Breaking News

ಬಿಜೆಪಿಗೆ ಸೇರಿದ ಕಾಂಗ್ರೆಸ್ ಮುಖಂಡರು

ಕೊಡೇಕಲ್ಲ (ಹುಣಸಗಿ): ಮುಂಬರುವ ಚುನಾವಣೆ ಹಿತದೃಷ್ಟಿಯಿಂದ ಎಲ್ಲ ಕಾರ್ಯಕರ್ತರು ಒಗ್ಗಟಾಗಿ ಬಿಜೆಪಿಯನ್ನು ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಬಲಪಡಿಸಬೇಕು ಎಂದು ಶಾಸಕ ರಾಜುಗೌಡ ಹೇಳಿದರು. ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಶಾಸಕರ ಕಚೇರಿಯಲ್ಲಿ ಭಾನುವಾರ ಕಡದರಾಳ ಗ್ರಾಮದ ಕಾಂಗ್ರೆಸ್ ಪ್ರಮುಖರನ್ನು ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದರು.   ಸುರಪುರ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಗಳು ನಡೆಯುತ್ತಿವೆ. ಆದರೆ ಇದನ್ನು ಸಹಿಸದ ಕೆಲ ಪ್ರತಿಪಕ್ಷದವರು ವಿನಾಕಾರಣ ಟೀಕೆಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಾರ್ಯಕರ್ತರು ಕಿವಿಗೊಡದೇ ಪಕ್ಷ ಸಂಘಟನೆಯೇ …

Read More »

ಬಿಎಸ್‌ಎನ್‌ಎಲ್‌ನಿಂದ ಮತ್ತೆ ಎರಡು ನೂತನ ಪ್ಲ್ಯಾನ್‌; ಕಂಗಾಲಾದ ಖಾಸಗಿ ಟೆಲಿಕಾಂ

ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಇದೀಗ ಮತ್ತೆರಡು ನೂತನ ಯೋಜನೆಗಳನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳನ್ನು ದಂಗುಬಡಿಸಿದೆ. ಬಿಎಸ್‌ಎನ್‌ಎಲ್‌ ಟೆಲಿಕಾಂನ ಹೊಸ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿವೆ. ಹೌದು, ಬಿಎಸ್‌ಎನ್‌ಎಲ್‌ ಸಂಸ್ಥೆಯು ಹೊಸದಾಗಿ ಎರಡು ಪ್ರಿಪೇಯ್ಡ್ ಯೋಜನೆಗಳನ್ನು ಯೋಜನೆಗಳನ್ನು ಲಾಂಚ್ ಮಾಡಿದೆ. ಅವುಗಳು ಕ್ರಮವಾಗಿ 2999ರೂ. ಮತ್ತು …

Read More »

ದ್ವಿಚಕ್ರ ವಾಹನ ಹಾಗೂ ಸ್ವಿಪ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚೆನ್ನಾಪೂರ ಗ್ರಾಮದ ಬಳಿ ದ್ವಿಚಕ್ರ ವಾಹನ ಹಾಗೂ ಸ್ವಿಪ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಮೂಲಕ ಚೆನ್ನಾಪೂರ ಗ್ರಾಮದ ಕಡೆಗೆ ದ್ವಿಚಕ್ರ ವಾಹನದ ಮೂಲಕ ಹೊರಟ್ಟಿದ್ದ ಮೂವರು ಚೆನ್ನಾಪೂರ ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿದೆ.   ಈ ಘಟನೆಯಲ್ಲಿ …

Read More »

ಸದೃಢ ಕರ್ನಾಟಕ ಕಟ್ಟಲು 24×7 ಕೆಲಸ: ಬೊಮ್ಮಾಯಿ

ಸದೃಢ ಕರ್ನಾಟಕ ಕಟ್ಟಲು 24 ತಾಸುಗಳ ಕಾಲ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸರಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.   ಪ್ರಾದೇಶಿಕ ಅಸಮತೋಲನ ನಿವಾರಣೆ : ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗಾಗಿ ₹ 1500 ಕೋಟಿ ಖರ್ಚು ಮಾಡಿದರೆ ಮುಂದಿನ ವರ್ಷದಲ್ಲಿ ₹ 3000 ಕೋಟಿಗಳ ಅನುದಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. …

Read More »

ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಪ್ರಕೃತಿ ಚಿಕಿತ್ಸಾ ವಿಧಾನ ಅತ್ಯಂತ ಅನುಕೂಲಕಾರಿ : ಡಾ.ಡಿ.ವೀರೇಂದ್ರ ಹೆಗ್ಗಡೆ

ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿನ ಚಿಕಿತ್ಸೆಯಿಂದಾಗಿ ದೇಹಕ್ಕೆ ಹಾಗೂ ಆತ್ಮಕ್ಕೆ ರಕ್ಷಣೆಯೊಂದಿಗೆ ಸಂಸ್ಕಾರ ನೀಡಲಾಗುತ್ತದೆ. ಆಸೆ, ಕಾಮನೆಗಳು ನಿಯಂತ್ರಣಕ್ಕೆ ಬರುತ್ತವೆ. ಸುಧೃಡ ವ್ಯಕ್ತಿತ್ವ ನಮ್ಮದಾಗುತ್ತದೆ – ಡಾ. ಹೆಗ್ಗಡೆ ಮುಂಜಾನೆಯಿಂದ ಸಂಜೆಯವರೆಗೆ ನಡೆದ ಶಿಬಿರದಲ್ಲಿ ಪತ್ರಕರ್ತರಿಗೆ ಮಸಾಜ್, ಫಸಿಯೋತೆರಪಿ ಮೊದಲಾದ ನ್ಯಾಚುರೋಪತಿ ಚಿಕಿತ್ಸೆಗಳನ್ನು ನೀಡಲಾಯಿತಲ್ಲದೆ, ಆಸ್ಪತ್ರೆಯ ವಿವಿಧ ವಿಭಾಗಗಳ ವೀಕ್ಷಣೆ, ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ, ಧ್ಯಾನ, ಯೋಗವನ್ನು ಪರಿಚಯಿಸಲಾಯಿತು.

Read More »

ಕಾರವಾರ: ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಶಿಕ್ಷಕಿ ಕ್ಷಮೆಯಾಚಿಸಿದ್ದಾರೆ. ಹೊನ್ನಾವರದ ಸರ್ಕಾರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಸಹಪಾಠಿಗೆ ಲವ್ ಲೆಟರ್ ನೀಡಿದ್ದರಿಂದ ಆಕ್ರೋಶಗೊಂಡ ಶಿಕ್ಷಕಿ ಥಳಿಸಿದ್ದರಿಂದ ಬಾಸುಂಡೆ ಬಂದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ …

Read More »

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು: ಎವಿಬಿಪಿ ಸಂಘಟನೆ ಜೊತೆ ಸೇರಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿವಿ ಆವರಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ (ಜ್ಞಾನ ಭಾರತಿ) ನಡೆದ ಪ್ರತಿಭಟನೆಯಲ್ಲಿ ಮುಖ್ಯವಾಗಿ ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿವಿಯ ವಿಳಂಬ ಧೋರಣೆ ಮತ್ತು ದ್ವಂದ್ವ ನಿಲುವು …

Read More »

ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.   ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಬಿಬಿಎಂಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ …

Read More »

ಸಿಟಿ ಬಸ್‌ ತೆರಳದ ಜಾಗಕ್ಕೆ ಕೆಎಸ್ಸಾರ್ಟಿಸಿ ಬಸ್‌

ಮಹಾನಗರ: ಪರವಾನಿಗೆ ಹೊಂದಿರುವ ಮಾರ್ಗಗಳಲ್ಲಿ ಸಿಟಿ ಬಸ್‌ಗಳು ಸಂಚರಿಸದಿದ್ದರೆ ಅಂತಹ ರೂಟ್‌ಗಳಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ನೀಡಲು ಆರ್‌ಟಿಒ ಮುಂದಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಗಳಲ್ಲಿ ಸ್ಥಗಿತಗೊಂಡಿದ್ದ ಸಿಟಿ ಬಸ್‌ ಕಾರ್ಯಾಚರಣೆ ಇನ್ನೂ ಆರಂಭ ಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿ ಕರಿಂದ ದೂರುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಸಾರ್ವಜನಿ ಕರು ಲಿಖೀತ ದೂರು ನೀಡಲು ಆರ್‌ಟಿಒ ಮನವಿ ಮಾಡಿತ್ತು. ಅದರಂತೆ ಈಗಾ ಗಲೇ ಸುಮಾರು 15 ಮಂದಿ …

Read More »

ನರಗುಂದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ಸಿಪಿಐ ಅಮಾನತು

ನರಗುಂದ (ಗದಗ): ನರಗುಂದ ಪಟ್ಟಣದಲ್ಲಿ ನಡೆದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಿಪಿಐ ನಂದೀಶ್ವರ ಕುಂಬಾರ ಅವರನ್ನು ಅಮಾನತು ಮಾಡಲಾಗಿದೆ. ಜ. 17ರಂದು ಹಿಂದೂ ಯುವಕರಿಂದ ಮುಸ್ಲಿಂ ಯುವಕನ ಕೊಲೆಯಾಗಿತ್ತು. ಇಡೀ ಪ್ರಕರಣವನ್ನು ಸರಿಯಾಗಿ ನಿಭಾಯಿಸುವಲ್ಲಿ ಕರ್ತವ್ಯ ಲೋಪವಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಎನ್.ಸತೀಶ್ ಕುಮಾರ್ ಅವರು ಸಿಪಿಐ ನಂದೀಶ್ವರ ಕುಂಬಾರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ …

Read More »