ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಬರ್ತಾರೆ ವ್ಯಕ್ತಿಗಳು ಹೋಗ್ತಾರೆ. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳು ಅಲ್ಲ ಪಕ್ಷ ದೊಡ್ಡದು. ಗೋಕಾಕ ಕಾಂಗ್ರೆಸ್ ಪಕ್ಷದ ತವರು ಮನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಅಶೋಕ ಪೂಜಾರಿ ಕುಟುಂಬ ಒಟ್ಟು ಆರು …
Read More »ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳ ಶಿಕ್ಷಕರ ನೇಮಕಕ್ಕೆ ಕ್ರಮ : ಸಿಎಂ ಬೊಮ್ಮಾಯಿ
ಬೆಳಗಾವಿ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ. 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ …
Read More »ಎಸ್.ಟಿ.ಗೆ ಕಾಡುಗೊಲ್ಲರ ಸೇರ್ಪಡೆ : ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ : ಸಚಿವ ಜೆ.ಸಿ.ಮಾಧುಸ್ವಾಮಿ
ಬೆಳಗಾವಿ : ಹಿಂದುಳಿದ ಬುಡಕಟ್ಟಿಗೆ ಸೇರಿರುವ ಅನಕ್ಷರತೆ, ಪಶುಪಾಲನೆ ವೃತ್ತಿನಿರತರಾಗಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಠ ಪಂಗಡ (ಎಸ್.ಟಿ)ಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿ ಪತ್ರ ಬರೆದಿದೆ.ಕುಲಶಾಸ್ತ್ರೀಯ ಅಧ್ಯಯನ ಮಾಡಿರುವ ತಜ್ಞರ ಮೂಲಕ ಮಾಹಿತಿ ಪಡೆದು ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆಗಳನ್ನು ಕಳುಹಿಸಲಾಗುವುದು.ಕಾಡುಗೊಲ್ಲರ ಹಿತರಕ್ಷಣೆ ಹಾಗೂ ಪೂರ್ಣ ಪ್ರಮಾಣದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಕಂಕಣಬದ್ಧವಾಗಿದೆ ಎಂದು ಕಾನೂನು,ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ …
Read More »ಫೆಬ್ರವರಿ ಅಪಾಯ: ಭಾರತದಲ್ಲಿ ದಿನಕ್ಕೆ 1.5 ಲಕ್ಷ ಜನರಿಗೆ ಓಮಿಕ್ರಾನ್ ಸೋಂಕು!?
ನವದೆಹಲಿ, ಡಿಸೆಂಬರ್ 21: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚುತ್ತಿದೆ. 2022ರ ಫೆಬ್ರವರಿ ತಿಂಗಳ ಹೊತ್ತಿಗೆ ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಪ್ರಕರಣಗಳು ವರದಿಯಾಗುವ ಅಪಾಯವಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ ಕೊವಿಡ್-19 ಮೂರನೇ ಅಲೆಯು ಮುಂಬರುವ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಹೆಚ್ಚಾಗುವ ಸಾಧ್ಯತೆ ಇದ್ದು, ಅಲ್ಲಿಂದ ಮುಂದಿನ ಒಂದೇ ತಿಂಗಳಿನಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.?ಕಾನ್ಪುರ ಐಐಟಿಯ ಮಣೀಂದ್ರ ಅಗರವಾಲ್ ಮತ್ತು …
Read More »ಕೆಲ ಪುಂಡರ ಕೃತ್ಯದಿಂದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯುತ್ತಿವೆ.
