Breaking News

ಮತಾಂತರ ನಿಷೇಧ ಕಾಯ್ದೆಗೆ ಪರಿಷತ್, ವಿಧಾನಸಭೆ ಎರಡರಲ್ಲಿಯೂ ಜೆಡಿಎಸ್ ಬೆಂಬಲಿಸುವುದಿಲ್ಲ:H.D.K.

ಯಾವ ಉದ್ದೇಶದಿಂದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿದ್ದೇವೆ. ಅಧಿವೇಶನ ಆರಂಭ ಮಾಡಿದ್ದೇವೆ. ಅದರ ಸಂಪೂರ್ಣ ಉಪಯೋಗ ಆಗಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ವೀರರಾಣಿ ಕಿತ್ತೂರು ಚನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಈ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಇನ್ನಿತರು ಜೆಡಿಎಸ್ ನಾಯಕರು ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು. ಇದೇ ವೇಳೆ …

Read More »

ಕಾಂಗ್ರೆಸ್ ಬರಲು ಇಬ್ಬರು ಕಾರಣ? ಸತ್ಯ ಹೊರಗೆಡವಿದ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 21: ವಿಧಾನಸಭೆಯ ಅಧಿವೇಶನದ ಆರಂಭದಿಂದ ಅಂತ್ಯದವರೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಖದರ್ ದಿನವೂ ಇರುತ್ತದೆ. ತಮ್ಮ ಅನುಭವವನ್ನು ತಮ್ಮದೇ ರೀತಿಯಲ್ಲಿ ಪ್ರಸ್ತಾವಿಸುವಾಗ ವಿರೋಧಿಗಳೂ ಕಿವಿಗೊಟ್ಟು ಕೇಳುತ್ತಾರೆ. ಚಳಿಗಾಲದ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಅಹಿಂದ, ಬೆಳಗಾವಿ ಗಲಾಟೆ ಸೇರಿದಂತೆ, ಅಂದು ಕಾಂಗ್ರೆಸ್ ಬರಲು ಕಾರಣರಾದವರು ಯಾರು ಎನ್ನುವುದನ್ನೂ ಸವಿಸ್ತಾರವಾಗಿ ವಿವರಿಸಿದ್ದಾರೆ.   ಎಂಇಎಸ್ ಪುಂಡರ ಬಗ್ಗೆ ಸದನದಲ್ಲಿ ಪ್ರಸ್ತಾವಿಸಿದ ಸಿದ್ದರಾಮಯ್ಯ, “ಅವರು ಈ ನೆಲದಲ್ಲಿ ಇದ್ದಾರೆ, ನಮ್ಮ …

Read More »

ಕಿಲೋಮೀಟರ್‌ ಉದ್ದಕ್ಕೆ ಆಗಸದಲ್ಲಿ ಸಂಚರಿಸಿದ ಬೆಳಕಿನ ಸಾಲಿಗೆ ಜನರು ಕಂಗಾಲು! ವಿಜ್ಞಾನಿಗಳು ಹೇಳಿದ್ದೇನು?

ಬೆಂಗಳೂರು: ಸೋಮವಾರ (ಡಿ.20) ಬಾನಂಗಳದಲ್ಲಿ ವಿಸ್ಮಯವೊಂದು ನಡೆದಿದೆ. ಕಿಲೋಮೀಟರ್‌ಗಟ್ಟಲೆ ಉದ್ದವಿದ್ದ ನಕ್ಷತ್ರಗಳ ಸಾಲಿನಂತೆ ಗೋಚರಿಸಿದ ಬೆಳಕು ಸಂಚರಿಸಿದ್ದನ್ನು ನೋಡಿ ಜನರು ಹೌಹಾರಿ ಹೋಗಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇದು ಕಾಣಿಸಿಕೊಂಡಿದೆ.   ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಜನರು ರಾತ್ರಿ ಸುಮಾರು 7 ಗಂಟೆಯಿಂದ 9 ಗಂಟೆಯ ಅವಧಿಯಲ್ಲಿ ಒಂದೊಂದು ಕಡೆ ಒಂದೊಂದು ಅವಧಿಯಲ್ಲಿ ಕೆಲಕಾಲ‌ ಕಂಡು ಈ ಬೆಳಕಿನ ಸಾಲು ಮಾಯವಾಗಿದೆ. ಈ ವಿಸ್ಮಯವನ್ನು ಕಂಡಿದ್ದು ಸಾಮಾಜಿಕ …

