ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ನಿಮ್ಮ …
Read More »ಒಳಗೆ ಅಕ್ರಮ, ಹೊರಗೆ ದಿವ್ಯಾ; ಪಿಎಸ್ಐ ಪರೀಕ್ಷೆ ನಡೆದ ದಿನ ಶಾಲೆಯ ಹೊರಗೆ ಕಾವಲಿದ್ದ ದಿವ್ಯಾ ಹಾಗರಗಿ
ದಿವ್ಯಾಗಾಗಿ ಕಲಬುರಗಿಯಿಂದ ಕಾಶ್ಮೀರದವರೆಗೂ ಸಿಐಡಿ ತಂಡವು ಹುಡುಕಾಟ ನಡೆಸಿತ್ತು. ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗಿದ್ದ ದಿವ್ಯಾ ಹಾಗರಗಿ ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ಹೇಳಿ ಅಕ್ರಮದ ಸಾಕ್ಷ್ಯ ಸಿಐಡಿಗೆ ಸಿಕ್ಕ ನಂತರ ನಾಪತ್ತೆಯಾಗಿದ್ದರು. ಹೇಗೆ ನಡೆಯಿತು ಅಕ್ರಮ? ಪೋಲಿಸರ ತನಿಖೆ ವೇಳೆ ಪಿಎಸ್ಐ ನೇಮಕಾತಿ ಅಕ್ರಮ ಹೇಗೆ ನಡೆಯಿತು ಎಂಬ ಮಾಹಿತಿ ಬಹಿರಂಗವಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೇ ಪಿಎಸ್ಐ ಅಕ್ರಮ ಪರೀಕ್ಷೆಯಲ್ಲಿ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷೆ …
Read More »ಬೆಂಕಿ ಅವಘಡ: ಹೊಸ ಎಲೆಕ್ಟ್ರಿಕ್ ವಾಹನ ಬಿಡುಗಡೆ ಮುಂದೂಡಲು ಕೇಂದ್ರದ ಸೂಚನೆ
ನವದೆಹಲಿ: ಇತ್ತೀಚಿನ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ‘ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ಹೊಸ ಮಾರ್ಗಸೂಚಿಗಳನ್ನು …
Read More »ಯಾರ ಮೇಲೂ ಹಿಂದಿ ಹೇರುವುದಿಲ್ಲ
ಬೆಂಗಳೂರು: ಹಿಂದಿ ವಿಚಾರವಾಗಿ ಕನ್ನಡ ನಟ ಸುದೀಪ್ ಹೇಳಿಕೆಗೆ ಟ್ವೀಟ್ ಮಾಡಿ ಅತಿರೇಕ ತೋರಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ರಾಜಕಾರಣಿಗಳು, ಚಿತ್ರರಂಗ ಸೇರಿ ಕನ್ನಡಿಗರು ಸಿಡಿದೆದ್ದಿರುವ ಬೆನ್ನಲ್ಲೇ, ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕಡ್ಡಾಯ ಮಾಡಿಲ್ಲ, ಹಿಂದೆ ಹೇರಿಕೆಗೆ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಜಾರಿ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನೆ …
Read More »2011 ಸಾಲಿನಲ್ಲಿ ಆಯ್ಕೆಯಾದ 30 ಅಭ್ಯರ್ಥಿಗಳಿಗೆ ತಹಶೀಲ್ದಾರ್ ಗ್ರೇಡ್ -2 ವೃಂದದ ಗ್ರೂಪ್ ಬಿ ಹುದ್ದೆಗೆ ನೇಮಕ ಮಾಡಿ ಆದೇಶ
ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಆಯ್ಕೆ ಪಟ್ಟಿಯಲ್ಲಿನ 30 ಅಭ್ಯರ್ಥಿಗಳಿಗೆ ತಹಶೀಲ್ದಾರ್ ಗ್ರೇಡ್ 2 ವೃಂದದ ಗ್ರೂಪ್ ಬಿ ಹುದ್ದೆಗೆ ನೇಮಕ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ 2011ನೇ ಸಾಲಿನಲ್ಲಿ ಕಂದಾಯ ಇಲಾಖೆಯ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಗ್ರೂಪ್ ಬಿ ವೃಂದದ ತಹಶೀಲ್ದಾರ್ ಗ್ರೂಪ್-2 ವೃಂದದ ಹುದ್ದೆಗೆ 57 ಮಂದಿ ಆಯ್ಕೆಯಾಗಿದ್ದರು. ಅಕ್ರಮದ ಹಿನ್ನೆಲೆ 2011 ಸಾಲಿನ ನೇಮಕಾತಿಯನ್ನು ಅಸಿಂಧುಗೊಳಿಸಲಾಗಿತ್ತು. ಆದರೆ 2011ನೇ ಸಾಲಿನ ಗೆಜೆಟೆಡ್ …
Read More »ಗ್ರಾ.ಪಂ. ಚುನಾವಣೆ: ವೇಳಾಪಟ್ಟಿ ಪ್ರಕಟ
ಬೆಂಗಳೂರು: ಅವಧಿ ಮುಕ್ತಾಯವಾದ ಒಂದು ಗ್ರಾಮ ಪಂಚಾಯಿತಿ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆ ವೇಳೆ ನಾಮಪತ್ರ ಸಲ್ಲಿಕೆಯಾಗದ ಕಾರಣಕ್ಕೆ ಚುನಾವಣೆ ನಡೆಯದ 2 ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧ ಕಾರಣಗಳಿಗೆ ತೆರವಾಗಿದ್ದ 201 ಗ್ರಾ.ಪಂ. ಸದಸ್ಯ ಸ್ಥಾನಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಅವಧಿ ಮುಕ್ತಾಯವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಹಾಗೂ ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಬಾರದೇ ಇರುವ ಕಾರಣಕ್ಕೆ ಚುನಾವಣೆ ನಡೆಯದ …
Read More »ಸಿನಿಮೀಯ ಶೈಲಿಯಲ್ಲಿ1200 ಕಿ.ಮೀ ಚೇಸ್ ಮಾಡಿ ಆರೋಪಿಗಳನ್ನು ಕರೆತಂದ ಬೆಂಗಳೂರು ಪೊಲೀಸ್!
