Breaking News

ಪರಿಷತ್​ ಚುನಾವಣೆಗೆ ಸಿಎಂ, ಮಾಜಿ ಸಿಎಂ ಭರ್ಜರಿ ಪ್ರಚಾರ: ಕೊರೊನಾ ನಿಯಮ ಉಲ್ಲಂಘನೆ

ಗದಗ​: ವಿಧಾನ ಪರಿಷತ್ ಚುನಾವಣೆಗೆ ಎಲ್ಲಾ ಪಕ್ಷಗಳು ಸರ್ಕಸ್ ನಡೆಸುತ್ತಿವೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಲುವಾಗಿ ರಾಜ್ಯದ ವಿವಿಧೆಡೆ ಸುತ್ತಿ ಪಕ್ಷಗಳ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಸೋಮವಾರ ಸಿಎಂ ಹಾಗೂ ಮಾಜಿ ಸಿಎಂ ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಗದಗ್​ನಲ್ಲಿ ಮತಯಾಚಿಸಿದ್ದಾರೆ.ಧಾರವಾಡ, ಗದಗ, ಹಾವೇರಿ ವಿಧಾನ ಪರಿಷತ್​ ಕ್ಷೇತ್ರದ ಚುನಾವಣೆ ಪ್ರಯುಕ್ತ ಗದಗ್ ನಗರದ ಅಂಬೇಡ್ಕರ್​ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ …

Read More »

ಮಂತ್ರಿ ಮಾಲ್ : ಮೂರನೇ ಬಾರಿಗೆ ಬಿತ್ತು ಬೀಗ

ಬೆಂಗಳೂರು : ತೆರಿಗೆ ಪಾವತಿಸದೆ ಕಳ್ಳಾಟ ನಡೆಸುತ್ತಿದ್ದ ಹಿನ್ನೆಲೆ ನಗರದ ಪ್ರತಿಷ್ಟಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಬೀದ್ದಿದೆ. ಅನೇಕ ಬಾರಿ ಡೆಡ್‌ಲೈನ್ ನೀಡಿದ್ರೂ ಆಸ್ತಿ ತೆರಿಗೆಯನ್ನ ಮಂತ್ರಿ ಮಾಲ್ ಆಡಳಿತ ಮಂಡಳಿ ಪಾವತಿಸಿರಲಿಲ್ಲ. ನಿನ್ನೆ ಮಂತ್ರಿ ಮಾಲ್‌ ಆಡಳಿತ ಮಂಡಳಿಗೆ ನೀಡಿದ್ದ ಡೆಡ್‌ಲೈನ್ ಮುಕ್ತಾಯವಾಗಿದೆ. ಹೀಗಾಗಿ, ಇಂದು ಮತ್ತೆ ಬೀಗ ಜಡಿಯಲು ಬಿಬಿಎಂಪಿ ಮುಂದಾಗಿದೆ. ಈ ಹಿಂದೆಯೂ ಕೂಡ ಬಿಬಿಎಂಪಿ ಹಲವು ಬಾರಿ ಡೆಡ್‌ಲೈನ್ ನೀಡಿದ್ರೂ ಮಂತಿ ಮಾಲ್ ಆಡಳಿತ …

Read More »

ಜವಳಿ ಉದ್ಯಮಕ್ಕೆ ಜಿಎಸ್​ಟಿ ಪೆಟ್ಟು: ತೆರಿಗೆ ಇಳಿಕೆಗೆ ಪತ್ರದ ಮೂಲಕ ಪ್ರಧಾನಿಗೆ ಮನವಿ

ಬೆಂಗಳೂರು: ಇತ್ತೀಚಿಗೆ ಕೇಂದ್ರ ಸರ್ಕಾರ ಜವಳಿ ಉತ್ಪನ್ನಗಳಿಗೆ ಶೇ.5ರಷ್ಟಿದ್ದ ಜಿಎಸ್​ಟಿ ದರವನ್ನು 12% ಹೆಚ್ಚಳ ಮಾಡಿದ್ದಕ್ಕೆ ಬಟ್ಟೆ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ತೆರಿಗೆ ಇಳಿಸಲು ಮನವಿ ಮಾಡಿದ್ದಾರೆ. ಆಹಾರ, ಉಡುಪು ಹಾಗೂ ಸೂರು ಮನುಷ್ಯನಿಗೆ ಅತ್ಯಗತ್ಯ. ಬಡವರಿಂದ ಶ್ರೀಮಂತ ವರ್ಗದವರು ಬಟ್ಟೆ ತೊಡಲೇಬೇಕು. ಸೇಲ್ಸ್ ತೆರಿಗೆ ಇದ್ದ ಸಂದರ್ಭದಲ್ಲಿ ಬಟ್ಟೆಗಳನ್ನು ತೆರಿಗೆರಹಿತವಾಗಿ ಇಟ್ಟಿದ್ದ ಸರ್ಕಾರ ಜಿಎಸ್​ಟಿ ಜಾರಿಯಿಂದ 5% ತೆರಿಗೆ ವಿಧಿಸಿತ್ತು. ಇದಕ್ಕೆ …

Read More »

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೂ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಪ್ರಸಾಪ್ತ ಇಲ್ಲ. ಲಾಕ್ ಡೌನ್ ಮಾಡುವುದಿಲ್ಲ. ಕ್ರಿಸ್ ಮಸ್ ಹಾಗು ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿಬರ್ಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಪರಿಷತ್ ಚುನಾವಣೆ ಮತ್ತು …

Read More »

