ಕೌಟುಂಬಿಕ ಕಲಹ ಸಂಬಂಧ ವಿಚಾರಣೆಗೆಂದು ಭಾನುವಾರ ರಾತ್ರಿ ಪೊಲೀಸ್ ಠಾನೆಗೆ ತೆರಳಿದ್ದ ವ್ಯಕ್ತಿ ನಿಗೂಢವಾಗಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ನಡೆದಿದೆ. ಇದು ಲಾಕ್ಅಪ್ ಡೆತ್ ಎಂದು ಆರೋಪಿಸಿ ಮೃತನ ಬಂಧುಗಳು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ತಾಲೂಕಿನ ವಿಠಲಾಪುರ ಗ್ರಾಮದ ಮರುಳಸಿದ್ದಪ್ಪ ಮೃತ ವ್ಯಕ್ತಿ. ಈತ 27 ವರ್ಷದ ಹಿಂದೆ ವೃಂದಮ್ಮ ಎಂಬುವವರ ಜೊತೆಗೆ ಮದುವೆಯಾಗಿದ್ದ. ಮರುಳಸಿದ್ದಪ್ಪನಿಗೆ 24 ವರ್ಷದ ಮಗಳಿದ್ದಾಳೆ. ಹೀಗಿದ್ದು …
Read More »ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ.?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ( Bengaluru ) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಮಹಾಸ್ಪೋಟವೇ ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ ಹೆಚ್ಚಳವಾಗುತ್ತಿದೆ. ಇದೇ ಕಾರಣದಿಂದಾಗಿ ನಾಳೆ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ, ಈ ಬಳಿಕ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಡೆಸಲಿದ್ದಾರೆ. ಈ ಸಭೆಗಳಲ್ಲಿ ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳದ …
Read More »15 ರಿಂದ 18 ವರ್ಷ ದೊಳಗಿನವರೆಗಿನ ಕೊವಿಡ್ ಲಸಿಕೆ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ದ್ವೀಪ ಪ್ರಜ್ವಲಿಸುವ ಮೂಲಕ ಚಾಲನೆ
ಖಾನಾಪೂರದಲ್ಲಿ 15 ರಿಂದ 18 ವರ್ಷ ದೊಳಗಿನವರೆಗಿನ ಕೊವಿಡ್ ಲಸಿಕೆ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ದ್ವೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಹೌದು ಇಂದು ದೇಶಾದ್ಯಂತ 15 ವರ್ಷದಿಂದ 18 ವರ್ಷ ದೊಳಗಿನವರೆಗಿನ ವರಿಗೆ ಕೊವಿಡ್ ಲಸಿಕೆ ನೀಡುವ ಕಾರ್ಯಕ್ರಮ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ಖಾನಾಪೂರದಲ್ಲಿಯೂ ಈ ಕಾರ್ಯಕ್ರಮಕ್ಕೆ ದ್ವೀಪ ಪ್ರಜ್ವಲಿಸುವ ಮೂಲಕ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಚಾಲನೆ …
Read More »ನಮ್ಮ ಫಲವತ್ತಾದ ಭೂಮಿಯನ್ನು ನಮಗೆ ಬಿಡಿ ,ಧಾರವಾಡ ರೈಲು ಕಾಮಗಾರಿಗೆ ರೈತರ ಆಕ್ರೋಶ
ಬೆಳಗಾವಿ ಶಾರವಾಡ ರೈಲು ಕಾಮಗಾರಿಯಲ್ಲಿ ತಮ್ಮ ಫಲವತ್ತಾದ ಜಮೀನನ್ನು ಸರಕಾರ ವಶಕ್ಕೆ ತೆಗೆದುಕೊಳ್ಳುತ್ತಿದೆ. ಹಾಗಾಗಿ ಈ ರೈಲು ಕಾಮಗಾರಿಯನ್ನು ಬರಡು ಭೂಮಿಯಲ್ಲಿ ತೆಗೆದುಕೊಂಡು ಹೋಗಬೇಕೆಂದು ಒತ್ತಾಯಿಸಿ ರೈತರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಿ/ವೊ: ಕೇಂದ್ರ ಸರಕಾರ ಧಾರವಾಡ ಬೆಳಗಾವಿ ರೈಲು ಕಾಮಗಾರಿಗೆ ರೈತರ ಫಲವತ್ತಾದ ಜಮೀನನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಇದರಿಂದ ಸಾವಿರಾರು ರೈತರ ಬಾಳು ಬೀದಿಗೆ ಬರುತ್ತದೆ. ರೈತರು ಬೆಳೆದ ಬೆಳೆಗಳನ್ನು ಸರ್ವನಾಶ ಮಾಡಿ ಸರಕಾರ ರೈತರ …
Read More »ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. ಪಟ್ಟಣದಲ್ಲಿ ನಿರ್ಮಿಸಿದ ನೂತನ ಶಾದಿ ಮಹಲ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿಅನೇಕ ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶಾದಿ ಮಹಲ್ ಗಳನ್ನು ನಿರ್ಮಿಸಲಾಗಿದೆ. ಇವುಗಳನ್ನುಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಯಮಕನಮರಡಿಯಲ್ಲಿ ಶಾದಿ ಮಹಲ್ ನಿರ್ಮಿಸಬೇಕು ಎಂದು ಮುಸ್ಲಿಂ ಬಾಂಧವರ ಬೇಡಿಕೆಯಾಗಿತ್ತು. ಅನುದಾನ ಕೊರತೆಯಿಂದ ಶಾದಿ ಮಹಲ್ …
Read More »ಕಳಪೆ ಕಾಮಗಾರಿ ಸ್ಮಾರ್ಟ್ಸಿಟಿ ಅವಾಂತರ ನಾಲ್ಕೇ ತಿಂಗಳಲ್ಲಿ ಕುಸಿದ ರಸ್ತೆ..!
