Breaking News

ಪರಿಷತ್‌ನಲ್ಲಿ ನಿವೃತ್ತ ಶಾಸಕರ ಸಂಕಷ್ಟ ವಿವರಿಸಿದ ಎಚ್.ವಿಶ್ವನಾಥ್

ಬೆಂಗಳೂರು: ವಿಧಾನಪರಿಷತ್​​ನಲ್ಲಿ ಶಾಸಕರಾಗಿ ನಿವೃತ್ತಿ ಹೊಂದುವ ಪ್ರಾಮಾಣಿಕ ರಾಜಕಾರಣಿಗಳಿಗೆ ಎದುರಾಗುವ ಸಮಸ್ಯೆಯನ್ನು ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಸವಿಸ್ತಾರವಾಗಿ ವಿವರಿಸಿದರು. ವಿಧಾನಪರಿಷತ್​ನಲ್ಲಿ ಜೆಡಿಎಸ್ ಸದಸ್ಯ ಭೋಜೇಗೌಡ ಅವರು ಶಾಸಕರ ವೇತನ ವಿಚಾರ ಮಾತನಾಡಿದಾಗ, ವಿಶ್ವನಾಥ್​ ಹಳೆಯ ಘಟನೆ ವಿವರಿಸಿದರು. 1978ರಲ್ಲಿ ನಮ್ಮ ಗೌರವಧನ 600 ರೂ. ಇತ್ತು. ಪ್ರತಿದಿನ ಹಾಜರಾಗಿ ಸಹಿ ಹಾಕಿದರೆ 50 ರೂ.ಕೊಡ್ತಿದ್ದರು. ನಾನು ಶಾಸಕನಾಗಿದ್ದಾಗ ಒಬ್ಬ ಹುಡುಗ ಕಾರು ತೊಳೀತಿದ್ದ. ಒಮ್ಮೆ ಹೊಡೆದುಬಿಟ್ಟೆ. ದಿನಕ್ಕೆ ಎರಡು ರೂ. ಕೇಳಿದ್ದಕ್ಕೆ …

Read More »

ಶೀಘ್ರದಲ್ಲೇ ಕಡಬ ತಾಲೂಕು ಕಛೇರಿಗೆ ಸಿಸಿ ಕ್ಯಾಮರಾ ಅಳವಡಿಕೆ: ಜಿಲ್ಲಾಧಿಕಾರಿ

ಕಡಬ: ತಾಲೂಕು ಕಛೇರಿಯಲ್ಲಿ ಅಧಿಕಾರಿಗಳ ಅವ್ಯವಹಾರಗಳ ಸಮಗ್ರ ತನಿಖೆ ನಡೆಸುತ್ತೇನೆ, ಕೇವಲ ಎಚ್ಚರಿಕೆ ಕೊಟ್ಟು ಅಲ್ಲಿಗೆ ಬಿಡುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಇಂದು ಕಡಬ ತಾಲೂಕು ಕಛೇರಿಗೆ ಭೇಟಿ ನೀಡಿದ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿಚಾರಣೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಡಬ ಕಂದಾಯ ಇಲಾಖೆಯಲ್ಲಿ ಅಕ್ರಮ-ಸಕ್ರಮ ಹಾಗೂ ಪ್ಲಾಟಿಂಗ್​​​​ಗೆ ಸಂಬಂಧಪಟ್ಟ ಫೈಲ್​​ಗಳ ವಿಲೇವಾರಿಯಲ್ಲಿ ಅವ್ಯವಹಾರಗಳು ನಡೆಯುತ್ತಿದೆ …

Read More »

ಗಂಗಾವತಿಯ ಇಸ್ಪೀಟ್ ಕ್ಲಬ್​ಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ

ಗಂಗಾವತಿ/ಬೆಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಅಂದರ್-ಬಾಹರ್, ಇಸ್ಪೀಟ್ ಕ್ಲಬ್ ಮತ್ತು ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕಿನಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿಯ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯಿತು. ಮಧ್ಯಾಹ್ನದ ಬಳಿಕ ಸದನದಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ತಮಗೆ ಲಭಿಸಿರುವ ದಾಖಲೆ ಅನ್ವಯ ಈ ಬಗ್ಗೆ ಪ್ರಸ್ತಾಪಿಸಿ ಸ್ಪೀಕರ್ ಗಮನಕ್ಕೆ ತರಲು ಯತ್ನಿಸಿದರು. ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ಇಸ್ಪೀಟ್​​ ಕ್ಲಬ್​​ಗಳಿವೆ. ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೂ ಪೊಲೀಸರು …

Read More »

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ

ಮತ ಎಣಿಕೆ ಆರಂಭ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡುತ್ತಿರುವ ಸಿಬ್ಬಂದಿ ಉತ್ತರ ಪ್ರದೇಶದ 75 ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಶುರು 07:46 March 10 ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಖಚಿತ – ರಾವತ್‌ ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತೆ 2-3 ಗಂಟೆಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಉತ್ತರಾಖಂಡ್‌ ಜನರ ಮೇಲೆ ನನಗೆ ನಂಬಿಕೆ ಇದೆ ಕಾಂಗ್ರೆಸ್‌ 48 ಸ್ಥಾನ ಪಡೆಯುವುದು …

Read More »