ಮತ ಎಣಿಕೆ ಪ್ರಕ್ರಿಯೆ ಸಮರ್ಪಕವಾಗಿ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಸೂಚನೆ

ಮತ ಎಣಿಕೆ ಅಧಿಕಾರಿಗಳ ಮೇಲೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಪ್ರತಿಯೊಬ್ಬರೂ ಮತ ಎಣಿಕೆ ವಿಧಾನ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಣಿಕೆ ಪ್ರಕ್ರಿಯೆ ನಡೆಸಬೇಕು ಎಂದು ಚುನಾವಣಾ ವೀಕ್ಷಕರಾದ ಹಿರಿಯ ಐಎಎಸ್ ಅಧಿಕಾರಿ ಏಕರೂಪ್ ಕೌರ್ ಅವರು ತಿಳಿಸಿದರು. ವಿಧಾನಪರಿಷತ್ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತ ಎಣಿಕೆಯಲ್ಲಿ ಯಾವುದೇ ಗೊಂದಲಗಳನ್ನು ಸೃಷ್ಟಿಸಿಕೊಳ್ಳಬಾರದು. ಚುನಾವಣಾ …

Read More »

ಬೆಳಗಾವಿಯಿಂದಲೇ 2ಎ ಮೀಸಲಾತಿ ಚಳುವಳಿ ಆರಂಭ

ಬೆಳಗಾವಿ ನಗರದಿಂದಲೇ ನಮ್ಮ ಪಂಚಮಸಾಲಿ ಸತ್ಯಾಗ್ರಹ ಆರಂಭವಾಗಿದೆ. ಇದೇ ನಗರದಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿಯುವುದರೊಳಗೆ ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಹಕ್ಕನ್ನು ಕೊಡಬೇಕು. ನಾವು ಕೊಟ್ಟ ಗಡುವು, ನೀವು ಕೊಟ್ಟು ಗಡುವು ಎಲ್ಲವೂ ಮುಗಿದು ಹೋಗಿದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಪಡೆದುಕೊಳ್ಳಬೇಕು ಎಂದು ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮುದಾಯ ಮೀಸಲಾತಿಯಿಂದ …

Read More »

ಒಮಿಕ್ರಾನ್​ಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸಲು ಕ್ಲಿನಿಕಲ್ ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಒಮಿಕ್ರಾನ್ ರೂಪಾಂತರಿಗೆ ಏಕರೂಪ ಚಿಕಿತ್ಸಾ ಪದ್ಧತಿ ಅನುಸರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 17 ಸದಸ್ಯರ ಕ್ಲಿನಿಕಲ್ ತಜ್ಞರ ಸಮಿತಿ ಪುನಃ ರಚಿಸಿ ಆದೇಶಿಸಿದೆ. ಬಿ.ಎಂ.ಸಿ.ಆರ್.ಐ ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಅಧ್ಯಕ್ಷತೆಯಲ್ಲಿ ಕ್ಲಿನಿಕಲ್ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಕೋವಿಡ್-19 ನಿಯಂತ್ರಣಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಸೂಚನೆ/ಆದೇಶಗಳನ್ನು ಕಾರ್ಯಗತಗೊಳಿಸಲು ಮತ್ತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಸಮನ್ವಯ ಸಾಧಿಸಿ, …

Read More »

ನಿಯಮ ಮೀರಿ ಸಭೆ, ಸಮಾರಂಭ ನಡೆಸಿದರೆ ಸೂಕ್ತ ಕ್ರಮ-ಗೌರವ್ ಗುಪ್ತಾ

ಬೆಂಗಳೂರು:ಯಾವುದೇ ಸಭೆ ಸಮಾರಂಭಗಳನ್ನು ಸರ್ಕಾರದ ನಿಯಮಾನುಸಾರ ಮಾಡಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಯಾರು ಹೈರಿಸ್ಕ್ ಏರಿಯಾದಿಂದ ಬಂದಿರುತ್ತಾರೋ ಅಂತವರಿಗೆ ಪಾಸಿಟಿವ್ ಕಂಡು ಬಂದರೆ ಅವರ ಸ್ಯಾಂಪಲ್‍ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಅವರು ಸೂಚಿಸಿದರು. …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಒಮಿಕ್ರಾನ್ ನಿಯಂತ್ರಣ ಜವಾಬ್ದಾರಿ ಐಎಎಸ್ ಅಧಿಕಾರಿಗಳ ಹೆಗಲಿಗೆ

ಬೆಂಗಳೂರು: ಕೊರೊನಾ ಮೂರನೇ ಅಲೆ, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಸಜ್ಜುಗೊಂಡಿದ್ದು, ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಒಮಿಕ್ರಾನ್ ನಿಯಂತ್ರಣ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿಗಳ ಹೆಗಲಿಗೆ ವಹಿಸಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ರಾಜ್ಯ ಕೋವಿಡ್ ವಾರ್ ರೂಮ್ ನಿರ್ವಹಣೆ, ಆಕ್ಸಿಜನ್ ನಿರ್ವಹಣೆ- ಮನೀಶ್ ಮೌದ್ಗಿಲ್ ಹೋಮ್ ಐಸೋಲೇಷನ್ ನಿರ್ವಹಣೆ – ಪಂಕಜ್ ಕುಮಾರ್ ಪಾಂಡೆ ವಿದೇಶಿ ಪ್ರಯಾಣಿಕರ ತಪಾಸಣೆ, ಸ್ಕ್ರೀನಿಂಗ್ – …

Read More »