Breaking News

ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿದ್ದಷ್ಟೇ ಇವರ ಸಾಧನೆ’ :ಕಾಂಗ್ರೆಸ್

ಬೆಂಗಳೂರು: ‘ಬಡವರು ‘ಇಂತಿಷ್ಟೇ ತಿನ್ನಬೇಕು’ ಎಂದು ಹಸಿವನ್ನು ನಿಯಂತ್ರಿಸಲು ಹೊರಟ ಜಗತ್ತಿನ ಮೊಟ್ಟ ಮೊದಲ ಸಚಿವರು ಎಂಬ ಹೆಗ್ಗಳಿಕೆ ಉಮೇಶ್‌ ಕತ್ತಿ ಅವರದ್ದು!’ ಎಂದು ಕಾಂಗ್ರೆಸ್ ಆರೋಪಿಸಿದೆ. ‘ಒಬ್ಬರಿಗೆ ತಿಂಗಳಿಗೆ 5 ಕೆ.ಜಿ ಅಕ್ಕಿ ಸಾಕು’ ಎಂಬ ಆಹಾರ ಮತ್ತು‌ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಸಮಾಜದ ಹಾಗೂ ಬಡವರ ಕಷ್ಟನಷ್ಟಗಳ ಬಗ್ಗೆ ಕಿಂಚಿತ್ತೂ ಅರಿವಿರದ ಆಹಾರ ಸಚಿವರಿಗೆ ತಿಳಿದಿರುವುದು ಉಡಾಫೆ …

Read More »

ಮಾನವೀಯತೆ ಮೆರೆದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ

ಭದ್ರಾವತಿ: ಕಾರಿನಲ್ಲಿ ಬರುತ್ತಿದ್ದ ಶಾಸಕರು ದ್ವಿಚಕ್ರ ವಾಹನದಿಂದ ಕೆಳಬಿದ್ದಿದ್ದ ದಂಪತಿಯನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ್ವರ ಅರಳಿಹಳ್ಳಿ ಗ್ರಾಮದಿಂದ ಹಿಂತಿರುಗುತ್ತಿದ್ದ ವೇಳೆ ರೆಡ್ಡಿ ಕ್ಯಾಂಪ್ ವಾಸಿಗಳಾದ ಯತಿರಾಜಲುನಾಯ್ಡು ಮತ್ತು ವಿಜಯಮ್ಮ ದಂಪತಿ ದ್ವಿಚಕ್ರ ವಾಹನದಿಂದ ಬಿದ್ದರು. ಕೂಡಲೇ ಕಾರು ನಿಲ್ಲಿಸಿ ಅವರನ್ನು ಉಪಚರಿಸಿದ ಶಾಸಕರು, ಕೂರಿಸಿ ಮಾತನಾಡಿಸಿದರು. ತಲೆ ಸುತ್ತು ಬಂದು ಬಿದ್ದಿರುವುದಾಗಿ ತಿಳಿಸಿದರು.

Read More »

ಮುಂದಿನ ವಾರ ನೆಲ, ಜಲ, ಭಾಷೆ ಸಮಸ್ಯೆಗಳ ನಿವಾರಣೆಗೆ ಕನ್ನಡ ಸಂಘಟನೆಗಳ ಸಭೆ ಕರೆದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ತಿಳಿಸಿದರು.   ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ‘ರಾಜ್ಯವು …

Read More »

