ಬೆಂಗಳೂರು: ‘ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದು ಬಿಜೆಪಿ ಟೀಕಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂಬ ವರದಿಯೊಂದನ್ನು ಉಲ್ಲೇಖಿಸಿ ಬಿಜೆಪಿಯ ರಾಜ್ಯ ಘಟಕವು ಸರಣಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ‘ರಾಜಕಾರಣದಲ್ಲಿ ನಂಬಿಕೆದ್ರೋಹಿಗಳು ಹಾಗೂ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಕೆಲವು …
Read More »ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ : A.A.P. ಮೋಹನ್ ದಾಸರಿ
ಬೆಂಗಳೂರು: ‘ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು. ಮಾಧ್ಯಮಗಳ ಜತೆ ಬುಧವಾರ ಮಾತನಾಡಿದ ಅವರು,’ಬೆಂಗಳೂರಿನ ಜನ ಮಳೆಗೆ ತತ್ತರಿಸಿ, ಇಬ್ಬರು ಪ್ರಾಣ ಕಳೆದುಕೊಂಡಿರುವುದಕ್ಕೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ’ ಎಂದು ದೂರಿದರು. ‘ಬಿಜೆಪಿ ಸರ್ಕಾರ ರಾಜಕಾಲುವೆ ಹೆಸರಿನಲ್ಲಿ ಸಾವಿರಾರು ಕೋಟಿ …
Read More »KGF2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಹಾವೇರಿ: ಕಳೆದ ಏಪ್ರಿಲ್ 19 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಯುವಕನೊಬ್ಬನ ಮೇಲೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಅಂತೂ ಹೆಡೆಮುರಿಕಟ್ಟಿದ್ದಾರೆ. ಬಂಧಿತನನ್ನು ಶಿಗ್ಗಾವಿ ಧಖನಿ ಓಣಿಯ ಮಂಜುನಾಥ್ ಶಾಂತಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಎಸ್ಪಿ ಹನುಮಂತರಾಯ ಈ ಮಾಹಿತಿ ತಿಳಿಸಿದರು. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಹಾಗೂ ಆತನ ನಾಲ್ವರು ಸ್ನೇಹಿತರು ಏ.19 ರಂದು …
Read More »ರಾಘವೇಂದ್ರ ಚನ್ನಣ್ಣನವರ ವಿರುದ್ಧ ಎಫ್ಐಆರ್
ಬೆಂಗಳೂರು : ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ವರದಕ್ಷಿಣೆ ಕಿರುಕುಳ (ಐಪಿಸಿ …
Read More »ಪಿಎಸ್ಐ ನೇಮಕಾತಿ ಅಕ್ರಮ ಸೂಪರಿಂಟೆಂಡೆಂಟ್ ಮಂಜುನಾಥ್ ರನ್ನ ಬಂಧಿಸಿದ C.I.D.
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಕಚೇರಿ ಸೂಪರಿಂಟೆಂಡೆಂಟ್ ಮಂಜುನಾಥ್ ಅವರನ್ನು ಸಿಐಡಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮೇ 23ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ‘ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯ ವಿಭಾಗವೊಂದರಲ್ಲಿ ಮಂಜುನಾಥ್ ಕೆಲಸ ಮಾಡುತ್ತಿದ್ದ. ಪೊಲೀಸ್ ನೇಮಕಾತಿ ವಿಭಾಗದ ನೌಕರರ ಜೊತೆ ಒಡನಾವಿಟ್ಟುಕೊಂಡು ಅಕ್ರಮದಲ್ಲಿ ಭಾಗಿಯಾಗಿದ್ದ’ ಎಂದು ಸಿಐಡಿ ಮೂಲಗಳು ಹೇಳಿವೆ. ‘ಪಿಎಸ್ಐ ಹುದ್ದೆಗೆ ಅಕ್ರಮವಾಗಿ …
Read More »ರಾಜ್ಯದ ಹಲವೆಡೆ ಧಾರಾಕಾರ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು/ ಮೈಸೂರು: ರಾಜ್ಯದ ಹಲವೆಡೆ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ವಿವಿಧೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕೆರೆ ಏರಿಗಳು ಒಡೆದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷಿ ಜಮೀನಿನಲ್ಲಿ ನೀರು ನಿಂತು ಬೆಳೆಗಳು ಕೊಳೆಯಲಾರಂಭಿಸಿವೆ. ಮಡಿಕೇರಿ- ಚಟ್ಟಳ್ಳಿ ರಸ್ತೆ ಬದಿಯ ನಾಲ್ಕು ಸ್ಥಳದಲ್ಲಿ ಮಣ್ಣು ಕುಸಿದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಸಿಡಿಲು ಬಡಿದು ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ರೈತ ಮಹಿಳೆ ವಿದ್ಯಾವತಿ ನರಸಪ್ಪ ಟೊಳ್ಳೆ (52) ಮತ್ತು ಯಾದಗಿರಿ ಜಿಲ್ಲೆಯ …
Read More »ಸಹಾಯಕ ಪ್ರಾಧ್ಯಾಪಕರ ನೇಮಕ ‘ಒಎಂಆರ್’ ತಿದ್ದಿ ಅಕ್ರಮ ?
