Breaking News

ಹಿಜಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ

ಬೆಳಗಾವಿ: ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಬೆಳಗಾವಿ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಪಾಟೀಲ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವೈಯಕ್ತಿಕವಾಗಿ ಮನವೊಲಿಕೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳ ಜೊತೆಗೆ ಒನ್ ಟು ಒನ್ ಮಾತುಕತೆ ಮಾಡಲಾಗಿದೆ ಎಂದು …

Read More »

ಶತಕದ ಸಂಭ್ರಮದಲ್ಲಿ ನೆನಪಿರಲಿ ಪ್ರೇಮ್

ಕೋವಿಡ್ ಆತಂಕದ ನಡುವೆಯೂ ಬಿಡುಗಡೆ ಆಗಿದ್ದ ನೆನಪಿರಲಿ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯ’ ಸಿನಿಮಾ ಶತದಿನೋತ್ಸವ ಆಚರಿಸಿದೆ. ಪ್ರೇಮ್ ಸಿನಿಮಾ ರಂಗಕ್ಕೆ ಬಂದು 20 ವರ್ಷಗಳು ಪೂರೈಸಿದ ಸಂಭ್ರಮದಲ್ಲಿರುವಾಗ ‘ಪ್ರೇಮಂ ಪೂಜ್ಯಂ’ ನೂರು ದಿನಗಳ ಪ್ರದರ್ಶನ ಕಂಡಿದ್ದು, ಅವರ ಸಂತಸವನ್ನು ಇಮ್ಮಡಿಗೊಳಿಸಿದೆ. ಹಾಗಾಗಿ ಸಿನಿಮಾ ಗೆಲ್ಲಿಸಿದ ಅಭಿಮಾನಿಗಳಿಗೆ ಮತ್ತು ಚಿತ್ರತಂಡಕ್ಕೆ ಹಾಗೂ ಚಿತ್ರೋದ್ಯಮದ ಸರ್ವರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಪ್ರೇಮ್, ಪ್ರಾಣ ಚಿತ್ರದ ಮೂಲಕ 2004ರಲ್ಲಿ …

Read More »

ಸ್ಟೇಷನ್‍ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ – ಹೊತ್ತಿ ಉರಿದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್

ಪಾಟ್ನಾ: ಬಿಹಾರದ ಮಧುಬನಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಪೂರ್ವ ಕೇಂದ್ರ ರೈಲ್ವೆ (ಇಸಿಆರ್) ತಿಳಿಸಿದೆ. ಪೂರ್ವ ಕೇಂದ್ರ ರೈಲ್ವೆ ಪ್ರಕಾರ ಇಂದು ಬೆಳಗ್ಗೆ 9.13ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 9.50ಕ್ಕೆ ಬೆಂಕಿ ನಂದಿಸಲಾಗಿದೆ. ಜಯನಗರದಿಂದ ನವದೆಹಲಿಗೆ ತೆರಳುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‍ನಲ್ಲಿ ಈ ಘಟನೆ ಸಂಭವಿಸಿದೆ.   #WATCH | Fire breaks out in an …

Read More »

ಏಷ್ಯಾದ ಅತೀ ದೊಡ್ಡ ಬಯೋ-ಸಿಎನ್‍ಜಿ ಸ್ಥಾವರ ಉದ್ಘಾಟಿಸಿದ ಮೋದಿ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಪ್ರದೇಶದ ಇಂದೋರ್‍ನಲ್ಲಿ ಪುರಸಭೆಯ ಘನ ತ್ಯಾಜ್ಯ ಆಧಾರಿತ ಗೋಬರ್-ಧನ್(ಬಯೋ-ಸಿಎನ್‍ಜಿ) ಸ್ಥಾವರವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ. ಇಂದೋರ್‍ನ ಪುರಸಭೆಯ ಘನತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರವನ್ನು ಉದ್ಘಾಟಿಸಿದ ಮೋದಿ ದೇಶದ 75 ದೊಡ್ಡ ನಾಗರಿಕ ಸಂಸ್ಥೆಗಳಲ್ಲಿ ಗೋಬರ್-ಧನ್ ಸ್ಥಾವರದಂತಹ ಜೈವಿಕ-ಸಿಎನ್‍ಜಿ ಸ್ಥಾವರಗಳನ್ನು ನಿರ್ಮಿಸುವ ಕೆಲಸ ನಡೆಯುತ್ತಿದೆ ಎಂಬುದು ನನಗೆ ಸಂತೋಷವಾಗಿದೆ. ಮುಂದಿನ 2 ವರ್ಷಗಳಲ್ಲಿ ಈ ಉಪಕ್ರಮದಿಂದ ದೇಶದ ನಗರಗಳನ್ನು ಸ್ವಚ್ಛ, ಮಾಲಿನ್ಯ ಮುಕ್ತಗೊಳಿಸಲು ಹಾಗೂ …

