Breaking News

ಹಿಜಬ್ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಿಲ್ಲ: ವಿದ್ಯಾರ್ಥಿನಿ

ಉಡುಪಿ: ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ಆದರೆ ಹಿಜಬ್ ಕುರಿತಾದ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಲಿಲ್ಲ ಎಂದು ಉಡುಪಿಯ ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಆಕ್ರೋಶ ವ್ಯಕ್ತಪಡಿಸಿದಳು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ನಾವು ವಿಜ್ಞಾನದ ರೆಕಾರ್ಡ್ ಬುಕ್ ಪೂರ್ಣಗೊಳಿಸಿದ್ದೇನೆ. ಅಪಾರ ನಿರೀಕ್ಷೆಯೊಂದಿಗೆ ನಾವು ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗಿದ್ದೆವು. ನಮ್ಮ ಪ್ರಾಂಶುಪಾಲರು ನಮಗೆ ಪರೀಕ್ಷೆ ಬರೆಯುವ ಅವಕಾಶ …

Read More »

ಪ್ರಮೋದ್ ಮುತಾಲಿಕ್, ಚೈತ್ರಾಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಡಿಸಿ ಆದೇಶ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ತಂದೆ ಹಣಮಂತರಾವ ಮುತಾಲಿಕ, ಕುಂದಾಪುರದ ಚೈತ್ರಾ ತಂ. ಬಾಲಕೃಷ್ಣ ನಾಯಕ್ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.   ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ …

Read More »

ಐಪಿಎಲ್ 2022 – ಧೋನಿಯ ಹೊಸ ಮೀಸೆ ಲುಕ್ ವೈರಲ್

ಚೆನ್ನೈ: ಐಪಿಎಲ್ 2022ಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿಯ ಹೊಸ ಮೀಸೆ ನೋಟವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ಧೋನಿಯ ಈ ಹೊಸ ಲುಕ್‍ಗೆ ‘ತಲೈವರ್ ಸೂಪರ್ ಸ್ಟಾರ್’ ನಂತೆ ಕಾಣುತ್ತೀರಾ ಎಂದು ಬರೆದುಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಯವರು ತಮ್ಮ ನಾಯಕತ್ವ ಮತ್ತು ವಿಕೆಟ್ ಕೀಪಿಂಗ್ ಕೌಶಲ್ಯಗಳಿಂದಲೇ ಹೆಸರುವಾಸಿಯಾದವರು. ಆದರೆ ಅವರು ಪ್ರತೀ …

Read More »

ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಯಿಂದ ಪುಟ್ಟ ರಾಷ್ಟ್ರ ಉಕ್ರೇನ್ ಕಂಗೆಟ್ಟಿದ್ದು, ವಿದ್ಯಾಭ್ಯಾಸಕ್ಕಾಗಿ ಭಾರತದಿಂದ ತೆರಳಿದ ವಿದ್ಯಾರ್ಥಿಗಳು ಜೀವ ಭಯದಲ್ಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ತಮ್ಮ ತಾಯ್ನಾಡಿಗೆ ಕರೆದುಕೊಂಡು ಬರುವಲ್ಲಿ ಸತತ ಪ್ರಯತ್ನ ನqಯುತ್ತಿದ್ದು, ಈಗಾಗಲೇ ಹಲವಾರು ಮಂದಿ ವಾಪಸ್ಸಾಗಿದ್ದು, ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ವಿದ್ಯಾರ್ಥಿನಿಯೊಬ್ಬಳು ತಮ್ಮ ದೇಶದ ಧ್ವಜ ಇರುವ ಬಸ್ ಕಂಡಾಗ ಆದ ಸಂತಸವನ್ನು ಶೇರ್ ಮಾಡಿಕೊಂಡಿದ್ದಾಳೆ. …

Read More »

ಮತ್ತೆ ‘ಬಿಬಿಎಂಪಿ ಕಚೇರಿ’ಗಳ ಮೇಲೆ ‘ಎಸಿಬಿ ದಾಳಿ’ |

ಬೆಂಗಳೂರು: ಈಗಾಗಲೇ ಎರಡು ದಿನಗಳ ಹಿಂದಷ್ಟೇ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಎಸಿಬಿ ಅಧಿಕಾರಿಗಳು ( ACB Officer ) ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ 27 ವಿಭಾಗೀಯ ಕಚೇರಿಗಳ ಮೇಲೆ ದಾಳಿ ( ACB Raid ) ನಡೆಸಿ, ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದರು. ಇದೀಗ ಇಂದು ಮತ್ತೆ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಕಚೇರಿಗಳ ( BBMP Office ) ಮೇಲೆ ದಾಳಿ …

Read More »

KPSC ನೇಮಕಾತಿ: ಕಲ್ಯಾಣ ಕರ್ನಾಟಕದ 59 ಸೇರಿ 188 ಎಂಜಿನಿಯರ್ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಕರ್ನಾಟಕ ಲೋಕಸೇವಾ ಆಯೋಗ ಫೆಬ್ರವರಿ 21 ರಂದು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಉಳಿಕೆ ಮೂಲ ವೃಂದ 129, ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ 59 ಹುದ್ದೆಗಳು ಸೇರಿದಂತೆ ಒಟ್ಟು 188 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಮಾರ್ಚ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 31 ಅರ್ಜಿ …

Read More »

ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ

ಧಾರವಾಡ, ಫೆಬ್ರವರಿ 28; ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಸುಮಾರು 30.6 ಕಿ. ಮೀ. ರಸ್ತೆಯ ಅಗಲೀಕರಣ ಕಾಮಗಾರಿ 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ …

Read More »

ಬಿಎಸ್​ವೈ ಬಜೆಟ್ ಅನುಷ್ಠಾನಕ್ಕೆ ಗ್ರಹಣ!

