Breaking News

ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ ಖಾಲಿಯಾಗಿದೆ: ಕಾರಜೋಳ

ಬೆಳಗಾವಿ: ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ ಖಾಲಿಯಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಆಡಳಿತ ಮಾಡಿದೆ. ಜನರಿಗೆ ಬೇಕಾಗಿರುವುದು ಅಕ್ಕಿ ಅಲ್ಲ. ಸ್ವಾಭಿಮಾನದ ಬದುಕು. ಅದಕ್ಕೆ ಬೇಕಾದ ಉದ್ಯೋಗವನ್ನು ಕೊಡುವ ಕೆಲಸವನ್ನು ಮಾಡಬೇಕು. ಅದನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದರು.  ಬಿಜೆಪಿ ಭ್ರಷ್ಟಾಚಾರದ …

Read More »

ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿ

ಗದಗ: ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ. ಯಾಸ ಹಡಗಲಿ ಗ್ರಾಮದ ಯಲ್ಲಪ್ಪ ರಾಘವಪುರ, ಅರುಣ್ ವಾಲ್ಮೀಕಿ, ಪರಶುರಾಮ ಮುತ್ತಣ್ಣವರ್ ಮತ್ತು ಗವಿಸಿದ್ದ ಕಲ್ಲಿ ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿದ್ದರು. ಯಾಸ ಹಡಗಲಿ ಹಾಗೂ ಯಾವಗಲ್ ಸಂಪರ್ಕ ಕಲ್ಪಿಸುವ ಬೆಣ್ಣೆಹಳ್ಳ ಸೇತುವೆ ಕಾರ್ಯಭರದಿಂದ ಸಾಗಿತ್ತು. ಮಳೆಗಾಲ ಆರಂಭವಾದ್ದರಿಂದ ‘ಡೇ ಆಂಡ್ ನೈಟ್’ ಕೆಲಸ ಶುರುವಾಗಿತ್ತು. ಕೆಲಸ ಮಾಡ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ 3 …

Read More »

ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ನೀಡುವಂತೆ ಸುಪ್ರೀಂ ಸೂಚನೆ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ. ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ …

Read More »

ದಿಗ್ಗಜ ನಟರ ವಿರುದ್ಧ ದೂರು ದಾಖಲು

ಸಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಕನ್ನಡ ಸಿನಿಮಾ ರಂಗದಲ್ಲಿ ಹಣಕ್ಕಾಗಿ ಆನ್‌ಲೈನ್ ಆಟಗಳಿಗೆ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದ ಕಲಾವಿದರ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈಗಲೂ ಅದು ಮುಂದುವರಿದಿದೆ.  ಹಾಗೆಯೇ ಈ ವಿರೋಧದ ಅಲೆಯು ಬಾಲಿವುಡ್‌ನಲ್ಲೂ ಮುಂದುವರಿದಿದೆ. ಆನ್‌ಲೈನ್ ಜೂಜು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರ ಮೇಲೆ ಮುಂಬೈನಲ್ಲಿ ದೂರು ಕೊಟ್ಟಿದ್ದು, …

Read More »

ನಮ್ಮ ಊರಿನಲ್ಲಿ ಪಾನಿಪುರಿ ,. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ: ಸಿಎಂ ಇಬ್ರಾಹಿಂ

ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ‌ನಮ್ಮ …

Read More »

ಈಗ ಹೆಲ್ಮೆಟ್​​ ಜತೆಗೆ ಐಎಸ್​​ಐ ಮಾರ್ಕ್​​ ಹೊಂದಿರುವುದು ಕೂಡ ಕಡ್ಡಾಯ: ಇಲ್ಲದಿದ್ದರೆ ಕಟ್ಟಬೇಕಾಗುತ್ತೆ 2000 ರೂ.ದಂಡ!

ನವದೆಹಲಿ: ದ್ವಿಚಕ್ರವಾಹನ ಸವಾರರು ಹೆಲ್ಮೆಟ್​​ ಧರಿಸದಿದ್ದರೆ ದಂಡ ಪಾವತಿಸಬೇಕಿತ್ತು. ಈಗ ಇನ್ನೊಂದು ಹೊಸ ನಿಯಮ ಜಾರಿಗೆ ಬಂದಿದ್ದು, ಸರ್ಕಾರ ಹೇಳಿರುವ ಮಾರ್ಕ್​​ ಇರುವ ಹೆಲ್ಮೆಟ್ಟನ್ನೇ ಧರಿಸಬೇಕೆಂಬ ನಿಯಮವನ್ನು ಜಾರಿಗೆ ತಂದಿದೆ. ಈವೆರಗೂ ಹೆಲ್ಮೆಟ್​ ಧರಿಸದವರಿಗೆ ದಂಡ ವಿಧಿಸಲಾಗುತ್ತಿತ್ತು. ಈಗ ಹೆಲ್ಮೆಟ್​ ಧರಿಸಿದ್ದರೂ ದಂಡ ಪಾವತಿಸಬೇಕಾಗುತ್ತದೆ. ಅರೆ… ಏನಿದು ಹೆಲ್ಮೆಟ್​ ಧರಿಸದರೂ ಯಾಕೆ ದಂಡ ಪಾವತಿಸಬೇಕು ಎನ್ನುವವರಿಗೆ ಇಲ್ಲಿದೆ ಉತ್ತರ. ಹೌದು…. ಮೋಟಾರ್​ ವೆಹಿಕಲ್​ ಕಾಯಿದೆ ಅನ್ವಯ ದ್ವಿ-ಚಕ್ರ ವಾಹನ ಚಲಾಯಿಸುವವರು ಕಡ್ಡಾಯವಾಗಿ …