ಸಾಲ ತೀರಿಸದೆ ಕರಡಿಗುಡ್ಡ ಕುಟುಂಬ ಬೀದಿಗೆ

ಬೆಳಗಾವಿಯ ಕರಡಿಗುಡ್ಡ ಕುಟುಂಬವು ಸಾಲ ತೀರಿಸಿದೆ ಬಡ್ಡಿ ಹಾವಳಿಗೆ ಬೆಂದು ಸಾಲ ಮರುಪಾವತಿ ಮಾಡದಿದ್ದಕ್ಕೆ ಮನೆಯಲ್ಲಿರುವ ಸಾಮಾನುಗಳನ್ನು ಕುಟುಂಬ ಸಮೇತ ಹೊರಗೆ ಹಾಕಿದ ಕಿರಾತಕ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕರಡಿಗುಡ್ಡ ಕುಟುಂಬವು 2017 ರಲ್ಲಿ ಮೌಲಾ ಅಲ್ತಪ್ಪ ಸುರಕೋಡ ಎಂಬುವವರ ಹತ್ತಿರ 9 ಲಕ್ಷ ಸಾಲ ತೆಗೆದುಕೊಂಡಿದ್ದು. ಈಗ ಸಾಲ ತೀರಿಸಲು ಆಗದೇ ಇರುವ ಕಾರಣ ಕರಡಿಗುಡ್ಡ ಕುಟುಂಬವನ್ನು ಮನೆಯಿಂದ ಹೊರಗೆ ಹಾಕಿರುವ ಘಟಣೆ ನಡೆದಿದೆ. : ಮೌಲಾ …

Read More »

ಬೆಂಗಳೂರಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಬಿಬಿಎಂಪಿ ಮುಂದಾಗಿದೆ. ನಗರದ 85 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಸಿದ್ಧತೆ ನಡೆದಿದ್ದು ಈಗಾಗಲೇ ನಗರದಲ್ಲಿ 10 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಂದಿನ 1 ತಿಂಗಳಲ್ಲಿ 35 ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದಾಗಿ ಟಿವಿ9ಗೆ ಬಿಬಿಎಂಪಿ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್‌ನ ಮುಖ್ಯಸ್ಥ ಪ್ರವೀಣ್ ಲಿಂಗಯ್ಯ ತಿಳಿಸಿದ್ದಾರೆ. Smart Parking: ಬೆಂಗಳೂರಿನ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಮುಂದಾದ ಬಿಬಿಎಂಪಿ ಕನ್ನಿಂಗ್ …

Read More »

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ;

ಬೆಳಗಾವಿ: ಗೋವಾದ ಪಣಜಿಯ ಖಾಸಗಿ ಹೋಟೆಲ್ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವಿಸ್ (Devendra Fadnavis) ಜೊತೆ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ. ರಾಜಕೀಯವಾಗಿ ತಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಸುಖಾಸುಮ್ಮನೆ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡವಳಿಕೆ ಬೇಸರ ಮೂಡಿಸುತ್ತಿದೆ. ಪಕ್ಷಕ್ಕಾಗಿ ನಾನು ಮಾಡಿದ ತ್ಯಾಗವನ್ನು ಪರಿಗಣಿಸುತ್ತಿಲ್ಲ. ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಂತ ರಮೇಶ್ ಜಾರಕಿಹೊಳಿ ಫಡ್ನವಿಸ್ …

Read More »

ಸಂಪುಟ ಪುನಾರಚನೆಗೆ ಒತ್ತಡ: ಫೆ. 7ಕ್ಕೆ ಮುಖ್ಯಮಂತ್ರಿ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿಗೆ ಭೇಟಿ ನೀಡುವುದಾಗಿ ಪ್ರಕಟಿಸಿದ ಬೆನ್ನಲ್ಲೇ, ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸಚಿವಕಾಂಕ್ಷಿ ಶಾಸಕರೂ ದೆಹಲಿಗೆ ಹೋಗಲು ತಯಾರಿ ನಡೆಸಿದ್ದಾರೆ.   ಸಚಿವ ಸಂಪುಟ ಪುನಾರಚನೆ ಮಾಡಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಒತ್ತಡವೂ ಬಿಜೆಪಿಯಲ್ಲಿ ಪ್ರಬಲವಾಗಿ ಕೇಳಿ ಬಂದಿದೆ. ಸುದ್ದಿಗಾರರ ಜತೆ ಬುಧವಾರ ಬೆಳಿಗ್ಗೆ ಮಾತನಾಡಿದ ಬೊಮ್ಮಾಯಿ, ಗುರುವಾರವೇ ದೆಹಲಿಗೆ ತೀರ್ಮಾನಿಸಿರುವುದಾಗಿ ಹೇಳಿದ್ದರು. ಆದರೆ, ಮಧ್ಯಾಹ್ನ ಮಾತನಾಡಿದ ಅವರು, ‘ಗುರುವಾರ ಭೇಟಿ …

