ಶಿವಮೊಗ್ಗ: ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, …
Read More »ಭಾರತೀಯ ರೈಲ್ವೆ ಹೊಸ ನಿಯಮ : ರಾತ್ರಿ ರೈಲಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ
ನವದೆಹಲಿ: ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್ ಸ್ಪೀಕರ್’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ. ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು …
Read More »ಯುವಕನ ಕೈಯಲ್ಲಿ ಮಗು ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆ
ರಾಯಚೂರು : ಶೌಚಾಯಲಯಕ್ಕೆ ಹೋಗಿ ಬರ್ತಿನಿ ಇಟ್ಕೊಳಿ ಅಂತ ಹೇಳಿ ಅಪರಿಚಿತ ಮಹಿಳೆ 9 ತಿಂಗಳ ಹಸುಗೂಸನ್ನು ಯುವಕನೊಬ್ಬನ ಕೈಗೆ ಕೊಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೈಸೂರು ಮೂಲದ ಯುವಕ ಕೆಲಸದ ಮೇಲೆ ರಾಯಚೂರಿಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಯುವಕ ಕರೆತಂದ ಮಗುವನ್ನು ಲಷ್ಕರ್ ಠಾಣೆ ಪೊಲೀಸರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ವೈಯಕ್ತಿಕ ಕೆಲಸಕ್ಕಾಗಿ ರಾಯಚೂರಿಗೆ ತೆರಳಿದ್ದರು. ಈ ಮಧ್ಯೆ ಮೈಸೂರಿಗೆ …
Read More »ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ:D.K.
ಶಿವಮೊಗ್ಗ: ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದ ಜನಧ್ವನಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೂಂದಿಗೆ ಮಾತನಾಡಿದ ಅವರು, ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದರು. ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್ಗಳು, …
Read More »ಮೇ ಮೂರನೇ ವಾರದಲ್ಲಿ ಎಸ್ಎಸ್ಎಲ್ ಸಿ ರಿಸಲ್ಟ್
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.
Read More »ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ ಉಮಾದೇವಿ ಹೇಳಿದರು. ಪಟ್ಟಣದ ಜಿಜೆಸಿಪಿ ಕಾಲೇಜು ಬಳಿ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ನಿಗದಿತ ವೇತನವಿಲ್ಲದೆ ಅನಿಶ್ಚಿತೆಯಿಂದ ಬದುಕುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನದ ಭದ್ರತೆ ಕಲ್ಪಿಸಬೇಕು, ಆರ್ ಸಿ ಎಚ್ ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ನಿಗದಿತ …
Read More »ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು
ನವದೆಹಲಿ/ ಬೆಂಗಳೂರು: ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ. ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ …
Read More »ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಪತ್ನಿ ಆತ್ಮಹತ್ಯೆ
ಚೆನ್ನೈ: ತನ್ನ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದಿರುವುದಕ್ಕೆ ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದ ರಮ್ಯಾ ಆತ್ಮಹತ್ಯೆ ಶರಣಾದ ಗೃಹಿಣಿ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಎಂಬವರನ್ನು ವಿವಾಹವಾಗಿದ್ದರು. ಮೂಲಗಳ ಪ್ರಕಾರ, ರಮ್ಯಾ ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಮದುವೆಯ ನಂತರ ತನ್ನ ತಾಯಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು. ಇದೇ ವೇಳೆ …
Read More »ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು. ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ. …
Read More »ಕನ್ನಡ ಫಲಕಕ್ಕಾಗಿ ಮಾತುಕತೆ ನಡೆಸಿ: ಅಶೋಕ ಚಂದರಗಿ
ಬೆಳಗಾವಿ: ‘ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಎಂಎಸ್ಆರ್ಟಿಸಿ) ಬಸ್ಗಳ ನಾಮಫಲಕದಲ್ಲಿ ಕನ್ನಡ ಬಳಸುವ ಸಂಬಂಧ ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕು’ ಎಂದು ಒತ್ತಾಯಿಸಿ ಕನ್ನಡ ಹೋರಾಟಗಾರರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ, ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ‘ಹೊರ ರಾಜ್ಯಗಳಿಗೆ ತೆರಳುವ (ಕೆಎಸ್ಆರ್ಟಿಸಿ) ಬಸ್ಗಳ ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನೂ …
Read More »
Laxmi News 24×7