ಬೆಂಗಳೂರು: ಕೋವಿಡ್ ಅಬ್ಬರ, ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ಹೀಗೆ ನಾನಾ ಅಡ್ಡಿ-ಆತಂಕಗಳಲ್ಲೇ 2021ನೇ ವರ್ಷ ಮುಗಿದುಹೋಗಿದ್ದರಿಂದ 2021-22ನೇ ಸಾಲಿನ ಆಯವ್ಯಯವೂ ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಳ್ಳಲಿಲ್ಲ. 2021-22ನೇ ಸಾಲಿನ ಆಯವ್ಯಯವನ್ನು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ 2021ರ ಮಾರ್ಚ್ 8ರಂದು ಮಂಡಿಸಿದ್ದರು. ಸಾಂಕ್ರಾಮಿಕದ ನಡುವೆಯೂ ವಿತ್ತೀಯ ಶಿಸ್ತು ಪಾಲನೆ ಮತ್ತು ಅಭಿವೃದ್ಧಿಯಲ್ಲಿ ಸಮತೋಲನ ಸಾಧಿಸುವುದು ಕತ್ತಿಯ ಅಲಗಿನ ಮೇಲಿನ ನಡಿಗೆಯ ಅನುಭವ ನೀಡಿದೆ ಎಂದು ತಮ್ಮ ಅನುಭವ ಹಂಚಿಕೊಂಡಿದ್ದ ಬಿಎಸ್​ವೈ, ‘ಅಳ್ಳೆದೆ ಅವನತಿಯ …

Read More »

ನಾನು ಅಂಬರೀಶ್ ಮಾಡಬಾರದನ್ನೂ ಮಾಡಿದ್ದೇವೆ’: ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ 28: ಕನ್ನಡ ಚಿತ್ರೋದ್ಯಮದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಅಂಬರೀಶ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫ್ಲ್ಯಾಷ್ ಬ್ಯಾಕಿಗೆ ಹೋಗಿದ್ದಾರೆ. ತಮ್ಮ ಮತ್ತು ಅಂಬರೀಶ್ ಅವರ ನಲವತ್ತು ವರ್ಷದ ಒಡನಾಟದ ಬಗ್ಗೆ ರಸವತ್ತಾಗಿ ಸಭೆಯಲ್ಲಿ ವಿವರಣೆಯನ್ನು ನೀಡಿದ ಬೊಮ್ಮಾಯಿ ಅವರ ಹೇಳಿಕೆಗೆ ನೆರೆದಿದ್ದ ಜನಸ್ತೋಮ ಚಪ್ಪಾಳೆಯ ಮೇಲೆ ಚಪ್ಪಾಳೆಯನ್ನು ಹೊಡೆದಿದೆ. “ನನ್ನ ಆತ್ಮೀಯ ಸ್ನೇಹಿತ ಅಂಬರೀಶ್, ನಮ್ಮ …

Read More »

ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ನೂರಾರು ಭಕ್ತರು ಮಹಾಶಿವರಾತ್ರಿ ನಿಮಿತ್ತ ಧರ್ಮಸ್ಥಳಕ್ಕೆ ಪಾದಯಾತ್ರೆ

ಹೊಳೆನರಸೀಪುರ: ಪಟ್ಟಣದ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಮುಂಭಾಗದಿಂದ ಭಾನುವಾರ ಬೆಳಿಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ನೂರಾರು ಭಕ್ತರು ಮಹಾಶಿವರಾತ್ರಿ ನಿಮಿತ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದರು. ‘ಪಾದಯಾತ್ರೆಯಿಂದ ನಮ್ಮ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಬಹುದು. ಜೊತೆಗೆ ದೇವರ ಮೇಲಿನ ನಂಬಿಕೆ ಹೆಚ್ಚುತ್ತದೆ. ನಂಬಿಕೆಯಿಂದ ಮಾಡುವ ಕೆಲಸ ಸದಾ ಯಶಸ್ಸನ್ನು ತಂದು ಕೊಡುತ್ತದೆ. ನಾನು ನಂಬಿಕೆಯಿಂದ ಎಲ್ಲ ಜನರಿಗೆ ಉತ್ತಮ ಜೀವನ ಸಿಗಲಿಎನ್ನುವ ಉದ್ದೇಶದಿಂದ ಧರ್ಮಸ್ಥಳ ಪಾದಯಾತ್ರೆ ಹೊರಟಿದ್ದೇನೆ’ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. …

Read More »