Breaking News

ಬಾಟಲಿ ಪೂರ್ತಿ ಕುಡಿದರೂ ನಶೆಯೇರಲ್ಲ, ಗೋಳು ತೋಡಿಕೊಂಡ ಕುಡುಕ

ಉಜ್ಜಯಿನಿ : ಮಧ್ಯಪ್ರದೇಶದಲ್ಲಿ ಮದ್ಯದ ಕಲಬೆರಕೆಯ ಅತ್ಯಂತ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಜ್ಜಯಿನಿಯಲ್ಲಿ ವ್ಯಕ್ತಿಯೊಬ್ಬರು ಮದ್ಯದಲ್ಲಿ ಕಲಬೆರಕೆ ಮಾಡುತ್ತಿರುವ ಬಗ್ಗೆ ರಾಜ್ಯದ ಗೃಹ ಸಚಿವರು ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.   ಬಾಟಲಿ ಪೂರ್ತಿ ಕುಡಿದರೂ ನಶೆಯೇರಲಿಲ್ಲ ಅಂಥ ವ್ಯಕ್ತಿಯೊಬ್ಬ ಹೇಳಿದ್ದು, ಗುತ್ತಿಗೆದಾರರು ಮದ್ಯಕ್ಕೆ ನೀರು ಬೆರೆಸುತ್ತಿದ್ದಾರೆ ಇದರಿಂದ ಕುಡಿತದ ಅಮಲು ಬರುತ್ತಿಲ್ಲ ಅಂತ ಪತ್ರದಲ್ಲಿ ತನ್ನ ಗೋಳು ತೋಡಿಕೊಂಡಿದ್ದಾನೆ. ಉಜ್ಜಯಿನಿಯ ಬಹದ್ದೂರ್ ಗಂಜ್ ಆರ್ಯ ಸಮಾಜ …

Read More »

ರಿಲೀಸ್‌ಗೂ ಮುನ್ನವೇ ದಾಖಲೆ ಮೊತ್ತಕ್ಕೆ ಬ್ಯುಸಿನೆಸ್ ಮಾಡಿದ `ವಿಕ್ರಾಂತ್ ರೋಣ’

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ `ವಿಕ್ರಾಂತ್ ರೋಣ’ ರಿಲೀಸ್‌ಗೆ ರೆಡಿಯಿದೆ. ಬಿಡುಗಡೆಯ ಮುನ್ನವೇ ಸುದೀಪ್ ಸಿನಿಮಾ ದಾಖಲೆ ಮಾಡಿದೆ. ವಿದೇಶದ ವಿತರಕರು `ವಿಕ್ರಾಂತ್ ರೋಣ’ ಚಿತ್ರದ ಹಕ್ಕುಗಳನ್ನ ಭಾರೀ ಮೊತ್ತಕ್ಕೆ ಖರೀದಿ ಮಾಡಿದ್ದಾರೆ. ಇದೀಗ ಹೊರ ರಾಜ್ಯ, ಹೊರ ದೇಶ ಎಲ್ಲಾ ಕಡೆ ಕನ್ನಡ ಸಿನಿಮಾಗಳು ಸದ್ದು ಮಾಡುತ್ತಿದೆ. `ಕೆಜಿಎಫ್ 2′ ಭರ್ಜರಿ ಸಕ್ಸಸ್ ನಂತರ ಕನ್ನಡದ `ವಿಕ್ರಾಂತ್ ರೋಣ’ ಸಿನಿಮಾಗೆ ವಿದೇಶದ ವಿತರಕರು ಮಣೆ …

Read More »

ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ

ಬೆಂಗಳೂರು: ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಎಂಇಐ ಮೈದಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಮೃತ್ಯುಂಜಯ, ಗಣಪತಿ ಹೋಮ ಹವನ ಮಾಡುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಸೀಮಂತ ಶಾಸ್ತ್ರ ಮಾಡಲಾಯಿತು. ಟಿ. ದಾಸರಹಳ್ಳಿಯ ಕಾಂಗ್ರೆಸ್ ಮುಖಂಡೆ ಗೀತಾ ಶಿವರಾಂ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಅರಿಶಿನ ಕುಂಕುಮ, ಸೀರೆ, ಬಳೆ …

Read More »

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ: ಜನಾರ್ದನ ರೆಡ್ಡಿ

ರಾಯಚೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು. ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸಿಂಧನೂರಿನಿಂದ ಸ್ಪರ್ಧೆ ವಿಚಾರ ನಮ್ಮ ಮುಂದೆಯಿಲ್ಲ. ನಾನು ಅಥವಾ ನನ್ನ ಶ್ರೀಮತಿ ಎಲೆಕ್ಷನ್‍ಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದ ಅವರು, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋದಾಗಿ ಹೇಳಿದರು.ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದ …

Read More »