ರಷ್ಯಾ ದಾಳಿಗೆ ತತ್ತರಿಸಿದ ಉಕ್ರೇನ್ :‌ 202 ಶಾಲೆಗಳು, 1500 ಮನೆಗಳು ಧ್ವಂಸ

ರಷ್ಯಾದ ಆಕ್ರಮಣಕ್ಕೆ ಉಕ್ರೇನ್‌ ತತ್ತರಿಸಿ ಕಹೋಗಿದ್ದು, 10 ದಿನಗಳ ನಿರಂತರ ದಾಳಿಯಿಂದ ಸುಮಾರು 202 ಶಾಲೆಗಳು, 34 ಆಸ್ಪತ್ರೆಗಳು ಧ್ವಂಸಗೊಂಡಿವೆ. ಈ ಬಗ್ಗೆ ವರದಿ ಮಾಡಿದ ಯುರೋಮೇಡನ್‌ ಪ್ರೆಸ್‌, ರಷ್ಯಾ ಪಡೆಗಳು ಉಕ್ರೇನ್‌ ಮೇಲೆ ದಾಳಿ ಮುಂದುವರಿಸಿದ್ದು, ಇದುವರೆಗೆ 202 ಶಾಲೆಗಳು, 34 ಆಸ್ಪತ್ರೆಗಳು. 1500 ವಸತಿ ಕಟ್ಟಡಗಳು ನಾಶವಾಗಿವೆ. ಇನ್ನು ಸುಮಾರು 900 ಮನೆಗಳಿಗೆ ನೀರು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ ಎಂದು ಉಕ್ರೇನ್‌ ಅಧ್ಯಕ್ಷರ ಸಹಾಯಕ ಮೈಖೈಲೊ ಪೊಡೊಲ್ಯಕ್‌ …

Read More »

ಗಾಂಧಿನಗರದ ಹೋಟೆಲ್​ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.   ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

Read More »

ರಶ್ಮಿಕಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾ ‘ಮಿಷನ್ ಮಜ್ನು’ ರಿಲೀಸ್​ಗೆ ಮುಹೂರ್ತ ಫಿಕ್ಸ್​

ಮುಂಬೈ ( ಮಹಾರಾಷ್ಟ್ರ) : ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣಾ ಅಭಿನಯದ ಬೇಹುಗಾರಿಕೆಯ ಕಥೆಯುಳ್ಳ ಮಿಷನ್ ಮಜ್ನು ಸಿನೆಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ. ಹಲವು ಹಿಟ್ ಸಿನೆಮಾಗಳನ್ನು ನೀಡಿರುವ, ಸದ್ಯ ಪುಷ್ಪ ಸಿನೆಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣಾ ಇದೇ ಮೊದಲ ಬಾರಿಗೆ ಹಿಂದಿ ಸಿನೆಮಾದಲ್ಲಿ ನಟಿಸಿದ್ದಾರೆ. ಮಿಷನ್ ಮಜ್ನು ರಶ್ಮಿಕಾ ಮಂದಣ್ಣಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾವಾಗಿದ್ದು, ಜೂನ್ 10 ರಂದು ತೆರೆಕಾಣಲಿದೆ ಎಂದು ಚಿತ್ರ ತಂಡ …

Read More »

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಗೋವಾದಲ್ಲಿ ಠಿಕಾಣಿ ಹೂಡಿದ ಸತೀಶ್ ಜಾರಕಿಹೊಳಿ‌

ಬೆಳಗಾವಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೂ ಗೋವಾಗೆ ಹೋಗಲು …

Read More »

ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಮೋದಿಗೆ ಧನ್ಯವಾದ ತಿಳಿಸಿದ ಹಸೀನಾ

ಡಾಕಾ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಬಾಂಗ್ಲಾದೇಶೀಯರನ್ನೂ ಸ್ಥಳಾಂತರಿಸಿದ್ದಕ್ಕೆ ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಧನ್ಯವಾದ ತಿಳಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಭಾರತ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಉಕ್ರೇನ್‌ನ ಸುಮಿಯಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ. ಕದನ ವಿರಾಮ ಸಂದರ್ಭದಲ್ಲಿ ಕೀವ್, ಸುಮಿ, ಖಾರ್ಕಿವ್, ಚೆರ್ನಿಹಿವ್ ಹಾಗೂ ಮರಿಯೋಪೋಲ್‌ನಿಂದ ಭಾರತೀಯರು ಗಡಿಯೆಡೆಗೆ ಧಾವಿಸುತ್ತಿದ್ದು, ಅಲ್ಲಿಂದ ಅವರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ.  ಈ ಸಂದರ್ಭದಲ್ಲಿ ಬೆಂಗಾವಲು ಪಡೆ …

Read More »

EVM ಪ್ರೋಟೋಕಾಲ್‍ನಲ್ಲಿ ಲೋಪ: ಚುನಾವಣಾಧಿಕಾರಿಯ ವೀಡಿಯೋ ಹಂಚಿಕೊಂಡ ಎಸ್‍ಪಿ

ಲಕ್ನೋ: ಉತ್ತರಪ್ರದೇಶದ ವಾರಣಾಸಿಯಲ್ಲಿ ಇವಿಎಂನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಅಖಿಲೇಶ್ ಯಾದವ್ ಅವರ ಆರೋಪದ ನಂತರ ಅಧಿಕಾರಿಯೊಬ್ಬರು ಲೋಪ ಮಾಡಿರುವುದಾಗಿ ಒಪ್ಪಿಕೊಂಡಿರುವ ವೀಡಿಯೋವೊಂದನ್ನು ಅವರ ಸಮಾಜವಾದಿ ಪಕ್ಷದ ನಾಯಕರು ಟ್ವೀಟ್ ಮಾಡಿದ್ದಾರೆ. ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಮಾತನಾಡಿ, ನೀವು ಇವಿಎಂಗಳ ಚಲನೆಯ ಪ್ರೋಟೋಕಾಲ್ ಬಗ್ಗೆ ಮಾತನಾಡಿದರೆ, ಪ್ರೋಟೋಕಾಲ್‍ನಲ್ಲಿ ಲೋಪವಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಮತದಾನದಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ ಎಂದು ತಿಳಿಸಿದ್ದಾರೆ.ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, …

Read More »