Read More »

ಭದ್ರಾವತಿಯಲ್ಲಿ ಕಮಲ ಅರಳಿಸೋಕೆ ಎಲ್ಲರೂ ದುಡಿಯೋಣ : ನಾರಾಯಣಗೌಡ

ಶಿವಮೊಗ್ಗ : ಭದ್ರಾವತಿಗೂ, ಕೆ.ಆರ್. ಪೇಟೆಗೂ, ಮಂಡ್ಯ ಜಿಲ್ಲೆಗೂ ಅವಿನಾಭಾವ ಸಂಬಂಧ ಇದೆ. ಇವತ್ತು ಭದ್ರಾವತಿಯ ಜೆಡಿಎಸ್, ಕಾಂಗ್ರೆಸ್ ಹಲವು ಮುಖಂಡರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಇದು ಅವರು ಮಾಡಿರುವ ಒಳ್ಳೆಯ ತೀರ್ಮಾನ ಎಂದು ರೇಷ್ಮೆ ಮತ್ತು ಯುವಜನ ಸೇವಾ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ತಿಳಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಜೆಡಿಎಸ್ ಬಗ್ಗೆ ಮಾತೇ ಆಡಲ್ಲ. ಭದ್ರಾವತಿಯಲ್ಲಿ …

Read More »

ಭಯೋತ್ಪಾದಕನಾಗಿ ಅಂಬೇಡ್ಕರ್‌, ಭಗತ್‌ ಸಿಂಗ್‌ ಕನಸು ನನಸು ಮಾಡಿದ್ದೇನೆ: ಕೇಜ್ರಿವಾಲ್‌

ನವದೆಹಲಿ: ಭಯೋತ್ಪಾದಕನಾಗಿ ಬಾಬಾ ಸಾಹೇಬ್‌ ಅಂಬೇಡ್ಕರ್‌, ಭಗತ್‌ ಸಿಂಗ್‌ ಅವರ ಕನಸು ನನಸು ಮಾಡಿದ್ದೇನೆ. ರಾಷ್ಟ್ರ ರಾಜಧಾನಿಯಲ್ಲಿ 12,000 ಸ್ಮಾರ್ಟ್‌ ಶಾಲಾ ಕೊಠಡಿಗಳನ್ನು ರೂಪಿಸಿದ್ದೇನೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್‌ ಕೇಜ್ರಿವಾಲ್‌, ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಚುನಾವಣೆ ನಡೆಯಲಿರುವ ಪಂಜಾಬ್‌ನಲ್ಲಿ ಪ್ರತ್ಯೇಕತಾವಾದಿ ಎಂದು ವಿರೋಧ ಪಕ್ಷಗಳು ನನ್ನ ಮೇಲೆ ವಾಗ್ದಾಳಿ ನಡೆಸುತ್ತಿವೆ. ನಾನು ಈ ಶಾಲಾ ಕೊಠಡಿಗಳನ್ನು ದೇಶಕ್ಕೆ ಅರ್ಪಿಸಿದ್ದೇನೆ. ಭಯೋತ್ಪಾದಕನೊಬ್ಬ, ಬಡವರು ಮತ್ತು ಶ್ರೀಮಂತರ ಮಕ್ಕಳು …

Read More »

ಎಸ್‌ಡಿಪಿಐ, ಪಿಎಫ್‌ಐ ವಿರುದ್ಧ ಎಚ್ಚರಿಕೆ ಅಗತ್ಯ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಎಸ್‌ಡಿಪಿಐ, ಪಿಎಫ್‌ಐ ಸಂಸ್ಥೆಗಳು ಹಿಜಾಬ್ ವಿಷಯ ಇಟ್ಟುಕೊಂಡು ಮುಗ್ಧ ವಿದ್ಯಾರ್ಥಿಗಳ ಮನಸ್ಸು ಹಾಳು ಮಾಡುತ್ತಿದೆ. ಸಮಾಜದ ಶಾಂತಿ, ನೆಮ್ಮದಿಗೆ ಭಂಗ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ದೇಶದಲ್ಲಿ ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಕೆಲವರು ಹಿಜಾಬ್ ವಿಷಯ ಇಟ್ಟುಕೊಂಡು ಶಾಂತಿ ಕದಡುತ್ತಿದ್ದಾರೆ. ರಾಜ್ಯಕ್ಕೆ ಕಪ್ಪುಚುಕ್ಕೆ ಇಡುವ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯರಲ್ಲಿ ಎಚ್ಚರ ಮೂಡಿಸಬೇಕಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು. ಸದನದಲ್ಲಿ ಈಗಾಗಲೇ ಚರ್ಚೆ ಆರಂಭವಾಗಿತ್ತು. …

