ತುಮಕೂರು: ಮುಂಬರುವಂತ 2023ರ ವಿಧಾನಸಭಾ ಚುನಾವಣೆಯಲ್ಲಿ ( Assembly Election ) ಜೆಡಿಎಸ್ ಪಕ್ಷ ( JDS Party )ಬಹುಮತದಿಂದ ಗೆದ್ದು ಅಧಿಕಾರಕ್ಕೆ ಬಂದ್ರೇ.. ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿವರೆಗೆ ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಹೈಟೆಕ್ ಶಾಲೆಗಳನ್ನು ತೆರೆದು, ಉಚಿತ ಶಿಕ್ಷಣ ( Free Education ) ನೀಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ತುಮಕೂರಿನ ಶಿರಾದಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದಂತ …
Read More »ಶೀಘ್ರವೇ ದೇಶದಲ್ಲಿ ‘CAA ಜಾರಿ – ಗೃಹ ಸಚಿವ ಅಮಿತ್ ಶಾ ಘೋಷಣೆ |
ಕೋವಿಡ್ -19 ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಹೇಳಿದ್ದಾರೆ. ಅವರು ಇದೇ ವೇಳೇ ಅವರು ‘ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು. ಇನ್ನೂಟಿಎಂಸಿ ಸಿಎಎ ಬಗ್ಗೆ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ …
Read More »ಪುರುಷ ಮತ್ತು ಹೆಂಡತಿ ಕುಟುಂಬದ ಆಧಾರ ಸ್ತಂಭಗಳು, ಒಂದು ಮುರಿದರೆ ಇಡೀ ಮನೆ ಕುಸಿಯುತ್ತದೆ: ಹೈಕೋರ್ಟ
ನವದೆಹಲಿ: ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್, ಪತಿ-ಪತ್ನಿ ಕುಟುಂಬದ ಎರಡು ಆಧಾರ ಸ್ತಂಭಗಳಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲ ಸಂದರ್ಭಗಳಲ್ಲೂ ಕುಟುಂಬವನ್ನು ಸಮತೋಲನದಲ್ಲಿಡಬಹುದು ಎಂದು ಅಭಿಪ್ರಾಯಪಟ್ಟಿದೆ. ಒಂದು ಕಂಬ ದುರ್ಬಲವಾದರೆ ಅಥವಾ ಮುರಿದರೆ, ಇಡೀ ಮನೆ ಕುಸಿದು ಬೀಳುತ್ತದೆ ಇದೇ ವೇಳೇ ಹೇಳಿದೆ. ಗಂಡ ಹೆಂಡತಿ ಕುಟುಂಬದ ಎರಡು ಆಧಾರ ಸ್ತಂಭಗಳು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲಾ ಸಂದರ್ಭಗಳಲ್ಲಿ ಕುಟುಂಬವನ್ನು …
Read More »ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ
ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗುರುವಾರ(ಮೇ 5) ಸಂಜೆ ಅಧಿಕಾರವನ್ನು ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನವರಾದ ನಿತೇಶ್ ಪಾಟೀಲ ಅವರು ಇದಕ್ಕೂ ಮುಂಚೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಆಹಾರ ಮತ್ತು ನಾಗರಿಕ …
Read More »ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಡಿ.31, 2022ರೊಳಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣ ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ( Computer Literacy Test ) ಉತ್ತೀರ್ಣರಾಗುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ಹತ್ತು ವರ್ಷಗಳ ಅವಧಿಯೊಳಗೆ ಪಾಸ್ ಆಗುವುದು ಕಡ್ಡಾಯಗೊಳಿಸಲಾಗಿತ್ತು. ಆದ್ರೇ.. ಇದೀಗ ದಿನಾಂಕ 31-12-2022ರೊಳಗೆ ಉತ್ತೀರ್ಣಗೊಳಿಸೋದನ್ನು ಕಡ್ಡಾಯಗೊಳಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ …
Read More »PSI ಹಗರಣ CBI ತನಿಖೆಗೆ ಒಪ್ಪಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ
