Breaking News

ಇಂದು ಸಂಜೆ Lockdown ಭವಿಷ್ಯ ನಿರ್ಧಾರ ಆಗುತ್ತಾ? ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆಗಳೇನು?

ರಾಜ್ಯದಲ್ಲಿ ಕೊವೀಡ್-19 (COVID 19), ಓಮೈಕಾನ್ (Omicron Variant) ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 6:30 ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ತಜ್ಞರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊವೀಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಶಿಫಾರಸು ‌ಕೇಳಿದ್ದಾರೆ. ತಜ್ಞರ ಸಮಿತಿ ಪರಿಸ್ಥಿತಿ, ‌ಜಾರಿಗೆ ತರಬೇಕಿರುವ ನಿಯಮಗಳ ಬಗ್ಗೆ ಸಿಎಂ ವರದಿ ಈಗಾಗಲೇ ಒಪ್ಪಿಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ (Lockdown) ಭವಿಷ್ಯ ನಿರ್ಧಾರವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಂದು …

Read More »

ಬೆಳಗಾವಿಯಲ್ಲಿ ಮತಾಂತರ ಶಂಕೆ: ಪ್ರಾರ್ಥನೆ ವೇಳೆ ಮನೆಗೆ ನುಗ್ಗಿ ಹಲ್ಲೆ ಆರೋಪ

ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್‌ 29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಸಿ ಸಾಂಬಾರು ಎಸೆಯಲು ಯತ್ನ ಆರೋಪ ಪ್ರಾರ್ಥನೆ ಮಾಡುತ್ತಿದ್ದ ವೇಳೆ 7 ಮಂದಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು, ಘಟಪ್ರಭ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬವರು ದೂರು ನೀಡಿದ್ದಾರೆ. ಜನರನ್ನು …

Read More »

ಕೋವಿಡ್ ಟೆಸ್ಟ್ ಅನ್ನೋದು ಒಂದು ಹಗರಣ, ಇದರಿಂದ ನಾನು ಅಂತ್ಯಕ್ರಿಯೆಗೆ ಹೋಗೋದು ತಪ್ಪಿದೆ’

ಲಂಡನ್‌ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು ಆರೋಪಿಸಿದ್ದಾರೆ. ಮನೋಜ್ ಲಾಡ್ವಾ ಎಂಬವರ ಪತ್ನಿಯ ತಂದೆಯ ಅಂತ್ಯಕ್ರಿಯೆಯ ಸಲುವಾಗಿ ಲಂಡನ್‌ನಿಂದ ಮುಂಬೈಗೆ ಬಂದಿದ್ದರು. …

Read More »

ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ

ಮುಂಬೈ: ದೇಶಾದ್ಯಂತ ಕರೊನಾ ಭೀತಿ ಅತಿಯಾಗಿದ್ದು, ಸದ್ಯದಲ್ಲೇ ದಿನಕ್ಕೆ ಸುಮಾರು 60 ಸಾವಿರ ಮಂದಿ ಸೋಂಕಿತರಾಗಿ ಆಸ್ಪತ್ರೆಗೆ ಸೇರಲಿದ್ದಾರೆ ಎಂಬ ಅಧ್ಯಯನವೊಂದರ ಅಂಶ ಮತ್ತಷ್ಟು ಆತಂಕವನ್ನು ಮೂಡಿಸಿದೆ. ದೇಶದಲ್ಲಿ ಒಮಿಕ್ರಾನ್ ಅಲೆ ಗರಿಷ್ಠ ಮಟ್ಟ ತಲುಪುವ ವೇಳೆ ದೈನಿಕ ಸುಮಾರು 60,000 ಜನರು ಆಸ್ಪತ್ರೆಗಳಿಗೆ ದಾಖಲಾಗಬಹುದು. ಸದ್ಯ ದೇಶದಲ್ಲಿ ಒಮಿಕ್ರಾನ್ ಪ್ರಭೇದವೇ ಪ್ರಮುಖ ತಳಿಯಾಗಿದ್ದು ಶೀಘ್ರವೇ ಆರೋಗ್ಯ ಬಿಕ್ಕಟ್ಟು ಅಪ್ಪಳಿಸಬಹುದು ಎಂದು ಖಾಸಗಿ ಅಧ್ಯಯನವೊಂದು ಹೇಳಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಈಗಾಗಲೇ …

Read More »

