ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ಎಂಟು ಮಂದಿಗೆ ಒಬ್ಬನೇ ಗಂಡ..!ಎಲ್ಲರೂ ಒಟ್ಟಿಗೆ ಬಾಳೋ ಈತನ ಸಂಸಾರದಲ್ಲಿ ಇಲ್ಲಿವರೆಗೂ ಕಿತ್ತಾಟ ನಡೆದಿಲ್ಲ
ಬಹುಪತ್ನಿತ್ವವನ್ನು ಹೊಂದಿರುವ ಹೆಚ್ಚಿನ ಪುರುಷರು ಒಂದೇ ಮನೆಯಲ್ಲಿ ಇಬ್ಬರು ಹೆಂಡತಿಯರೊಂದಿಗೆ ಸಹಬಾಳ್ವೆಯಿಂದ ಬದುಕಲು ಕಷ್ಟಪಡುತ್ತಾರೆ, ಆದರೆ ಥೈಲ್ಯಾಂಡ್ನ ವ್ಯಕ್ತಿಯೊಬ್ಬರು ಒಂದೇ ಸೂರಿನಡಿ ಎಂಟು ಯುವತಿಯರೊಂದಿಗೆ ವಾಸಿಸುವ ಕಥೆಯು ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯವಾಗಿದ್ದು ಅನೇಕ ನೆಟಿಜನ್ಗಳನ್ನು ಬೆಚ್ಚಿಬೀಳಿಸಿದೆ. ಆಡಿಟಿ ಸೆಂಟ್ರಲ್ನಿಂದ ಓಂಗ್ ಡ್ಯಾಮ್ ಸೊರೊಟ್ ಎಂದು ಹೆಸರಿಸಲಾದ ವ್ಯಕ್ತಿ, ವ್ಯಾಪಾರದಲ್ಲಿ ಹಚ್ಚೆ ಕಲಾವಿದ. ಟಿವಿ ಶೋನಲ್ಲಿ ಕಾಣಿಸಿಕೊಂಡು ತಮ್ಮ ಅನುಭವವನ್ನು ಹೇಳಿಕೊಂಡ ನಂತರ ಅವರು ಎತ್ತರಕ್ಕೆ ಏರಿದರು. ಲೇಖನದ ಪ್ರಕಾರ, ಸಂದರ್ಶನದ …
Read More »ಹಿರಿಯ ನಟಿ, ಬಿಜೆಪಿ ಮುಖಂಡೆ ಜಯಪ್ರದಾ ಮನೆಯಲ್ಲಿ ಸಂಭವಿಸಿದ ದುರಂತ
ನವದೆಹಲಿ: ಹಿರಿಯ ನಟಿ ಹಾಗೂ ಬಿಜೆಪಿ ಮುಖಂಡೆ ಜಯಪ್ರದಾ ಅವರಿಗೆ ಮಾತೃ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ನೀಲವೇಣಿ (85) ಮಂಗಳವಾರ (ಫೆ. 01) ಮೃತಪಟ್ಟಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ನೀಲವೇಣಿ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಇದೇ ಸಮಯದಲ್ಲಿ ದೆಹಲಿಯಲ್ಲಿದ್ದ ಜಯಪ್ರದಾ ತಾಯಿ ಮೃತಪಟ್ಟಿರುವ ಸುದ್ದಿ ಕೇಳಿ ತಕ್ಷಣ ಹೈದರಾಬಾದ್ ಕಡೆ ಪ್ರಯಾಣ ಬೆಳೆಸಿದರು. ಜಯಪ್ರದಾ ತಾಯಿಯ ಸಾವಿಗೆ ಚಿತ್ರರಂಗದ ಗಣ್ಯರು …
Read More »ರವಿ ಡಿ ಚೆನ್ನಣ್ಣನವರ ವಿರುದ್ಧದ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಮೈಸೂರು: ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಸಂಪಾದನೆ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 228 ಪ್ರೊಬೆಷನರಿ ಪಿಎಸ್ಐ ಗಳ ಪಥ ಸಂಚಲನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ ವಿರುದ್ಧ ಕೇಳಿಬಂದ ಆರೋಪದ ದೂರಿನ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿದೆ. ಯಾರು …
Read More »ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಟೋಯಿಂಗ್ಗೆ ಶೀಘ್ರದಲ್ಲೇ ಹೊಸ ರೂಲ್ಸ್..!