Read More »

ಪ್ರೊ ಕಬಡ್ಡಿ ಲೀಗ್‌ನಲ್ಲಿ ಕನ್ನಡಿಗರ ಕಲರವ ; ರಾಜ್ಯದ ಡಜನ್‌ಗೂ ಹೆಚ್ಚು ಆಟಗಾರರು ಕಣಕ್ಕೆ

ಕೋವಿಡ್ ಮಹಾಮಾರಿಯಿಂದಾಗಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದೆ. ವಿಶೇಷವಾಗಿ ಈ ಬಾರಿ ಸಂಪೂರ್ಣ ಲೀಗ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ನಡೆಯುತ್ತಿದೆ. ಡಿಸೆಂಬರ್ 22ರಿಂದ ಬಯೋಬಬಲ್ ವ್ಯಾಪ್ತಿಯಲ್ಲಿ ಒಂದೇ ಹೋಟೆಲ್‌ನಲ್ಲಿ ಲೀಗ್ ಆಯೋಜಿಸಲಾಗುತ್ತಿದ್ದು, ಕೆಲ ದಿನಗಳಲ್ಲಿ 3 ಪಂದ್ಯಗಳೂ ನಡೆಯಲಿದ್ದು, ಕಬಡ್ಡಿ ಪ್ರಿಯರನ್ನು ರಂಜಿಸಲು ವೇದಿಕೆ ಸಜ್ಜಾಗಿದೆ. ಪ್ರೊ ಕಬಡ್ಡಿ ಲೀಗ್‌ನ ಆರಂಭಿಕ ದಿನಗಳಿಂದಲೂ ಕನ್ನಡಿಗರು ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದಾರೆ. ಹರಿಯಾಣ, ಮಹಾರಾಷ್ಟ್ರ ಬಳಿಕ ಕರ್ನಾಟಕದಿಂದ …

Read More »

ಹಿರೇಬಾಗೇವಾಡಿ ಬ್ಯಾಂಕ್ ಆಫ್ ಇಂಡಿಯಾಗೆ ಖದೀಮರ ಕನ್ನ:

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುವರ್ಣಸೌಧ ಸಮೀಪದಲ್ಲಿಯೇ ಇರುವ ಹಿರೇಬಾಗೇವಾಡಿ ಗ್ರಾಮದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ಗೆ ನಿನ್ನೆ ರಾತ್ರಿ ಖದೀಮರು ಕನ್ನ ಹಾಕಿದ್ದು. ಕಳ್ಳತನ ವಿಫಲಯತ್ನವಾಗಿದೆ. ಬ್ಯಾಂಕಿನ ಮುಂಬದಿಯ ಬಾಗಿಲನ್ನು ತೆರೆಯದೆ ಹಿಂಭಾಗದ ಬಾಗಿಲ ಮೂಲಕ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಬ್ಯಾಂಕ್‍ನ ಹಿಂಬಾಗಿಲ ಮೂಲಕ ನುಗ್ಗಿರುವ ಕಳ್ಳರು ಗ್ಯಾಸ್ ಕಟರ್ ಮೂಲಕ ಹಣ ತುಂಬುವ ಯಂತ್ರವನ್ನು ಎಟಿಎಂ …

Read More »

ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ

ಹೈದರಬಾದ್: ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹಿರಿಯ ಅಧ್ಯಾಪಕರಾದ ಕೋಲ್ಕತ್ತಾ ಮೂಲದ ಸುಪ್ರಿಯೊ ಚಕ್ರವರ್ತಿ(31) ಮತ್ತು ಎಂಎನ್‍ಸಿ ಉದ್ಯೋಗಿಯಾಗಿರುವ ದೆಹಲಿ ಮೂಲಕ ಅಭಯ್ ಡ್ಯಾಂಗ್ (34) ಬಿಳಿ ಸೂಟಿನಲ್ಲಿ ಉಂಗುರ ವಿನಿಮಯ ಮಾಡಿಕೊಳ್ಳುವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಂತರ ಬೆಂಗಾಲಿ ಮತ್ತು …

Read More »

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..