ಬೆಂಗಳೂರು, ಏಪ್ರಿಲ್ 28: ಬೆಂಗಳೂರಿಗೆ ಬರುವ ಕೆಲವು ದರೋಡೆಕೋರರು ಸಿಕ್ಕ ಸಿಕ್ಕವರ ಹತ್ತಿರ ಸುಲಿಗೆ ಮಾಡಿ ಟ್ರೈನ್ ಹತ್ತಿ ಎಸ್ಕೇಪ್ ಆಗಿ ಬಿಡುತ್ತಾರೆ. ಮಡಿವಾಳದ ಬಳಿ ಓಲಾ ಕ್ಯಾಬ್ ಚಾಲಕನ ಹಣ ಕಿತ್ತುಕೊಂಡು ಚಾಲಕನಿಗೆ 32 ಕಡೆ ಚಾಕುವಿಂದ ಕುಯ್ದು ಪರಾರಿಯಾಗಿದ್ದರು. ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೆ ನೆಡೆದಿದ್ದು ಇದನ್ನು ಸವಾಲಾಗಿ ತೆಗೆದುಕೊಂಡ ಮಡಿವಾಳ ಪೊಲೀಸರು ಆರೋಪಿಗಳನ್ನು 1200 ಕೀಮೀ ಚೇಜ್ ಮಾಡಿ 48 ಗಂಟೆಯಲ್ಲಿ ದರೋಡೆಕೋರ ಬಂಧಿಸಿದ್ದಾರೆ. ಓಲಾ …
Read More »ಜಮೀನಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ: ಬಿಜೆಪಿ ಮುಂಖಡನ ಹೀನ ಕೃತ್ಯ ಬಯಲು
ಗದಗ : ಗದಗ ಜಿಲ್ಲಾ ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ಮಂಡಳಿ ಉಪಾಧ್ಯಕ್ಷ ಸಿಕಂದರ್ ಬಾಪುನವರ್ ವಿರುದ್ಧ ಆತ್ಯಾಚಾರ ಆರೋಪ ಕೇಳಿ ಬಂದಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿಗೆ ಕರೆದೊಯ್ದು ಸಿಕಂದರ್ ಅತ್ಯಾಚಾರ ಮಾಡಿದ್ದ ಅನ್ನೋ ಆರೋಪ ಇದೆ. 42 ವರ್ಷದ ಸಿಕಂದರ್, ತಮ್ಮ ಜಮೀನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಮೇಲೆ ಆರು ತಿಂಗಳಿಂದ ನಿರಂತರ ಅತ್ಯಾಚಾರ ಮಾಡಿದ್ದಾನಂತೆ. ಮದ್ವೆಯಾಗೋದಾಗಿಯೂ ಬಾಲಕಿಗೆ ನಂಬಿಸಿದ್ದ ಎನ್ನಲಾಗಿದೆ. ತಂದೆ ತಾಯಿ ಇಲ್ಲದ …
Read More »ರಾಜ್ಯದಲ್ಲಿ ಯುಪಿ ಮಾದರಿ ಚುನಾವಣೆಗೆ ಬಿಜೆಪಿ ಸಿದ್ಧತೆ
ಬೆಂಗಳೂರು: ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಮರಳಿ ಅಧಿಕಾರ ಪಡೆದಿರುವ ಬಿಜೆಪಿ, ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಲು ನಿರ್ಧರಿಸಿದೆ. ಅದಕ್ಕಾಗಿ ಅಭಿವೃದ್ಧಿ ಮಂತ್ರವನ್ನೇ ಮುಂದಿಟ್ಟುಕೊಂಡು “ಸೈಲೆಂಟ್ ಓಟರ್’ಗಳನ್ನು ಗಟ್ಟಿಗೊಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ. ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ ಮೂರಂಕಿ ಮುಟ್ಟುವುದು ಕಷ್ಟ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಲಭ್ಯವಾಗಿದ್ದು, 150 ಸ್ಥಾನಗಳ ಗುರಿ ಮುಟ್ಟಲು ಉತ್ತರ ಪ್ರದೇಶ ಮಾದರಿ ಅನುಸರಿಸಲು …
Read More »ರಾಯಚೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆ- ಧರೆಗುರುಳಿದ ಬೃಹತ್ ಮರ
ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಬಿಸಿಲಿಗೆ ತತ್ತರಿಸಿರುವ ಜಿಲ್ಲೆ ತಂಪಾಗಿದ್ದರು, ಬೆಳೆ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ.ಜಿಲ್ಲೆಯ ಲಿಂಗಸುಗೂರು, ಹಟ್ಟಿ, ಮುದಗಲ್ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಲಿಂಗಸುಗೂರು ತಾಲೂಕಿನ ಆಮದಿಹಾಳ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಗಾಳಿ ಸಹಿತ ಮಳೆ ಜೋರಾಗಿದ್ದರಿಂದ ಬೃಹತ್ ಮರ ಧರೆಗುರುಳಿದೆ. ಮರ ರಸ್ತೆಗೆ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ಹಟ್ಟಿ ಪಟ್ಟಣದಲ್ಲಿ …
Read More »
Laxmi News 24×7