ಬೆಂಗಳೂರು: ‘ಕರ್ನಾಟಕದಲ್ಲಿರುವ ಮರಾಠರು ಅಪ್ಪಟ ಕನ್ನಡಿಗರಾಗಿ, ಶಾಂತಿ ಸೌಹಾರ್ದದಿಂದ ಬದುಕುತ್ತಿದ್ದೇವೆ. ಕೆಲ ಪುಂಡರ ಕೃತ್ಯದಿಂದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯುತ್ತಿವೆ. ಇವುಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟವು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದೆ. ‘ಕರ್ನಾಟಕದಲ್ಲಿ ನೆಲೆಸಿರುವ ಮರಾಠರು ಅಪ್ಪಟ ಕನ್ನಡಿಗರು. ವಲಸೆ ಬಂದವರಲ್ಲ. ಕೆಲ ಕಿಡಿಗೇಡಿಗಳು ಭಾಷೆಯನ್ನು ಮುಂದಿಟ್ಟುಕೊಂಡು ಎರಡೂ ರಾಜ್ಯಗಳ ನಡುವೆ ದ್ವೇಷದ ಬೀಜ ಬಿತ್ತಿ, …
Read More »ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಳಗಾವಿ : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ. ಈಶ್ವರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ 2 ಸಭೆ ನಡೆಸಿದ್ದು, ಮುಂದಿನ ಸಭೆಯಲ್ಲಿ ಚರ್ಚಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕುರಿತಂತೆ ಶಿಫಾರಸು …
Read More »ಇಂದು ವಿಧಾನಸಭೆಯಲ್ಲಿ ವಿವಾದಿತ ಮತಾಂತರ ವಿರೋಧಿ ಮಸೂದೆಯ ಬಗ್ಗೆ ಚರ್ಚೆ
ಬೆಂಗಳೂರು:ಕರ್ನಾಟಕ ವಿಧಾನಸಭೆಯು ಬುಧವಾರ ವಿವಾದಿತ ಮತಾಂತರ ವಿರೋಧಿ ಮಸೂದೆಯ ಬಗ್ಗೆ ಚರ್ಚಿಸಲಿದೆ.ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೇ ಧರ್ಮದ ಸ್ವಾತಂತ್ರ್ಯದ ಹಕ್ಕು ಕರ್ನಾಟಕ ರಕ್ಷಣೆ ಮಸೂದೆ 2021 ಅನ್ನು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ಮಸೂದೆಯು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ತಪ್ಪಾಗಿ ನಿರೂಪಿಸುವಿಕೆ, ಬಲವಂತ, ಅನಗತ್ಯ ಪ್ರಭಾವ,ಆಮಿಷ ಅಥವಾ ಯಾವುದೇ ಮೋಸದ ವಿಧಾನದಿಂದ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರವನ್ನು ನಿಷೇಧಿಸಲು ಒದಗಿಸುತ್ತದೆ. ರಾಜ್ಯ ಕಾಂಗ್ರೆಸ್ …
Read More »ನಿನ್ನೆಯ ಅಬ್ಬರದ ಹೇಳಿಕೆಗೆ ಇಂದು ಕ್ಷಮೆಯಾಚಿಸಿದ ಸಿ.ಎಂ.ಇಬ್ರಾಹಿಂ
ಬೆಳಗಾವಿ, ಡಿ 21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹಾವೇರಿ ಭಾಷಣಕ್ಕೆ ವ್ಯಂಗ್ಯವಾಡುತ್ತಾ ಸೋಮವಾರದಂದು (ಡಿ 20) ನೀಡಿದ್ದ ಹೇಳಿಕೆಗೆ ಇಂದು, ವಿಧಾನಪರಿಷತ್ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಕ್ಷಮೆಯಾಚಿಸಿದ್ದಾರೆ. “ಅಳಬ್ಯಾಡ ತಂಗಿ ಅಳಬ್ಯಾಡ, ಬೊಮ್ಮಣ್ಣ ಅಳಬೇಡ. ಈಗ ಭಾವನಾತ್ಮಕವಾಗಿ ಮಾತನಾಡುತ್ತಿದ್ದಾರೆ. ಜಾಗ ಖಾಲಿ ಮಾಡುವ ಎನ್ನುವ ಸೂಚನೆ ಅವರಿಗೆ ಸಿಕ್ಕಿದೆ, ಅದಕ್ಕೆ ಯಾವುದೂ ಶಾಸ್ವತವಲ್ಲ ಎಂದು ಅವರು ಹೇಳುತ್ತಿದ್ದಾರೆ” ಎಂದು ಬೊಮ್ಮಾಯಿ ಭಾಷಣವನ್ನು ಇಬ್ರಾಹಿಂ ಲೇವಡಿ ಮಾಡಿದ್ದರು. …
Read More »ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ
ಬೆಳಗಾವಿ: ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ …
Read More »ರಾಜ್ಯ ವಿಧಾನಸಭೆಯಲ್ಲಿ ‘ಮತಾಂತರ ನಿಷೇಧ ವಿಧೇಯಕ’ ಮಂಡನೆ
ಬೆಂಗಳೂರು: ನಿನ್ನೆ ರಾಜ್ಯ ಸಚಿವ ಸಂಪುಟದಲ್ಲಿ ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಲಾಗಿದ್ದಂತ ಮತಾಂತರ ವಿಧೇಯಕ ಮಸೂಧೆಯನ್ನು ಅಂತೂ ಇಂತೂ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಇದೀಗ ಮಂಡಿಸಿದೆ. ಇಂದು ವಿಧಾನಸಭೆಯ ಕಲಾಪದ ಪಟ್ಟಿಯಲ್ಲಿ ಮತಾಂತರ ನಿಷೇಧ ವಿಧೇಯಕದ ಮಂಡನೆಯನ್ನು ಸೇರಿಸಿರಲಿಲ್ಲ. ಇದರ ನಡುವೆಯೂ ಮಧ್ಯಾಹ್ನದ ಭೋಜನದ ವಿರಾಮದ ನಂತ್ರ ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಮತಾಂತರ ನಿಷೇಧದ ವಿಧೇಯಕವನ್ನು ಮಂಡನೆ ಮಾಡಲಾಯಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದಂತ ವಿಪಕ್ಷ ನಾಯಕ …
Read More »