ಬೆಳಗಾವಿ. ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..   ಜಾಗನೂರ, ಪಾಮಲದಿನ್ನಿ, ಬಡಿಗವಾಡ ಹಾಗೂ ರಾಜಪೂರ ಗ್ರಾಮಸ್ಥರ ಕತ್ತಿ ವಿರುದ್ಧ ಕತ್ತಿ ಮಸೆಯತೊಡಗಿದ್ದಾರೆ ಕತ್ತಿ ಒಡೆತನದವಿಶ್ವರಾಜ್ ಸಕ್ಜರೆ ಕಾರ್ಖಾನೆಯ ವಿಷಪೂರಿತ ರಾಸಾಯನಿಕ ನೀರು ಹಳ್ಳಗಳಿಗೆ ಬಿಡುತ್ತಿರುವ ಹಿನ್ನಲೆ ಜಾನುವಾರುಗಳಿಗೆ ಚರ್ಮ ರೋಗ ಕಾಯಿಲೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.   ಸಚಿವ ಕತ್ತಿ ಪ್ರಭಾವದಿಂದಾಗಿ ಸ್ಥಳಕ್ಕೆ ತಹಶಿಲ್ದಾರ …

Read More »

MES ಪುಂಡಾಟದ ಹಿಂದಿನ ಡೈರೆಕ್ಟರ್​ & ಪ್ರೊಡ್ಯೂಸರ್​ DK ಶಿವಕುಮಾರ್; CT ರವಿ ವಾಗ್ದಾಳಿ

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಪುಂಡಾಟಕ್ಕೆ ಡಿ.ಕೆ ಶಿವಕುಮಾರ್​ ಅವ್ರೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ನವ್ರು ಹತಾಶೆಯ ಭಾವದಲ್ಲಿದ್ದಾರೆ. ಹೀಗಾಗಿ ದೇಶದಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಜೊತೆಗೆ ಇದೆಲ್ಲದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಇದ್ದು, ಅವರೇ ಈ ಪುಂಡಾಟದ ಹಿಂದಿನ ಅಸಲಿ ನಿರ್ದೇಶಕ …

Read More »

ಸಿಎಂ ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ.. ನಮ್ಮ ಶಾಪ ತಟ್ಟದೇ ಇರಲ್ಲ.. ಬಸವಪ್ರಕಾಶ ಸ್ವಾಮೀಜಿ

: ಬೆಳಗಾವಿ : ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಶಾಪ ಹಾಕಿದರು.  ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಪೊಲೀಸರನ್ನು ಚೂ‌ ಬಿಟ್ಟು ಕಾವಿ ಕುಲಕ್ಕೆ ಅವಮಾನ ಮಾಡಿದೆ. ಈ‌ ಅನ್ಯಾಯವನ್ನು ಲಿಂಗಾಯತ ಸಮುದಾಯ ಸಹಿಸಿಕೊಳ್ಳುವುದಿಲ್ಲ. ಸ್ವಾಮೀಜಿಗಳನ್ನು, ಲಿಂಗನಿಷ್ಠ ಪರವಾಗಿರುವ ಕಾರ್ಯಕರ್ತರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾವೆಲ್ಲರೂ …

Read More »

ಎಂಇಎಸ್ ಹಾಗೂ ಶಿವಸೇನೆಯನ್ನು ಕರ್ನಾಟಕದಿಂದ ನಿಷೇಧಿಸಿವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಅಪಮಾನ ಮಾಡಿದನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನಗೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಪ್ರತಿಭಟನೆ ಮಾಡಲಾಯಿತು.   ಹುಬ್ಬಳ್ಳಿಯ ದುರ್ಗದ ಬೈಲ್ ವೃತದಲ್ಲಿ ಪ್ರತಿಭಟನೆ ನಡೆಸಿ. ಎಂಇಎಸ್ ಹಾಗೂ ಶಿವಸೇನಾ ಪಕ್ಷ ವಿರುದ್ಧ …

Read More »