ಉತ್ತರ ಪ್ರದೇಶ ಚುನಾವಣೆ: ಮತ್ತೆ ಅಧಿಕಾರಕ್ಕೆ ಆಡಳಿತಾರೂಢ ಬಿಜೆಪಿ

ಲಕ್ನೋ, ಜನವರಿ 03: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಟೈಮ್ಸ್‌ ನೌ ನವಭಾರತ್ ನಡೆಸಿದ VETO ಸಮೀಕ್ಷೆಯಲ್ಲಿ ಒಟ್ಟು 403 ಸೀಟುಗಳ ಪೈಕಿ 230-249 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.   2017 ಹಾಗೂ 2022ರ ಚುನಾವಣೆಯನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಪಕ್ಷ 2017 2022 ನಿರೀಕ್ಷೆ ಬಿಜೆಪಿ 325 230-249 ಎಸ್‌ಪಿ …

Read More »

ಬೆಂಗಳೂರು-ಧಾರವಾಡ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಸಂಚಾರ ರದ್ದು

ಬೆಂಗಳೂರು, ಜ.3: ಕೆಎಸ್‍ಆರ್ ಬೆಂಗಳೂರು-ಧಾರವಾಡ ಸೂಪರ್‍ಫಾಸ್ಟ್ ಇಂಟರ್‍ಸಿಟಿ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ.   ಹೊಸಪೇಟೆ ಕೆಎಸ್‍ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಜನವರಿ 11ರಂದು, …

Read More »

ಮಹಿಳೆಯರಿಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಲು ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ದೊಡ್ಡದು: ಶಾಸಕ‌ ಅನಿಲ ಬೆನಕೆ

ಬೆಳಗಾವಿ: ಇಂದು ಮಹಿಳೆಗೆ ಪುರುಷ ಸಮಾನ ಅವಕಾಶಗಳು ದೊರೆಯುತ್ತಿವೆ ಎಂದರೆ ಅದಕ್ಕೆ ಕಾರಣ ಅಂದು ಸಮಾನತೆಯ ಹಕ್ಕಿಗೆ ಕಾರಣವಾಗಿ ಕ್ರಾಂತಿಕಾರಿ ಮಹಿಳೆಯಾಗಿ ಹೊರಹೊಮ್ಮಿದ್ದ ಸಾವಿತ್ರಿಬಾಯಿ ಪುಲೆ ಅವರಂಥ ಶ್ರಮವೇ ಕಾರಣ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ‌ ಬೆನಕೆ ಹೇಳಿದರು. ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ 191 ನೇ ಜಯಂತಿ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ …

Read More »

ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ: ಯತ್ನಾಳ್ ಗುಡುಗು

ವಿಜಯಪುರ: ಈಗಾಗಲೇ ಹೇಳಿದಂತೆ ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದ್ದು, ಜ.20 ರೊಳಗೆ ಸಚಿವ ಸ್ಥಾನದ ಅವಕಾಶ ವಂಚಿತ ಎಲ್ಲ ಜಿಲ್ಲೆಗಳಿಗೂ ಆದ್ಯತೆ ಸಿಗಲಿದೆ. ಈ ತಿಂಗಳ 8 ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಭೈಟಕ್‍ನಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪುನರುಚ್ಚರಿಸಿದ್ದಾರೆ.    ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರಾಚನೆ ಸಂದರ್ಭದಲ್ಲಿ ಪಕ್ಷದ ಸರ್ಕಾರಕ್ಕೆ …

Read More »

ಮತ್ತೆ ರಾಜಕೀಯಕ್ಕೆ ಬರತಾರ ಗಾಲಿ ಜನಾರ್ದನ ರೆಡ್ಡಿ?

ದಾವಣಗೆರೆ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಮರಳಿ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಸಹೋದರ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ತಿಳಿಸದೆ ಜಾರಿಕೊಂಡರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿಯವರ ಕುರಿತು ಪಕ್ಷ ತೀರ್ಮಾನ ಮಾಡಬೇಕು. ಆಮೇಲೆ ಅವರು ತೀರ್ಮಾನಿಸಬೇಕು. ನಾನು ಅವರ ಬಳಿ ಏನೂ ಚರ್ಚೆ ಮಾಡಿಲ್ಲ ಎಂದರು. ಇನ್ನು ಸಚಿವ ಸ್ಥಾನದ …

Read More »

ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ ( Covid-19 Case ) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.   ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda ) ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ( Telangana …

Read More »