ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಹಾಗೂ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಮತ್ತೆ ಮೂವರು ಆರೋಪಿಗ¼ನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಜೂನ್ 18ರಂದು ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಯಾಗಿತ್ತು. ಇನ್ನು ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ರಾತ್ರಿವೇಳೆ ಹಿಂಸಾಚಾರವೂ ಕೂಡ ನಡೆದಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, …
Read More »ಬೆಳಗಾವಿ ಪುಟ್ಟ ಮಗಳು ಕೃಷ್ಣವೇಣಿಯ ಸಂಪೂರ್ಣ ಚಿಕಿತ್ಸೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯವಸ್ಥೆ
ಬೆಂಗಳೂರು: ದೃಷ್ಟಿ ದೋಷ, ಮಿದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬೆಳಗಾವಿ ಜಿಲ್ಲೆಯ ಕೇಳಿಗ್ರಾಮದ ಶಂಕ್ರಮ್ಮ ಎಂಬುವರ ಪುಟ್ಟ ಮಗಳು ಕೃಷ್ಣವೇಣಿಯ ಸಂಪೂರ್ಣ ಚಿಕಿತ್ಸೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯವಸ್ಥೆ ಮಾಡಿದ್ದಾರೆ. ಮುಖ್ಯಮಂತ್ರಿಯವರು ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ಬೆಂಗಳೂರಿನ ತಮ್ಮ ನಿವಾಸಕ್ಕೆ ಹಿಂದಿರುಗಿದಾಗ ಹಸುಗೂಸು ಎತ್ತಿಕೊಂಡ ಶಂಕ್ರಮ್ಮ ಗಮನ ಸೆಳೆದರು. ಆಕೆಯ ಬಳಿ ಸಮಸ್ಯೆಯನ್ನು ವಿಚಾರಿಸಿದಾಗ, ಮಗುವಿನ ಕಾಯಿಲೆ ಬಗ್ಗೆ ವಿವರಿಸಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗಲಿದ್ದು, ನೆರವು ನೀಡಬೇಕು …
Read More »SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ
ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು. ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನವನ್ನು ಡಿ.ಬಿ.ಟಿ. ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಆ ಪ್ರಕಾರ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆದ ವಿದ್ಯಾರ್ಥಿಗಳಿಗೆ ಈಗಾಗಲೇ …
Read More »ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ
ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …
Read More »ನಾನು ಮನಸ್ಸು ಮಾಡಿದ್ರೆ ಮುಂದೊಂದು ದಿನ ಸಿಎಂ ಆಗುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ
ಬಳ್ಳಾರಿ : ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗ್ತಾನೆ. ಮನಸ್ಸು ಮಾಡಿದ್ರೆ ಯಾವಗ ಬೇಕಾದ್ರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರೆಡ್ಡಿ, ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ, ಮಂತ್ರಿ ಆಗಬೇಕು ಎಂಬ ಆಸೆ ಇಲ್ಲ. ನನಗಂತೂ ಯಾರಿಗೂ ಕೊಡಲಾರದ ಕಷ್ಟ ಕೊಟ್ಟಿದ್ದಾರೆ.ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಇಂತಹ …
Read More »ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಒಕ್ಕೂಟ ತನ್ನ ಅಭ್ಯರ್ಥಿಯನ್ನ ಪ್ರಕಟಿಸಿದೆ. ಇಂದು ನಡೆದ ಸಂಸದೀಯ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿಯ ಈ ಘೋಷಣೆ ಬೆನ್ನಲ್ಲೇ ದ್ರೌಪತಿ ಮುರ್ಮು ಯಾರು ಎಂಬ ಚರ್ಚೆಗಳು ಶುರುವಾಗಿವೆ. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ಗವರ್ನರ್ ಎಂಬ …
Read More »ರಾಜ್ಯದಿಂದ ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ 5 ಸಾವಿರ ರೂ.!: ಶಶಿಕಲಾ ಜೊಲ್ಲೆ
ಉಡುಪಿ : ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಡುಪಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬರುವ ಅಗಸ್ಟ್, ಶ್ರಾವಣ ಮಾಸದಲ್ಲಿ ರಾಜ್ಯದ 30,000 ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಕೈಗೊಳ್ಳುವವರ ಬ್ಯಾಂಕ್ ಖಾತೆಗೆ ಸರ್ಕಾರದ ವತಿಯಿಂದ 5000 ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Read More »ತಾಯಿ ಮಗಳನ್ನು ಒಂದು ಮಾಡಿ ಮಾನವೀಯತೆ ಮೆರೆದ ಬೆಂಗಳೂರು ಪೊಲೀಸರು..!
ಬೆಂಗಳೂರು: ಮಗಳನ್ನು ಹುಡುಕಿ ಬೆಂಗಳೂರಿಗೆ ಬಂದಿದ್ದ ವೃದ್ಧೆ ತಾಯಿಗೆ ಮಗಳನ್ನು ಒಪ್ಪಿಸಿ ಪುಲಿಕೇಶಿನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮೊಬೈಲ್ ಅನ್ನು ತಮಿಳುನಾಡಿನಲ್ಲಿಯೇ ಬಿಟ್ಟು ಮಗಳನ್ನ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವೃದ್ದೆಯು, ಮಗಳ ಹೆಸರು ಬಿಟ್ಟು ಬೇರೇನು ಗೊತ್ತಿಲ್ಲದೇ ರಸ್ತೆಯಲ್ಲಿ ಹುಡುಕಾಡುತ್ತಾ ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪುಲಕೇಶಿ ನಗರದ ಹೊಯ್ಸಳ ಸಿಬ್ಬಂದಿಯು, ಪುಲಿಕೇಶಿನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ವೃದ್ದೆಯ ಮಗಳನ್ನ ಸ್ಥಳೀಯರ ಸಹಾಯದಿಂದ ಸಂಪರ್ಕಿಸಿ ತಾಯಿಯನ್ನು ಮಗಳಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ …
Read More »ಸೈನ್ಯ ಸೇರಲು ಬಯಸುವವರು ರೈಲು, ಬಸ್ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ
ಹೊಸಪೇಟೆ (ವಿಜಯನಗರ): ‘ಸೈನ್ಯ ಸೇರಲು ಬಯಸುವವರು ರೈಲು ಗಾಡಿ, ಬಸ್ ಸುಡುತ್ತಾರೆಯೇ?’ ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಗಣಿ ಮತ್ತು ಕಲ್ಲಿದ್ದಲ್ಲು ಖಾತೆ ಸಚಿವ ಪ್ರಹ್ಲಾದ್ ಜೋಶಿ. ಹಂಪಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಎಲ್ಲದಕ್ಕೂ ವಿರೋಧ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಇದರಲ್ಲಿ ಕೆಲವು ಸಮಾಜ ವಿದ್ರೋಹಿ ಶಕ್ತಿಗಳು ಕೂಡಿಕೊಂಡಿವೆ. ಟೂಲ್ ಕಿಟ್ ಬಂದಿದ್ದನ್ನು ಗಮನಿಸಿರಬಹುದು. ಬಿಹಾರದಲ್ಲಿ ಮೊದಲು ಗಲಭೆ ಆರಂಭಗೊಂಡಿತ್ತು. ಅನಂತರ ಉತ್ತರ …
Read More »ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು ಹಾಗೂ ಎಲ್ಲ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭೂ ಸುಧಾರಣಾ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಅದನ್ನು ಹಿಂಪಡೆಯದಿದ್ದರೆ ಉಗ್ರ …
Read More »
Laxmi News 24×7