Read More »

ಅಪಹರಣಕ್ಕೊಳಗಾದ 3 ಗಂಟೆಯಲ್ಲೇ ಇಂಜಿನಿಯರ್ ಪ್ರಕರಣ ಸುಖಾಂತ್ಯ: ಯಲಹಂಕ ‘ಇನ್ಸ್ ಪೆಕ್ಟರ್ ಹರಿಯಬ್ಬೆ ಸತ್ಯನಾರಾಯಣ್’ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಮಾಡಿ ಕೊಟ್ಟಂತ ಕೆಲಸದ ಹಣ ಕೊಟ್ಟಿಲ್ಲ ಅಂತ ಇಂಜಿನಿಯರ್ ( Engineer ) ಒಬ್ಬರನ್ನು ಅಪಹರಿಸಿದ್ದಂತ ಆರೋಪಿಗಳನ್ನು 3 ಗಂಟೆಯಲ್ಲಿ ಪತ್ತೆ ಹಚ್ಚಿ, ಸುಖಾಂತ್ಯಗೊಳಿಸಲಾಗಿದೆ. ತ್ವರಿತವಾಗಿ ಆರೋಪಿಗಳನ್ನು ಬಂಧಿಸಿ, ಇಂಜಿನಿಯರ್ ಪತ್ತೆಹಚ್ಚಿದಂತ ಯಲಹಂಕ ಠಾಣೆ ಇನ್ಸ್ ಪೆಕ್ಟರ್ ಹರಿಯಬ್ಬೆ ಸತ್ಯನಾರಾಯಣ ( Yalahanka Police Station Inspection Hariyabbe Sathyanarayan ) ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.   ಒಡಿಶಾ ಮೂಲಕ ಸಿವಿಲ್ ಇಂಜಿನಿಯರ್ ಮಾನಸ್ ಜೊತೆಗೆ ನಂದ ಹಾಗೂ …

Read More »

ಯುವಕರ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಹೆಜ್ಜೆ; ಗ್ರಾಮೀಣ ಮಟ್ಟದಲ್ಲೇ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನ

ಬೆಂಗಳೂರು: ಯುವ ಸಮುದಾಯದ ಅಭ್ಯುದಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದಲೇ ಯಶಸ್ವಿಗೊಳಿಸಲು ಸರ್ಕಾರ ಮುಂದಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾಯರ್åಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಮೂಲಕ ಅನುಷ್ಠಾನ ಮಾಡಲು ಯೋಜನೆ ರೂಪಿಸಿದೆ. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಮಿತಿಯನ್ನು 2019ರಲ್ಲಿ ರಚಿಸಲಾಗಿದೆ. ಆದರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ, ಗ್ರಾಪಂ ಕೆಡಿಪಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, …

Read More »

ನಿರಾಣಿ ಚಮಚಾಗಳು, ಸಹೋದರರಿಂದ ಸ್ವಾಮೀಜಿಗೆ ನೋವು: ವಿಜಯಾನಂದ ಕಾಶಪ್ಪನವರ

ಬೆಳಗಾವಿ: ‘ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ನೀಡಿರುವ ದಾನದ ಬಗ್ಗೆ ಸಚಿವ ಮುರುಗೇಶ ನಿರಾಣಿ ಅವರ ಚಮಚಾಗಳು, ಸಹೋದರ ಲಕ್ಷ್ಮಣ ನಿರಾಣಿ ಮೊದಲಾದವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ. ಅದನ್ನು ಸಮಾಜ ತೀವ್ರವಾಗಿ ಖಂಡಿಸುತ್ತದೆ’ ಎಂದು ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ತಿಳಿಸಿದರು.   ಇಲ್ಲಿ ನಡೆದ ಸಮಾಜದ ಕಾರ್ಯಕಾರಿಣಿ ನಂತರ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಂಘಟನೆಯಲ್ಲಿ ಇಲ್ಲದವರು, ಮೀಸಲಾತಿ ಹೋರಾಟದಲ್ಲಿ ಭಾಗವಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ. …

Read More »