ಬೆಂಗಳೂರು: ಇತ್ತೀಚಿನ ಕೆಲ ಘಟನೆಗಳ ನಂತರ ನಗರದಲ್ಲಿ ಸದ್ಯ ಟೋಯಿಂಗ್ ಮಾಡುತ್ತಿಲ್ಲ. ಟೋಯಿಂಗ್ ಅನ್ನು ಕಟ್ಟುನಿಟ್ಟಿನ ನಿಯಮಗಳೊಂದಿಗೆ ಆರಂಭಿಸಲಾಗುತ್ತದೆ ಅಂತ ಪೊಲೀಸ್ ಇಲಾಖೆ ಹೇಳುತ್ತಿದೆ. ಹಾಗಾದರೆ ಟೋಯಿಂಗ್ ಪುನಾರಂಭ ಆದರೆ ಯಾವೆಲ್ಲ ನಿಯಮಗಳು ಇರಲಿವೆ ಎಂಬುದರ ಮಾಹಿತಿ ಇಲ್ಲಿದೆ. ಇತ್ತೀಚಿಗೆ ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸದ್ಯ ಟೋಯಿಂಗ್ ನಿಲ್ಲಿಸಿರುವ ಬೆಂಗಳೂರು ಸಂಚಾರಿ ಪೊಲೀಸರು ಪುನಃ ಟೋಯಿಂಗ್ ಆರಂಭಿಸಲು …
Read More »ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣ.. ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ ಎಸಿಬಿ
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಶಶಿಕಲಾ ಹಾಗೂ ಜೈಲಾಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಲು ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ಕೈಗೊಂಡಿದ್ದ ಎಸಿಬಿ ಇದೀಗ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ, ಇಳವರಸಿಯಿಂದ ಹಣ ಪಡೆದು ರಾಜಾತಿಥ್ಯ ಕಲ್ಪಿಸಿದ ಆರೋಪದಡಿ ಆಗಿನ ಜೈಲಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ …
Read More »ಬಿಎಸ್ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಎರಡನೇ ನಾಯಕತ್ವ ರಾಜ್ಯಕ್ಕೆ ಬೇಕಾಗಿದೆ. ಬಿಎಸ್ವೈ ಯುಗ ಅಂತ್ಯವಾಗಿದೆ. ಅವರ ಸಮಕಾಲೀನ ಇನ್ನೂ ಮೂರ್ನಾಲ್ಕು ಜನರದ್ದು ಯುಗ ಮುಗಿಯಲು ಬಂದಿದೆ. ಬಸವರಾಜ ಬೊಮ್ಮಾಯಿ …
Read More »ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮುಧೋಳದ ವೈದ್ಯ: ಕೂಲಿ ಮಾಡಿ ಓದಿಸಿದ ತಂದೆಗೆ ಸನ್ಮಾನ
ಬಾಗಲಕೋಟೆ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ವಿದ್ಯಾರ್ಥಿ ಡಾ.ಚಿದಾನಂದ ಕುಂಬಾರ ಬೆಳಗಲಿ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಚಿದಾನಂದ ಕುಂಬಾರ ಅವರು ಮಾಡಿದ ಈ ಸಾಧನೆಗೆ ಅವರ ತಂದೆ ಕಲ್ಲಪ್ಪ ಕುಂಬಾರಗೆ ಬೆಳಗಲಿ ಗ್ರಾಮದ ಮುಖಂಡರು ಸನ್ಮಾನಿಸಿದ್ದಾರೆ. ಈ ವೇಳೆ ಮಾತನಾಡಿದ ಕಲ್ಲಪ್ಪ ಕುಂಬಾರ, ಗ್ರಾಮೀಣ ಭಾಗದ ಯುವಕನೊಬ್ಬ ಈ ಮಟ್ಟಿಗೆ ಉನ್ನತ ಸ್ಥಾನಕ್ಕೆ ಏರಿದ್ದು, ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. …
Read More »88 ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ, ರಾಜ್ಯದಲ್ಲಿ ಒಟ್ಟು 10,904 ಉದ್ಯೋಗ ಸೃಷ್ಟಿ : ಸಚಿವ ನಿರಾಣಿ
ಬೆಂಗಳೂರು : ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಡಿ ಒಟ್ಟು 2367.99 ಕೋಟಿ ರೂ. ಮೊತ್ತದ 88 ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಒಟ್ಟು 88 ಯೋಜನೆಗಳಿಂದ 2367.99 ಕೋಟಿ ರೂ. …
Read More »ನನ್ನ ವಿರುದ್ಧ ದೂರು ಕೊಟ್ಟವರು ಎಂಟಿಆರ್ ಫುಡ್ ಇರ್ಬೇಕು: ಸ್ವಪಕ್ಷೀಯರಿಗೆ ರೇಣುಕಾಚಾರ್ಯ ಟಾಂಗ್
ದಾವಣಗೆರೆ: ಯಾರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರ್ಬೇಕು. ಆದ್ರೆ ನಾನು ಎಂಟಿಆರ್ ಫುಡ್ ಅಲ್ಲವೆಂದು ಹೇಳುವ ಮೂಲಕ ಸ್ವಪಕ್ಷೀಯ ಸಚಿವರಿಗೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋರಾಟ ಮಾಡಿಯೇ ಮೂರು ಬಾರಿ ಶಾಸಕನಾಗಿದ್ದೇನೆ. ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ರೇ ಸಚಿವ ಸ್ಥಾನ ಸಿಗುತ್ತಾ ಎಂದು ಪಕ್ಷದ ಸಚಿವರ ವಿರುದ್ಧ …
Read More »