Read More »

ಸಾವಿರಾರು ಅಡಿಕೆ ಗಿಡಗಳು ನೆಲಸಮ

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 15 ದಿನಗಳಿಂದ ಕಾಡು ಹಂದಿ ಕಾಟ ಹೆಚ್ಚಿದ್ದು, ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಬೆನವಳ್ಳಿ ಗ್ರಾಮದ ಕೃಷಿಕರಾದ ನಾಗಾರ್ಜುನಪ್ಪ ಗೌಡ (125), ರವೀಂದ್ರ ಗೌಡ (113), ಬಿ.ಎಲ್‌. ಲಿಂಗಪ್ಪಗೌಡ (63), ರಾಚಪ್ಪ ಗೌಡ (103), ಸುರೇಶ್‌ ಗೌಡ (418), ಶಾಂತಕುಮಾರ್‌ ಗೌಡ (400), ಶಿವಮ್ಮ 220, ಕುಸುಮಮ್ಮ (100) ಸೇರಿ ಇನ್ನೂ ಹಲವರ ಸಾವಿರಾರು ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳು …

Read More »

ಹಡಗಿಗೆ ಬೆಂಕಿ: 4 ಸಾವಿರ ಐಷಾ ರಾಮಿ ಕಾರುಗಳು ಭಸ್ಮ

ವಾಷಿಂಗ್ಟನ್‌: ಜರ್ಮನಿಂದ ಅಮೆರಿಕದ ರೋಹಿಡೆ ದ್ವೀಪಕ್ಕೆ ಐಷಾ ರಾಮಿ ಕಾರುಗಳನ್ನು ಕೊಂಡೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಶಾಂತಿ ಸಾಗರ ವ್ಯಾಪ್ತಿಯ ಅಜೋರ್ಸ್‌ ದ್ವೀಪದ ಸಮೀಪ ಸಂಭವಿಸಿದೆ. ಇದರಿಂದಾಗಿ ಅದರಲ್ಲಿದ್ದ ಪೋರ್ಶೆ, ಲ್ಯಾಂಬೊ ರ್ಗಿನಿ, ಆಡಿ ಸೇರಿದಂತೆ 4 ಸಾವಿರ ದುಬಾರಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ.   ಹಡಗಿನಲ್ಲಿದ್ದ 22 ಸಿಬಂದಿಯನ್ನು ಪೋರ್ಚುಗಲ್‌ನ ನೌಕಾಪಡೆ ಮತ್ತು ವಾಯುಪಡೆ ಸಿಬಂದಿ ರಕ್ಷಿಸಿದ್ದಾರೆ. 650 ಅಡಿ ಉದ್ದದ ಹಡಗು ಜರ್ಮನಿಂದ ಫೆ.10ಕ್ಕೆ ಪ್ರಯಾಣ ಶುರು …

Read More »

ಹುಡುಗ-ಹುಡುಗಿಯರು ರಾತ್ರಿಯ ಸಮಯದಲ್ಲಿ ಗೂಗಲ್ ನಲ್ಲಿ ಏನು ಹುಡುಕಾಟ ನಡೆಸುತ್ತಾರೆ ಗೊತ್ತಾ..?

ಸದ್ಯ ಮೊಬೈಲ್ ನಮ್ಮ ಜೀವನದ ಒಂದು ಭಾಗ, ಮನುಷ್ಯನಿಗೆ ಮೊಬೈಲ್ ಎಂಬುದು ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದೆ. ಒಂದು ಹೊತ್ತು ಊಟ ಇಲ್ಲದಿದ್ದರು ಕೂಡ ವ್ಯಕ್ತಿ ಸಹಿಸಿಕೊಳ್ಳುತ್ತಾನೆ. ಆದರೆ ಅರೆ ಕ್ಷಣ ಮೊಬೈಲ್ ಕಾಣಿಸದಿದ್ದರೆ ವ್ಯಕ್ತಿ ವಿಲ ವಿಲ ಅನ್ನೋ ರೀತಿ ಒದ್ದಾಡಿ ಬಿಡುತ್ತಾನೆ‌. ಸದಾ ಮೊಬೈಲ್ ನಲ್ಲಿರುವ ಜನರು ಏನನ್ನು ನೋಡ್ತಾರೆ ಎಂಬ ಪ್ರಶ್ನೆ ಹಿರಿಯರನ್ನು ಕಾಡುವುದುಂಟು. ಸಣ್ಣ ಮಾಹಿತಿ ಇರಲಿ, ದೊಡ್ಡ ಸಮಸ್ಯೆಯಿರಲಿ ಮೊದಲು ಕೈ ಹೋಗುವುದು ಗೂಗಲ್ …

Read More »