Breaking News

ಪ್ರವಾಹ ನಿರ್ವಹಣೆ: ಸಿಎಂ ವಿಡಿಯೋ ಸಂವಾದ

ಜಲಾಶಯ ನೀರು ಬಿಡುಗಡೆ- ಮಹಾರಾಷ್ಟ್ರದ ಜತೆ ಸಮನ್ವಯ, ಮಾಹಿತಿ ವಿನಿಮಯಕ್ಕೆ ಸಿಎಂ‌ ಬೊಮ್ಮಾಯಿ ಸೂಚನೆ ಬೆಳಗಾವಿ, ಮೇ 21(ಕರ್ನಾಟಕ ವಾರ್ತೆ): ಎಲ್ಲೆಡೆ ಮಳೆಯಾಗುತ್ತಿರುವುದರಿಂದ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಅಲ್ಲಿನ ಮಳೆಯ ಪ್ರಮಾಣ, ಜಲಾಶಯಗಳ ಸಂಗ್ರಹ ಮತ್ತಿತರ ವಿಷಯಗಳ ಕುರಿತು ನಿರಂತರವಾಗಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ಬೆಂಗಳೂರಲ್ಲಿ ಸ್ಕೂಲ್​ ಬಸ್​ ಅಪಘಾತ: ಕಾಲೇಜಿಗೆ ಸೇರಲು ಹೊರಟ್ಟಿದ್ದ ಬಾಲಕಿ ಸ್ಥಳದಲ್ಲೇ ಸಾವು

ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು. ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ ತೆರಳುತ್ತಿದ್ದರು. …

Read More »

K.L.E.ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಬೆಳಗಾವಿಯ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ (Karnataka Lingayat Education Society) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆ ಸೇರಿ ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವೀಧರರಿಗೆ ಉತ್ತಮ ಅವಕಾಶವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್​ 4 ಕಡೆಯ ದಿನಾಂಕವಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, …

Read More »

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಇಳಕಲ್ ಸೀರೆ ಸಿಗುತ್ತೆ

ಹುಬ್ಬಳ್ಳಿ: ನಗರದ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಸೀರೆ ಪ್ರದರ್ಶನ ಮತ್ತು ಮಳಿಗೆ ತೆರೆಯಲಾಗಿದೆ. ಈ ಮಳಿಗೆಗಳಿಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಚಾಲನೆ ನೀಡಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಸ್ಥಳೀಯ ಉತ್ಪನ್ನಗಳು, ಕುಶಲಕರ್ಮಿಗಳು ಮತ್ತು ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ. ಒಂದು ನಿಲ್ದಾಣ-ಒಂದು ಉತ್ಪನ್ನ ಎಂಬ ಕಾರ್ಯಕ್ರಮದಡಿ ನೈರುತ್ಯ ರೈಲ್ವೆ ನಿಲ್ದಾಣದಲ್ಲಿ 4ನೇ ಸ್ಥಳೀಯ ಉತ್ಪನ್ನಗಳಲ್ಲಿ ಒಂದಾದ ಇಳಕಲ್ …

Read More »

ಕಾಯಿಲೆಯಿದೆ ಎಂದು ಮಗುವನ್ನು ಬಿಟ್ಟು ಹೋದ ಘಟನೆ ನಗರದ ಫ್ಯಾಕ್ಟರಿ ಸರ್ಕಲ್‍ನಲ್ಲಿ ಇರುವ ಚರ್ಚ್‍ನಲ್ಲಿ ನಡೆದಿದೆ.

ಮಂಡ್ಯ: ಕಾಯಿಲೆಯಿದೆ ಎಂದು ಮಗುವನ್ನು ಬಿಟ್ಟು ಹೋದ ಘಟನೆ ನಗರದ ಫ್ಯಾಕ್ಟರಿ ಸರ್ಕಲ್‍ನಲ್ಲಿ ಇರುವ ಚರ್ಚ್‍ನಲ್ಲಿ ನಡೆದಿದೆ. ನಮಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಪರವಾಗಿಲ್ಲ. ಮಗುವಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಅದೇಷ್ಟೋ ತಂದೆ ತಾಯಿಗಳು ಹೊಟ್ಟೆ ಬಟ್ಟೆ ಕಟ್ಟಿ ತಮ್ಮ ಮಕ್ಕಳಿಗೋಸ್ಕರ ಬದುಕುತ್ತಿದ್ದಾರೆ. ಅಂತಹದರಲ್ಲಿ ತಮ್ಮ ಮಗುವಿಗೆ ಕಾಯಿಲೆ ಇದೆ ಎಂದು ಆ ಮಗುವನ್ನು ಅನಾಥ ಮಾಡಿ ಪೋಷಕರು ಬಿಟ್ಟು ಹೋಗಿದ್ದು, ಇತ್ತ ತಂದೆ ತಾಯಿಗಳ ಲಾಲನೆ …

Read More »

ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ 2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇ

ಬೆಳಗಾವಿ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ 2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಹಾಲಿ ಶಾಸಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ ಬಗ್ಗೆ ಬೆಳಗಾವಿ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಗಳು ಆರಂಭಗೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅನಿಲ್ ಬೆನಕೆಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಾ? ಪಕ್ಷ ಸಂಘಟನೆ ದೃಷ್ಟಿಯಿಂದ ಈ ಜವಾಬ್ದಾರಿ ನೀಡಲಾಗಿದೆಯೇ? ಎಂಬ ಬಗ್ಗೆ ಚರ್ಚೆಗಳು …

