಣದಲ್ಲಿ ಹೊಸಪೇಟೆ ನಗರಸಭೆ ಸಿಬ್ಬಂದಿ ಹಾಗೂ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ/ಸಿಬ್ಬಂದಿ ಎಂದಷ್ಟೇ ದೂರು ಕೊಡಲಾಗಿದೆ. ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ನಾಲ್ಕೂ ಪ್ರಕರಣಗಳಲ್ಲಿ ಅಧಿಕಾರಿಗಳೇ ಖುದ್ದು ಠಾಣೆಗೆ ದೂರು ಕೊಟ್ಟಿದ್ದಾರೆ. …
Read More »
Laxmi News 24×7