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಾಡಲಾಗಿದ್ದ ರಸ್ತೆ ನಾಲ್ಕೇ ತಿಂಗಳಲ್ಲಿ ಹಾಳಾಗಿದ್ದು ಇಟ್ಟಿಗೆ ತುಂಬಿದ ವಾಹನ ತೆರಳುತ್ತಿದ್ದ ವೇಳೆ ಕುಸಿದಿದ್ದು ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಸಾರ್ವಜನಿಕರು ಹಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರದ ಪಾಂಗುಳಗಲ್ಲಿಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಸ್ಮಾರ್ಟ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿಯನ್ನು ಮಾಡಲಾಗಿತ್ತು. ಚಂದ್ರಪ್ರಭ ಜೈನಮಂದಿರದ ಎದುರಿಗೆ ಇದೇ ಮಾರ್ಗವಾಗಿ ಇಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ವಾಹನವೊಂದು ತೆರಳುತ್ತಿದ್ದ ವೇಳೆ ರಸ್ತೆ ಇದ್ದಕ್ಕಿದ್ದಂತೆ ಕುಸಿದು, ಇಟ್ಟಿಗೆ …
Read More »ಜಿ.ಪಂ. ಸಿಇಓ ದರ್ಶನ್ಗೆ ಕೊರೊನಾ ಪಾಸಿಟಿವ್
ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಎಚ್.ವ್ಹಿ ಅವರಿಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡರೂ ಕೂಡ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಸಾಮಾನ್ಯ ಲಕ್ಷಣಗಳು ಇರುವ ಹಿನ್ನೆಲೆ ದರ್ಶನ್ ಅವರು ಹೋಮ್ ಐಸೋಲೇಶನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 18 ವರ್ಷ ವಯಸ್ಸಿನ ಇಬ್ಬರು ಯುವಕರು ಸೇರಿದಂತೆ ಇತರ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
Read More »ಜನ ನಿರ್ಲಕ್ಷ್ಯವಹಿಸಿದರೆ ಮುಂಬೈ, ದೆಹಲಿ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ: ಆರ್.ಅಶೋಕ್
ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು. ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ ಮತ್ತೊಮ್ಮೆ ಸಭೆ ಮಾಡುತ್ತಾರೆ. ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರನ್ನು ರೆಡ್ ಜೋನ್ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಸಿಎಂ …
Read More »ಮಕ್ಕಳ ಲಸಿಕೆಗೆ ಪೋಷಕರು ಸಹಕಾರ ನೀಡಬೇಕು :ಸಚಿವ ಬಿ.ಸಿ.ನಾಗೇಶ್
ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿರುವ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ನೀಡಬೇಕು,ಕೋವಿಡ್ ಜೊತೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಕೋವಿಡ್ ಎದುರಿಸಲು ಎಲ್ಲರೂ ಲಸಿಕೆ ಪಡೆಯುವುದು ಅಗತ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕರೆ ನೀಡಿದ್ದಾರೆ. ಉಚಿತವಾಗಿ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ದೇಶದ 145 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. …
Read More »ಬಸ್ಸ್ಟಾಂಡ್ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ.
ಬೆಳಗಾವಿ ದಿನದಿಂದ ದಿನಕ್ಕೆ ಸ್ಮಾರ್ಟ ಆಗುತ್ತಿದೆ ಎಂದು ಇಲ್ಲೊಂದು ಸ್ಮಾರ್ಟ ಬಸ್ಸ್ಟಾಂಡ್ನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸ್ಸ್ಟಾಂಡ್ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ. ಈ ಬಸ್ಸ್ಟಾಂಡ್ಗೆ ಹೇಳೋವರಿಲ್ಲ..ಕೇಳವರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಬಸ್ಸ್ಟಾಂಡ್ನಲ್ಲಿಯೇ ಆರಾಮವಾಗಿ ಓಡಾಡುತ್ತಿರುವ ಎಮ್ಮೆ ಕರು, ಕಂಠಪೂರ್ತಿ ಸಾರಾಯಿ ಕುಡಿದು ಎಲ್ಲೆಂದರಲ್ಲಿ ಮಲಗಿರುವ ವ್ಯಕ್ತಿ, ಕಸದ ರಾಶಿಯಿಂದ ಸುತ್ತಲೂ ದುರ್ವಾಸನೆ, ಬೀದಿ ನಾಯಿಗಳ …
Read More »