19 ಲಕ್ಷ ಇವಿಎಂ ಯಂತ್ರಗಳು ಕಾಣೆ : ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ನಿಯೋಗ

ಬೆಂಗಳೂರು: ದೇಶದಲ್ಲಿ ಸುಮಾರು 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿದ್ದು ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಧೀಶರ ನೇತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತನಿಖೆಗೆ ಒತ್ತಾಯಿಸಿತು. 19 ಲಕ್ಷ ಇವಿಎಂ ಯಂತ್ರಗಳ ಕಾಣೆಯಾಗಿರುವ ಬಗ್ಗೆ 2,750 ಪುಟಗಳ ದಾಖಲೆಯನ್ನು ಸಲ್ಲಿಸಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಮನ್ಸ್ ನೀಡುವಂತೆ ಮನವಿ …

Read More »

ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ

ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು.   ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು …

Read More »

ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ: ಆರ್.ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ, ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಕೇಳುತ್ತಿದ್ದಾರೆ. ಡಬಲ್ ಇಂಜಿನ್ ಮತ್ತೆ ಕೆಲಸ ಮಾಡಲು ರಣತಂತ್ರ ಮಾಡಿದ್ದೇವೆ ಎಂದು ಸಚಿವ ಆರ್. ಸಂತೋಷ್ ಅವರು ರಾಜ್ಯಕ್ಕೆ ಬಂದು ಚರ್ಚೆ ಮಾಡಿ ಹೋಗಿದ್ದಾರೆ. ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಭಾಗದ ನಾಯಕರನ್ನ ಬಿಜೆಪಿಗೆ ಬರಮಾಡಿಕೊಳ್ಳಲಾಗಿದೆ. ಯಾವುದೇ ಷರತ್ತುಗಳನ್ನು ಹಾಕದೆ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.ಬಿಜೆಪಿಯ ನಾಯಕರು ಮಾಡಿದ್ದಾರೆ.ಇದು ಪ್ರಾಥಮಿಕ ಹಂತ. ಇನ್ನೂ ಹಲವರನ್ನ ಗುರುತಿಸಿದ್ದೇವೆ. ಇದು ನಿನ್ನೆ, …

Read More »

ಯತ್ನಾಳ್ ಹೇಳಿಕೆ ಹಿಂದೆ ಆರ್ ಎಸ್‌ಎಸ್ ಬೆಂಬಲವಿದೆ: ಪ್ರಕಾಶ್ ರಾಠೋಡ್

ವಿಜಯಪುರ : ಮುಖ್ಯಮಂತ್ರಿ ಆಗಲು 2500 ಕೋಟಿ ರೂ,ಮಂತ್ರಿಯಾಗಲು ನೂರು ಕೋಟಿ ರೂ. ಕೊಡಬೇಕೆಂದು ಆಡಳಿತ ಪಕ್ಷದ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಈ ಹಣ ಕೇಳಿದ್ದು ಯಾರಿಗೆ, ಯಾರು ಯಾರಿಗೆ ಕೊಟ್ಟದ್ದು ಎಂದು ಹೆಸರು ಬಹಿರಂಗ ಪಡಿಸಬೇಕು. ಇಲ್ಲವಾದಲ್ಲಿ ಶಾಸಕ ಯತ್ನಾಳ್ ಅವರನ್ನು ಬಂಧಿಸುವಂತೆ ಮೇಲ್ಮನೆ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ್ ಆಗ್ರಹಿಸಿದರು. ಭಾನುವಾರ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ಮಾಡಿದ ರಾಠೋಡ, …

Read More »

ಶಿವಮೊಗ್ಗದ ಗಲಭೆ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ:ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು.ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧಿಯವರು ಸ್ವಾತಂತ್ರ್ಯ ನಂತರ ಭಾರತ ರಾಮರಾಜ್ಯ ಆಗಬೇಕು ಅಂದರು. ಗಾಂಧಿ ಸ್ವಾತಂತ್ರ್ಯದ ನಂತರದ ಭಾರತ ಜಾತ್ಯಾತೀತ ಆಗಬೇಕು ಅನ್ನಲಿಲ್ಲ. ಭಾರತ ರಾಮರಾಜ್ಯ ಆಗಲು ಪ್ರತೀ ವ್ಯಕ್ತಿ ರಾಮ ಆಗಬೇಕು. ವ್ಯಕ್ತಿ ನಿರ್ಮಾಣದಿಂದ …

Read More »

ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿ: ಐಗೋಳ ಚಿದಾನಂದ

ಹರಪನಹಳ್ಳಿ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹಡಗಲಿ ತಾಲೂಕು ಇಟಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದರವರುತಿಳಿಸಿದರು.   ಪಟ್ಟಣದ ಪ್ರವಾಸಿಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 25 ವರ್ಷಗಳಿಂದ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜಕೀಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ನನ್ನನ್ನು ನಾನು …

Read More »