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ‘ಒಎಂಆರ್’ ತಿದ್ದಿ ಅಕ್ರಮ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಕೆಲವು ಮಾಹಿತಿ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಿಸಿಬಿ ಪೊಲೀಸರು ಪತ್ರ ಬರೆದಿದ್ದಾರೆ. ಇಬ್ಬರ ಮೇಲೆ ಅನುಮಾನ: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಇರುವ ಮಾಹಿತಿ ಇದೆ. ಆ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ನೀಡುವಂತೆ …
Read More »ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ..!
‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ನಟಿ ಸಂಜನಾ ಗಲ್ರಾನಿ. ಡ್ರಗ್ಸ್ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡ ಹಿನ್ನಲೆಯಲ್ಲಿ, ಗಂಡ ಹೆಂಡತಿ ನಾಯಕಿಯ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅದೇ ಸಮಯದಲ್ಲಿ ಬಹುದಿನದ ಗೆಳೆಯ, ಅಜೀಜ್ ಪಾಷಾ ಜೊತೆ ಸಂಜನಾ ಗಲ್ರಾನಿ ಮದುವೆ ಮಾಡಿಕೊಂಡಿದ್ದರು. ಇದರ ಫಲವಾಗಿ ಸಂಜನಾ ಗಲ್ರಾನಿ ಅವರಿಗೆ ಇಂದು, ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …
Read More »PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಮೂಡ್ನಲ್ಲಿದ್ದವನಿಗೆ ಸಿಐಡಿ ಶಾಕ್
ಬಾಗಲಕೋಟೆ: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮ ಉರುಳು ನವ ವಿವಾಹಿತನಿಗೂ ಸುತ್ತಿಕೊಂಡಿದ್ದು, ಮೊದಲ ರಾತ್ರಿಯ ಮೂಡ್ನಲ್ಲಿದ್ದವನಿಗೆ ಸಿಐಡಿ ಶಾಕ್ ಕೊಟ್ಟಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಶ್ರೀಕಾಂತ್ ಚೌರಿ ಬಂಧಿತ. ಮೇ 14ರಂದು ಜಮಖಂಡಿ ನಗರದಲ್ಲಿ ಶ್ರೀಕಾಂತ್ನ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಇದಾದ 5 ದಿನಕ್ಕೆ ಸಿಐಡಿ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡದಲ್ಲಿರುವ ಇನ್ಸ್ಪೈರ್ ಇಂಡಿಯಾ ಐಎಎಸ್ ಆಯಂಡ್ ಕೆಎಎಸ್ ಕೋಚಿಂಗ್ ಸೆಂಟರ್ನ ಮಾಜಿ ನಿರ್ದೇಶಕನಾಗಿದ್ದ ಶ್ರೀಕಾಂತ, ಪಿಎಸ್ಐ ಅಭ್ಯರ್ಥಿಗಳಿಂದ …
Read More »ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ
ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ ಎಂಬಂತಾಗಿದೆ. ಸಮಸ್ಯೆ ಜೊತೆಗೆ ಗೊಂದಲವೂ ಸೇರಿ ಕೊನೆಗೆ ಈ ವಿದ್ಯಾರ್ಥಿನಿ ಸಾವಿನ ಮೊರೆ ಹೋಗಿದ್ದಳು. ಹುಬ್ಬಳ್ಳಿಯ ಕಾರವಾರ ರಸ್ತೆಯ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಈ ಆತ್ಮಹತ್ಯೆ ನಡೆದಿದೆ. ಹೆಡ್ ಕಾನ್ಸ್ಟೆಬಲ್ ಮಲ್ಲಪ್ಪ ಬದಾಮಿ ಎಂಬುವರ ಪುತ್ರಿ ಕಾವ್ಯಾ ಬದಾಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ್ದಳು. ಆದರೆ ಪಿಯುಸಿ ಪ್ರಥಮ ವರ್ಷದ ಪರೀಕ್ಷೆಯಲ್ಲಿ …
Read More »
Laxmi News 24×7