Read More »

ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, : ಬಿ.ಶ್ರೀರಾಮುಲು

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ. ಎಂಥ ಪರಿಸ್ಥಿತಿಯಲ್ಲೂ ಬಿಎಸ್ …

Read More »

ಪೆಟ್ರೋಲ್-ಡೀಸೆಲ್ ಕೊರತೆ ; ಪೆಟ್ರೋಲ್ ಬಂಕ್ ಗಳು ಖಾಲಿ ಖಾಲಿ-

ಕೋಲಾರ: ಕೋಲಾರ ಜಿಲ್ಲೆಯಲ್ಲಿನ ಬಹುತೇಕ ಭಾರತ್ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರವಾಗುತ್ತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ ˌ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪೆಟ್ರೋಲ್ ಬಂಕ್‌ಗಳ ಮಾಲೀಕರು ಕಳೆದೊಂದು ವಾರದಿಂದ ಭಾರತ್ ಪೆಟ್ರೋಲ್ ಸರಬರಾಜಿನಲ್ಲಿ ತೀವ್ರ ಕೊರತೆ ಉಂಟಾಗಿದ್ದು ಕಳೆದೆರಡು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಸಂಪೂರ್ಣ ಖಾಲಿ ಯಾಗಿದೆ. ಆದರೆ ಈ ಕೊರತೆ ಯಾಕೆ ಆಗುತ್ತಿದೆಯೆಂಬುದೂ ಸಹ ನಮಗೇ ತಿಳಿದಿಲ್ಲ ಎಂದರು. ಇನ್ನು …

Read More »

ಬಗೆದಷ್ಟೂ ಬಯಲಾಗ್ತಿದೆ ಬಿಜೆಪಿ ಮುಖಂಡನ ಲವ್ ಪುರಾಣ.

ಬೆಂಗಳೂರು : ಮೇ.12ರಂದು ಬಿಜೆಪಿ ಮುಖಂಡ ಬಿ.ಪಿ.ಅನಂತರಾಜು ಆತ್ಮಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ಬಿ.ಕೆ.ಸುಮಾ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಹಿನ್ನೆಲೆಯಲ್ಲಿ ಮಧ್ಯಾಹ್ನ ಇನ್ಸ್‌ಪೆಕ್ಟರ್‌ ರವಿಕುಮಾರ್‌ ಮುಂದೆ ಹಾಜರಾದ ಸುಮಾ ಅವರನ್ನು ನಾಲ್ಕು ತಾಸು ಸುದೀರ್ಘವಾಗಿ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಆದರೆ ತನ್ನ ಮೇಲಿನ ಆರೋಪಗಳನ್ನು ಸುಮಾ ನಿರಾಕರಿಸಿದ್ದಾರೆ. ಇತ್ತೀಚಿಗೆ ವೈಯಕ್ತಿಕ ಕಾರಣಕ್ಕೆ ಅನಂತರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ತಮ್ಮ ಪತಿಗೆ ಸಾವಿಗೆ …

Read More »

ಪಬ್ಜಿ ಆಡಬೇಡ ಎಂದು ತಂದೆ-ಮಗನ ಮಧ್ಯೆ ಜಗಳ, ಇಬ್ಬರ ಜಗಳದಲ್ಲಿ ಪ್ರಾಣ ಕಳೆದುಕೊಂಡ ತಾಯಿ

ಚಿಕ್ಕಮಗಳೂರು: ಜಿಲ್ಲೆಯ ಹಾಗಲಖಾನ್ ಎಸ್ಟೇಟ್ನಲ್ಲಿ ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಮಗನ ಪಬ್ಜಿ ಹುಚ್ಚಿಗೆ ತಾಯಿ ಬಲಿಯಾಗಿದ್ದಾರೆ. ಮೈಮುನಾ(40) ಕೊಲೆಯಾದ ಮಹಿಳೆ. ಪಬ್ಜಿ ಆಡದಂತೆ ಮಗನ ಜೊತೆ ತಂದೆ ಇಮ್ತಿಯಾಜ್ ಜಗಳವಾಡುತ್ತಿದ್ದರು. ಈ ವೇಳೆ ನಿನ್ನ ಸಾಯಿಸುತ್ತೇನೆಂದು ಅಪ್ಪ ಮಗನಿಗೆ ಕೋವಿ ಹಿಡಿದಿದ್ದ. ಕೋಪದಲ್ಲಿ ಗುಂಡು ಹಾಕಿಸಿದರೆ ಮಗನ ಪ್ರಾಣ ಹೋಗುತ್ತೆ ಎಂದು ತಾಯಿ ಮೈಮುನಾ ಅಡ್ಡ ಬಂದಿದ್ದಾರೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಇಮ್ತಿಯಾಜ್ ಗುಂಡು ಹಾರಿಸಿ ಪತ್ನಿಯನ್ನು ಹತ್ಯೆಗೈದಿದ್ದಾರೆ. …

Read More »