ಬೆಳಗಾವಿ: PSI ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಇಲ್ಲಿನ ಗೋಕಾಕ್ ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್ಐ ಹಗರಣದಲ್ಲಿ ಸಚಿವರು, ಶಾಸಕರ ಹೆಸರು ಕೇಳಿಬಂದಿದೆ. ನೆನ್ನೆಯಷ್ಟೇ ಮಾಜಿ ಸಿಎಂ ಪುತ್ರನ ಹೆಸರೂ ಕೇಳಿ ಬಂದಿದೆ. ಪೊಲೀಸರೂ ಭಾಗಿಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಪೊಲೀಸರಿಂದಲೇ …
Read More »ಕೌಲಂದೆ ಗ್ರಾಮದಲ್ಲಿ ನೀಚರು, ನಿರ್ಲಜ್ಯರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ: ಮುತಾಲಿಕ್
ಬೆಳಗಾವಿ: ಮೈಸೂರು ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದಲ್ಲಿ ನೀಚರು, ನಿರ್ಲಜ್ಯರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಅನ್ನ ತಿನ್ನುವ ಇಂತಹವರೆಲ್ಲ ದೇಶ ದ್ರೋಹಿಗಳು. ಪಾಕಿಸ್ತಾನದ ಮೇಲೆ ಪ್ರೀತಿ ಇದ್ರೆ ಅಲ್ಲಿಗೆ ಹೋಗಬೇಕು. ನಾನು ಕೂಡ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದರು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಶ್ರೀರಾಮಸೇನೆಯಿಂದ ಮೈಸೂರಿನ ‘ಕೌಲಂದೆ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ ಎಂದು …
Read More »‘ನಿಮ್ ಮೋದಿ ಹಾಗೆ ರಾಹುಲ್ ವಿಮಾನದಲ್ಲಿ 13 ಸಾವಿರ ಕೋಟಿ ರೂ. ಕೊಳ ಇಟ್ಕೊಂಡು ಈಜುತ್ತಾ ಹೋಗ್ಲಿಲ್ಲ’
ಕೋಲ್ಕತಾ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಯವರು ನೇಪಾಳದ ಪಾರ್ಟಿಯೊಂದರಲ್ಲಿ ಮದ್ಯಹೀರುತ್ತಿರುವ ಯುವತಿಯ ಪಕ್ಕ ಕಾಣಿಸಿಕೊಂಡಿರುವ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿರುವುದು ಕಾಂಗ್ರೆಸ್ಸಿಗರಿಗೆ ಭಾರಿ ಕೋಪ ತರಿಸಿದೆ. ಸ್ನೇಹಿತೆಯೊಬ್ಬರ ಮದುವೆಗೆ ರಾಹುಲ್ ಗಾಂಧಿ ಹೋಗಿದ್ದೇ ವಿನಾ ಅಲ್ಲಿ ನೈಟ್ಕ್ಲಬ್ನಲ್ಲಿ ಮೋಜುಮಸ್ತಿ ಮಾಡಲು ಅಲ್ಲ ಎಂದು ಕಾಂಗ್ರೆಸ್ ಹೇಳುತ್ತಾ ಬಂದಿದ್ದರೂ, ಈ ವಿಡಿಯೋ ಜಾಲತಾಣದಲ್ಲಿ ವಿಧವಿಧ ಕಮೆಂಟ್ಗಳ ಜತೆ ಹರಿದಾಡುತ್ತಿದೆ. ಬಿಜೆಪಿಯ ಕಾರ್ಯಕರ್ತರು ಕೂಡ ಈ ವಿಡಿಯೋ ಬಗ್ಗೆ ತಮಾಷೆ ಮಾಡುತ್ತಿರುವುದು …
Read More »ಐಷಾರಾಮಿ ಕಾರು ಖರೀದಿಸಿದ ನಟಿ ಆದಿತಿ ರಾವ್ ಹೈದರಿ: ಬೆಲೆ ಎಷ್ಟಿರಬಹುದು?
ಬಾಲಿವುಡ್ ರಾಜಕುಮಾರಿ ಎಂದೇ ಖ್ಯಾತಿಯಾಗಿರುವ ಅದಿತಿ ರಾವ್ ಹೈದರಿ ಹೊಸ ‘ಔಡಿ ಕ್ಯೂ 7’ ಕಾರು ಖರೀದಿಸಿದ್ದಾರೆ. ಬೋಲ್ಡ್ ಪಾತ್ರ ಹಾಗೂ ಮಾತುಗಳಿಗೆ ಹೆಸರಾಗಿರುವ ಅದಿತಿ ಇದೇ ಮೊದಲ ಬಾರಿಗೆ ಐಷಾರಾಮಿ ಕಾರು ಖರೀದಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಅದಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಿತಿಯ ಹೊಸ ಕಾರು ಖರೀದಿಸಿದ್ದಾರೆ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ಈ ಐಷಾರಾಮಿ ಕಾರಿನ ಬೆಲೆ ₹ 96 …
Read More »ಕನ್ನಡದ ಕೋಟ್ಯಧಿಪತಿ ಖ್ಯಾತಿಯ ಲೈನ್ಮನ್ ಆತ್ಮಹತ್ಯೆ!
ಬೀಳಗಿ(ಬಾಗಲಕೋಟೆ): ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದ, ಟಿಕ್ಟಾಕ್, ಹಾಸ್ಯ, ಸಂಗೀತದ ಮೂಲಕ ಅಪಾರ ಅಭಿಮಾನಿಗಳನ್ನ ಹೊಂದಿದ್ದ ಬೀಳಗಿ ಹೆಸ್ಕಾಂ ಲೈನ್ಮನ್ ತಿಮ್ಮಣ್ಣ ಭೀಮಪ್ಪ ಗುರಡ್ಡಿ(27) ದುರಂತ ಅಂತ್ಯ ಕಂಡಿದ್ದಾರೆ. ನಟ ರಮೇಶ್ ಅರವಿಂದ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ತಿಮ್ಮಣ್ಣ 6.40 ಲಕ್ಷ ರೂ. ಗೆದ್ದಿದ್ದರು. ಓದಿದ್ದು ಎಸ್ಸೆಸ್ಸೆಲ್ಸಿ ಆದರೂ ಅಪಾರ ಜ್ಞಾನ ಇತ್ತು. ಟಿಕ್ಟಾಕ್, ಹಾಸ್ಯ, ಸಂಗೀತದಲ್ಲೂ ನಿಪುಣರಾಗಿದ್ದ ತಿಮ್ಮಣ್ಣ, ಖೋ ಖೋ ಕ್ರೀಡಾಪಟು …
Read More »
Laxmi News 24×7