Read More »

ರಾಜ್ಯಕ್ಕೆ ಮೂರನೆಯ ಸ್ಥಾನ ಪಡೆದ ಗೋಕಾಕ ಮಯೂರ ಶಾಲೆಯ ವಿದ್ಯಾರ್ಥಿನಿ, ಶುಭ ಹಾರೈಸಿದ M.L.C. ಲಖನ ಜಾರಕಿಹೊಳಿ ಅವರು

ಗೋಕಾಕ:ವಿಧಾನ ಪರಿಷತ್ ಸದಸ್ಯ ಹಾಗೂ ಮಯೂರ ಶಾಲೆಯ ಅಧ್ಯಕ್ಷ ರಾದ ಲಖನ ಜಾರಕಿಹೊಳಿ ಅವರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಎಲ್ಲ ಕಡೆ ಸುಮಾರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಅದೇರೀತಿ ಗೋಕಾಕ ನಗರದ ಮಯೂರ ಶಾಲೆಯ ಮಕ್ಕಳು ಕೂಡ ಉತ್ತಮ ಸಾಧನೆ ಮಾಡಿದ್ದಾರೆ. ಸಂಜನಾ ಆರ್ ತುಬಚಿ,96.68 ಶೇಕಡಾ ವಾರು ಅಂಕ ಗಳಿಸಿದ್ದು ಮಯೂರ ಶಾಲೆಯ ಕೀರ್ತಿಯನ್ನು …

Read More »

ಬೆಳಗಾವಿ: ವಿಚಕ್ಷಣೆಯಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ಬೆಳಗಾವಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರವೂ ಸೇರಿದಂತೆ ಜಿಲ್ಲೆಯ 52 ಕೇಂದ್ರಗಳಲ್ಲಿ ಶನಿವಾರ ಆರಂಭಗೊಂಡಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 11,199 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 5,967 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಭಾರಿ ನಿಗಾ ಹಾಗೂ ‌ವಿಚಕ್ಷಣೆಯಲ್ಲಿ ಈ‌ ಪರೀಕ್ಷೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಚಟುವಟಿಕೆಗಳ ರೆಕಾರ್ಡಿಂಗ್ ಮಾಡಲಾಗುತ್ತಿದೆ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮೊದಲಾದ …

Read More »

ಮೂಡಲಗಿ ಪಟ್ಟಣದ ವಿಶೇಷ: ಎತ್ತುಗಳ ಶರ್ಯತ್ತಿನ ರೋಮಾಂಚನ

ಬೆಳಗಾವಿ): ‘ಕರಿ ಎತ್ತು ಕಾಳಿಂಗ, ಬಿಳಿ ಎತ್ತು ಮಾಲಿಂಗ, ಸರದಾರ ನನ್ನೆತ್ತು, ಸಾರಂಗ ಬರುವಾಗ ಸರ್ಕಾರವೆಲ್ಲ ನಡುಗ್ಯಾವೊ…’ ಎಂದು ರೈತರು ಭೂಮಿಯಲ್ಲಿ ದುಡಿಯುವ ಎತ್ತುಗಳ ಬಗ್ಗೆ ವ್ಯಕ್ತಪಡಿಸುವ ಅಭಿಮಾನ-ಪ್ರೀತಿಗೆ ಪಾರವೇ ಇಲ್ಲ. ಅದರ ಮುಂದುವರಿದ ಭಾಗವಾಗಿ ಇಲ್ಲಿ ಶರ್ಯತ್ತುಗಳನ್ನು ನಡೆಸುವುದು ಇಲ್ಲಿನ ಟ್ರೆಂಡ್ ಆಗಿದೆ. ಶಿವಬೋಧರಂಗ ಜಾತ್ರೆಯಲ್ಲಿ ನಡೆಯುವ ಎತ್ತುಗಳ ಸ್ಪರ್ಧೆಯೂ ಗಮನಸೆಳೆಯುತ್ತದೆ. ಕಟ್ಟುಮಸ್ತಾದ ಎತ್ತುಗಳ ಠಾವು, ಎತ್ತುಗಳ ಮುಗದಾನು ಹಿಡಿದು ಹೆಜ್ಜೆ ಹಾಕುವ ಕುಸ್ತಿ ಪೈಲ್ವಾನರಂತಹ ರೈತರ ನಡಿಗೆಯು …

Read More »

ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ?

ಬೆಂಗಳೂರು: ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ? ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಕಾಯ್ದೆ ಜಾರಿಗೆ ತರಲು ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆಯುತ್ತಿದೆ.   ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋ ಗಾವಕಾಶ ಕಲ್ಪಿಸಿಕೊಡಲು “ದಿ ಕರ್ನಾಟಕ ಎಂಪ್ಲಾಯ್‌ಮೆಂಟ್‌ ಆಫ್ ನೇಟಿವ್‌ ಕ್ಯಾಂಡಿ ಡೇಟ್‌ ಇನ್‌ ಪ್ರೈವೇಟ್‌ ಸೆಕ್ಟರ್‌ ಆಯಕ್ಟ್-2020′ ಅನುಷ್ಠಾನ ಮಾಡಲು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹೇಳಿದೆ. ಇದು ಜಾರಿಗೊಂಡರೆ ಸಾಕಷ್ಟು …

Read More »