Breaking News

ಬೆಳಗಾವಿ: ವಿಚಕ್ಷಣೆಯಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ಬೆಳಗಾವಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರವೂ ಸೇರಿದಂತೆ ಜಿಲ್ಲೆಯ 52 ಕೇಂದ್ರಗಳಲ್ಲಿ ಶನಿವಾರ ಆರಂಭಗೊಂಡಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 11,199 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 5,967 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಭಾರಿ ನಿಗಾ ಹಾಗೂ ‌ವಿಚಕ್ಷಣೆಯಲ್ಲಿ ಈ‌ ಪರೀಕ್ಷೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಚಟುವಟಿಕೆಗಳ ರೆಕಾರ್ಡಿಂಗ್ ಮಾಡಲಾಗುತ್ತಿದೆ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮೊದಲಾದ …

Read More »

ಮೂಡಲಗಿ ಪಟ್ಟಣದ ವಿಶೇಷ: ಎತ್ತುಗಳ ಶರ್ಯತ್ತಿನ ರೋಮಾಂಚನ

ಬೆಳಗಾವಿ): ‘ಕರಿ ಎತ್ತು ಕಾಳಿಂಗ, ಬಿಳಿ ಎತ್ತು ಮಾಲಿಂಗ, ಸರದಾರ ನನ್ನೆತ್ತು, ಸಾರಂಗ ಬರುವಾಗ ಸರ್ಕಾರವೆಲ್ಲ ನಡುಗ್ಯಾವೊ…’ ಎಂದು ರೈತರು ಭೂಮಿಯಲ್ಲಿ ದುಡಿಯುವ ಎತ್ತುಗಳ ಬಗ್ಗೆ ವ್ಯಕ್ತಪಡಿಸುವ ಅಭಿಮಾನ-ಪ್ರೀತಿಗೆ ಪಾರವೇ ಇಲ್ಲ. ಅದರ ಮುಂದುವರಿದ ಭಾಗವಾಗಿ ಇಲ್ಲಿ ಶರ್ಯತ್ತುಗಳನ್ನು ನಡೆಸುವುದು ಇಲ್ಲಿನ ಟ್ರೆಂಡ್ ಆಗಿದೆ. ಶಿವಬೋಧರಂಗ ಜಾತ್ರೆಯಲ್ಲಿ ನಡೆಯುವ ಎತ್ತುಗಳ ಸ್ಪರ್ಧೆಯೂ ಗಮನಸೆಳೆಯುತ್ತದೆ. ಕಟ್ಟುಮಸ್ತಾದ ಎತ್ತುಗಳ ಠಾವು, ಎತ್ತುಗಳ ಮುಗದಾನು ಹಿಡಿದು ಹೆಜ್ಜೆ ಹಾಕುವ ಕುಸ್ತಿ ಪೈಲ್ವಾನರಂತಹ ರೈತರ ನಡಿಗೆಯು …

Read More »

ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ?

ಬೆಂಗಳೂರು: ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ? ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಕಾಯ್ದೆ ಜಾರಿಗೆ ತರಲು ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆಯುತ್ತಿದೆ.   ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋ ಗಾವಕಾಶ ಕಲ್ಪಿಸಿಕೊಡಲು “ದಿ ಕರ್ನಾಟಕ ಎಂಪ್ಲಾಯ್‌ಮೆಂಟ್‌ ಆಫ್ ನೇಟಿವ್‌ ಕ್ಯಾಂಡಿ ಡೇಟ್‌ ಇನ್‌ ಪ್ರೈವೇಟ್‌ ಸೆಕ್ಟರ್‌ ಆಯಕ್ಟ್-2020′ ಅನುಷ್ಠಾನ ಮಾಡಲು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹೇಳಿದೆ. ಇದು ಜಾರಿಗೊಂಡರೆ ಸಾಕಷ್ಟು …

Read More »

ಭ್ರಷ್ಟಾಚಾರದ ರಾಜಧಾನಿಯಾಗಿದೆ. ಕರ್ನಾಟಕ. ಶೇ. 40 ಕಮಿಷನ್‌ ಜಗಜ್ಜಾಹೀರು: ಸಲೀಂ ಅಹ್ಮದ್‌

ಮಂಗಳೂರು: ರಾಜ್ಯದಲ್ಲಿ ತಾ.ಪಂ., ಜಿ.ಪಂ.ನ ಆಡಳಿತ ಅವಧಿ ಮುಗಿದು ವರ್ಷ ಕಳೆದಿದ್ದು ಸರಕಾರ ಕೂಡಲೇ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.   ಭ್ರಷ್ಟಾಚಾರದ ರಾಜಧಾನಿಯಾಗಿದೆ. ಕರ್ನಾಟಕ. ಶೇ. 40 ಕಮಿಷನ್‌ ಜಗಜ್ಜಾಹೀರು ಆಗಿದ್ದು ರಾಜ್ಯದ ಜನ ತಲೆತಗ್ಗಿಸುವಂತಾಗಿದೆ ಎಂದರು. ಸರಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಹಾಗೂ ಇದರ ವಿರುದ್ಧ ಹೋರಾಟದ ಕಾರ್ಯವನ್ನು ಕಾಂಗ್ರೆಸ್‌ ಮಾಡಲಿದೆ. ಜನತೆ ಬದಲಾವಣೆ ಬಯಸಿದ್ದು, ಮುಂದಿನ …

Read More »

ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸದಾನಂದ ಹಸೆಮಣೆ ಏರಿದ್ದಾರೆ.

ಕಿರುತೆರೆಯ ಸೂಪರ್ ಹಿಟ್ `ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಸದಾನಂದ ಹಸೆಮಣೆ ಏರಿದ್ದಾರೆ. ಇದೀಗನಟ ಸದಾನಂದ ಮದುವೆಯ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕು ಸುಲ್ತಾನ್‌ಪುರ ಗ್ರಾಮದ ಪ್ರತಿಭೆ ಸದಾನಂದ ದುರ್ಗಪ್ಪ ಕಾಳೆ ಅವರು ಖಾಸಗಿ ಚಾನೆಲ್‌ನ್ನ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದರು. ತಮ್ಮ ಅಮೋಘ ನಟನೆಯಿಂದ ಗಮನ ಸೆಳೆದಿದ್ದ ನಟ ಸದಾನಂದ ಇಂದು ಸರಳವಾಗಿ ವಿವಾಹವಾಗಿದ್ದಾರೆ. …

Read More »

10 ದಿನ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ‌ ಮಗಳು

26 ವರ್ಷದ ಮಹಿಳೆಯೊಬ್ಬರು ಸುಮಾರು 10 ದಿನಗಳ ಕಾಲ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆಕೆಯ ತಾಯಿ ಮೇ ಹತ್ತರಂದು ನಿಧನರಾದರು, ಆದರೆ ಆಕೆ ತಾಯಿಯ ಸಾವಿನ ಬಗ್ಗೆ ತನ್ನ ಸಂಬಂಧಿಕರು ಅಥವಾ ಸ್ನೇಹಿತರಿಗೆ ತಿಳಿಸಲಿಲ್ಲ. ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ತಿಳಿಸಿದ್ದರಿಂದ, ಪೊಲೀಸರು ಬಾಗಿಲು ಒಡೆದು ನೋಡಿದಾಗ ಕೊಳೆತ ಶವ ಪತ್ತೆಯಾಯಿತು. ಎಚ್‌ಎಎಲ್‌ನ ನಿವೃತ್ತ ಎಂಜಿನಿಯರ್ …

Read More »

ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 7 ಮಂದಿ ದುರ್ಮರಣ!

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಧಾರವಾಡತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20) ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. ಕ್ರೂಸರ್ ಚಾಲಕನ ಅಜಾಗರೂಕತೆಯಿಂದಲೇ ಈ …

Read More »

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.   ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ …

Read More »

ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು: ವಿಡಿಯೊ ಹಂಚಿ ಟಿಎಸ್‌ಆರ್‌ಟಿಸಿ ಎಚ್ಚರಿಕೆ

ಹೈದರಾಬಾದ್‌: ಮೋಟರ್‌ ಬೈಕ್‌ನ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ, ಕೆಳಗೆ ಬಿದ್ದ 18 ವರ್ಷದ ಯುವತಿ ಸಾವಿಗೀಡಾಗಿರುವ ಘಟನೆ ಹೈದರಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದೆ. ಸೋದರನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಬುರ್ಖಾ ಹಿಂಬದಿಯ ಚಕ್ರಕ್ಕೆ ಸುತ್ತಿಕೊಂಡಿದೆ. ಹೀಗಾಗಿ ಇಬ್ಬರೂ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಆದರೆ, ಯುವತಿಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದ್ದು, ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ವಿಡಿಯೋವನ್ನು ತೆಲಂಗಾಣದ ಸಾರಿಗೆ ನಿಗಮದ ಎಂಡಿ ವಿಸಿ ಸಜ್ಜನರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, …

Read More »

ಮೇ 21, 22ರಂದು ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ತೀರದಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.   ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ 115ಮಿ.ಮೀಗೂ ಅಧಿಕ ಮಳೆ ಸುರಿಯುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ …

Read More »